Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 23:13 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಅದರೊಂದಿಗೆ ಮಾಡಬೇಕಾದ ಧಾನ್ಯನೈವೇದ್ಯವು ಯಾವುದೆಂದರೆ ಎಣ್ಣೆ ಬೆರೆತ ಆರು ಸೇರು ಗೋದಿಯ ಹಿಟ್ಟು. ಯೆಹೋವನಿಗೆ ಪರಿಮಳವನ್ನು ಉಂಟುಮಾಡುವುದಕ್ಕೆ ಇದನ್ನು ಬೆಂಕಿಯಲ್ಲಿ ಹೋಮಮಾಡಬೇಕು. ಅದರೊಂದಿಗೆ ಸಮರ್ಪಿಸಬೇಕಾದ ಪಾನದ್ರವ್ಯವು ಒಂದುವರೆ ಸೇರು ದ್ರಾಕ್ಷಾರಸ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಅದರ ಸಮೇತ ಎಣ್ಣೆಬೆರೆತ ಎರಡು ಕಿಲೋಗ್ರಾಂ ಹಿಟ್ಟನ್ನು ಧಾನ್ಯನೈವೇದ್ಯವಾಗಿ ಅರ್ಪಿಸಬೇಕು. ಸರ್ವೇಶ್ವರನಿಗೆ ಪ್ರಿಯವಾದ ಸುವಾಸನೆಯುಂಟುಮಾಡುವುದಕ್ಕೆ ಅದನ್ನು ಬೆಂಕಿಯಲ್ಲಿ ಹೋಮಮಾಡಬೇಕು. ಅದರೊಂದಿಗೆ ಸಮರ್ಪಿಸಬೇಕಾದ ಪಾನದ್ರವ್ಯ ಒಂದು ಲೀಟರ್ ದ್ರಾಕ್ಷಾರಸ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಅದರೊಂದಿಗೆ ಮಾಡಬೇಕಾದ ಧಾನ್ಯನೈವೇದ್ಯವು ಯಾವದಂದರೆ ಎಣ್ಣೆ ಬೆರೆತ ಆರು ಸೇರು ಗೋದಿಯ ಹಿಟ್ಟೇ. ಯೆಹೋವನಿಗೆ ಸುವಾಸನೆಯನ್ನುಂಟುಮಾಡುವದಕ್ಕೆ ಇದನ್ನು ಬೆಂಕಿಯಲ್ಲಿ ಹೋಮಮಾಡಬೇಕು. ಅದರೊಂದಿಗೆ ಸಮರ್ಪಿಸಬೇಕಾದ ಪಾನದ್ರವ್ಯವು ಒಂದುವರೆ ಸೇರು ದ್ರಾಕ್ಷಾರಸ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ನೀವು ಎಣ್ಣೆ ಬೆರೆಸಿದ ಹದಿನಾರು ಬಟ್ಟಲು ಶ್ರೇಷ್ಠ ಗೋಧಿಹಿಟ್ಟನ್ನು ಧಾನ್ಯಸಮರ್ಪಣೆಗಾಗಿ ಅರ್ಪಿಸಬೇಕು. ನೀವು ಕಾಲುಭಾಗ ದ್ರಾಕ್ಷಾರಸವನ್ನು ಅರ್ಪಿಸಬೇಕು. ಆ ಯಜ್ಞದ ಸುವಾಸನೆಯು ಯೆಹೋವನಿಗೆ ಮೆಚ್ಚಿಕೆಯಾಗಿರುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಇದರೊಂದಿಗೆ, ಧಾನ್ಯ ಸಮರ್ಪಣೆಯಲ್ಲಿ ಬೆರೆಸಿದ ಎಣ್ಣೆ ಮತ್ತು ಮೂರು ಕಿಲೋಗ್ರಾಂ ನಯವಾದ ಹಿಟ್ಟನ್ನು ಆಹ್ಲಾದಕರವಾದ ಪರಿಮಳದ ರೂಪದಲ್ಲಿ ಯೆಹೋವ ದೇವರಿಗೆ ಅರ್ಪಿಸಬೇಕು. ಇದಲ್ಲದೆ ಅದರೊಂದಿಗೆ ಸಮರ್ಪಿಸಬೇಕಾದ ಪಾನದ್ರವ್ಯವು ಸುಮಾರು ಒಂದು ಲೀಟರ್ ದ್ರಾಕ್ಷಾರಸ ಆಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 23:13
15 ತಿಳಿವುಗಳ ಹೋಲಿಕೆ  

ಆತನು ಒಂದು ವೇಳೆ ಮನಸ್ಸನ್ನು ಬದಲಾಯಿಸಿ, ನಿಮ್ಮ ಕಡೆಗೆ ತಿರುಗಿಕೊಂಡು ನಿಮ್ಮನ್ನು ಆಶೀರ್ವದಿಸಬಹುದು; ನಿಮ್ಮ ದೇವರಾದ ಯೆಹೋವನಿಗೆ ನೀವು ಅರ್ಪಿಸುವ ನೈವೇದ್ಯವನ್ನು ಸ್ವೀಕರಿಸಿ ಸುವರಗಳನ್ನು ದಯಪಾಲಿಸಬಹುದು.


ಯಾಜಕರೇ, ಗೋಣಿತಟ್ಟನ್ನು ಉಟ್ಟುಕೊಂಡು ಗೋಳಾಡಿರಿ! ಯಜ್ಞವೇದಿಯ ಸೇವಕರೇ, ಗೋಳಾಡಿರಿ. ನನ್ನ ದೇವರ ಸೇವಕರೇ, ಬಂದು ಗೋಣಿತಟ್ಟನ್ನು ಸುತ್ತಿಕೊಂಡು ರಾತ್ರಿಯೆಲ್ಲಾ ಬಿದ್ದುಕೊಂಡಿರಿ. ಏಕೆಂದರೆ ಧಾನ್ಯನೈವೇದ್ಯಗಳು ಮತ್ತು ಪಾನದ್ರವ್ಯಗಳು ನಿಮ್ಮ ದೇವರ ಆಲಯಕ್ಕೆ ಬಾರದೆ ನಿಂತುಹೋಗಿದೆ.


ಧಾನ್ಯನೈವೇದ್ಯಗಳು ಮತ್ತು ಪಾನದ್ರವ್ಯಗಳು ಯೆಹೋವನ ಆಲಯದಿಂದ ತೆಗೆಯಲ್ಪಟ್ಟಿದೆ. ಯೆಹೋವನ ಸೇವಕರಾದ ಯಾಜಕರು ಗೋಳಾಡುತ್ತಾರೆ.


ಅದರೊಂದಿಗೆ ಪ್ರತಿ ದಿನ ಬೆಳಗ್ಗೆ ಧಾನ್ಯ ನೈವೇದ್ಯವಾಗಿ ಐದು ಸೇರು ಗೋದಿಹಿಟ್ಟನ್ನೂ, ಅದನ್ನು ಕಲಸುವುದಕ್ಕೆ ಎರಡು ಸೇರು ಎಣ್ಣೆಯನ್ನೂ ನೀನು ಸಮರ್ಪಿಸಬೇಕು. ಇವುಗಳನ್ನು ಪ್ರತಿನಿತ್ಯವೂ ಯೆಹೋವನಿಗೆ ಧಾನ್ಯನೈವೇದ್ಯವಾಗಿ ಅರ್ಪಿಸತಕ್ಕದ್ದು. ಇದು ಶಾಶ್ವತ ನಿಯಮವಾಗಿದೆ.


ಇದಲ್ಲದೆ ಒಂದೊಂದು ಹೋರಿಯ ಮತ್ತು ಟಗರಿನ ಸಂಗಡ ಮೂವತ್ತು ಸೇರು ಗೋದಿಹಿಟ್ಟನ್ನೂ, ಆರಾರು ಸೇರು ಎಣ್ಣೆಯನ್ನೂ ಧಾನ್ಯನೈವೇದ್ಯಕ್ಕಾಗಿ ಒಪ್ಪಿಸಬೇಕು.


ನೀರನ್ನು ಅಳತೆಯ ಪ್ರಕಾರ ದಿನವೊಂದಕ್ಕೆ ಎರಡು ಬಟ್ಟಲಂತೆ ಕುಡಿ; ಆಗಾಗ್ಗೆ ಸ್ವಲ್ಪ ಸ್ವಲ್ಪ ಕುಡಿಯಬೇಕು.


ನಿತ್ಯ ಸರ್ವಾಂಗಹೋಮವು ಹೊರತು ಪ್ರತಿ ಸಬ್ಬತ್ತಿಗೆ ತಕ್ಕ ಸರ್ವಾಂಗಹೋಮವು, ಅದರ ಪಾನದ್ರವ್ಯದ ಅರ್ಪಣೆಯೂ ಆಗಬೇಕು.


“ಎಂಟನೆಯ ದಿನದಲ್ಲಿ ಅವನು ಪೂರ್ಣಾಂಗವಾದ ಎರಡು ಟಗರುಗಳನ್ನು, ಪೂರ್ಣಾಂಗವಾದ ಒಂದು ವರ್ಷದ ಕುರಿಯನ್ನು, ನೈವೇದ್ಯಕ್ಕಾಗಿ ಎಣ್ಣೆ ಬೆರೆಸಿದ ಒಂಭತ್ತು ಸೇರು ಗೋದಿಹಿಟ್ಟನ್ನು ಮತ್ತು ಒಂದು ಸೇರು ಎಣ್ಣೆಯನ್ನು ತೆಗೆದುಕೊಂಡು ಬರಬೇಕು.


“ಆರೋನನಿಗೆ ಅಭಿಷೇಕವಾದ ದಿನ ಮೊದಲುಗೊಂಡು ಅವನೂ ಮತ್ತು ಅವನ ವಂಶದವರೂ ಯೆಹೋವನಿಗೆ ಸಮರ್ಪಿಸಬೇಕಾದ ಧಾನ್ಯ ನೈವೇದ್ಯ ಕ್ರಮ ಹೇಗೆಂದರೆ, ಅವರು ನಿತ್ಯವೂ ಮೂರು ಸೇರು ಗೋದಿಹಿಟ್ಟನ್ನು, ಹೊತ್ತಾರೆ ಅರ್ಧವನ್ನು ಹಾಗೂ ಸಾಯಂಕಾಲ ಅರ್ಧವನ್ನು ಸಮರ್ಪಿಸಬೇಕು.


ಐನೂರು ಸುಗಂಧವಾದ ಚೆಕ್ಕೆ, ಮತ್ತು ಒಂದು ಹೀನ್ ಒಲೀವ್ ಎಣ್ಣೆ ಇವುಗಳನ್ನೆಲ್ಲಾ ತೆಗೆದುಕೊಂಡು,


ಆ ಯಜ್ಞವೇದಿಯ ಮೇಲೆ ಬೇರೆ ಯಾವ ಧೂಪವನ್ನೂ ಹಾಕಬಾರದು. ಅದರ ಮೇಲೆ ಇತರೆ ಹೋಮವನ್ನಾಗಲಿ, ಭೋಜನದ್ರವ್ಯವನ್ನಾಗಲಿ ಹಾಗೂ ಪಾನದ್ರವ್ಯವನ್ನಾಗಲಿ ಸಮರ್ಪಿಸಕೂಡದು.


ಆ ಸಿವುಡನ್ನು ನೈವೇದ್ಯವಾಗಿ ನಿವಾಳಿಸುವ ದಿನದಲ್ಲಿ ನೀವು ಒಂದು ವರ್ಷದ ಪೂರ್ಣಾಂಗವಾದ ಟಗರನ್ನು ಸರ್ವಾಂಗಹೋಮವಾಗಿ ಯೆಹೋವನಿಗೆ ಸಮರ್ಪಿಸಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು