Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 25:28 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ಅವನು ಆ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳಲಾರದೆ ಹೋದರೆ ಅದು ಜೂಬಿಲಿ ಸಂವತ್ಸರದ ತನಕ ಕೊಂಡುಕೊಂಡವನ ವಶದಲ್ಲೇ ಇರಬೇಕು. ಜೂಬಿಲಿ ವರ್ಷದಲ್ಲಿ ಅದು ಬಿಡುಗಡೆಯಾಗುವುದು; ಆಗ ಆ ಭೂಮಿ ಪುನಃ ಮಾರಿದವನ ವಶಕ್ಕೆ ಬರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

28 ಅವನು ಆ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳಲಾಗದೆ ಹೋದರೆ ಅದು ಜೂಬಿಲಿ ಸಂವತ್ಸರದ ತನಕ ಕೊಂಡುಕೊಂಡವನ ವಶದಲ್ಲೇ ಇರಬೇಕು. ಜೂಬಿಲಿ ವರ್ಷದಲ್ಲಿ ಅದು ಬಿಡುಗಡೆಯಾಗುವುದು. ಆಗ ಆ ಭೂಮಿ ಮರಳಿ ಅವನ ವಶಕ್ಕೆ ಬರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28 ಅವನು ಆ ಭೂವಿುಯನ್ನು ಸ್ವಾಧೀನಪಡಿಸಿಕೊಳ್ಳಲಾರದೆ ಹೋದರೆ ಅದು ಜೂಬಿಲಿ ಸಂವತ್ಸರದ ತನಕ ಕೊಂಡುಕೊಂಡವನ ವಶದಲ್ಲೇ ಇರಬೇಕು. ಜೂಬಿಲಿ ವರುಷದಲ್ಲಿ ಅದು ಬಿಡುಗಡೆಯಾಗುವದು; ಆಗ ಆ ಭೂವಿು ತಿರಿಗಿ ಅವನ ವಶಕ್ಕೆ ಬರುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

28 ಆದರೆ ಭೂಮಿಯನ್ನು ಮರಳಿ ಕೊಂಡುಕೊಳ್ಳಲು ಬೇಕಾದಷ್ಟು ಹಣ ಅವನಿಗೆ ದೊರಕದಿದ್ದರೆ, ಅವನು ಆ ಭೂಮಿಯನ್ನು ಯಾರಿಗೆ ಮಾರಿದ್ದಾನೋ ಅವನ ವಶದಲ್ಲಿ ಜ್ಯೂಬಿಲಿ ವರ್ಷದವರೆಗೆ ಇಡಬೇಕು. ಬಳಿಕ ಆ ವಿಶೇಷ ಬಿಡುಗಡೆಯ ಕಾಲದಲ್ಲಿ ಭೂಮಿಯು ಮೊದಲಿನ ಯಜಮಾನನ ಕುಟುಂಬಕ್ಕೆ ಮರಳಿ ಹೋಗುವುದು. ಹೀಗಾಗಿ ಆಸ್ತಿಯು ಮತ್ತೆ ಅದರ ಸರಿಯಾದ ಕುಟುಂಬಕ್ಕೆ ಸೇರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

28 ತಿರುಗಿ ಸಲ್ಲಿಸುವುದಕ್ಕೆ ಅವನಿಗೆ ಆಗದಿದ್ದರೆ, ಅವನು ಮಾರಿದ್ದು ಜೂಬಿಲಿಯ ವರ್ಷದವರೆಗೆ ಕೊಂಡುಕೊಂಡವನ ಕೈಯಲ್ಲಿ ಇರಬೇಕು ಮತ್ತು ಸಂಭ್ರಮದ ವರ್ಷದಲ್ಲಿ ಅದು ಬಿಡುಗಡೆಯಾಗಬೇಕು, ಅವನು ತನ್ನ ಸೊತ್ತನ್ನು ಪಡೆಯಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 25:28
11 ತಿಳಿವುಗಳ ಹೋಲಿಕೆ  

ಈ ದೇಶದಲ್ಲಿ ಜನರು ಮನೆ, ಹೊಲ ಮತ್ತು ದ್ರಾಕ್ಷಿತೋಟಗಳನ್ನು ಪುನಃ ಕೊಂಡುಕೊಳ್ಳುವರು, ಕೊಡುವರು. ಇದು ಇಸ್ರಾಯೇಲರ ದೇವರೂ ಸೇನಾಧೀಶ್ವರನೂ ಆದ ಯೆಹೋವನ ನುಡಿ’” ಎಂದು ಖಂಡಿತವಾಗಿ ಹೇಳಿದೆನು.


“‘ಜೂಬಿಲಿ ವರ್ಷದಲ್ಲಿ ನಿಮ್ಮ ನಿಮ್ಮ ಸ್ವಂತ ಭೂಮಿಗಳು ತಿರುಗಿ ನಿಮ್ಮ ವಶಕ್ಕೆ ಬರುವವು.


ನೀವು ಐವತ್ತನೆಯ ವರ್ಷವನ್ನು ದೇವರಿಗೆ ಮೀಸಲಾದ ವರ್ಷವೆಂದು ಭಾವಿಸಿ, ಅದರಲ್ಲಿ ದೇಶದ ನಿವಾಸಿಗಳೆಲ್ಲರಿಗೂ ಬಿಡುಗಡೆಯಾಯಿತು ಎಂಬುದಾಗಿ ಸಾರಬೇಕು. ಅದು ಜೂಬಿಲಿ ಸಂವತ್ಸರವಾದುದರಿಂದ ನೀವೆಲ್ಲರು ನಿಮ್ಮ ನಿಮ್ಮ ಸ್ವಂತ ಭೂಮಿಗಳಿಗೂ ಮತ್ತು ಸ್ವಜನರ ಬಳಿಗೂ ಹೋಗಿ ಇರಬಹುದು.


“‘ಯಾವನಾದರೂ ಪೌಳಿ ಗೋಡೆಯುಳ್ಳ ಪಟ್ಟಣದಲ್ಲಿರುವ ಮನೆಯನ್ನು ಮಾರಿದರೆ ಅದನ್ನು ಮಾರಿದ ದಿನ ಮೊದಲುಗೊಂಡು ಒಂದು ವರ್ಷ ಪೂರ್ತಿಯಾಗುವುದರೊಳಗೆ ಈಡುಕೊಟ್ಟು ಬಿಡಿಸಬಹುದು; ಪೂರಾ ಒಂದು ವರ್ಷದ ತನಕ ಅದನ್ನು ಬಿಡಿಸುವ ಅಧಿಕಾರವು ಅವನಿಗಿರುವುದು.


ಪೌಳಿಗೋಡೆಯುಳ್ಳ ಪಟ್ಟಣದಲ್ಲಿರುವ ಆ ಮನೆ ಒಂದು ವರ್ಷದೊಳಗಾಗಿ ಬಿಡಿಸಿಕೊಳ್ಳಲು ಸಾಧ್ಯವಾಗದೆ ಹೋದರೆ, ಅದು ಜೂಬಿಲಿ ಸಂವತ್ಸರದಲ್ಲಿ ಬಿಡುಗಡೆಯಾಗಿ ಮಾರಿದವನಿಗೆ ಮತ್ತು ಅವನ ಸಂತತಿಯವರಿಗೂ ಶಾಶ್ವತವಾಗಿ ನಿಲ್ಲುವುದು.


ಆಗ ಅವನನ್ನೂ ಮತ್ತು ಅವನ ಮಕ್ಕಳನ್ನೂ ಬಿಟ್ಟುಬಿಡಬೇಕು; ಅವನು ಸ್ವಜನರ ಬಳಿಗೂ ಪಿತ್ರಾರ್ಜಿತ ಸ್ವತ್ತಿಗೂ ಹೋಗಬಹುದು.


ಜೂಬಿಲಿ ಸಂವತ್ಸರದಲ್ಲಿ ಆ ಹೊಲವು ಮಾರಿದವನಿಗೆ ಅಂದರೆ ಯಾರ ಪಿತ್ರಾರ್ಜಿತ ಭೂಮಿಗೆ ಸೇರಿದೆಯೋ ಅವನಿಗೆ ಪುನಃ ಬರಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು