Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 25:24 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ನಿಮ್ಮಲ್ಲಿ ಮತ್ತೊಬ್ಬನ ಸ್ವತ್ತಿನ ಭೂಮಿ ನಿಮ್ಮ ವಶಕ್ಕೆ ಬಂದರೆ ಅದನ್ನು ಈಡುಕೊಟ್ಟು ಬಿಡಿಸಿಕೊಳ್ಳುವ ಅಧಿಕಾರವು ಕೊಟ್ಟವನಿಗೆ ಇರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 ನಿಮ್ಮಲ್ಲಿ ಮತ್ತೊಬ್ಬನ ಸೊತ್ತು ನಿಮ್ಮ ವಶಕ್ಕೆ ಬಂದರೆ ಅದನ್ನು ಈಡುಕೊಟ್ಟು ಬಿಡಿಸಿಕೊಳ್ಳುವ ಹಕ್ಕು, ಕೊಟ್ಟವನಿಗೆ ಇರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ನಿಮ್ಮಲ್ಲಿ ಮತ್ತೊಬ್ಬನ ಸ್ವಾಸ್ತ್ಯಭೂವಿು ನಿಮ್ಮ ವಶಕ್ಕೆ ಬಂದರೆ ಅದನ್ನು ಈಡುಕೊಟ್ಟು ಬಿಡಿಸಿಕೊಳ್ಳುವ ಅಧಿಕಾರವು ಕೊಟ್ಟವನಿಗೆ ಇರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ಜನರು ತಮ್ಮ ಭೂಮಿಯನ್ನು ಮಾರಿದರೆ ಅದನ್ನು ಬಿಡಿಸಿಕೊಳ್ಳುವ ಹಕ್ಕು ಅವರ ಕುಟುಂಬಕ್ಕಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ನಿಮ್ಮ ಸ್ವಾಧೀನದಲ್ಲಿರುವ ನಿಮ್ಮ ಎಲ್ಲಾ ಭೂಮಿಗೆ ಬಿಡುಗಡೆಯನ್ನು ಕೊಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 25:24
12 ತಿಳಿವುಗಳ ಹೋಲಿಕೆ  

ದೇವರ ಪವಿತ್ರಾತ್ಮನನ್ನು ದುಃಖಪಡಿಸಬೇಡಿರಿ. ಆತನಲ್ಲಿಯೇ ವಿಮೋಚನೆಯ ದಿನಕ್ಕಾಗಿ ಮುದ್ರೆ ಹೊಂದಿದ್ದೀರಲ್ಲಾ.


ದೇವರು ತನ್ನ ಸ್ವಕೀಯ ಜನರಿಗೆ ವಿಮೋಚನೆಯುಂಟಾಗುತ್ತದೆ ಎಂಬುದಕ್ಕೆ ಪವಿತ್ರಾತ್ಮನು ನಮ್ಮ ಬಾಧ್ಯತೆಗೆ ಸಂಚಕಾರವಾಗಿದ್ದಾನೆ. ಈ ಕಾರಣ ದೇವರಿಗೆ ಮಹಿಮೆಯನ್ನು ಸಲ್ಲಿಸೋಣ.


ಯೇಸುಕ್ರಿಸ್ತನು ನಮಗೋಸ್ಕರ ಸುರಿಸಿದ ರಕ್ತದ ಮೂಲಕ ನಮಗೆ ಆತನ ಕೃಪೆಯ ಐಶ್ವರ್ಯಕ್ಕನುಸಾರವಾಗಿ ಪಾಪ ಕ್ಷಮಾಪಣೆಯೆಂಬ ವಿಮೋಚನೆಯು ಉಂಟಾಯಿತು.


ದೇವರು ಈ ರೀತಿ ಮಾಡಿದ್ದರಿಂದಲೇ ಈಗ ನೀವು ಕ್ರಿಸ್ತ ಯೇಸುವಿನಲ್ಲಿದ್ದೀರಿ. ಕ್ರಿಸ್ತ ಯೇಸು ದೇವರ ಕಡೆಯಿಂದ ನಮಗೆ ಜ್ಞಾನವೂ, ನೀತಿಯೂ, ಶುದ್ಧಿಯೂ, ಮತ್ತು ವಿಮೋಚನೆಯು ಆಗಿದ್ದಾನೆ.


ಪ್ರಥಮ ಫಲವಾಗಿರುವ ಹಾಗೂ ಪವಿತ್ರಾತ್ಮವರವನ್ನು ಹೊಂದಿದ ನಾವೂ ಸಹ ದೇವರ ಮಕ್ಕಳ ಪದವಿಯನ್ನು ಅಂದರೆ ದೇಹಕ್ಕೆ ಬರಬೇಕಾದ ವಿಮೋಚನೆಯನ್ನು ಎದುರುನೋಡುತ್ತಾ ನಮ್ಮೊಳಗೆ ನರಳುತ್ತಿದ್ದೇ.


ಪೌಳಿಗೋಡೆಯಿಲ್ಲದ ಊರುಗಳಲ್ಲಿರುವ ಮನೆಗಳು ಬಯಲಿನ ಹೊಲಗಳಂತೆ ಎಣಿಸಲ್ಪಡಬೇಕು; ಅವುಗಳನ್ನು ಬಿಡಿಸುವ ಅಧಿಕಾರವಿದ್ದು, ಜೂಬಿಲಿ ಸಂವತ್ಸರದಲ್ಲಿ ಅವು ಬಿಡುಗಡೆಯಾಗುವವು.


ಆ ಭೂಮಿಯನ್ನು ಮಾರಿದಂದಿನಿಂದ ಕಳೆದ ವರ್ಷಗಳನ್ನು ಬಿಟ್ಟು ಉಳಿದ ಕ್ರಯವನ್ನು ಕೊಟ್ಟು ತನ್ನ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳಬಹುದು.


“‘ಭೂಮಿಯನ್ನು ಶಾಶ್ವತವಾಗಿ ಮಾರಬಾರದು. ಏಕೆಂದರೆ ಆ ಭೂಮಿ ನನ್ನದು; ನೀವಾದರೋ ಪರದೇಶದವರು ಹಾಗೂ ಪ್ರವಾಸಿಗಳಾಗಿ ನನ್ನ ಆಶ್ರಯದಲ್ಲಿ ಇಳಿದುಕೊಂಡವರು.


“‘ನಿಮ್ಮ ಸಹೋದರರಲ್ಲಿ ಒಬ್ಬನು ಬಡವನಾಗಿ ತನ್ನ ಭೂಮಿಯನ್ನು ಏನಾದರೂ ಮಾರಿಕೊಂಡರೆ ಅವನ ಸಮೀಪವಾದ ಬಂಧುವು ಅದನ್ನು ಬಿಡಿಸಿಕೊಳ್ಳಬೇಕು.


ಮಾರಿದವನು ಎಷ್ಟು ವರ್ಷ ಬದುಕಿದರೂ ಮಾರಿದ ಸೊತ್ತು ಅವನ ವಶಕ್ಕೆ ತಿರುಗಿಬಾರದು; ಉಂಟಾದ ದಿವ್ಯದರ್ಶನವು ಸಮೂಹದವರಿಗೆಲ್ಲಾ ಸಂಬಂಧಿಸಿದೆ, ಯಾರೂ ಹಿಂದಿರುಗುವುದಿಲ್ಲ. ಯಾರೂ ತಮ್ಮ ಅಧರ್ಮದಿಂದ ತಮ್ಮ ಜೀವವನ್ನು ಉಳಿಸಿಕೊಳ್ಳುವುದಿಲ್ಲ.


ಇಗೋ, ನಿನ್ನ ಚಿಕ್ಕಪ್ಪನಾದ ಶಲ್ಲೂಮನ ಮಗನಾಗಿರುವ ಹನಮೇಲನು ನಿನ್ನ ಬಳಿಗೆ ಬಂದು ‘ಅನಾತೋತಿನಲ್ಲಿರುವ ನನ್ನ ಹೊಲವನ್ನು ಕೊಂಡುಕೋ; ಪರಾಧೀನವಾಗದಂತೆ ಅದನ್ನು ಕೊಂಡುಕೊಳ್ಳುವ ಹಕ್ಕು ನಿನ್ನದೇ ಎಂದು ಹೇಳುವನು’” ಎಂದು ತಿಳಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು