Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 25:55 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

55 ಏಕೆಂದರೆ ಇಸ್ರಾಯೇಲರು ನನ್ನ ದಾಸರೇ; ನಾನು ಅವರನ್ನು ಐಗುಪ್ತದೇಶದೊಳಗಿಂದ ಬರಮಾಡಿದೆನಲ್ಲವೇ. ನಾನು ನಿಮ್ಮ ದೇವರಾದ ಯೆಹೋವನು’” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

55 ಏಕೆಂದರೆ ಇಸ್ರಯೇಲರು ನನ್ನ ದಾಸರೇ; ನಾನು ಅವರನ್ನು ಈಜಿಪ್ಟಿನಿಂದ ಬರಮಾಡಿದೆನಲ್ಲವೇ? ನಾನು ನಿಮ್ಮ ದೇವರಾದ ಸರ್ವೇಶ್ವರ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

55 ಯಾಕಂದರೆ ಇಸ್ರಾಯೇಲ್ಯರು ನನ್ನ ದಾಸರೇ; ನಾನು ಅವರನ್ನು ಐಗುಪ್ತದೇಶದೊಳಗಿಂದ ಬರಮಾಡಿದೆನಲ್ಲವೇ. ನಾನು ನಿಮ್ಮ ದೇವರಾದ ಯೆಹೋವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

55 ಯಾಕೆಂದರೆ, ಇಸ್ರೇಲರು ನನ್ನ ಸೇವಕರಾಗಿದ್ದಾರೆ. ನಾನು ಅವರನ್ನು ಈಜಿಪ್ಟಿನಲ್ಲಿ ದಾಸತ್ವದಿಂದ ಬಿಡಿಸಿದ್ದರಿಂದ ಅವರು ನನ್ನ ದಾಸರಾಗಿದ್ದಾರೆ. ನಾನೇ ನಿಮ್ಮ ದೇವರಾದ ಯೆಹೋವನು!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

55 ಏಕೆಂದರೆ ಇಸ್ರಾಯೇಲರು ನನ್ನ ದಾಸರು ಈಜಿಪ್ಟ್ ದೇಶದೊಳಗಿಂದ ನಾನು ಹೊರಗೆ ಬರಮಾಡಿದ ಇವರು ನನ್ನ ದಾಸರೇ. ನಿನ್ನ ದೇವರಾದ ಯೆಹೋವ ದೇವರು ನಾನೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 25:55
15 ತಿಳಿವುಗಳ ಹೋಲಿಕೆ  

ಅವರು ನನಗೆ ಗುಲಾಮರಾಗಿದ್ದಾರೆ; ನಾನು ಅವರನ್ನು ಐಗುಪ್ತದೇಶದೊಳಗಿಂದ ಬರಮಾಡಿದೆನು; ದಾಸರನ್ನು ಮಾರುವಂತೆ ಅವರನ್ನು ಮಾರಬಾರದು.


ಸಹೋದರರೇ, ನೀವು ಸ್ವತಂತ್ರರಾಗಿರಬೇಕೆಂದು ದೇವರು ನಿಮ್ಮನ್ನು ಕರೆದನು. ಆದರೆ ನಿಮಗಿರುವ ಸ್ವಾತಂತ್ರ್ಯವನ್ನು ಶರೀರಾಧೀನ ಸ್ವಭಾವಕ್ಕೆ ಆಸ್ಪದವಾಗಿ ಬಳಸದೆ, ಪ್ರೀತಿಯಿಂದ ಒಬ್ಬರಿಗೊಬ್ಬರು ಸೇವೆ ಮಾಡಿರಿ.


ನಾನು ದೇವರ ಧರ್ಮಶಾಸ್ತ್ರ ಇಲ್ಲದವನಲ್ಲ, ಕ್ರಿಸ್ತನ ನಿಯಮಕ್ಕೊಳಗಾದವನೇ; ಆದರೂ ಧರ್ಮಶಾಸ್ತ್ರಕ್ಕೆ ಹೊರತಾದವರನ್ನು ಸಂಪಾದಿಸಿಕೊಳ್ಳುವುದಕ್ಕಾಗಿ ಧರ್ಮಶಾಸ್ತ್ರ ಬಾಹಿರನಂತಾದೆನು.


ನಾನು ಎಲ್ಲಾ ವಿಷಯಗಳಲ್ಲಿ ಸ್ವತಂತ್ರನಾಗಿದ್ದರೂ ಹೆಚ್ಚು ಜನರನ್ನು ಸಂಪಾದಿಸಿಕೊಳ್ಳಬೇಕೆಂದು ನಾನು ಎಲ್ಲರಿಗೂ ದಾಸನಾದೆನು.


ಈಗಲಾದರೋ ನೀವು ಪಾಪದಿಂದ ಬಿಡುಗಡೆಯನ್ನು ಹೊಂದಿ ದೇವರಿಗೆ ದಾಸರಾದ್ದರಿಂದ ನಿಮಗೆ ಶುದ್ಧೀಕರಣವೆಂಬ ಫಲವು ದೊರಕಿರುವುದಲ್ಲದೆ ಅಂತ್ಯದಲ್ಲಿ ನಿತ್ಯ ಜೀವವನ್ನು ಹೊಂದುವಿರಿ.


ಯಾಕೆಂದರೆ ಪಾಪವು ನಿಮ್ಮ ಮೇಲೆ ಅಧಿಕಾರ ನಡೆಸದು; ನೀವು ಧರ್ಮಶಾಸ್ತ್ರಕ್ಕೆ ಅಧೀನರಲ್ಲ, ಕೃಪೆಗೆ ಅಧೀನರಾಗಿದ್ದೀರಿ.


ಏಕೆಂದರೆ ಯೆಹೋವನೆಂಬ ನಾನು ನಿನ್ನ ದೇವರು, ಇಸ್ರಾಯೇಲರ ಸದಮಲಸ್ವಾಮಿಯಾದ ನಾನು ನಿನ್ನ ರಕ್ಷಕನು. ಐಗುಪ್ತವನ್ನು ನಿನ್ನ ವಿಮೋಚನೆಗೆ ಈಡುಮಾಡಿದ್ದೇನೆ. ನಿನ್ನ ಬದಲಾಗಿ ಕೂಷ್ ಮತ್ತು ಸೆಬಾ ಸೀಮೆಗಳನ್ನು ಕೊಟ್ಟಿದ್ದೇನೆ.


ಯೆಹೋವನೇ, ಕರುಣಿಸು, ನಾನು ನಿನ್ನ ಸೇವಕನು; ನಿನ್ನ ದಾಸಿಯ ಮಗನೂ, ನಿನ್ನ ದಾಸನೂ ಆಗಿದ್ದೇನೆ. ನನ್ನ ಬಂಧನಗಳನ್ನು ಬಿಚ್ಚಿಬಿಟ್ಟಿದ್ದಿ.


“ನೀನು ಗುಲಾಮತನದಲ್ಲಿದ್ದ ಐಗುಪ್ತ ದೇಶದೊಳಗಿಂದ ನಿನ್ನನ್ನು ಬಿಡುಗಡೆಮಾಡಿದ ಯೆಹೋವನು ಎಂಬ ‘ನಾನೇ ನಿನ್ನ ದೇವರು’


ಮೋಶೆಯು ಇಸ್ರಾಯೇಲರಿಗೆ, “ನೀವು ದಾಸತ್ವದಲ್ಲಿದ್ದ ಐಗುಪ್ತ ದೇಶದೊಳಗಿಂದ ಬಿಡುಗಡೆಯಾದ ಈ ದಿನವನ್ನು ನೆನಪಿನಲ್ಲಿಟ್ಟುಕೊಳ್ಳಿರಿ. ಯೆಹೋವನು ತನ್ನ ಭುಜಬಲದಿಂದ ನಿಮ್ಮನ್ನು ಆ ಸ್ಥಳದಿಂದ ಬಿಡಿಸಿದ್ದಾನೆ. ಈ ದಿನದಲ್ಲಿ ನೀವು ಹುಳಿಬೆರೆಸಿದ್ದನ್ನು ತಿನ್ನಬಾರದು.


ಮೇಲೆ ಹೇಳಿದ ರೀತಿಯಲ್ಲಿ ಅವನು ಬಿಡಿಸಿಕೊಳ್ಳದೆ ಹೋದರೆ ಜೂಬಿಲಿ ಸಂವತ್ಸರದಲ್ಲಿ ಅವನೂ ಮತ್ತು ಅವನ ಮಕ್ಕಳೂ ಬಿಡುಗಡೆಯಾಗಬೇಕು.


“ನೀವು ವಿಗ್ರಹಗಳನ್ನು ಮಾಡಿಸಿಕೊಳ್ಳಬಾರದು; ಕೆತ್ತಿದ ಪ್ರತಿಮೆಯನ್ನಾಗಲಿ ಅಥವಾ ಕಲ್ಲು ಕಂಬವನ್ನಾಗಲಿ ನಿಲ್ಲಿಸಿಕೊಳ್ಳಬಾರದು; ಅಡ್ಡಬೀಳುವುದಕ್ಕಾಗಿ ವಿಚಿತ್ರವಾಗಿ ಕೆತ್ತಿದ ಕಲ್ಲುಗಳನ್ನು ನಿಮ್ಮ ದೇಶದಲ್ಲಿ ಇಡಬಾರದು; ನಾನೇ ಯೆಹೋವನೆಂಬ ನಿಮ್ಮ ದೇವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು