Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 25:19 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ನಿಮ್ಮ ಭೂಮಿಯು ಫಲವತ್ತಾಗುವುದು, ನೀವು ಸಮೃದ್ಧಿಯಾಗಿ ಊಟಮಾಡುವಿರಿ ಮತ್ತು ಆ ದೇಶದಲ್ಲಿ ನೀವು ನಿರ್ಭಯವಾಗಿ ವಾಸಮಾಡುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ನಿಮ್ಮ ಭೂಮಿ ಫಲವತ್ತಾಗುವುದು; ನಿಮಗೆ ಸಮೃದ್ಧಿಯಾದ ಊಟ ದೊರಕುವುದು ಮತ್ತು ಆ ನಾಡಿನಲ್ಲಿ ನಿರ್ಭಯವಾಗಿ ವಾಸಮಾಡುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ನಿಮ್ಮ ಭೂವಿುಯು ಫಲವತ್ತಾಗುವದು, ನೀವು ಸಮೃದ್ಧಿಯಾಗಿ ಊಟಮಾಡುವಿರಿ, ಮತ್ತು ಆ ದೇಶದಲ್ಲಿ ನೀವು ನಿರ್ಭಯವಾಗಿ ವಾಸಮಾಡುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಮತ್ತು ಭೂಮಿಯು ಒಳ್ಳೆಯ ಪೈರುಗಳನ್ನು ಕೊಡುವುದು. ಆಗ ನಿಮಗೆ ಬೇಕಾದಷ್ಟು ಆಹಾರವಿರುವುದು ಮತ್ತು ನೀವು ದೇಶದಲ್ಲಿ ಸುರಕ್ಷಿತವಾಗಿ ಜೀವಿಸುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಭೂಮಿಯು ತನ್ನ ಫಲವನ್ನು ಕೊಡುವುದು. ನೀವು ತಿಂದು ತೃಪ್ತರಾಗುವಿರಿ, ಅದರಲ್ಲಿ ಸುರಕ್ಷಿತವಾಗಿ ವಾಸಿಸುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 25:19
17 ತಿಳಿವುಗಳ ಹೋಲಿಕೆ  

ನೀವು ಹೊಟ್ಟೆ ತುಂಬಾ ಊಟಮಾಡಿ ತೃಪ್ತಿಗೊಂಡು, ನಿಮಗಾಗಿ ಅದ್ಭುತಕಾರ್ಯಗಳನ್ನು ಮಾಡಿದ ನಿಮ್ಮ ದೇವರಾದ ಯೆಹೋವನ ನಾಮವನ್ನು ಕೊಂಡಾಡುವಿರಿ. ನನ್ನ ಜನರಿಗೆ ಎಂದಿಗೂ ಆಶಾಭಂಗವಾಗದು.


ನಿಜವಾಗಿ ಯೆಹೋವನು ಒಳ್ಳೆಯದನ್ನು ಅನುಗ್ರಹಿಸುವನು; ನಮ್ಮ ದೇಶವು ತನ್ನ ಬೆಳೆ ಕೊಡುವುದು.


ಕಣತುಳಿಸುವ ಕೆಲಸವು ದ್ರಾಕ್ಷಿಯ ಬೆಳೆಯ ಕಾಲದ ತನಕ ಮತ್ತು ದ್ರಾಕ್ಷಿಯ ಬೆಳೆಯನ್ನು ಕೂಡಿಸುವ ಕೆಲಸವು ಬಿತ್ತನೆಯ ಕಾಲದ ವರೆಗೂ ನಡೆಯುವವು, ನೀವು ಸಮೃದ್ಧಿಯಾಗಿ ಊಟ ಮಾಡುವಿರಿ, ನಿಮ್ಮ ದೇಶದಲ್ಲಿ ಸುರಕ್ಷಿತವಾಗಿ ವಾಸಮಾಡುವಿರಿ.


ಕಣಜಗಳಲ್ಲಿ ಗೋದಿಯು ರಾಶಿರಾಶಿಯಾಗಿರುವುದು, ತೊಟ್ಟಿಗಳಲ್ಲಿ ದ್ರಾಕ್ಷಾರಸವೂ ಎಣ್ಣೆಯೂ ತುಂಬಿತುಳುಕುವವು.


ನೀವು ಕ್ಷಾಮ ದೇಶದವರೆಂದು ಜನಾಂಗಗಳು ಇನ್ನು ನಿಮ್ಮನ್ನು ನಿಂದಿಸದಂತೆ, ನಾನು ಮರದ ಹಣ್ಣನ್ನೂ, ಹೊಲದ ಬೆಳೆಯನ್ನೂ ಹೆಚ್ಚಿಸುವೆನು.


ಆಗ ನೀವು ಹೊಲದಲ್ಲಿ ಬೀಜ ಬಿತ್ತುವುದಕ್ಕೆ ಆತನು ಬಿತ್ತನೆಯ ಮಳೆಯನ್ನು ದಯಪಾಲಿಸುವನು; ನೆಲದ ಬೆಳೆಯಿಂದ ಸಾರವಾದ ಆಹಾರವನ್ನು ಸಮೃದ್ಧಿಯಾಗಿ ಒದಗಿಸುವನು; ಆ ದಿನದಲ್ಲಿ ನಿಮ್ಮ ಮಂದೆಗಳು ದೊಡ್ಡ ದೊಡ್ಡ ಕಾವಲುಗಳಲ್ಲಿ ಮೇಯುವವು.


ಭೂಮಿಯು ಒಳ್ಳೆಯ ಬೆಳೆಯನ್ನು ಕೊಟ್ಟಿರುತ್ತದೆ. ದೇವರೇ, ನಮ್ಮ ದೇವರೇ ನಮ್ಮನ್ನು ಆಶೀರ್ವದಿಸಿದ್ದಾನೆ;


“‘ನನ್ನ ಆಜ್ಞಾವಿಧಿಗಳನ್ನು ನೀವು ಅನುಸರಿಸಿ ನಡೆಯಬೇಕು. ಆಗ ನೀವು ಆ ದೇಶದಲ್ಲಿ ನಿರ್ಭಯವಾಗಿ ವಾಸವಾಗಿರುವಿರಿ.


“‘ಏಳನೆಯ ವರ್ಷದಲ್ಲಿ ಬೀಜವನ್ನು ಬಿತ್ತುವುದಕ್ಕಾಗಲಿ, ಬೆಳೆದದ್ದನ್ನು ಕೂಡಿಸಿಟ್ಟುಕೊಳ್ಳುವುದಕ್ಕಾಗಲಿ ಅಪ್ಪಣೆ ಇಲ್ಲವಲ್ಲಾ; ಆ ವರ್ಷದಲ್ಲಿ ಏನು ತಿನ್ನಬೇಕು?’ ಎಂದು ವಿಚಾರಿಸುತ್ತೀರೋ


ನಾನು ಮುಂಗಾರು ಮತ್ತು ಹಿಂಗಾರು ಮಳೆಗಳನ್ನು ಆಯಾ ಕಾಲದಲ್ಲಿಯೇ ಬರಮಾಡುವೆನು; ನಿಮ್ಮ ಹೊಲಗಳು ಒಳ್ಳೆಯ ಬೆಳೆಯನ್ನು ಕೊಡುವವು ಹಾಗು ತೋಟದ ಮರಗಳು ಹೇರಳವಾದ ಫಲಕೊಡುವವು.


ನಿಮ್ಮ ದೇಶದಲ್ಲಿ ನಿಮಗೆ ಸಮಾಧಾನವನ್ನು ಅನುಗ್ರಹಿಸುವೆನು; ಯಾರ ಭಯವೂ ಇಲ್ಲದೆ ಮಲಗಿಕೊಳ್ಳುವಿರಿ; ದುಷ್ಟಮೃಗಗಳನ್ನು ದೇಶದಿಂದ ತೆಗೆದುಹಾಕುವೆನು; ನಿಮ್ಮ ದೇಶವು ಶತ್ರುಗಳ ಕತ್ತಿಯಿಂದ ಹಾಳಾಗುವುದಿಲ್ಲ.


ಆದರೆ ನೀವು ಯೊರ್ದನ್ ನದಿಯನ್ನು ದಾಟಿ, ನಿಮ್ಮ ದೇವರಾದ ಯೆಹೋವನು ನಿಮಗೆ ಸ್ವತ್ತಾಗಿ ಕೊಡುವ ಆ ದೇಶದಲ್ಲಿ ಮನೆಮಾಡಿಕೊಂಡಿರುವಾಗ, ನಿಮ್ಮ ಸುತ್ತಲೂ ಶತ್ರುಗಳು ಯಾರೂ ಇಲ್ಲದಂತೆ ಯೆಹೋವನು ಮಾಡಿದ್ದರಿಂದ ನೀವು ನಿರ್ಭಯವಾಗಿರುವ ಕಾಲದಲ್ಲಿ,


ಯೆಹೋವನು ನನ್ನ ತಂದೆಯಾದ ದಾವೀದನಿಗೆ, ‘ನಾನು ನಿನಗೆ ಬದಲಾಗಿ ನಿನ್ನ ಸಿಂಹಾಸನದ ಮೇಲೆ ಕುಳ್ಳಿರಿಸುವ ನಿನ್ನ ಮಗನು ನನ್ನ ಹೆಸರಿಗೆ ಒಂದು ಆಲಯವನ್ನು ಕಟ್ಟಲಿ’ ಎಂದು ಹೇಳಿದ್ದರಿಂದ ನಾನು ನನ್ನ ದೇವರಾದ ಯೆಹೋವನ ಹೆಸರಿಗೆ ಒಂದು ಅಲಯವನ್ನು ಕಟ್ಟಬೇಕೆಂದಿದ್ದೇನೆ,


ನನ್ನ ಮಾತಿಗೆ ಕಿವಿಗೊಡುವವನಾದರೋ ಸುರಕ್ಷಿತನಾಗಿದ್ದು, ಯಾವ ಕೇಡಿಗೂ ಭಯಪಡದೆ ನೆಮ್ಮದಿಯಾಗಿ ಬಾಳುವನು” ಎಂಬುದೇ.


ನೀವು ಒಪ್ಪಿ ವಿಧೇಯರಾದರೆ ದೇಶದ ಮೇಲನ್ನು ಅನುಭವಿಸುವಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು