Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 23:28 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ಆ ದಿನದಲ್ಲಿ ಯಾವ ಉದ್ಯೋಗವನ್ನೂ ನಡೆಸಬಾರದು. ಅದು ದೋಷಪರಿಹಾರಕ ದಿನವಾಗಿದೆ, ಅದರಲ್ಲಿ ನಿಮಗೋಸ್ಕರ ಯೆಹೋವನ ಸನ್ನಿಧಿಯಲ್ಲಿ ದೋಷಪರಿಹಾರಕ ಆಚರಣೆ ನಡೆಯುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

28 ಅ ದಿನದಂದು ಯಾವ ದುಡಿಮೆಯನ್ನೂ ಕೈಗೊಳ್ಳಬಾರದು. ಅದು ದೋಷಪರಿಹಾರಕ ದಿನ. ಅಂದು ನಿಮ್ಮ ಪರವಾಗಿ ನಿಮ್ಮ ದೇವರಾದ ಸರ್ವೇಶ್ವರನ ಸನ್ನಿಧಿಯಲ್ಲಿ ದೋಷಪರಿಹಾರಕ ಆಚರಣೆ ನಡೆಯುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28 ಆ ದಿನದಲ್ಲಿ ಯಾವ ಉದ್ಯೋಗವನ್ನೂ ನಡಿಸಬಾರದು. ಅದು ದೋಷಪರಿಹಾರಕ ದಿವಸ; ಅದರಲ್ಲಿ ನಿಮಗೋಸ್ಕರ ಯೆಹೋವನ ಸನ್ನಿಧಿಯಲ್ಲಿ ದೋಷಪರಿಹಾರಕಾಚಾರವು ನಡೆಯುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

28 ನೀವು ಆ ದಿನದಲ್ಲಿ ಯಾವ ಕೆಲಸವನ್ನೂ ಮಾಡಬಾರದು. ಯಾಕೆಂದರೆ ಅದು ದೋಷಪರಿಹಾರಕ ದಿನವಾಗಿರುತ್ತದೆ. ಆ ದಿನದಲ್ಲಿ ಯಾಜಕರು ಯೆಹೋವನ ಸನ್ನಿಧಿಗೆ ಹೋಗಿ ಆಚಾರವಿಧಿಗಳ ಪ್ರಕಾರ ನಿಮಗಾಗಿ ಪ್ರಾಯಶ್ಚಿತ್ತ ಮಾಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

28 ಆ ದಿವಸದಲ್ಲಿ ನೀವು ಕೆಲಸವನ್ನು ಮಾಡಬಾರದು. ಏಕೆಂದರೆ ಅದು ನಿಮಗೋಸ್ಕರ ನಿಮ್ಮ ದೇವರಾಗಿರುವ ಯೆಹೋವ ದೇವರ ಸನ್ನಿಧಿಯಲ್ಲಿ ಪ್ರಾಯಶ್ಚಿತ್ತ ಮಾಡುವುದಕ್ಕಾಗಿ ಪ್ರಾಯಶ್ಚಿತ್ತದ ದಿವಸವಾಗಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 23:28
15 ತಿಳಿವುಗಳ ಹೋಲಿಕೆ  

ನಾನು ಯೆಹೋಶುವನ ಮುಂದೆ ಇಟ್ಟಿರುವ ಕಲ್ಲನ್ನು ನೋಡಿರಿ; ಆ ಒಂದೇ ಕಲ್ಲಿನಲ್ಲಿ ಏಳು ಕಣ್ಣುಳ್ಳಾತನ ದೃಷ್ಟಿಯು ಬಿದ್ದಿದೆ; ಇಗೋ ನಾನೇ ಅದರಲ್ಲಿ ಕೆತ್ತನೆ ಕೆತ್ತುವೆನು. ಇದು ಸೇನಾಧೀಶ್ವರನಾದ ಯೆಹೋವನ ನುಡಿ. ‘ಒಂದೇ ದಿನದೊಳಗೆ ಈ ದೇಶದ ಪಾಪವನ್ನು ಪರಿಹರಿಸುವೆನು.’


ಇಸ್ರಾಯೇಲರ ಎಲ್ಲಾ ದೋಷಗಳನ್ನು ನಿವಾರಣೆಮಾಡುವುದಕ್ಕಾಗಿ ಅವರಿಗೋಸ್ಕರ ವರ್ಷಕ್ಕೆ ಒಂದಾವರ್ತಿ ದೋಷಪರಿಹಾರವನ್ನು ಮಾಡಬೇಕೆಂಬುದೇ ನಿಮಗೆ ಶಾಶ್ವತನಿಯಮ” ಎಂದು ಹೇಳಿದನು. ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆಯೇ ಆರೋನನು ಮಾಡಿದನು.


ಈತನು ಅಂದರೆ ಯೇಸು ಕ್ರಿಸ್ತನು ನೀರಿನಿಂದಲೂ, ರಕ್ತದಿಂದಲೂ ಬಂದಾತನು. ನೀರಿನಿಂದ ಮಾತ್ರವಲ್ಲದೆ ನೀರಿನಿಂದಲೂ, ರಕ್ತದಿಂದಲೂ ಸಾಕ್ಷಿ ಹೊಂದಿದವನಾಗಿದ್ದಾನೆ. ಆತ್ಮವು ಸಾಕ್ಷಿಯನ್ನು ಕೊಡುತ್ತದೆ. ಏಕೆಂದರೆ ಆತ್ಮನು ಸತ್ಯಸ್ವರೂಪನೇ.


ನಾವು ದೇವರನ್ನು ಪ್ರೀತಿಸಿಲ್ಲ, ಆದರೂ ಆತನು ನಮ್ಮನ್ನು ಪ್ರೀತಿಸಿ ನಮ್ಮ ಪಾಪಗಳಿಗೆ ಪ್ರಾಯಶ್ಚಿತ್ತ ಬಲಿಯಾಗಿ ತನ್ನ ಮಗನನ್ನು ಕಳುಹಿಸಿಕೊಟ್ಟಿದ್ದರಲ್ಲಿಯೇ ಆತನ ನಿಜವಾದ ಪ್ರೀತಿಯು ತೋರಿಬರುತ್ತದೆ.


ಆತನು ನಮ್ಮ ಪಾಪಗಳಿಗಾಗಿ ಪ್ರಾಯಶ್ಚಿತ್ತ ಯಜ್ಞವಾಗಿದ್ದಾನೆ. ನಮ್ಮ ಪಾಪಗಳಿಗೆ ಮಾತ್ರವಲ್ಲದೆ ಸಮಸ್ತ ಲೋಕದ ಪಾಪಗಳಿಗೂ ಪ್ರಾಯಶ್ಚಿತ್ತವಾಗಿದ್ದಾನೆ.


ಆತನು ಶುದ್ಧೀಕರಿಸಲ್ಪಡುವವರನ್ನು ಒಂದೇ ಸಮರ್ಪಣೆಯಿಂದ ನಿರಂತರವಾಗಿ ಪರಿಪೂರ್ಣರನ್ನಾಗಿ ಮಾಡಿದ್ದಾನೆ.


ಯೇಸು ಕ್ರಿಸ್ತನು ಒಂದೇ ಸಾರಿ ದೇಹ ಸಮರ್ಪಣೆ ಮಾಡಿ ದೇವರ ಚಿತ್ತವನ್ನು ನೆರವೇರಿಸಿದ್ದರಿಂದಲೇ ನಾವು ಶುದ್ಧೀಕರಿಸಲ್ಪಟ್ಟವರಾಗಿರುವೆವು.


ಹಾಗೆ ಸಮರ್ಪಿಸಬೇಕಾಗಿದ್ದ ಪಕ್ಷದಲ್ಲಿ ಆತನು ಲೋಕಾದಿಯಿಂದ ಎಷ್ಟೋ ಸಾರಿ ಬಾಧೆಪಡಬೇಕಾಗಿತ್ತು. ಆದರೆ ಒಂದೇ ಸಾರಿ, ಯುಗಗಳ ಸಮಾಪ್ತಿಯವರೆಗೂ, ಆತನು ಪಾಪ ನಿವಾರಣೆ ಮಾಡುವ ಉದ್ದೇಶದಿಂದ ತನ್ನನ್ನು ತಾನೇ ಯಜ್ಞಮಾಡಿಕೊಳ್ಳುವವನಾಗಿ ಪ್ರತ್ಯಕ್ಷನಾದನು.


ಹೋತಗಳ ಮತ್ತು ಹೋರಿಕರುಗಳ ರಕ್ತದ ಮೂಲಕವಲ್ಲ ತನ್ನ ಸ್ವಂತ ರಕ್ತದ ಮೂಲಕ ಒಂದೇ ಸಾರಿ ಎಲ್ಲರಿಗೋಸ್ಕರ ಪರಿಶುದ್ಧ ಸ್ಥಳದೊಳಗೆ ಪ್ರವೇಶಿಸಿ ನಿತ್ಯ ವಿಮೋಚನೆಯನ್ನು ಸಾಧಿಸಿದನು.


ಅಧರ್ಮವನ್ನು ಕೊನೆಗಾಣಿಸುವುದು, ಪಾಪಗಳನ್ನು ತೀರಿಸುವುದು, ಅಪರಾಧವನ್ನು ನಿವಾರಿಸುವುದು, ಸನಾತನ ಧರ್ಮವನ್ನು ಸ್ಥಾಪಿಸುವುದು, ಕನಸನ್ನೂ ಮತ್ತು ಪ್ರವಾದಿಯ ನುಡಿಯನ್ನೂ ಮುದ್ರೆಹಾಕಿ ಯಥಾರ್ಥಮಾಡುವುದಕ್ಕೆ, ಅತಿಪರಿಶುದ್ಧವಾದದ್ದನ್ನು ಅಭಿಷೇಕಿಸುವುದು, ಇವೆಲ್ಲಾ ನೆರವೇರುವುದಕ್ಕೆ ಮೊದಲು ನಿನ್ನ ಜನಕ್ಕೂ, ನಿನ್ನ ಪರಿಶುದ್ಧ ಪುರಕ್ಕೂ ಎಪ್ಪತ್ತು ವಾರಗಳು ಕಳೆಯಬೇಕು ಎಂದು ನಿಷ್ಕರ್ಷೆಯಾಗಿದೆ.


ಅವನನ್ನು ಜಜ್ಜುವುದು ಯೆಹೋವನ ಸಂಕಲ್ಪವಾಗಿತ್ತು. ಆತನು ಅವನನ್ನು ವ್ಯಾಧಿಯಿಂದ ಬಾಧಿಸಿ ಹೀಗೆಂದುಕೊಂಡನು, ಇವನು ತನ್ನ ಆತ್ಮವನ್ನು ಪ್ರಾಯಶ್ಚಿತ್ತಯಜ್ಞಕ್ಕಾಗಿ ಒಪ್ಪಿಸಿದ ಮೇಲೆ ತನ್ನ ಸಂತಾನವನ್ನು ನೋಡುವನು, ಚಿರಂಜೀವಿಯಾಗುವನು, ನನ್ನ ಸಂಕಲ್ಪವು ಇವನ ಕೈಯಿಂದ ನೆರವೇರುವುದು;


“ಅದೇ ಏಳನೆಯ ತಿಂಗಳಿನ ಹತ್ತನೆಯ ದಿನ ದೋಷಪರಿಹಾರಕ ದಿನ. ಅದರಲ್ಲಿ ದೇವಾರಾಧನೆಗಾಗಿ ಸಭೆಸೇರಬೇಕು; ನೀವು ಪೂರ್ಣವಾಗಿ ಉಪವಾಸಮಾಡಬೇಕು ಮತ್ತು ಯೆಹೋವನ ಸನ್ನಿಧಿಯಲ್ಲಿ ಹೋಮವನ್ನು ಮಾಡಬೇಕು.


ಏಕೆಂದರೆ ನೀವು ಪರಿಶುದ್ಧರಾಗುವುದಕ್ಕಾಗಿ ಈ ದಿನದಲ್ಲಿ ನಿಮಗೋಸ್ಕರ ದೋಷಪರಿಹಾರವಾಗುವುದು, ಯೆಹೋವನ ದೃಷ್ಟಿಯಲ್ಲಿ ನಿಮ್ಮ ಎಲ್ಲಾ ದೋಷಗಳು ನಿವಾರಣೆಯಾಗುವವು.


ಅವನು ದೇವಸ್ಥಾನ, ದೇವದರ್ಶನದ ಗುಡಾರ, ಯಜ್ಞವೇದಿ, ಯಾಜಕರು, ಜನಸಮೂಹದವರು ಈ ಎಲ್ಲರಿಗೋಸ್ಕರ ದೋಷಪರಿಹಾರವನ್ನು ಮಾಡಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು