Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 25:35 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

35 “‘ನಿಮ್ಮಲ್ಲಿ ಒಬ್ಬ ಸಹೋದರನು ಬಡತನದಿಂದ ಗತಿಹೀನನಾದರೆ, ಅವನು ಬದುಕಿಕೊಳ್ಳುವಂತೆ ನೀವು ಅವನನ್ನು ನಿಮ್ಮ ನಡುವೆ ಇಳಿದುಕೊಂಡ ವಿದೇಶೀಯನೆಂದು ಅಥವಾ ಪ್ರವಾಸಿಯೆಂದು ಭಾವಿಸಿ ಸಹಾಯಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

35 “ನಿಮ್ಮಲ್ಲಿ ಒಬ್ಬ ಸಹೋದರನು ಬಡತನದಿಂದ ಗತಿಹೀನನಾದರೆ ನೀವು ಅವನನ್ನು ನಿಮ್ಮ ನಡುವೆ ತಂಗಿರುವ ಆಗಂತುಕನೆಂದು ಭಾವಿಸಿ ಸಹಾಯಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

35 ನಿಮ್ಮಲ್ಲಿ ಒಬ್ಬ ಸಹೋದರನು ಬಡತನದಿಂದ ಗತಿಹೀನನಾದರೆ ಅವನು ಬದುಕಿಕೊಳ್ಳುವಂತೆ ನೀವು ಅವನನ್ನು ನಿಮ್ಮ ನಡುವೆ ಇಳುಕೊಂಡ ಪರವಾಸಿಯೆಂದು ಉದ್ಧಾರಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

35 “ಒಂದುವೇಳೆ ನಿಮ್ಮ ಸ್ವದೇಶದ ವ್ಯಕ್ತಿಯೊಬ್ಬನು ಬಹಳ ಬಡವನಾಗಿ ಗತಿಹೀನನಾಗಬಹುದು. ಅವನು ನಿಮ್ಮ ಮಧ್ಯದಲ್ಲಿ ಪ್ರವಾಸಿಯಂತೆ ವಾಸಿಸಲು ನೀವು ಅವಕಾಶ ಕೊಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

35 “ ‘ನಿನ್ನ ಸಹೋದರನು ಬಡವನಾಗಿ ನಿನ್ನ ಬಳಿಯಲ್ಲಿ ಕ್ಷೀಣವಾಗಿ ಬಿದ್ದುಕೊಂಡರೆ, ಅವನು ಪರಕೀಯನಾಗಿದ್ದರೂ, ಪ್ರವಾಸಿಯಾಗಿದ್ದರೂ ಅವನು ನಿನ್ನ ಬಳಿಯಲ್ಲಿ ಬದುಕುವ ಹಾಗೆ ಅವನಿಗೆ ಸಹಾಯಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 25:35
36 ತಿಳಿವುಗಳ ಹೋಲಿಕೆ  

ನೀವಾದರೋ ನಿಮ್ಮ ವೈರಿಗಳನ್ನು ಪ್ರೀತಿಸಿ ಅವರಿಗೆ ಉಪಕಾರಮಾಡಿರಿ. ಏನನ್ನೂ ನಿರೀಕ್ಷಿಸದೆ ಸಾಲಕೊಡಿರಿ. ಹೀಗೇ ಮಾಡಿದರೆ, ನಿಮಗೆ ಬಹಳ ಫಲಸಿಕ್ಕುವುದು ಮತ್ತು ನೀವು ಪರಾತ್ಪರನಾದ ದೇವರ ಮಕ್ಕಳಾಗುವಿರಿ. ದೇವರು ಉಪಕಾರನೆನಸದವರಿಗೂ ಕೆಟ್ಟವರಿಗೂ ಉಪಕಾರಿಯಾಗಿದ್ದಾನೆ.


ಆದರೆ ಈ ಲೋಕದ ಸಂಪತ್ತುಳ್ಳ ಯಾರಾದರೂ ಕೊರತೆಯಲ್ಲಿರುವ ತನ್ನ ಸಹೋದರನನ್ನು ನೋಡಿ ಕನಿಕರಪಡದೆ ಬಿಟ್ಟರೆ ದೇವರ ಪ್ರೀತಿಯು ಅವನಲ್ಲಿ ನೆಲೆಗೊಂಡಿರಲು ಸಾಧ್ಯವೇ?


ಆಗ ಆ ಶಿಷ್ಯರಲ್ಲಿ ಪ್ರತಿಯೊಬ್ಬರೂ ಯೂದಾಯ ಸೀಮೆಯಲ್ಲಿ ವಾಸವಾಗಿದ್ದ ಸಹೋದರರಿಗೆ ತಮ್ಮತಮ್ಮ ಶಕ್ತ್ಯಾನುಸಾರ ಧನಸಹಾಯ ಮಾಡಬೇಕೆಂದು ತೀರ್ಮಾನಿಸಿಕೊಂಡರು.


ಬಡವರನ್ನು ಹಿಂಸಿಸುವವನು ಸೃಷ್ಟಿಕರ್ತನನ್ನು ಹೀನೈಸುವನು, ಗತಿಯಿಲ್ಲದವರನ್ನು ಕರುಣಿಸುವವನು ಆತನನ್ನು ಘನಪಡಿಸುವನು.


ಬಡವರಿಗೆ ಉದಾರವಾಗಿ ಕೊಡುತ್ತಾನೆ; ಅವನ ನೀತಿಯ ಫಲವು ಸದಾಕಾಲವೂ ಇರುವುದು. ಮಹಿಮೆಯೊಡನೆ ಅವನ ಕೊಂಬು ಎತ್ತಲ್ಪಡುವುದು.


ದಯಾಳುವಾಗಿ ಧನಸಹಾಯ ಮಾಡುವವನೂ, ತನ್ನ ಕಾರ್ಯಗಳನ್ನು ನೀತಿಯಿಂದ ನಡೆಸುವವನೂ ಭಾಗ್ಯವಂತನು.


ದಿಕ್ಕಿಲ್ಲದವನನ್ನು ಪರಾಂಬರಿಸುವವನು ಧನ್ಯನು; ಯೆಹೋವನು ಅವನನ್ನು ಆಪತ್ಕಾಲದಲ್ಲಿ ರಕ್ಷಿಸುವನು.


ಅವನು ಯಾವಾಗಲೂ ಧರ್ಮಿಷ್ಠನಾಗಿ ಹಣ ಸಹಾಯವನ್ನು ಮಾಡುತ್ತಾನೆ; ಅವನ ಸಂತತಿಯವರು ಆಶೀರ್ವಾದ ಹೊಂದುವರು.


ಅತಿಥಿ ಸತ್ಕಾರಮಾಡುವುದನ್ನು ಅಲಕ್ಷ್ಯಮಾಡಬೇಡಿರಿ. ಏಕೆಂದರೆ ಅದನ್ನು ಮಾಡುವುದರಲ್ಲಿ ಕೆಲವರು ತಿಳಿಯದೆ ದೇವದೂತರನ್ನೂ ಸತ್ಕರಿಸಿದ್ದಾರೆ.


ಆದರೆ ನೀವು ನಮ್ಮಲ್ಲಿರುವ ಬಡವರನ್ನು ಮರೆಯಬಾರದೆಂಬ ಒಂದೇ ಸಂಗತಿಯನ್ನು ಬೇಡಿಕೊಂಡರು, ಹಾಗೆ ಮಾಡುವುದರಲ್ಲಿ ನಾನೂ ಆಸಕ್ತನಾಗಿದ್ದೆನು.


ದೇವಜನರಿಗೋಸ್ಕರ ನೀವು ಸಂಗ್ರಹಿಸುತ್ತಿರುವ ಹಣದ ಕುರಿತು ನಾನು ನಿಮಗೆ ಬರೆಯುವ ಅವಶ್ಯಕತೆಯಿಲ್ಲ.


ನಮ್ಮ ಕರ್ತನಾದ ಯೇಸು ಕ್ರಿಸ್ತನ ಕೃಪೆಯು ನಿಮಗೆ ಗೊತ್ತಾಗಿದೆಯಲ್ಲಾ; ಆತನು ಐಶ್ವರ್ಯವಂತನಾಗಿದ್ದರೂ ತನ್ನ ಬಡತನದ ಮುಖಾಂತರ ನೀವು ಐಶ್ವರ್ಯವಂತರಾಗಬೇಕೆಂದು ನಿಮಗೋಸ್ಕರ ಆತನು ಬಡವನಾದನು.


ಹಾಗಾದರೆ “ನಿನ್ನ ವೈರಿ ಹಸಿದಿದ್ದರೆ ಅವನಿಗೆ ಊಟಕ್ಕೆ ಬಡಿಸು; ಬಾಯಾರಿದ್ದರೆ ಕುಡಿಯುವುದಕ್ಕೆ ಕೊಡು. ಹೀಗೆ ಮಾಡುವುದರಿಂದ ಅವನ ತಲೆಯ ಮೇಲೆ ಕೆಂಡಗಳನ್ನು ಕೂಡಿಸಿಟ್ಟಂತಾಗುವುದು”.


ಸಾಧ್ಯವಾದರೆ ನಿಮ್ಮಿಂದಾಗುವ ಮಟ್ಟಿಗೆ ಎಲ್ಲರ ಸಂಗಡ ಸಮಾಧಾನದಿಂದಿರಿ.


ದೇವಜನರಿಗೆ ಕೊರತೆ ಬಂದಾಗ ಸಹಾಯ ಮಾಡಿರಿ. ಅತಿಥಿಸತ್ಕಾರವನ್ನು ಆಚರಿಸಿರಿ.


ಬಡವರು ಯಾವಾಗಲೂ ನಿಮ್ಮ ಬಳಿಯಲ್ಲಿ ಇರುತ್ತಾರೆ. ಆದರೆ ನಾನು ಯಾವಾಗಲೂ ನಿಮ್ಮ ಬಳಿಯಲ್ಲಿ ಇರುವುದಿಲ್ಲವಲ್ಲಾ” ಎಂದನು.


ಬಡವರು ಯಾವಾಗಲೂ ನಿಮ್ಮ ಬಳಿಯಲ್ಲಿ ಇರುತ್ತಾರೆ. ನಿಮಗೆ ಮನಸ್ಸು ಬಂದಾಗ ನೀವು ಅವರಿಗೆ ಯಾವಾಗಲಾದರೂ ಉಪಕಾರ ಮಾಡಬಹುದು. ಆದರೆ ನಾನು ಯಾವಾಗಲೂ ನಿಮ್ಮ ಬಳಿಯಲ್ಲಿ ಇರುವುದಿಲ್ಲ.


ನಾನು ಹಸಿದಿದ್ದೆನು, ನನಗೆ ಊಟ ಕೊಟ್ಟಿರಿ; ನಾನು ಬಾಯಾರಿದ್ದೆನು, ನನಗೆ ಕುಡಿಯುವುದಕ್ಕೆ ಕೊಟ್ಟಿರಿ; ಪರದೇಶಿಯಾಗಿದ್ದೆನು, ನನಗೆ ಆಶ್ರಯ ಕೊಟ್ಟಿರಿ;


ಬಡವರಿಗೆ ದಯೆತೋರಿಸುವವನು ಯೆಹೋವನಿಗೆ ಸಾಲಕೊಡುವವನು, ಆ ಉಪಕಾರಕ್ಕೆ ಯೆಹೋವನೇ ಪ್ರತ್ಯುಪಕಾರ ಮಾಡುವನು.


ಬಡವರನ್ನು ಹಾಸ್ಯಮಾಡುವವನು ಸೃಷ್ಟಿಕರ್ತನನ್ನೇ ಹೀನೈಸುವನು, ಪರರ ವಿಪತ್ತಿಗೆ ಹಿಗ್ಗುವವನು ದಂಡನೆಯನ್ನು ಹೊಂದದಿರನು.


“‘ನಿಮ್ಮ ಸಹೋದರರಲ್ಲಿ ಒಬ್ಬನು ಬಡವನಾಗಿ ತನ್ನ ಭೂಮಿಯನ್ನು ಏನಾದರೂ ಮಾರಿಕೊಂಡರೆ ಅವನ ಸಮೀಪವಾದ ಬಂಧುವು ಅದನ್ನು ಬಿಡಿಸಿಕೊಳ್ಳಬೇಕು.


ಅವರು ನಿಮಗೆ ಸ್ವದೇಶದವರಂತೆಯೇ ಇರಬೇಕು; ಅವರನ್ನು ನಿಮ್ಮಂತೆಯೇ ಪ್ರೀತಿಸಬೇಕು. ಐಗುಪ್ತ ದೇಶದಲ್ಲಿದ್ದಾಗ ನೀವೂ ಅನ್ಯರಾಗಿದ್ದಿರಲ್ಲವೇ. ನಾನು ನಿಮ್ಮ ದೇವರಾದ ಯೆಹೋವನು.


ಪರದೇಶದವನಿಗೆ ಉಪದ್ರವವನ್ನು ಕೊಡಬಾರದು. ನೀವೂ ಐಗುಪ್ತದೇಶದಲ್ಲಿ ಪರದೇಶದವರಾಗಿದ್ದೀರಷ್ಟೇ. ಅಂಥವರ ಮನೋವ್ಯಥೆಯನ್ನು ತಿಳಿದವರಾಗಿದ್ದೀರಿ.


ಪರದೇಶದವನಿಗೆ ಅನ್ಯಾಯ ಮಾಡಬಾರದು ಉಪದ್ರವ ಕೊಡಬಾರದು ನೀವು ಐಗುಪ್ತ ದೇಶದಲ್ಲಿ ಪರದೇಶಿಗಳಾಗಿದ್ದೀರಲ್ಲವೇ?


ನನ್ನ ಜನರಲ್ಲಿ ಒಬ್ಬ ಬಡವನಿಗೆ ನೀನು ಹಣ ಕೊಟ್ಟರೆ ಅವನನ್ನು ಸಾಲಗಾರನಂತೆ ಕಾಣಬಾರದು. ಅವನಿಂದ ಬಡ್ಡಿಯನ್ನು ಕೇಳಬಾರದು.


ಹಣವನ್ನಾಗಲಿ, ಆಹಾರಪದಾರ್ಥಗಳನ್ನಾಗಲಿ ಬೇರೆ ಯಾವುದನ್ನಾಗಲಿ ಪರದೇಶದವನಿಗೆ ಬಡ್ಡಿಗೆ ಕೊಡಬಹುದೇ ಹೊರತು ಸ್ವದೇಶದವನಿಗೆ ಕೊಡಬಾರದು.


ತರುವಾಯ ಜನರೂ ಅವರ ಹೆಂಡತಿಯರೂ ತಮ್ಮ ಬಂಧುಗಳಾದ ಯೆಹೂದ್ಯರಿಗೆ ವಿರುದ್ಧವಾಗಿ ಬಹಳ ಗೋಳಾಡ ತೊಡಗಿದರು.


ನಾನು ಕೋಪಗೊಂಡು ನಿಮ್ಮ ಶತ್ರುಗಳನ್ನು ಕತ್ತಿಯಿಂದ ಸಂಹಾರಮಾಡಿಸುವೆನು. ನಿಮ್ಮ ಹೆಂಡತಿಯರು ವಿಧವೆಯರಾಗುವರು. ನಿಮ್ಮ ಮಕ್ಕಳು ದಿಕ್ಕಿಲ್ಲದವರಾಗುವರು.


ಇನ್ನು ಕೆಲವರು, “ಬರಗಾಲದಲ್ಲಿ ಧಾನ್ಯವನ್ನು ಸಂಪಾದಿಸಿಕೊಳ್ಳಲು ನಮ್ಮ ಹೊಲ, ದ್ರಾಕ್ಷಿತೋಟ, ಮನೆಗಳನ್ನು ಒತ್ತೆ ಇಟ್ಟಿದ್ದೇವೆ” ಎಂದು ಹೇಳಿದರು.


ನಾನು ಬಡವರ ಇಷ್ಟವನ್ನು ಭಂಗಪಡಿಸಿದೆನೋ? ಅಥವಾ ವಿಧವೆಯ ಕಣ್ಣುಗಳನ್ನು ಮಂಕಾಗಿಸಿದೆನೋ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು