Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 24:6 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಅವುಗಳನ್ನು ಆರಾರು ರೊಟ್ಟಿಗಳ ಮೇರೆಗೆ ಎರಡು ರಾಶಿಗಳಾಗಿ, ಚೊಕ್ಕಬಂಗಾರದ ಮೇಜಿನ ಮೇಲೆ ಯೆಹೋವನ ಸನ್ನಿಧಿಯಲ್ಲಿ ಇಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಅವುಗಳನ್ನು ಆರಾರರ ಮೇರೆಗೆ ಎರಡು ರಾಶಿಗಳಾಗಿ ಚೊಕ್ಕ ಬಂಗಾರದ ಮೇಜಿನ ಮೇಲೆ ಸರ್ವೇಶ್ವರನ ಸಮ್ಮುಖದಲ್ಲಿ ಇಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಅವುಗಳನ್ನು ಆರಾರರ ಮೇರೆಗೆ ಎರಡು ರಾಶಿಗಳಾಗಿ ಚೊಕ್ಕ ಬಂಗಾರದ ಮೇಜಿನ ಮೇಲೆ ಯೆಹೋವನ ಸನ್ನಿಧಿಯಲ್ಲಿ ಇಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಅವುಗಳನ್ನು ಯೆಹೋವನ ಸನ್ನಿಧಿಯಲ್ಲಿರುವ ಚಿನ್ನದ ಮೇಜಿನ ಮೇಲೆ ಎರಡು ಸಾಲಾಗಿ ಇಡಬೇಕು. ಒಂದೊಂದು ಸಾಲಿನಲ್ಲಿ ಆರಾರು ರೊಟ್ಟಿಗಳಿರುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಅವುಗಳನ್ನು ಚೊಕ್ಕ ಬಂಗಾರದ ಮೇಜಿನ ಮೇಲೆ ಯೆಹೋವ ದೇವರ ಸನ್ನಿಧಿಯಲ್ಲಿ ಒಂದು ಸಾಲಿನಲ್ಲಿ ಆರರಂತೆ, ಎರಡು ಸಾಲುಗಳನ್ನಾಗಿ ಇಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 24:6
13 ತಿಳಿವುಗಳ ಹೋಲಿಕೆ  

ಸೊಲೊಮೋನನು ಯೆಹೋವನ ಆಲಯಕ್ಕೋಸ್ಕರ ಮಾಡಿಸಿದ ಒಳಗಿನ ಸಾಮಾನುಗಳು ಯಾವುವೆಂದರೆ - ಬಂಗಾರದ ಧೂಪವೇದಿಯು ನೈವೇದ್ಯವಾದ ರೊಟ್ಟಿಗಳನ್ನಿಡುವುದಕ್ಕಾಗಿ ಬಂಗಾರದ ಮೇಜು,


ಒಂದು ದೇವದರ್ಶನ ಗುಡಾರವು ಕಟ್ಟಲ್ಪಟ್ಟು, ಅದರ ಮೊದಲನೆಯ ಭಾಗದಲ್ಲಿ ದೀಪಸ್ತಂಭ, ಮೇಜು, ಮತ್ತು ಸಮರ್ಪಿಸಿದ ರೊಟ್ಟಿ ಇವುಗಳಿದ್ದವು. ಅದನ್ನು ಪವಿತ್ರಸ್ಥಳ ಎಂದು ಕರೆಯಲಾಗುತ್ತಿತು.


ಈ ಯಾಜಕರು ಪ್ರತಿದಿನ ಬೆಳಿಗ್ಗೆ ಹಾಗು ಸಾಯಂಕಾಲ ಯೆಹೋವನಿಗೋಸ್ಕರ ಸರ್ವಾಂಗಹೋಮಗಳನ್ನು ಸಮರ್ಪಿಸುತ್ತಾ ಸುಗಂಧದ್ರವ್ಯ ಧೂಪವನ್ನು ಹಾಕುತ್ತಾ ಶುದ್ಧ ಬಂಗಾರದ ಮೇಜಿನ ಮೇಲೆ ನೈವೇದ್ಯವಾದ ರೊಟ್ಟಿಗಳನ್ನಿಡುತ್ತಾ ಪ್ರತಿ ಸಾಯಂಕಾಲದಲ್ಲಿ ಬಂಗಾರದ ದೀಪಸ್ತಂಭದ ದೀಪಗಳನ್ನು ಹಚ್ಚುತ್ತಾ ಇರುತ್ತಾರೆ. ಹೀಗೆ ನಾವು ನಮ್ಮ ದೇವರಾದ ಯೆಹೋವನ ಕಟ್ಟಳೆಗಳನ್ನು ಕೈಕೊಳ್ಳುತ್ತೇವೆ; ನೀವಾದರೋ ಆತನನ್ನು ಬಿಟ್ಟವರು.


ಸೊಲೊಮೋನನು ಯೆಹೋವನ ದೇವಾಲಯಕ್ಕಾಗಿ ಮಾಡಿಸಿದ ಒಳಗಿನ ಸಾಮಾನುಗಳು ಯಾವುದೆಂದರೆ: ಬಂಗಾರದ ಧೂಪವೇದಿ, ನೈವೇದ್ಯ ರೊಟ್ಟಿಗಳನ್ನಿಡುವ ಮೇಜುಗಳು,


ಆದರೆ ಎಲ್ಲವೂ ಯೋಗ್ಯವಾಗಿಯೂ ಹಾಗೂ ಕ್ರಮದಿಂದಲೂ ನಡೆಯಲಿ.


ಮೇಜನ್ನು, ಅದರ ಎಲ್ಲಾ ಉಪಕರಣಗಳನ್ನು, ನೈವೇದ್ಯದ ರೊಟ್ಟಿಯನ್ನು,


ಆ ಹಣವು ದೇವರ ಸನ್ನಿಧಿಯಲ್ಲಿ ಇಡತಕ್ಕ ರೊಟ್ಟಿ, ನಿತ್ಯಧಾನ್ಯ, ನೈವೇದ್ಯ ಇವುಗಳಿಗಾಗಿಯೂ, ನಿತ್ಯ ಸರ್ವಾಂಗಹೋಮ, ಸಬ್ಬತ್ ದಿನ, ಅಮಾವಾಸ್ಯೆ ಮತ್ತು ಜಾತ್ರೆ ಉತ್ಸವ ಇವುಗಳಲ್ಲಿ ಮಾಡಬೇಕಾಗಿರುವ ಸರ್ವಾಂಗಹೋಮ, ಸಮಾಧಾನಯಜ್ಞ, ಇಸ್ರಾಯೇಲರ ದೋಷಪರಿಹಾರಕ ಯಜ್ಞ ಇವುಗಳಿಗಾಗಿಯೂ ನಮ್ಮ ದೇವರ ದೇವಾಲಯಕ್ಕೆ ಸಂಬಂಧವಾದ ಬೇರೆ ಎಲ್ಲಾ ಕೆಲಸಕಾರ್ಯಗಳಿಗಾಗಿಯೂ ವೆಚ್ಚವಾಗಬೇಕು.


ಅಲ್ಲಿ ಮರದ ವೇದಿಕೆಯೊಂದಿತ್ತು. ಅದರ ಎತ್ತರ ಮೂರು ಮೊಳ, ಉದ್ದ ಎರಡು ಮೊಳವಾಗಿತ್ತು. ಅದರ ಮೂಲೆಗಳೂ, ಪೀಠವೂ, ಪಕ್ಕಗಳೂ ಮರದ್ದೇ ಆಗಿದ್ದವು. ಆ ಪುರುಷನು ನನಗೆ, “ಇದು ಯೆಹೋವನ ಸಮ್ಮುಖದ ಮೇಜು” ಎಂದು ಹೇಳಿದನು.


ನೈವೇದ್ಯದ ರೊಟ್ಟಿಗಳು ಪ್ರತಿದಿನ ಆ ಮೇಜಿನ ಮೇಲೆ ನನ್ನ ಸಮ್ಮುಖದಲ್ಲಿಯೇ ಇಟ್ಟಿರಬೇಕು.


ಧರ್ಮಶಾಸ್ತ್ರವಿಧಿಗಳಿಗೆ ಅನುಸಾರವಾಗಿ ನಮ್ಮ ದೇವರಾದ ಯೆಹೋವನ ಯಜ್ಞವೇದಿಯ ಮೇಲೆ ಬೆಂಕಿ ಉರಿಸುವುದಕ್ಕಾಗಿ, ಪ್ರತಿ ವರ್ಷವೂ ನಿಯಮಿತ ಕಾಲಗಳಲ್ಲಿ ನಮ್ಮ ದೇವಾಲಯಕ್ಕೆ ಕಟ್ಟಿಗೆ ದೊರಕುವ ಹಾಗೆ, ಆಯಾ ಗೋತ್ರಾನುಸಾರ ಕಟ್ಟಿಗೆ ದಾನ ಮಾಡತಕ್ಕವರು ಇಂಥವರೇ ಎಂಬುದನ್ನು ಯಾಜಕರೂ, ಲೇವಿಯರೂ, ಸಾಧಾರಣ ಜನರೂ ಆಗಿರುವ ನಮ್ಮಲ್ಲಿ ಚೀಟು ಹಾಕಿ ಗೊತ್ತುಮಾಡಿಕೊಳ್ಳುತ್ತೇವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು