Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 26:14 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 “ಆದರೆ ನೀವು ನನ್ನ ಮಾತನ್ನು ಕೇಳದೆ ಈ ಆಜ್ಞೆಗಳನ್ನೆಲ್ಲಾ ಅನುಸರಿಸದೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 “ಆದರೆ ನೀವು ನನ್ನ ಮಾತನ್ನು ಕೇಳದೆ, ಈ ಆಜ್ಞೆಗಳನ್ನೆಲ್ಲಾ ಅನುಸರಿಸದೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಆದರೆ ನೀವು ನನ್ನ ಮಾತನ್ನು ಕೇಳದೆ ಈ ಆಜ್ಞೆಗಳನ್ನೆಲ್ಲಾ ಅನುಸರಿಸದೆ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 “ಆದರೆ ನೀವು ನನಗೆ ಮತ್ತು ನನ್ನ ಆಜ್ಞೆಗಳಿಗೆಲ್ಲಾ ವಿಧೇಯರಾಗದಿದ್ದರೆ, ಕೆಟ್ಟ ಸಂಗತಿಗಳು ನಿಮಗೆ ಸಂಭವಿಸುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 “ ‘ನೀವು ನನ್ನ ಮಾತನ್ನು ಕೇಳದೆ ಎಲ್ಲಾ ಆಜ್ಞೆಗಳ ಪ್ರಕಾರ ನಡೆಯದೆ ಹೋದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 26:14
23 ತಿಳಿವುಗಳ ಹೋಲಿಕೆ  

ಯೆಹೋವನು ತನ್ನ ಸಂಕಲ್ಪವನ್ನು ಸಿದ್ಧಿಗೆ ತಂದು ತಾನು ಪುರಾತನಕಾಲದಲ್ಲಿ ನುಡಿದ ಮಾತನ್ನು ಈಡೇರಿಸಿದ್ದಾನೆ; ಆತನು ಕರುಣಿಸದೆ ನಿನ್ನನ್ನು ಕೆಡವಿ, ನಿನ್ನ ವೈರಿಗಳಿಗೆ ಆನಂದವಾಗುವಂತೆ ಮಾಡಿ ನಿನ್ನ ವಿರೋಧಿಗಳ ಕೊಂಬನ್ನು ಎತ್ತಿದ್ದಾನೆ.


ಆದರೆ ನೀವು ನನ್ನ ಕಡೆಗೆ ಕಿವಿಗೊಡದೆ, ಸಬ್ಬತ್ ದಿನದಲ್ಲಿ ಹೊರೆಯನ್ನು ಹೊತ್ತು ಯೆರೂಸಲೇಮಿನ ಬಾಗಿಲುಗಳೊಳಗೆ ಪ್ರವೇಶಿಸಬಾರದೆಂಬ ನಿಯಮವನ್ನು ಕೈಕೊಳ್ಳದೆ, ಆ ದಿನವನ್ನು ನನ್ನ ಪರಿಶುದ್ಧ ದಿನವೆಂದು ಆಚರಿಸದೆ ಇದ್ದರೆ ಆಗ ನಾನು ಊರಬಾಗಿಲುಗಳಲ್ಲಿ ಬೆಂಕಿಯನ್ನು ಹೊತ್ತಿಸುವೆನು, ಅದು ಯೆರೂಸಲೇಮಿನ ಉಪ್ಪರಿಗೆಗಳನ್ನು ದಹಿಸಿಬಿಡುವುದು, ಆರುವುದೇ ಇಲ್ಲ’” ಎಂದು ಹೇಳಿದನು.


“ಇಷ್ಟಾದರೂ ನೀವು ನನ್ನ ಮಾತಿಗೆ ಲಕ್ಷ್ಯಕೊಡದೆ ಹೋದರೆ ನಾನು ನಿಮ್ಮ ಪಾಪಗಳ ನಿಮಿತ್ತ ಏಳರಷ್ಟಾಗಿ ನಿಮ್ಮನ್ನು ಶಿಕ್ಷಿಸುವೆನು.


ಮಾತನಾಡುತ್ತಿರುವಾತನನ್ನು ನೀವು ಅಸಡ್ಡೆ ಮಾಡದಂತೆ ನೋಡಿಕೊಳ್ಳಿರಿ. ಏಕೆಂದರೆ ಭೂಮಿಯ ಮೇಲೆ ದೈವೋಕ್ತಿಗಳನ್ನಾಡಿದವನನ್ನು ಅಸಡ್ಡೆಮಾಡಿದವರು ದಂಡನೆಗೆ ತಪ್ಪಿಸಿಕೊಳ್ಳಲಾಗದಿದ್ದರೆ, ಪರಲೋಕದಿಂದ ಮಾತನಾಡುವಾತನನ್ನು ಬಿಟ್ಟು ದೂರವಾಗಿ ನಾವು ಹೋದರೆ ದಂಡನೆಯಿಂದ ಹೇಗೆ ತಪ್ಪಿಸಿಕೊಂಡೆವು?


ಆ ಪ್ರವಾದಿಯ ಮಾತನ್ನು ಕೇಳದಿರುವ ಪ್ರತಿಯೊಬ್ಬನು ನಮ್ಮ ಜನರೊಳಗಿಂದ ಸಂಪೂರ್ಣವಾಗಿ ನಾಶವಾಗುವನು’ ಎಂಬುದೇ.


ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, “ನನ್ನ ನಾಮವನ್ನು ಘನಪಡಿಸಬೇಕೆಂಬ ಆಜ್ಞೆಯನ್ನು ನೀವು ಆಲಿಸಿ ಮನನಮಾಡಿ ಅರ್ಥಮಾಡಿಕೊಳ್ಳದಿದ್ದರೆ, ನಾನು ನಿಮಗೆ ಶಾಪವನ್ನು ಬರಮಾಡುವೆನು, ನಿಮಗೆ ಆಶೀರ್ವಾದವಾಗಿ ದಯಪಾಲಿಸಿದವುಗಳೆಲ್ಲವನ್ನೂ ಶಪಿಸುವೆನು; ಹೌದು, ಈ ನನ್ನ ಆಜ್ಞೆಯನ್ನು ನಿಮ್ಮಲ್ಲಿ ಯಾರೂ ಮನದಟ್ಟು ಮಾಡಿಕೊಳ್ಳದ ಕಾರಣ ನಾನು ನಿಮ್ಮನ್ನು ಶಪಿಸುತ್ತೇನೆ.


ಯೆಹೋವನು ನೀತಿಸ್ವರೂಪನು, ನಾನಾದರೋ ಆತನ ಆಜ್ಞೆಗಳನ್ನು ಮೀರಿದ ದ್ರೋಹಿ; ಜನಾಂಗಗಳೇ, ನೀವೆಲ್ಲರೂ ಕಿವಿಗೊಡಿರಿ, ನನ್ನ ವ್ಯಥೆಯನ್ನು ನೋಡಿರಿ; ನನ್ನ ಕನ್ಯೆಯರು ಮತ್ತು ಯುವಕರು ಸೆರೆಹೋಗಿದ್ದಾರಲ್ಲಾ!


ನಿಮ್ಮ ದೇವರಾದ ಯೆಹೋವನು ತನ್ನ ವಾಗ್ದಾನಕ್ಕನುಸಾರವಾಗಿ ಈಗ ನಿಮಗೆ ಎಲ್ಲಾ ತರದ ಮೇಲನ್ನು ಅನುಗ್ರಹಿಸಿದಂತೆಯೇ ನಿಮ್ಮ ಮೇಲೆ ಸಕಲ ವಿಧವಾದ ಕೇಡುಗಳನ್ನು ಬರಮಾಡಿ, ತಾನು ಕೊಟ್ಟಿರುವ ಈ ಉತ್ತಮ ದೇಶದಿಂದ ನಿಮ್ಮನ್ನು ತೆಗೆದು ನಾಶಮಾಡಿಬಿಡುವನು.


ಯೆಹೋವನು ತಾನು ಮೊದಲೇ ಆಣೆಯಿಟ್ಟು ಹೇಳಿದಂತೆ ಇಸ್ರಾಯೇಲರು ಎಲ್ಲಿ ಹೋದರೂ ಆತನ ಕೈ ಅವರಿಗೆ ವಿರೋಧವಾಗಿಯೇ ಇತ್ತು. ಅವರು ಬಹು ಕಷ್ಟಗಳಿಗೆ ಗುರಿಯಾದರು.


ನೀವು ಯೆಹೋವನ ಮಾತನ್ನು ಕೇಳದೆಯೂ, ಆತನ ಆಜ್ಞೆಗಳನ್ನು ಕೈಕೊಳ್ಳದೆಯೂ ಹೋದರೆ, ಆತನ ಹಸ್ತವು ನಿಮ್ಮ ಹಿರಿಯರಿಗೆ ವಿರೋಧವಾಗಿದ್ದಂತೆ ನಿಮಗೂ ವಿರೋಧವಾಗಿಯೇ ಇರುವುದು.


ಆದರೆ ನೀವು ದ್ರೋಹಿಗಳಾಗಿ ಯೆಹೋವನ ಆಜ್ಞಾವಿಧಿಗಳನ್ನು ಉಲ್ಲಂಘಿಸಿ, ಅನ್ಯದೇವತೆಗಳನ್ನು ಆರಾಧಿಸಿ,


ಯೆಹೋವನು ದುಷ್ಟನ ಮನೆಯನ್ನು ಶಪಿಸುವನು, ನೀತಿವಂತರ ನಿವಾಸವನ್ನೋ ಆಶೀರ್ವದಿಸುವನು.


ಅವರಾದರೋ ಕೇಳಲಿಲ್ಲ, ಕಿವಿಗೊಡಲಿಲ್ಲ, ಪ್ರತಿಯೊಬ್ಬನೂ ತನ್ನ ತನ್ನ ದುಷ್ಟಹೃದಯದ ಹಟಕ್ಕೆ ತಕ್ಕ ಹಾಗೆ ನಡೆದನು; ಆದಕಾರಣ ಕೈಕೊಳ್ಳಬೇಕೆಂದು ನಾನು ಆಜ್ಞಾಪಿಸಿದರೂ ಅವರು ಕೈಗೊಳ್ಳದ ಈ ನಿಬಂಧನೆಯ ಶಾಪಗಳನ್ನೆಲ್ಲಾ ಅವರ ಮೇಲೆ ಬರಮಾಡಿದೆನು’” ಎಂದು ಹೇಳಿದನು.


ನೀನು ಅವರಿಗೆ, ‘ಯೆಹೋವನು ಇಂತೆನ್ನುತ್ತಾನೆ, ನೀವು ನನ್ನ ಕಡೆಗೆ ಕಿವಿಗೊಡದೆ ನಾನು ನಿಮ್ಮ ಮುಂದೆ ಇಟ್ಟಿರುವ ಧರ್ಮಶಾಸ್ತ್ರಕ್ಕೆ ಅನುಸಾರವಾಗಿ ನಡೆಯಬೇಕೆಂಬ ಮಾತನ್ನು ಕೇಳದೆ,


ನನಗೂ ನಿನಗೂ ಮುಂಚೆ ಪುರಾತನ ಕಾಲದಿಂದಿದ್ದ ಪ್ರವಾದಿಗಳು ಅನೇಕ ದೇಶಗಳಿಗೂ ದೊಡ್ಡ ದೊಡ್ಡ ರಾಜ್ಯಗಳಿಗೂ ಯುದ್ಧ, ವಿಪತ್ತು, ವ್ಯಾಧಿ, ಇವುಗಳ ವಿಷಯವಾಗಿ ಸಾರುತ್ತಿದ್ದರಷ್ಟೆ.


ಆಗ ಕಾವಲು ದಂಡಿನ ಅಧಿಪತಿಯು ಯೆರೆಮೀಯನನ್ನು ಕರೆಯಿಸಿ ಅವನಿಗೆ, “ನಿನ್ನ ದೇವರಾದ ಯೆಹೋವನು ಈ ಸ್ಥಳಕ್ಕೆ ಇಂಥ ಕೆಡುಕಾಗಲಿ ಎಂದು ಶಾಪಕೊಟ್ಟನು.


ಮೋಶೆಯ ಧರ್ಮನಿಯಮಗಳಲ್ಲಿ ಬರೆದಂತೆಯೇ ಈ ವಿಪತ್ತೆಲ್ಲಾ ನಮ್ಮ ಮೇಲೆ ಬಂದಿದೆ; ಆದರೂ ನಾವು ನಮ್ಮ ದುರ್ಮಾರ್ಗಗಳನ್ನು ತೊರೆದುಬಿಟ್ಟು ನಿನ್ನ ಸತ್ಯೋಪದೇಶವನ್ನು ಗ್ರಹಿಸಿ ನಡೆಯುವಂತೆ ನಮ್ಮ ದೇವರಾದ ಯೆಹೋವನೆಂಬ ನಿನ್ನ ದಯೆಯನ್ನು ಬೇಡಿಕೊಳ್ಳಲಿಲ್ಲ.


ಹೊರಟ ಕೂಡಲೆ ಅವರ ಮೇಲೆ ನನ್ನ ಬಲೆಯನ್ನು ಬೀಸಿ, ಆಕಾಶದ ಪಕ್ಷಿಗಳ ಹಾಗೆ ಅವರನ್ನು ಕೆಳಕ್ಕೆ ಎಳೆಯುವೆನು. ಅವರೆಲ್ಲರ ಕಿವಿಗೆ ಬಿದ್ದ ಮಾತಿಗನುಸಾರವಾಗಿ ಅವರನ್ನು ಶಿಕ್ಷಿಸುವೆನು.


“ನಮ್ಮ ಪೂರ್ವಿಕರು ನಮಗೆ ಸಿಕ್ಕಿರುವ ಈ ಗ್ರಂಥದಲ್ಲಿನ ಧರ್ಮೋಪದೇಶ ವಾಕ್ಯಗಳಿಗೆ ಕಿವಿಗೊಡದೆಯೂ, ಅವುಗಳನ್ನು ಕೈಕೊಳ್ಳದೆಯೂ ಹೋದುದರಿಂದ ನಾವು ಯೆಹೋವನ ಉಗ್ರಕೋಪಕ್ಕೆ ಪಾತ್ರರಾಗಿದ್ದೇವೆ. ಆದುದರಿಂದ ನೀವು ನನಗಾಗಿಯೂ, ಜನರಿಗಾಗಿಯೂ, ಮತ್ತು ಎಲ್ಲಾ ಯೆಹೂದ್ಯರಿಗಾಗಿಯೂ ಯೆಹೋವನ ಬಳಿಗೆ ಹೋಗಿ ಈ ಗ್ರಂಥದಲ್ಲಿನ ಧರ್ಮೋಪದೇಶ ವಾಕ್ಯಗಳ ಕುರಿತಾಗಿ ವಿಚಾರಿಸಿರಿ” ಎಂದು ಆಜ್ಞಾಪಿಸಿದನು.


ಯೆಹೋವನು ಹೇಳಿದ್ದೇನೆಂದರೆ, “ಈ ದೇಶದ ಮೇಲೆಯೂ, ಜನರ ಮೇಲೆಯೂ ಯೆಹೂದದ ಅರಸನ ಮುಂದೆ ಪಾರಾಯಣವಾದ ಆ ಗ್ರಂಥದಲ್ಲಿ ಬರೆದಿರುವ ಎಲ್ಲಾ ಶಾಪಗಳನ್ನು ಬರಮಾಡುವೆನು;


ಆದುದರಿಂದ ಇವರು ಹಟಮಾರಿಗಳು; ತಮ್ಮ ಮನಸ್ಸಿನಂತೆ ನಡೆಯಲಿ ಎಂದು ಬಿಟ್ಟುಬಿಟ್ಟೆನು.


ಅವರು ಅದನ್ನು ಸೇರಿ ಅನುಭವಿಸಿದರೂ ನಿನ್ನ ಮಾತಿಗೆ ಕಿವಿಗೊಡಲಿಲ್ಲ, ನಿನ್ನ ಧರ್ಮಾನುಸಾರ ನಡೆಯಲಿಲ್ಲ; ನೀನು ಆಜ್ಞಾಪಿಸಿದವುಗಳಲ್ಲೆಲ್ಲಾ ಒಂದನ್ನೂ ಮಾಡಲಿಲ್ಲ. ಆದಕಾರಣ ನೀನು ಈ ಕೇಡನ್ನೆಲ್ಲಾ ಅವರ ಮೇಲೆ ಬರಮಾಡಿದ್ದಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು