Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 24:5 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 “ಅದಲ್ಲದೆ ನೀನು ಗೋದಿಯ ಹಿಟ್ಟಿನಿಂದ ಹನ್ನೆರಡು ರೊಟ್ಟಿಗಳನ್ನು ಮಾಡಬೇಕು; ಪ್ರತಿಯೊಂದು ರೊಟ್ಟಿಯು ಆರಾರು ಸೇರಿನದಾಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 “ನೀನು ಗೋದಿಯ ಹಿಟ್ಟಿನಿಂದ ಹನ್ನೆರಡು ರೊಟ್ಟಿಗಳನ್ನು ಮಾಡಬೇಕು. ಪ್ರತಿಯೊಂದು ರೊಟ್ಟಿ ಎರಡೆರಡು ಕಿಲೋಗ್ರಾಂನದಾಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಅದಲ್ಲದೆ ನೀನು ಗೋದಿಯ ಹಿಟ್ಟಿನಿಂದ ಹನ್ನೆರಡು ರೊಟ್ಟಿಗಳನ್ನು ಮಾಡಬೇಕು; ಪ್ರತಿಯೊಂದು ರೊಟ್ಟಿಯು ಆರಾರು ಸೇರಿನದಾಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 “ಶ್ರೇಷ್ಠ ಗೋಧಿಹಿಟ್ಟನ್ನು ತೆಗೆದುಕೊಂಡು ಹನ್ನೆರಡು ರೊಟ್ಟಿಗಳನ್ನು ಮಾಡಬೇಕು. ಪ್ರತಿ ರೊಟ್ಟಿಯನ್ನು ಮಾಡಲು ಆರು ಸೇರು ಹಿಟ್ಟನ್ನು ಉಪಯೋಗಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 “ನೀನು ನಯವಾದ ಹಿಟ್ಟನ್ನು ತೆಗೆದುಕೊಂಡು ಹನ್ನೆರಡು ರೊಟ್ಟಿಗಳನ್ನು ಸುಡಬೇಕು. ಪ್ರತಿಯೊಂದು ರೊಟ್ಟಿ ಎರಡೆರಡು ಓಮರನಷ್ಟು ಇರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 24:5
18 ತಿಳಿವುಗಳ ಹೋಲಿಕೆ  

ನೈವೇದ್ಯದ ರೊಟ್ಟಿಗಳು ಪ್ರತಿದಿನ ಆ ಮೇಜಿನ ಮೇಲೆ ನನ್ನ ಸಮ್ಮುಖದಲ್ಲಿಯೇ ಇಟ್ಟಿರಬೇಕು.


ಯೆಹೋವನು ಮೋಶೆಗೆ ಆಜ್ಞಾಪಿಸಿದ ಹಾಗೆ ಮೇಜಿನ ಮೇಲೆ ರೊಟ್ಟಿಗಳನ್ನು ಕ್ರಮವಾಗಿ ಯೆಹೋವನ ಸನ್ನಿಧಿಯಲ್ಲಿ ಇರಿಸಿದನು.


ಯೆಹೋವನಿಂದ ಇಸ್ರಾಯೇಲನೆಂಬ ಹೆಸರು ಹೊಂದಿದ ಯಾಕೋಬನ ಮಕ್ಕಳಿಂದ ಉತ್ಪತ್ತಿಯಾದ ಕುಲಗಳ ಸಂಖ್ಯೆಗೆ ಸರಿಯಾಗಿ ಹನ್ನೆರಡು ಕಲ್ಲುಗಳನ್ನು ತೆಗೆದುಕೊಂಡು,


ದೇವರಿಗೂ ಕರ್ತನಾದ ಯೇಸು ಕ್ರಿಸ್ತನಿಗೂ ದಾಸನಾಗಿರುವ ಯಾಕೋಬನು ಅನ್ಯದೇಶಗಳಲ್ಲಿ ಚದುರಿರುವ ಇಸ್ರಾಯೇಲ್ಯರ ಹನ್ನೆರಡು ಗೋತ್ರದವರಿಗೂ ಬರೆಯುವುದೇನೆಂದರೆ, “ನಿಮಗೆ ಶುಭವಾಗಲಿ.”


ನಮ್ಮ ಹನ್ನೆರಡು ಕುಲದವರು ಹಗಲಿರುಳು ಆಸಕ್ತಿಯಿಂದ ದೇವರನ್ನು ಆರಾಧಿಸುತ್ತಾ, ಆ ವಾಗ್ದಾನದ ಫಲವನ್ನು ಹೊಂದುವುದಕ್ಕಾಗಿ ನಿರೀಕ್ಷಿಸುತ್ತಾ ಇದ್ದಾರೆ. ಅರಸನೇ, ಅದೇ ನಿರೀಕ್ಷೆಯ ವಿಷಯದಲ್ಲಿಯೇ ಯೆಹೂದ್ಯರು, ನನ್ನ ವಿರುದ್ಧ ದೋಷಾರೋಪಣೆಮಾಡುತ್ತಿದ್ದಾರೆ.


ಅವನು ದೇವಮಂದಿರದೊಳಕ್ಕೆ ಹೋಗಿ ಯಾಜಕರು ಮಾತ್ರವೇ ಹೊರತು ಬೇರೆ ಯಾರು ತಿನ್ನಬಾರದಾಗಿದ್ದ ನೈವೇದ್ಯದ ರೊಟ್ಟಿಗಳನ್ನು ಅವನು, ಅವನ ಸಂಗಡ ಇದ್ದವರು ತಿಂದನಲ್ಲವೇ.


ಒಂದು ದೇವದರ್ಶನ ಗುಡಾರವು ಕಟ್ಟಲ್ಪಟ್ಟು, ಅದರ ಮೊದಲನೆಯ ಭಾಗದಲ್ಲಿ ದೀಪಸ್ತಂಭ, ಮೇಜು, ಮತ್ತು ಸಮರ್ಪಿಸಿದ ರೊಟ್ಟಿ ಇವುಗಳಿದ್ದವು. ಅದನ್ನು ಪವಿತ್ರಸ್ಥಳ ಎಂದು ಕರೆಯಲಾಗುತ್ತಿತು.


ಮೇಜನ್ನು, ಅದರ ಎಲ್ಲಾ ಉಪಕರಣಗಳನ್ನು, ನೈವೇದ್ಯದ ರೊಟ್ಟಿಯನ್ನು,


ಬಳಿಕ ಅವರು ಯೆಹೋವನ ಸಮ್ಮುಖದಲ್ಲಿರುವ ಮೇಜಿನ ಮೇಲೆ ನೀಲಿ ಬಟ್ಟೆಯನ್ನು ಹಾಸಿ ಅದರ ಮೇಲೆ ಮೇಜಿಗೆ ಸೇರಿದ ಪಾತ್ರೆಗಳನ್ನೂ, ಧೂಪಾರತಿಗಳನ್ನೂ, ಹೂಜಿಗಳನ್ನೂ, ಪಾನದ್ರವ್ಯಾರ್ಪಣೆಯ ಬಟ್ಟಲುಗಳನ್ನೂ ಇಡಬೇಕು. ಯಾವಾಗಲೂ ಇರಬೇಕಾದ ರೊಟ್ಟಿಗಳು ಅದರ ಮೇಲೆ ಇರಬೇಕು.


ಬಿಸಿರೊಟ್ಟಿಗಳನ್ನು ಅರ್ಪಿಸಿದ ಆ ದಿನಗಳಲ್ಲಿ ಯೆಹೋವನ ಸನ್ನಿಧಿಯಿಂದ ತೆಗೆಯಲ್ಪಟ್ಟ ನೈವೇದ್ಯವಾದ ಮೊದಲ ರೊಟ್ಟಿಗಳ ಹೊರತು ಅಲ್ಲಿ ಬೇರೆ ರೊಟ್ಟಿಗಳು ಇರಲಿಲ್ಲವಾದ್ದರಿಂದ, ಯಾಜಕನು ಆ ಪರಿಶುದ್ಧವಾದ ರೊಟ್ಟಿಗಳನ್ನೇ ಕೊಟ್ಟುಬಿಟ್ಟನು.


ಅವನ ಸಹೋದರರಾದ ಮಿಕ್ಕ ಕೆಹಾತ್ಯರಲ್ಲಿ ಕೆಲವರು ಪ್ರತಿ ಸಬ್ಬತ್ತಿನಲ್ಲಿ ನೈವೇದ್ಯದ ರೊಟ್ಟಿಗಳನ್ನು ತಯಾರಿಸುವ ಕೆಲಸವಿತ್ತು.


ದೇವಾಲಯದಲ್ಲಿ ಸೇವೆಮಾಡುವುದೂ, ನೈವೇದ್ಯದ ಮೀಸಲು ರೊಟ್ಟಿ, ನೈವೇದ್ಯಕ್ಕೆ ಬೇಕಾದ ಗೋದಿಹಿಟ್ಟು, ಹುಳಿಯಿಲ್ಲದ ರೊಟ್ಟಿ, ಕಬ್ಬಿಣದ ಹಂಚಿನಲ್ಲಿ ಸುಟ್ಟ ರೊಟ್ಟಿ, ಎಣ್ಣೆಯಿಂದ ನೆನೆದ ಭಕ್ಷ್ಯಗಳು ಇವುಗಳನ್ನು ಒದಗಿಸುವುದೂ, ಸೇರು, ಅಳತೆಗೋಲುಗಳನ್ನು ಪರೀಕ್ಷಿಸುವುದೂ,


ಈ ಯಾಜಕರು ಪ್ರತಿದಿನ ಬೆಳಿಗ್ಗೆ ಹಾಗು ಸಾಯಂಕಾಲ ಯೆಹೋವನಿಗೋಸ್ಕರ ಸರ್ವಾಂಗಹೋಮಗಳನ್ನು ಸಮರ್ಪಿಸುತ್ತಾ ಸುಗಂಧದ್ರವ್ಯ ಧೂಪವನ್ನು ಹಾಕುತ್ತಾ ಶುದ್ಧ ಬಂಗಾರದ ಮೇಜಿನ ಮೇಲೆ ನೈವೇದ್ಯವಾದ ರೊಟ್ಟಿಗಳನ್ನಿಡುತ್ತಾ ಪ್ರತಿ ಸಾಯಂಕಾಲದಲ್ಲಿ ಬಂಗಾರದ ದೀಪಸ್ತಂಭದ ದೀಪಗಳನ್ನು ಹಚ್ಚುತ್ತಾ ಇರುತ್ತಾರೆ. ಹೀಗೆ ನಾವು ನಮ್ಮ ದೇವರಾದ ಯೆಹೋವನ ಕಟ್ಟಳೆಗಳನ್ನು ಕೈಕೊಳ್ಳುತ್ತೇವೆ; ನೀವಾದರೋ ಆತನನ್ನು ಬಿಟ್ಟವರು.


ಆ ಹಣವು ದೇವರ ಸನ್ನಿಧಿಯಲ್ಲಿ ಇಡತಕ್ಕ ರೊಟ್ಟಿ, ನಿತ್ಯಧಾನ್ಯ, ನೈವೇದ್ಯ ಇವುಗಳಿಗಾಗಿಯೂ, ನಿತ್ಯ ಸರ್ವಾಂಗಹೋಮ, ಸಬ್ಬತ್ ದಿನ, ಅಮಾವಾಸ್ಯೆ ಮತ್ತು ಜಾತ್ರೆ ಉತ್ಸವ ಇವುಗಳಲ್ಲಿ ಮಾಡಬೇಕಾಗಿರುವ ಸರ್ವಾಂಗಹೋಮ, ಸಮಾಧಾನಯಜ್ಞ, ಇಸ್ರಾಯೇಲರ ದೋಷಪರಿಹಾರಕ ಯಜ್ಞ ಇವುಗಳಿಗಾಗಿಯೂ ನಮ್ಮ ದೇವರ ದೇವಾಲಯಕ್ಕೆ ಸಂಬಂಧವಾದ ಬೇರೆ ಎಲ್ಲಾ ಕೆಲಸಕಾರ್ಯಗಳಿಗಾಗಿಯೂ ವೆಚ್ಚವಾಗಬೇಕು.


ಆ ಮೇಲೆ ಮೇಜನ್ನು ಒಳಗೆ ತಂದು ಅದರ ಮೇಲಿಡಬೇಕಾದದ್ದನ್ನು ಸರಿಯಾಗಿ ಇಡಬೇಕು; ದೀಪಸ್ತಂಭವನ್ನು ಒಳಗೆ ತಂದು ಅದರ ಹಣತೆಗಳನ್ನು ಸರಿಯಾಗಿ ಇಡಬೇಕು.


ಅದೇ ದಿನ ಸೌಲನ ಪಶುಪಾಲರಲ್ಲಿ ಪ್ರಧಾನನಾದ ದೋಯೇಗನೆಂಬ ಎದೋಮ್ಯನು ಯೆಹೋವನ ಆಲಯದಲ್ಲಿ ಉಳಿದುಕೊಂಡಿದ್ದನು.


ಧರ್ಮಶಾಸ್ತ್ರವಿಧಿಗಳಿಗೆ ಅನುಸಾರವಾಗಿ ನಮ್ಮ ದೇವರಾದ ಯೆಹೋವನ ಯಜ್ಞವೇದಿಯ ಮೇಲೆ ಬೆಂಕಿ ಉರಿಸುವುದಕ್ಕಾಗಿ, ಪ್ರತಿ ವರ್ಷವೂ ನಿಯಮಿತ ಕಾಲಗಳಲ್ಲಿ ನಮ್ಮ ದೇವಾಲಯಕ್ಕೆ ಕಟ್ಟಿಗೆ ದೊರಕುವ ಹಾಗೆ, ಆಯಾ ಗೋತ್ರಾನುಸಾರ ಕಟ್ಟಿಗೆ ದಾನ ಮಾಡತಕ್ಕವರು ಇಂಥವರೇ ಎಂಬುದನ್ನು ಯಾಜಕರೂ, ಲೇವಿಯರೂ, ಸಾಧಾರಣ ಜನರೂ ಆಗಿರುವ ನಮ್ಮಲ್ಲಿ ಚೀಟು ಹಾಕಿ ಗೊತ್ತುಮಾಡಿಕೊಳ್ಳುತ್ತೇವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು