Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 25:39 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

39 “‘ನಿಮ್ಮಲ್ಲಿ ಒಬ್ಬ ಸಹೋದರನು ಬಡವನಾಗಿ ತನ್ನನ್ನೇ ಮಾರಿಕೊಂಡರೆ ಅವನನ್ನು ಗುಲಾಮನಂತೆ ಕೆಲಸ ಮಾಡಿಸಿಕೊಳ್ಳಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

39 ನಿಮ್ಮಲ್ಲಿ ಒಬ್ಬ ಸಹೋದರನು ಬಡವನಾಗಿ ತನ್ನನ್ನೇ ಮಾರಿಕೊಂಡರೆ ಅವನನ್ನು ಗುಲಾಮನಂತೆ ನಡೆಸಿಕೊಳ್ಳಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

39 ನಿಮ್ಮಲ್ಲಿ ಒಬ್ಬ ಸಹೋದರನು ಬಡವನಾಗಿ ತನ್ನನ್ನೇ ಮಾರಿಕೊಂಡರೆ ಅವನನ್ನು ದಾಸನಂತೆ ನಡಿಸಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

39 “ಒಂದುವೇಳೆ ನಿಮ್ಮ ಸ್ವದೇಶಸ್ಥನು ಬಹಳ ಬಡವನಾಗಿ ತನ್ನನ್ನು ಗುಲಾಮನನ್ನಾಗಿ ನಿಮಗೆ ಮಾರಿಕೊಂಡರೆ ನೀವು ಅವನನ್ನು ಗುಲಾಮನನ್ನಾಗಿ ದುಡಿಸಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

39 “ ‘ನಿನ್ನೊಂದಿಗೆ ವಾಸಿಸುವ ನಿನ್ನ ಸಹೋದರನು ಬಡವನಾಗಿದ್ದು ತನ್ನನ್ನೇ ಮಾರಿಕೊಂಡಿದ್ದರೆ, ದಾಸನ ಹಾಗೆ ಸೇವೆಯನ್ನು ಮಾಡುವಂತೆ ಅವನನ್ನು ನೀನು ಬಲಾತ್ಕರಿಸಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 25:39
16 ತಿಳಿವುಗಳ ಹೋಲಿಕೆ  

“‘ನಿಮ್ಮಲ್ಲಿ ಯಾರಾದರೂ ಇಬ್ರಿಯನೊಬ್ಬನನ್ನು ದಾಸತ್ವಕ್ಕಾಗಿ ಕೊಂಡುಕೊಂಡರೆ, ಆ ಇಬ್ರಿಯನು ಆರು ವರ್ಷ ದಾಸನಾಗಿದ್ದು ಏಳನೆಯ ವರ್ಷದಲ್ಲಿ ಏನೂ ಕೊಡದೆ ಬಿಡುಗಡೆಯಾಗಿ ಹೋಗಬೇಕು.


ಆದರೆ ಅವನು ಇಸ್ರಾಯೇಲರನ್ನು ಬಿಟ್ಟೀಹಿಡಿಯಲಿಲ್ಲ. ಅವರನ್ನು ಸೈನಿಕರನ್ನಾಗಿಯೂ, ಪರಿವಾರದವರನ್ನಾಗಿಯೂ ಅಧಿಪತಿಗಳನ್ನಾಗಿಯೂ, ಸರದಾರರನ್ನಾಗಿಯೂ, ರಥಾಶ್ವಬಲಗಳ ನಾಯಕರನ್ನಾಗಿಯೂ ನೇಮಿಸಿಕೊಂಡನು.


ಆದರೂ ನಮ್ಮ ಸಹೋದರರ ಕುಲವೂ ನಮ್ಮ ಕುಲವೂ, ಅವರ ಮಕ್ಕಳೂ, ನಮ್ಮ ಮಕ್ಕಳೂ ಒಂದೇ ಆಗಿದ್ದೇವೆ. ಆದರೆ ನಾವು ನಮ್ಮ ಗಂಡು ಹೆಣ್ಣು ಮಕ್ಕಳನ್ನು ಪರರಿಗೆ ದಾಸರನ್ನಾಗಿ ಕೊಡಬೇಕಾಯಿತು. ನಮ್ಮ ಹೆಣ್ಣು ಮಕ್ಕಳಲ್ಲಿ ಕೆಲವರನ್ನು ಅಪಹರಿಸಿದ್ದಾರೆ. ನಮ್ಮ ಪ್ರಯತ್ನವೆಲ್ಲ ವ್ಯರ್ಥವಾಯಿತು. ನಮ್ಮ ಹೊಲ ದ್ರಾಕ್ಷಿತೋಟಗಳು ಪರರಿಗೆ ಅಧೀನವಾದವು ಎಂದು ಗೊಣಗಾಡಿದರು.


ಒಂದು ದಿನ ಪ್ರವಾದಿ ಮಂಡಳಿಯಲ್ಲಿನ ಒಬ್ಬನ ಹೆಂಡತಿಯು ಎಲೀಷನ ಹತ್ತಿರ ಬಂದು ಅವನಿಗೆ, “ನಿನ್ನ ಸೇವಕನಾದ ನನ್ನ ಗಂಡನು ಮರಣಹೊಂದಿದನು. ಅವನು ಯೆಹೋವನಲ್ಲಿ ಭಯಭಕ್ತಿಯುಳ್ಳವನಾಗಿದ್ದನು ಎಂಬುದು ನಿನಗೆ ಗೊತ್ತಿದೆಯಲ್ಲಾ. ಸಾಲಕೊಟ್ಟವನು, ನನ್ನ ಇಬ್ಬರು ಮಕ್ಕಳನ್ನು ದಾಸರನ್ನಾಗಿ ಕರೆದುಕೊಂಡು ಹೋಗುವುದಕ್ಕೆ ಬಂದಿದ್ದಾನೆ” ಎಂದು ಮೊರೆಯಿಟ್ಟಳು.


ನೀವು ಅಂಥವರನ್ನು ಸ್ವಾಧೀನಪಡಿಸಿಕೊಂಡು ನಿಮ್ಮ ತರುವಾಯ ನಿಮ್ಮ ಸಂತತಿಯವರಿಗೆ ಸ್ವತ್ತಾಗಿ ಕೊಟ್ಟು ಬಿಡಬಹುದು. ಅವರನ್ನು ಶಾಶ್ವತ ದಾಸರನ್ನಾಗಿ ಮಾಡಿಕೊಳ್ಳಬಹುದು. ಇಸ್ರಾಯೇಲರಾದ ನೀವಾದರೋ ಎಲ್ಲರೂ ಸಹೋದರರಾಗಿರುವುದರಿಂದ ಒಬ್ಬರಿಂದ ಒಬ್ಬರು ಕಠಿಣವಾಗಿ ಸೇವೆಮಾಡಿಸಿಕೊಳ್ಳಬಾರದು.


‘ನಿಮ್ಮಲ್ಲಿ ಪ್ರತಿಯೊಬ್ಬನು ನಿಮಗೆ ಆರು ವರ್ಷಗಳ ಕಾಲ ದಾಸನಾಗಿದ್ದು ನಿಮಗೆ ಸೇವೆ ಮಾಡಿದ ಇಬ್ರಿಯನಾದ ಪ್ರತಿಯೊಬ್ಬ ಸಹೋದರನನ್ನು ಏಳನೆಯ ವರ್ಷದಲ್ಲಿ ಸ್ವತಂತ್ರನನ್ನಾಗಿ ಬಿಟ್ಟುಬಿಡಬೇಕು’ ಎಂದು ವಿಧಿಸಿ, ಅವರೊಂದಿಗೆ ಒಡಂಬಡಿಕೆ ಮಾಡಿಕೊಂಡೆನಷ್ಟೆ. ಆದರೆ ನಿಮ್ಮ ಪೂರ್ವಿಕರು ನನ್ನ ಮಾತಿಗೆ ಕಿವಿಗೊಡಲಿಲ್ಲ, ಕೇಳಲಿಲ್ಲ.


ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, “ನಾನು ಆ ದಿನದಲ್ಲಿ ಅವರ ಮೇಲೆ ಹೇರಿದ ನೊಗವನ್ನು ಅವರ ಹೆಗಲಿನಿಂದ ಮುರಿದುಬಿಟ್ಟು, ಕಣ್ಣಿಗಳನ್ನು ಕಿತ್ತುಹಾಕುವೆನು; ಇನ್ನು ಅನ್ಯರು ಅವರನ್ನು ಅಡಿಯಾಳಾಗಿ ಮಾಡಿಕೊಳ್ಳರು.


ಅವನ ದೇಶಕ್ಕೆ ಕಾಲವು ಸಮೀಪಿಸುವ ತನಕ ಸಕಲ ಜನಾಂಗಗಳು ಅವನಿಗೂ, ಅವನ ಮಗನಿಗೂ ಮತ್ತು ಮೊಮ್ಮಗನಿಗೂ ಅಡಿಯಾಳಾಗಿ ಬಿದ್ದಿರುವವು; ಆ ಮೇಲೆ ಅನೇಕ ಜನಾಂಗಗಳೂ ಮಹಾರಾಜರೂ ಅವನನ್ನೇ ಅಡಿಯಾಳನ್ನಾಗಿ ಮಾಡಿಕೊಳ್ಳುವರು.


ಅನೇಕ ಜನಾಂಗಗಳೂ ಮತ್ತು ಮಹಾರಾಜರೂ ಅವರನ್ನೇ ಅಡಿಯಾಳಾಗಿ ಮಾಡಿಕೊಳ್ಳುವರು; ಅವರ ಕೃತ್ಯಗಳಿಗೂ ಮತ್ತು ಕೈಕೆಲಸಗಳಿಗೂ ತಕ್ಕಂತೆ ಅವರಿಗೆ ಮುಯ್ಯಿತೀರಿಸುವೆನು” ಎಂಬುದೇ.


ಸೂರ್ಯೋದಯವಾದ ನಂತರ ಒಬ್ಬನು ಕಳ್ಳತನಮಾಡಿ ಸಿಕ್ಕಿಬಿದ್ದಾಗ, ಅವನನ್ನು ಹೊಡೆದು ಕೊಂದರೆ ಅದನ್ನು ನರಹತ್ಯೆಯೆಂದು ಎಣಿಸಬೇಕು. ಅವನು ಕದ್ದದ್ದನ್ನೆಲ್ಲಾ ಪೂರ್ತಿಯಾಗಿ ಹಿಂತಿರುಗಿಸಬೇಕು. ಅವನಲ್ಲಿ ಕೊಡಲು ಏನೂ ಇಲ್ಲದ ಪಕ್ಷಕ್ಕೆ ಅವನು ಆ ಕಳ್ಳತನ ಮಾಡಿದ್ದರಿಂದ ಗುಲಾಮನಾಗಿ ಮಾರಲ್ಪಡಬೇಕು.


ಮಣ್ಣಿನ ಕೆಲಸದಲ್ಲಿಯೂ, ಇಟ್ಟಿಗೆಮಾಡುವ ಕೆಲಸದಲ್ಲಿಯೂ, ವ್ಯವಸಾಯದ ಎಲ್ಲಾ ವಿಧವಾದ ಕೆಲಸದಲ್ಲಿಯೂ ಕಠಿಣವಾಗಿ ದುಡಿಸಿಕೊಂಡು ಅವರ ಜೀವಿತವನ್ನೇ ಬೇಸರಪಡಿಸಿದರು. ಐಗುಪ್ತರು ಇಸ್ರಾಯೇಲರಿಂದ ಮಾಡಿಸಿದ ಎಲ್ಲಾ ಕೆಲಸಗಳು ಬಹಳ ಕಠಿಣವಾಗಿದ್ದವು.


ಆ ಸಾಲ ತೀರಿಸುವುದಕ್ಕೆ ಅವನಲ್ಲಿ ಏನೂ ಇಲ್ಲದುದರಿಂದ ಅವನ ಒಡೆಯನು ಅವನನ್ನೂ, ಅವನ ಹೆಂಡತಿ, ಮಕ್ಕಳನ್ನೂ ಅವನಿಗಿದ್ದದ್ದೆಲ್ಲವನ್ನೂ ಮಾರಿ ಅದನ್ನು ತೀರಿಸಬೇಕೆಂದು ಅಪ್ಪಣೆ ಮಾಡಿದನು.


ಇದು ಸಾಲದೆಂದು ನೀವು ಯೆಹೂದ್ಯರನ್ನು, ಯೆರೂಸಲೇಮಿನವರನ್ನೂ ಬಲಾತ್ಕರಿಸಿ ದಾಸರನ್ನಾಗಿಯೂ, ದಾಸಿಯರನ್ನಾಗಿಯೂ ಮಾಡಿಕೊಳ್ಳಬೇಕೆಂದಿದ್ದೀರಿ. ದೇವರಾದ ಯೆಹೋವನಿಗೆ ವಿರುದ್ಧವಾದ ಅಪರಾಧಗಳು ನಿಮ್ಮಲ್ಲಿಯೂ ಇಲ್ಲವೇ?


ಆ ಮೇಲೆ ಯೆಹೋವನು ಯೆರೆಮೀಯನಿಗೆ ಒಂದು ಮಾತನ್ನು ದಯಪಾಲಿಸಿದನು. ಇಷ್ಟರೊಳಗೆ ಅರಸನಾದ ಚಿದ್ಕೀಯನು ಯೆರೂಸಲೇಮಿನವರೆಲ್ಲರೊಂದಿಗೆ ಸೇರಿ,


“ನಮ್ಮಲ್ಲಿ ಪ್ರತಿಯೊಬ್ಬನು ತನ್ನ ದಾಸ ದಾಸಿಯರೊಳಗೆ ಇಬ್ರಿಯರನ್ನು ಬಿಡುಗಡೆಮಾಡುವನು; ಯಾರೂ ತನ್ನ ಸಹೋದರನಾದ ಯೆಹೂದ್ಯನಿಂದ ಇನ್ನು ಗುಲಾಮತನ ಮಾಡಿಸಿಕೊಳ್ಳುವುದಿಲ್ಲ” ಎಂದು ಅವರಿಗೆ ವಿಮೋಚನೆಯನ್ನು ಪ್ರಕಟಿಸುವ ಒಡಂಬಡಿಕೆಯನ್ನು ಮಾಡಿಕೊಂಡಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು