Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 26:12 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ನಿಮ್ಮ ನಡುವೆ ತಿರುಗಾಡುತ್ತಾ ನಿಮಗೆ ದೇವರಾಗಿರುವೆನು, ನೀವು ನನಗೆ ಪ್ರಜೆಯಾಗಿರುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ನಿಮ್ಮ ನಡುವೆ ಸಂಚರಿಸುತ್ತಾ ನಿಮಗೆ ದೇವರಾಗಿರುವೆನು. ನೀವು ನನಗೆ ಪ್ರಜೆಗಳಾಗಿರುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ನಿಮ್ಮ ನಡುವೆ ತಿರುಗಾಡುತ್ತಾ ನಿಮಗೆ ದೇವರಾಗಿರುವೆನು; ನೀವು ನನಗೆ ಪ್ರಜೆಯಾಗಿರುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ನಾನು ನಿಮ್ಮೊಂದಿಗೆ ನಡೆಯುತ್ತಾ ನಿಮ್ಮ ದೇವರಾಗಿರುವೆನು ಮತ್ತು ನೀವು ನನ್ನ ಜನರಾಗಿರುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ನಾನು ನಿಮ್ಮ ಮಧ್ಯದಲ್ಲಿ ನಡೆದು ನಿಮ್ಮ ದೇವರಾಗಿರುವೆನು. ನೀವು ನನ್ನ ಜನರಾಗಿರುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 26:12
33 ತಿಳಿವುಗಳ ಹೋಲಿಕೆ  

ದೇವ ಮಂದಿರಕ್ಕೂ, ವಿಗ್ರಹಗಳಿಗೂ ಒಪ್ಪಿಗೆಯೇನು? ನಾವು ದೇವರೇ ಹೇಳಿರುವಂತೆ ಜೀವಸ್ವರೂಪನಾದ ದೇವರ ಮಂದಿರವಾಗಿದ್ದೇವಲ್ಲಾ, “ನಾನು ಅವರಲ್ಲಿ ವಾಸಮಾಡುವೆನು, ಅವರ ನಡುವೆಯೇ ನಾ ತಿರುಗಾಡುವೆನು ಅವರಿಗೆ ನಾನೇ ದೇವರಾಗಿರುವೆನು, ಅವರು ನನಗೆ ಪ್ರಜೆಯಾಗಿರುವರು” ಎಂದು ಹೇಳಿದ್ದಾನೆ.


ನೀವು ನನ್ನ ಜನರಾಗಿರುವಿರಿ, ನಾನು ನಿಮಗೆ ದೇವರಾಗಿರುವೆನು.


ಆದರೆ, ‘ನನ್ನ ಧ್ವನಿಗೆ ಕಿವಿಗೊಡಿರಿ, ನಾನು ನಿಮ್ಮ ದೇವರಾಗಿರುವೆನು, ನೀವು ನನ್ನ ಪ್ರಜೆಯಾಗಿರುವಿರಿ; ನಿಮಗೆ ಹಿತವಾಗುವಂತೆ ನಾನು ವಿಧಿಸುವ ಮಾರ್ಗದಲ್ಲೇ ನಡೆಯಿರಿ’ ಎಂಬ ಈ ಒಂದು ಅಪ್ಪಣೆಯನ್ನು ಮಾತ್ರ ಕೊಟ್ಟೆನು.


ನಾನು ನಿಮ್ಮನ್ನು ನನ್ನ ಪ್ರಜೆಗಳನ್ನಾಗಿ ಆರಿಸಿಕೊಂಡು ನಿಮಗೆ ದೇವರಾಗಿರುವೆನು. ಐಗುಪ್ತ್ಯರು ಮಾಡಿಸುವ ಬಿಟ್ಟೀ ಸೇವೆಯನ್ನು ನಾನು ನಿಮಗೆ ತಪ್ಪಿಸಿದಾಗ ಯೆಹೋವನೆಂಬ ನಾನೇ ನಿಮ್ಮ ದೇವರಾಗಿದ್ದೇನೆ ಎಂಬುದು ನಿಮಗೆ ತಿಳಿಯುವುದು.


ಆದರೆ ಅವರು ಪರಲೋಕವೆಂಬ ಉತ್ತಮ ದೇಶವನ್ನು ಹಾರೈಸುವವರು. ಆದ್ದರಿಂದ ದೇವರು ಅವರ ದೇವರೇ ಎನ್ನಿಸಿಕೊಳ್ಳುವುದಕ್ಕೆ ನಾಚಿಕೆಗೊಳ್ಳದೇ, ಅವರಿಗೋಸ್ಕರ ಪಟ್ಟಣವನ್ನು ಸಿದ್ಧಮಾಡಿದ್ದಾನೆ.


ನಾನು ಇಸ್ರಾಯೇಲಿನ ಮಧ್ಯದಲ್ಲಿ ನೆಲೆಯಾಗಿ ಇರುವವನು, ನಾನೇ ನಿಮ್ಮ ದೇವರಾದ ಯೆಹೋವನು, ನಾನಲ್ಲದೆ ಬೇರೆ ದೇವರು ನಿಮಗಿಲ್ಲ. ನನ್ನ ಜನರಿಗೆ ಎಂದಿಗೂ ಆಶಾಭಂಗವಾಗದು.


ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಕಾಪಾಡುವುದಕ್ಕೂ, ಶತ್ರುಗಳನ್ನು ನಿಮ್ಮ ಕೈವಶಮಾಡುವುದಕ್ಕೂ ನಿಮ್ಮ ಪಾಳೆಯದೊಳಗೆ ಸಂಚಾರಮಾಡುತ್ತಾನಲ್ಲಾ; ಆದುದರಿಂದ ಪಾಳೆಯವು ನಿಮರ್ಲವಾಗಿರಬೇಕು; ನಿಮ್ಮಲ್ಲಿ ಅಶುದ್ಧವೇನಾದರೂ ಕಂಡುಬಂದರೆ ಆತನು ನಿಮ್ಮನ್ನು ಬಿಟ್ಟುಹೋದಾನು.


“ಆ ಮೂರನೆಯ ಭಾಗದವರನ್ನು ನಾನು ಬೆಂಕಿಗೆ ಹಾಕಿ ಬೆಳ್ಳಿಯಂತೆ ಶೋಧಿಸುವೆನು, ಬಂಗಾರದ ಹಾಗೆ ಶುದ್ಧಿ ಮಾಡುವೆನು; ಅವರು ನನ್ನ ಹೆಸರೆತ್ತಿ ಪ್ರಾರ್ಥಿಸುವರು, ನಾನು ಆಲಿಸುವೆನು; ನಾನು, ‘ಇವರು ನನ್ನ ಜನರು’ ಅಂದುಕೊಳ್ಳುವೆನು. ಅವರು, ‘ನಮ್ಮ ದೇವರಾದ ಯೆಹೋವನೇ’ ಅನ್ನುವರು.”


ಜಯ ಹೊಂದುವವನು ಇವುಗಳಿಗೆ ಬಾಧ್ಯನಾಗುವನು. ನಾನು ಅವನಿಗೆ ದೇವರಾಗಿರುವೆನು. ಅವನು ನನಗೆ ಮಗನಾಗಿರುವನು.


ಕಲ್ಲಾದ ಹೃದಯವನ್ನು ಅವರೊಳಗಿಂದ ತೆಗೆದು ಮೃದುವಾದ ಹೃದಯವನ್ನು ಅವರಿಗೆ ಅನುಗ್ರಹಿಸುವೆನು; ಅವರು ನನಗೆ ಪ್ರಜೆಯಾಗಿರುವರು, ನಾನು ಅವರಿಗೆ ದೇವರಾಗಿರುವೆನು.


ಕಬ್ಬಿಣ ಕರಗಿಸುವ ಕುಲುಮೆಯೋಪಾದಿಯಲ್ಲಿದ್ದ ಐಗುಪ್ತ ದೇಶದಿಂದ ನಿಮ್ಮ ಪೂರ್ವಿಕರನ್ನು ಬರಮಾಡಿದಾಗ ನೀವು ನನ್ನ ಮಾತನ್ನು ಕೇಳಿ, ನಾನು ನಿಮಗೆ ಆಜ್ಞಾಪಿಸಿರುವ ಈ ವಿಧಿಗಳನ್ನೆಲ್ಲಾ ಕೈಕೊಂಡರೆ ನೀವು ನನ್ನ ಪ್ರಜೆಯಾಗಿರುವಿರಿ, ನಾನು ನಿಮ್ಮ ದೇವರಾಗಿರುವೆನು.


ನೀನಂತು ಹೆದರಬೇಡ, ನಾನೇ ನಿನ್ನೊಂದಿಗಿದ್ದೇನೆ, ದಿಗ್ಭ್ರಮೆಗೊಳ್ಳದಿರು, ನಾನೇ ನಿನ್ನ ದೇವರು. ನಾನು ನಿನ್ನನ್ನು ಬಲಪಡಿಸುತ್ತೇನೆ. ಹೌದು, ನಿನಗೆ ಸಹಾಯಮಾಡುತ್ತೇನೆ. ನನ್ನ ಧರ್ಮದ ಬಲಗೈಯನ್ನು ನಿನಗೆ ಆಧಾರಮಾಡುತ್ತೇನೆ.


ನಾನು ನಿನಗೂ ನಿನ್ನ ಸಂತತಿಗೂ ದೇವರಾಗಿರುವೆನೆಂದೂ ನಿನಗೋಸ್ಕರವೂ ನಿನ್ನ ಸಂತತಿಯ ಎಲ್ಲಾ ತಲತಲಾಂತರಗಳಿಗೋಸ್ಕರವೂ ಮಾಡಿಕೊಂಡ ನನ್ನ ಒಡಂಬಡಿಕೆಯನ್ನು ಸ್ಥಿರಪಡಿಸುವೆನು.


ಅವರು ನನಗೆ ಜನರಾಗಿರುವರು, ನಾನು ಅವರಿಗೆ ದೇವರಾಗಿರುವೆನು.


ಆ ದಿನಗಳು ಬಂದಮೇಲೆ ನಾನು ಇಸ್ರಾಯೇಲ್ ವಂಶದವರೊಂದಿಗೆ ಮಾಡಿಕೊಳ್ಳುವ ಒಡಂಬಡಿಕೆಯು ಹೀಗಿರುವುದು. ನನ್ನ ಧರ್ಮೋಪದೇಶವನ್ನು ಅವರ ಅಂತರಂಗದಲ್ಲಿ ಇಡುವೆನು, ಅವರ ಹೃದಯದೊಳಗೆ ಅದನ್ನು ಬರೆಯುವೆನು, ನಾನು ಅವರಿಗೆ ದೇವರಾಗಿರುವೆನು, ಅವರು ನನಗೆ ಪ್ರಜೆಯಾಗಿರುವರು ಎಂದು ಯೆಹೋವನು ಹೇಳುತ್ತಾನೆ.


ಆತನು ಆಜ್ಞಾಪಿಸುವುದು ಏನೆಂದರೆ, “ಪ್ರಜೆಗಳಿರಾ, ಇಸ್ರಾಯೇಲ್ಯರೇ, ದೇವರಾದ ನಾನೇ ನಿಮ್ಮ ದೇವರು; ನಿಮಗೆ ಖಂಡಿತವಾಗಿ ಹೇಳುತ್ತೇನೆ” ಕೇಳಿರಿ.


ಮೀಸಲಾದ ಮಂದೆಯಂತೆ, ಹಬ್ಬಗಳಲ್ಲಿ ಯೆರೂಸಲೇಮಿಗೆ ಬಂದು ಸೇರುವ ಹಿಂಡಿನ ಹಾಗೆಯೂ ಇರುವರು. ಆದಕಾರಣ ಮನುಷ್ಯರು ಹಾಳು ಪಟ್ಟಣಗಳಲ್ಲಿ ಹಿಂಡುಹಿಂಡಾಗಿ ತುಂಬಿಕೊಳ್ಳುವರು. ಆಗ ನಾನೇ ಯೆಹೋವನು ಎಂದು ಅವರಿಗೆ ತಿಳಿಯುವುದು.”


ಇಗೋ, ದೇವರೇ ನನಗೆ ರಕ್ಷಣೆ, ನಾನು ಹೆದರದೆ ಭರವಸವಿಡುವೆನು; ಯೆಹೋವನೇ ನನ್ನ ಬಲವೂ, ಕೀರ್ತನೆಯೂ ಆತನೇ, ನನಗೆ ರಕ್ಷಣೆಯೂ ಆಗಿದ್ದಾನೆ.”


ಇದಲ್ಲದೆ ಆತನು ಅವನಿಗೆ, “ನಾನು ನಿನ್ನ ತಂದೆಯಾದ, ಅಬ್ರಹಾಮನ ದೇವರು, ಇಸಾಕನ ದೇವರು, ಯಾಕೋಬನ ದೇವರೂ ಆಗಿದ್ದೇನೆ” ಎಂದು ಹೇಳಿದನು. ಮೋಶೆಯು ದೇವರನ್ನು ನೋಡುವುದಕ್ಕೆ ಭಯಪಟ್ಟು ಮುಖವನ್ನು ಮುಚ್ಚಿಕೊಂಡನು.


ತರುವಾಯ ಯೆಹೋವನಾದ ದೇವರು ಸಂಜೆಯ ತಂಗಾಳಿಯಲ್ಲಿ ತೋಟದೊಳಗೆ ಸಂಚರಿಸುತ್ತಿರುವಾಗ ಆ ಮನುಷ್ಯನು ಮತ್ತು ಸ್ತ್ರೀಯು ಆತನ ಸಪ್ಪಳವನ್ನು ಕೇಳಿ ಆತನಿಗೆ ಕಾಣಿಸಬಾರದೆಂದು ತೋಟದ ಮರಗಳ ಹಿಂದೆ ಅಡಗಿಕೊಂಡರು.


‘ನಾನು ಅಬ್ರಹಾಮನ ದೇವರು, ಇಸಾಕನ ದೇವರು, ಯಾಕೋಬನ ದೇವರು’ ಎಂದು ದೇವರು ನಿಮಗೆ ನುಡಿದಿದ್ದನ್ನು ನೀವು ಓದಲಿಲ್ಲವೇ. ಆತನು ಸತ್ತವರಿಗೆ ದೇವರಲ್ಲ, ಆದರೆ ಜೀವಿಸುವವರಿಗೆ ದೇವರಾಗಿದ್ದಾನೆ” ಎಂದು ಹೇಳಿದನು.


“ಎಫೆಸದಲ್ಲಿರುವ ಸಭೆಯ ದೂತನಿಗೆ ಬರೆ, ಏಳು ನಕ್ಷತ್ರಗಳನ್ನು ತನ್ನ ಬಲಗೈಯಲ್ಲಿ ಹಿಡಿದುಕೊಂಡು ಏಳು ಚಿನ್ನದ ದೀಪಸ್ತಂಭಗಳ ಮಧ್ಯದಲ್ಲಿ ಸಂಚರಿಸುವಾತನು ಹೇಳುವುದೇನಂದರೆ,


ನೋಹನ ಚರಿತ್ರೆ: ನೋಹನು ಸತ್ಯವಂತನೂ ಎಲ್ಲಾ ಜನರಲ್ಲಿ ನೀತಿವಂತನು ಆಗಿದ್ದನು; ಅವನು ದೇವರೊಂದಿಗೆ ಅನ್ಯೋನ್ಯವಾಗಿ ನಡೆದುಕೊಂಡನು.


ಹನೋಕನು ದೇವರೊಂದಿಗೆ ಅನ್ಯೋನ್ಯವಾಗಿ ನಡೆದುಕೊಳ್ಳುತ್ತಾ ಇರುವಾಗ ದೇವರು ಅವನನ್ನು ಕರೆದುಕೊಂಡ ಕಾರಣ ಕಣ್ಮರೆಯಾಗಿ ಕಾಣದೆ ಹೋದನು.


ಮೆತೂಷೆಲಹನು ಹುಟ್ಟಿದ ಮೇಲೆ ಹನೋಕನು ಗಂಡು ಮತ್ತು ಹೆಣ್ಣು ಮಕ್ಕಳನ್ನು ಪಡೆದು ದೇವರ ಅನ್ಯೋನ್ಯತೆಯಲ್ಲಿ ಮುನ್ನೂರು ವರ್ಷ ಬದುಕಿದನು.


ನೀನು ಪ್ರವಾಸಿಯಾಗಿರುವ ಕಾನಾನ್ ದೇಶವನ್ನೆಲ್ಲಾ ನಿನಗೂ ನಿನ್ನ ಸಂತತಿಗೂ ಶಾಶ್ವತ ಸ್ವತ್ತಾಗಿ ಕೊಟ್ಟು ಎಂದೆಂದಿಗೂ ಅವರಿಗೆ ದೇವರಾಗಿರುವೆನು” ಎಂದನು.


ನಾನು ಇಸ್ರಾಯೇಲರ ಮಧ್ಯದಲ್ಲಿ ವಾಸವಾಗಿದ್ದು ಅವರಿಗೆ ದೇವರಾಗಿರುವೆನು.


ಅಂಥವರು ಗಂಡಸರೇ ಆಗಲಿ ಅಥವಾ ಹೆಂಗಸರೇ ಆಗಲಿ, ಅವರೆಲ್ಲರನ್ನೂ ಪಾಳೆಯದಿಂದ ಹೊರಗೆಹಾಕಬೇಕು. ನಾನೇ ಅವರ ಪಾಳೆಯದಲ್ಲಿ ವಾಸವಾಗಿರುವುದರಿಂದ ಅವರು ಅದನ್ನು ಅಪವಿತ್ರ ಮಾಡಬಾರದು.”


ನಾನು ಇಸ್ರಾಯೇಲರ ಮಧ್ಯದಲ್ಲಿ ಸಂಚರಿಸುತ್ತಿದ್ದಾಗ ನನ್ನ ಜನರಾದ ಇಸ್ರಾಯೇಲರನ್ನು ಪಾಲಿಸುವುದಕ್ಕೊಸ್ಕರ ನನ್ನಿಂದ ನೇಮಿಸಲ್ಪಟ್ಟ ಯಾವ ಕುಲನಾಯಕನನ್ನಾದರೂ ನೀವು ನನಗೋಸ್ಕರ ದೇವದಾರು ಮರದ ಮನೆಯನ್ನೇಕೆ ಕಟ್ಟಲಿಲ್ಲವೆಂದು ಕೇಳಿದೆನೋ?’ ಎಂಬುದಾಗಿ ಯೆಹೋವನು ಅನ್ನುತ್ತಾನೆ” ಎಂದು ಹೇಳು.


ಅವರ ಮಧ್ಯದಲ್ಲಿ ವಾಸಮಾಡುವುದಕ್ಕಾಗಿಯೇ ಅವರನ್ನು ಐಗುಪ್ತದೇಶದಿಂದ ಹೊರಗೆ ಬರಮಾಡಿದ ನಾನೇ ಅವರ ದೇವರಾದ ಯೆಹೋವನು ಎಂದು ಅವರು ತಿಳಿದುಕೊಳ್ಳುವರು. ಅವರ ದೇವರಾದ ಯೆಹೋವನು ನಾನೇ.


ತಪ್ಪಿಸಿಕೊಂಡ ಗುಲಾಮನು ನಿಮ್ಮಲ್ಲಿರುವುದಕ್ಕೆ ಬಂದರೆ ಅವನನ್ನು ಅವನ ದಣಿಗೆ ಪುನಃ ವಶಪಡಿಸಬಾರದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು