Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 22:4 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಆರೋನನ ಸಂತತಿಯವರಲ್ಲಿ ಯಾವನಿಗಾದರೂ ಕುಷ್ಠರೋಗವಾಗಲಿ ಅಥವಾ ಮೇಹವಾಗಲಿ ಇದ್ದರೆ ಅವನು ಶುದ್ಧನಾಗುವ ತನಕ ದೇವರಿಗೆ ನೈವೇದ್ಯವಾದ ಪದಾರ್ಥಗಳನ್ನು ಊಟಮಾಡಬಾರದು. ಹೆಣದ ಸಂಪರ್ಕದಿಂದ ಅಶುದ್ಧವಾದುದನ್ನು ಮುಟ್ಟಿದವನಾಗಲಿ, ವೀರ್ಯಸ್ಖಲನ ಮಾಡಿಕೊಂಡವನಾಗಲಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 “ಆರೋನನ ಸಂತತಿಯವರಲ್ಲಿ ಯಾವನಿಗಾದರು ಕುಷ್ಟರೋಗವಾಗಲಿ, ಮೇಹವಾಗಲಿ ಇದ್ದರೆ ಅವನು ಶುದ್ಧನಾಗುವ ತನಕ ದೇವರಿಗೆ ನೈವೇದ್ಯವಾದ ಪದಾರ್ಥಗಳನ್ನು ತಿನ್ನಕೂಡದು. ಹೆಣದ ಸಂಪರ್ಕದಿಂದ ಅಶುದ್ಧವಾದುದನ್ನು ಮುಟ್ಟಿದವನು, ವೀರ್ಯಸ್ಖಲನ ಮಾಡಿಕೊಂಡವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಆರೋನನ ಸಂತತಿಯವರಲ್ಲಿ ಯಾವನಿಗಾದರೂ ಕುಷ್ಠರೋಗವಾಗಲಿ ಮೇಹವಾಗಲಿ ಇದ್ದರೆ ಅವನು ಶುದ್ಧನಾಗುವ ತನಕ ದೇವರಿಗೆ ನೈವೇದ್ಯವಾದ ಪದಾರ್ಥಗಳನ್ನು ಉಣ್ಣಕೂಡದು. ಹೆಣದ ಸಂಪರ್ಕದಿಂದ ಅಶುದ್ಧವಾದದ್ದನ್ನು ಮುಟ್ಟಿದವನಾಗಲಿ ವೀರ್ಯಸ್ಖಲನ ಮಾಡಿಕೊಂಡವನಾಗಲಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 “ಆರೋನನ ಸಂತತಿಯವರಲ್ಲಿ ಯಾವನಿಗಾದರೂ ಕೆಟ್ಟದಾದ ಚರ್ಮರೋಗವಾಗಲಿ ಸ್ರಾವವಾಗಲಿ ಇದ್ದರೆ, ಅವನು ಶುದ್ಧನಾಗುವವರೆಗೆ ದೇವರಿಗೆ ನೈವೇದ್ಯವಾದ ಪದಾರ್ಥಗಳನ್ನು ತಿನ್ನಬಾರದು. ಅಶುದ್ಧನಾಗುವ ಪ್ರತಿ ಯಾಜಕನಿಗೂ ಈ ನಿಯಮ ಅನ್ವಯಿಸುತ್ತದೆ. ಆ ಯಾಜಕನು ಹೆಣವನ್ನು ಮುಟ್ಟಿದರೆ, ವೀರ್ಯಸ್ಖಲನ ಮಾಡಿಕೊಂಡರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 “ ‘ಆರೋನನ ಸಂತತಿಯವರಲ್ಲಿ ಯಾವನಾದರೂ ಚರ್ಮರೋಗ ಇಲ್ಲವೆ ಸ್ರಾವವುಳ್ಳವನಿದ್ದರೆ, ಅವನು ಶುದ್ಧನಾಗುವವರೆಗೆ ಪರಿಶುದ್ಧವಾದವುಗಳನ್ನು ತಿನ್ನಬಾರದು. ಹೆಣದಿಂದ ಅಶುದ್ಧವಾದದ್ದನ್ನು ಮುಟ್ಟಿದವನು ಇಲ್ಲವೆ ತನ್ನೊಳಗಿಂದ ವೀರ್ಯ ಹೊರಟವನು

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 22:4
18 ತಿಳಿವುಗಳ ಹೋಲಿಕೆ  

ಯೆಹೋವನು ಮೋಶೆಯೊಂದಿಗೆ ಮಾತನಾಡಿ, “ನೀನು ಆರೋನನ ಮಕ್ಕಳಾದ ಯಾಜಕರಿಗೆ ಹೀಗೆ ಆಜ್ಞಾಪಿಸಬೇಕು, ‘ಕುಲದಲ್ಲಿ ಸತ್ತವರಿಗೋಸ್ಕರ ಯಾವ ಯಾಜಕನೂ ತನ್ನನ್ನು ಅಪವಿತ್ರ ಮಾಡಿಕೊಳ್ಳಬಾರದು.


“‘ಆಹಾರಕ್ಕೆ ಯೋಗ್ಯವಾಗಿರುವ ಪಶುವು ಸತ್ತರೆ ಅದರ ಹೆಣವನ್ನು ಮುಟ್ಟಿದವನು ಆ ದಿನದ ಸಾಯಂಕಾಲದ ವರೆಗೂ ಅಶುದ್ಧನಾಗಿರುವನು.


ಇಸ್ರಾಯೇಲರು ಯೆಹೋವನಿಗೋಸ್ಕರ ಪ್ರತ್ಯೇಕಿಸಿ ಸಮರ್ಪಿಸುವ ದೇವರ ವಸ್ತುಗಳೆಲ್ಲಾ ನಿನಗೂ, ನಿನ್ನ ಸಂತತಿಯವರಾದ ಸ್ತ್ರೀಪುರುಷರೆಲ್ಲರಿಗೂ ಸದಾಕಾಲವೂ ಸಲ್ಲಬೇಕೆಂದು ನಾನು ಅನುಗ್ರಹಮಾಡಿದ್ದೇನೆ. ಇದು ಯೆಹೋವನ ಸನ್ನಿಧಿಯಲ್ಲಿ ನಿನ್ನೊಡನೆಯೂ, ನಿನ್ನ ಸಂತತಿಯೊಡನೆಯೂ ಮಾಡಲ್ಪಟ್ಟ ಶಾಶ್ವತವಾದ ಉಪ್ಪಿನ ಒಡಂಬಡಿಕೆಯಾಗಬೇಕು” ಎಂದು ಹೇಳಿದನು.


ಬೆಂಕಿಯಲ್ಲಿ ಹೋಮಮಾಡದೆ ಉಳಿದಿರುವ ಮಹಾ ಪರಿಶುದ್ಧ ವಸ್ತುಗಳು ನಿನಗೆ ಕಾಣಿಕೆಯಾಗಿ ಸಲ್ಲಬೇಕು. ಇಸ್ರಾಯೇಲರು ನನಗೆ ಸಮರ್ಪಿಸುವ ಎಲ್ಲಾ ಧಾನ್ಯದ್ರವ್ಯ, ದೋಷಪರಿಹಾರಕ ಯಜ್ಞ, ಪ್ರಾಯಶ್ಚಿತ್ತಯಜ್ಞ ಇವುಗಳಲ್ಲಿ ಹೋಮಶೇಷವು ಮಹಾಪರಿಶುದ್ಧವಾದುದರಿಂದ ನಿನಗೂ ನಿನ್ನ ಸಂತತಿಯವರಿಗೂ ಸಲ್ಲಬೇಕು.


ದೇವರಿಗೆ ನೈವೇದ್ಯವಾದ ಆಹಾರದಲ್ಲಿ ಪರಿಶುದ್ಧವಾದದ್ದನ್ನು ಮತ್ತು ಮಹಾಪರಿಶುದ್ಧವಾದುದನ್ನು ಅವನು ಊಟಮಾಡಬಹುದು.


ಧಾನ್ಯ ನೈವೇದ್ಯದಲ್ಲಿ ಉಳಿದದ್ದು ಆರೋನನಿಗೂ ಮತ್ತು ಅವನ ವಂಶದವರಿಗೂ ಕೊಡಬೇಕು; ಅದು ಯೆಹೋವನಿಗೆ ಅರ್ಪಿತವಾದ ಹೋಮಶೇಷವಾದ್ದರಿಂದ ಅತಿಪರಿಶುದ್ಧವಾಗಿದೆ.


ಆ ನೈವೇದ್ಯದಲ್ಲಿ ಉಳಿದದ್ದು ಆರೋನನಿಗೂ ಮತ್ತು ಅವನ ವಂಶದವರಿಗೂ ಆಗಬೇಕು; ಅದು ಯೆಹೋವನಿಗೆ ಅರ್ಪಿತವಾದ ಹೋಮಶೇಷಗಳಲ್ಲಿ ಅತಿಪರಿಶುದ್ಧವಾಗಿದೆ.


ಯಾವ ಬಟ್ಟೆಯ ಮೇಲಾಗಲಿ ಅಥವಾ ತೊಗಲಿನ ಮೇಲಾಗಲಿ ವೀರ್ಯವು ಬಿದ್ದರೆ ಅದನ್ನು ನೀರಿನಿಂದ ತೊಳೆಯಬೇಕು, ಅದು ಸಾಯಂಕಾಲದ ವರೆಗೆ ಅಶುದ್ಧವಾಗಿರುವುದು.


ಆ ಮೇಲೆ ಹಗ್ಗಾಯನು, “ಹೆಣವನ್ನು ಮುಟ್ಟಿ ಅಶುದ್ಧನಾದವನು ಇವುಗಳಲ್ಲಿ ಯಾವುದನ್ನಾದರು ಸೋಕಿದರೆ ಅದು ಅಶುದ್ಧವಾಗುವುದೋ?” ಎಂದು ಕೇಳಿದ್ದಕ್ಕೆ ಯಾಜಕರು, “ಅಶುದ್ಧವೇ ಆಗುವುದು” ಎಂದು ಉತ್ತರಕೊಟ್ಟರು.


ಅಶುದ್ಧನಾಗಿ ದೋಷಪರಿಹಾರ ಮಾಡಿಕೊಳ್ಳದವನು ಯೆಹೋವನ ಆಲಯವನ್ನು ಅಪವಿತ್ರಪಡಿಸಿದ ಕಾರಣ ಸಭೆಯಿಂದ ತೆಗೆಯಲ್ಪಡಬೇಕು. ಶುದ್ಧೀಕರಣದ ನೀರನ್ನು ತನ್ನ ಮೇಲೆ ಚಿಮಿಕಿಸಿಕೊಳ್ಳದೆ ಹೋದುದರಿಂದ ಅವನು ಅಶುದ್ಧನಾಗುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು