Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 24:7 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಒಂದೊಂದು ರಾಶಿಯ ಮೇಲೆ ಸ್ವಚ್ಛವಾದ ಧೂಪವನ್ನು ಇಡಬೇಕು. ಆ ರೊಟ್ಟಿಗಳ ನೈವೇದ್ಯವನ್ನು ಸೂಚಿಸುವುದಕ್ಕಾಗಿ ಆ ಧೂಪವೇ ಯೆಹೋವನಿಗೆ ಹೋಮಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಒಂದೊಂದು ರಾಶಿಯ ಮೇಲೆ ಸ್ವಚ್ಛವಾದ ಸಾಂಬ್ರಾಣಿಯನ್ನು ಇಡಬೇಕು. ಆ ರೊಟ್ಟಿಗಳ ನೈವೇದ್ಯವನ್ನು ಸೂಚಿಸಲು ಆ ಸಾಂಬ್ರಾಣಿಯನ್ನು ಸರ್ವೇಶ್ವರನಿಗೆ ಹೋಮಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಒಂದೊಂದು ರಾಶಿಯ ಮೇಲೆ ಸ್ವಚ್ಫವಾದ ಧೂಪವನ್ನು ಇಡಬೇಕು. ಆ ರೊಟ್ಟಿಗಳ ನೈವೇದ್ಯವನ್ನು ಸೂಚಿಸುವದಕ್ಕಾಗಿ ಆ ಧೂಪವೇ ಯೆಹೋವನಿಗೆ ಹೋಮಮಾಡಲ್ಪಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಪ್ರತಿ ಸಾಲಿನಲ್ಲಿ ಶುದ್ಧವಾದ ಧೂಪದ್ರವ್ಯವನ್ನಿಡಬೇಕು. ಇದು ಅಗ್ನಿಯ ಮೂಲಕ ಯೆಹೋವನಿಗೆ ಅರ್ಪಿತವಾದ ಸಮರ್ಪಣೆಯನ್ನು ಯೆಹೋವನ ಜ್ಞಾಪಕಕ್ಕೆ ತರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ರೊಟ್ಟಿಯ ಮೇಲೆ ಅದು ಜ್ಞಾಪಕಾರ್ಥವಾಗಿ ಇರುವಂತೆಯೂ, ಬೆಂಕಿಯ ಮೂಲಕ ಯೆಹೋವ ದೇವರಿಗೆ ಸಮರ್ಪಣೆಯಾಗುವಂತೆಯೂ, ಪ್ರತಿಯೊಂದು ಸಾಲಿನ ಮೇಲೆ ಶುದ್ಧವಾದ ಸಾಂಬ್ರಾಣಿಯನ್ನು ಹಾಕಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 24:7
17 ತಿಳಿವುಗಳ ಹೋಲಿಕೆ  

ಅದನ್ನು ಆರೋನನ ವಂಶದವರಾದ ಯಾಜಕರ ಬಳಿಗೆ ತರಬೇಕು. ಯಾಜಕನು ದೇವರಿಗೆ ನೈವೇದ್ಯವಾದದ್ದನ್ನು ಯೆಹೋವನ ಒಳ್ಳೆಯತನವನ್ನು ಸೂಚಿಸುವುದಕ್ಕಾಗಿ ಆ ಎಣ್ಣೆ ಬೆರೆಸಿದ ಹಿಟ್ಟಿನಲ್ಲಿ ಒಂದು ಹಿಡಿಯನ್ನು ಮತ್ತು ಧೂಪವೆಲ್ಲವನ್ನು ತೆಗೆದುಕೊಂಡು ಯಜ್ಞವೇದಿಯ ಮೇಲೆ ಹೋಮಮಾಡಬೇಕು. ಅದು ಅಗ್ನಿಯ ಮೂಲಕ ಯೆಹೋವನಿಗೆ ಪರಿಮಳವನ್ನು ಉಂಟುಮಾಡುವುದು.


ಆದಕಾರಣ ಆತನು ತನ್ನ ಮೂಲಕ ದೇವರ ಬಳಿಗೆ ಬರುವವರನ್ನು ಸಂಪೂರ್ಣವಾಗಿ ರಕ್ಷಿಸುವುದಕ್ಕೆ ಶಕ್ತನಾಗಿದ್ದಾನೆ. ಯಾಕೆಂದರೆ ಅವರಿಗೋಸ್ಕರ ವಿಜ್ಞಾಪನೆ ಮಾಡುವುದಕ್ಕೆ ಯಾವಾಗಲೂ ಬದುಕುವವನಾಗಿದ್ದಾನೆ.


ತನ್ನ ಪ್ರಿಯನಲ್ಲಿಯೇ ನಮಗೆ ಉಚಿತವಾಗಿ ಅನುಗ್ರಹಿಸಿರುವ ತನ್ನ ಮಹಿಮೆಯುಳ್ಳ ಕೃಪೆಯ ಸ್ತುತಿಗಾಗಿ ಇದೆಲ್ಲಾವನ್ನು ಮಾಡಿದನು.


ಕೊರ್ನೆಲ್ಯನೇ ‘ನಿನ್ನ ಪ್ರಾರ್ಥನೆಯನ್ನು ದೇವರು ಕೇಳಿದ್ದಾನೆ, ನಿನ್ನ ದಾನಧರ್ಮಗಳು ದೇವರ ಸನ್ನಿಧಾನದಲ್ಲಿ ನೆನಪಿಗೆ ಬಂದವು.


ಅವನು ಆ ದೂತನನ್ನು ದೃಷ್ಟಿಸಿನೋಡಿ ಭಯಹಿಡಿದವನಾಗಿ; “ಕರ್ತನೇ, ಇದೇನು?” ಎಂದು ಕೇಳಲು, ಆ ದೂತನು ಅವನಿಗೆ; “ನಿನ್ನ ಪ್ರಾರ್ಥನೆಗಳೂ, ನಿನ್ನ ದಾನಧರ್ಮಗಳೂ ದೇವರ ಸನ್ನಿಧಿಗೆ ಜ್ಞಾಪರ್ಥಕವಾಗಿ ಬಂದು ತಲುಪಿದೆ.


ನಾನೇ ಪರಲೋಕದಿಂದ ಇಳಿದು ಬಂದ ಜೀವವುಳ್ಳ ರೊಟ್ಟಿ. ಈ ರೊಟ್ಟಿಯನ್ನು ಯಾವನಾದರೂ ತಿಂದರೆ ಅವನು ಸದಾ ಕಾಲವು ಬದುಕುವನು; ಮತ್ತು ನಾನು ಕೊಡುವ ರೊಟ್ಟಿ ನನ್ನ ದೇಹವೇ, ಅದನ್ನು ಲೋಕದ ಜೀವಕ್ಕಾಗಿ ಕೊಡುವೆನು” ಎಂದು ಹೇಳಿದನು.


ಯೇಸು ಅವರಿಗೆ “ನಾನೇ ಜೀವದ ರೊಟ್ಟಿ ನನ್ನ ಬಳಿಗೆ ಬರುವವನಿಗೆ ಎಂದಿಗೂ ಹಸಿವೆಯಾಗುವುದಿಲ್ಲ; ನನ್ನನ್ನು ನಂಬುವವನಿಗೆ ಎಂದಿಗೂ ಬಾಯಾರಿಕೆಯಾಗುವುದಿಲ್ಲ.


ಆಗ ಯೆಹೋವನು ಮೋಶೆಗೆ, “ಇದನ್ನು ಜ್ಞಾಪಕಾರ್ಥಕವಾಗಿ ಒಂದು ಗ್ರಂಥದಲ್ಲಿ ಬರೆ. ಅದನ್ನು ಯೆಹೋಶುವನಿಗೆ ತಿಳಿಸು. ಏಕೆಂದರೆ ನಾನು ಅಮಾಲೇಕ್ಯರ ನೆನಪು ಭೂಮಿಯ ಮೇಲೆ ಇರದಂತೆ ಸಂಪೂರ್ಣವಾಗಿ ನಾಶಮಾಡಿ ಬಿಡುವೆನು” ಎಂದು ಹೇಳಿದನು.


ಯೆಹೋವನು ತನ್ನ ಭುಜಬಲದಿಂದ ನಿಮ್ಮನ್ನು ಐಗುಪ್ತ ದೇಶದಿಂದ ಬಿಡಿಸಿದ್ದರಿಂದ ಆತನ ನಿಯಮವನ್ನು ಕುರಿತು ನೀವು ಹೇಳಬೇಕು. ಈ ಆಚರಣೆಯು ನಿಮ್ಮ ಕೈಗಳ ಮೇಲೆ ಗುರುತಾಗಿಯೂ, ಹಣೆಗೆ ಕಟ್ಟಿಕೊಂಡಿರುವ ಜ್ಞಾಪಕಪಟ್ಟಿಯಂತೆಯೂ ಇರಬೇಕು.


ಈ ದಿನವು ನಿಮಗೆ ಜ್ಞಾಪಕಾರ್ಥವಾಗಿರುವುದು. ಯೆಹೋವನ ಘನಕ್ಕಾಗಿ ಆ ಹಬ್ಬವನ್ನು ತಲತಲಾಂತರಕ್ಕೂ ಆಚರಿಸಬೇಕು. ಅದನ್ನು ಶಾಶ್ವತನಿಯಮವೆಂದು ಎಂದೆಂದಿಗೂ ಆಚರಿಸಬೇಕು.


ಆ ಕಾಮನಬಿಲ್ಲು ಮೇಘಗಳಲ್ಲಿ ಕಾಣಿಸುವಾಗ ನಾನು ಅದನ್ನು ನೋಡಿ ದೇವರಾದ ನನಗೂ ಭೂಮಿಯ ಮೇಲಿರುವ ಎಲ್ಲಾ ಜೀವಜಂತುಗಳಿಗೂ ಆದ ಶಾಶ್ವತವಾದ ಒಡಂಬಡಿಕೆಯನ್ನು ಜ್ಞಾಪಕಮಾಡಿಕೊಳ್ಳುವೆನು” ಅಂದನು.


ಆ ಎರಡು ರತ್ನಗಳನ್ನು ಹೆಗಲಿನ ಮೇಲಿರುವ ಏಫೋದಿನ ಪಟ್ಟಿಗಳಲ್ಲಿ ಹಾಕಿಸಬೇಕು. ಅವು ಇಸ್ರಾಯೇಲರ ಜ್ಞಾಪಕಾರ್ಥವಾದ ರತ್ನಗಳಾಗಿರುವವು. ಆರೋನನು ಯೆಹೋವನ ಸನ್ನಿಧಿಯಲ್ಲಿ ಹೋಗುವಾಗೆಲ್ಲಾ ಇಸ್ರಾಯೇಲರ ಕುಲಗಳ ಹೆಸರುಗಳನ್ನು ಆತನ ನೆನಪಿಗೆ ತರುವುದಕ್ಕಾಗಿ ತನ್ನ ಎರಡೂ ಭುಜಗಳ ಮೇಲೆ ಅವುಗಳನ್ನು ಧರಿಸಿಕೊಂಡು ಹೋಗುವನು.


ಯಾಜಕನು ನೈವೇದ್ಯವನ್ನು ಯೆಹೋವನ ಒಳ್ಳೆಯತನವನ್ನು ಸೂಚಿಸುವುದಕ್ಕಾಗಿ ಅದರಲ್ಲಿ ಸ್ವಲ್ಪಭಾಗವನ್ನು ತೆಗೆದುಕೊಂಡು ಯಜ್ಞವೇದಿಯ ಮೇಲೆ ಹೋಮಮಾಡಬೇಕು. ಅದು ಅಗ್ನಿಯ ಮೂಲಕ ಯೆಹೋವನಿಗೆ ಪರಿಮಳವನ್ನು ಉಂಟುಮಾಡುವುದು.


ನೀನು ನನಗೆ ಹೋಮಕ್ಕಾಗಿ ಕುರಿ ಮೇಕೆಗಳನ್ನು ತಂದು ಯಜ್ಞಗಳಿಂದ ನನ್ನನ್ನು ಘನಪಡಿಸಲಿಲ್ಲ. ಕಾಣಿಕೆಗಳನ್ನು ಕೇಳಿ ನಿನ್ನನ್ನು ನಾನು ತೊಂದರೆಪಡಿಸಲಿಲ್ಲ, ಧೂಪಕ್ಕಾಗಿ ನಿನ್ನನ್ನು ಬೇಸರಗೊಳಿಸಲಿಲ್ಲ.


“‘ಯಾವನಾದರೂ ಯೆಹೋವನಿಗೆ ಧಾನ್ಯನೈವೇದ್ಯವನ್ನು ಮಾಡಬೇಕೆಂದಿದ್ದರೆ ಅದು ಗೋದಿಹಿಟ್ಟಿನದಾಗಿರಬೇಕು. ಅವನು ಅದರ ಮೇಲೆ ಎಣ್ಣೆಯನ್ನು ಹೊಯ್ದು ಅದರ ಮೇಲೆ ಧೂಪವನ್ನು ಇಡಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು