Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 26:15 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ನನ್ನ ನಿಯಮಗಳನ್ನು ಬೇಡವೆಂದು ನನ್ನ ವಿಧಿಗಳನ್ನು ತಳ್ಳಿಬಿಟ್ಟರೆ ನೀವು ನನ್ನ ಆಜ್ಞೆಗಳನ್ನು ಅನುಸರಿಸದೆ ನನ್ನ ನಿಬಂಧನೆಯನ್ನು ಮೀರಿ ನಡೆದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ನನ್ನ ನಿಯಮಗಳನ್ನು ಅಲ್ಲಗಳೆದು, ನನ್ನ ವಿಧಿಗಳನ್ನು ತಳ್ಳಿಬಿಟ್ಟು, ನನ್ನ ಆಜ್ಞೆಗಳಿಗೆ ವಿಧೇಯರಾಗದೆ ನಿಬಂಧನೆಗಳನ್ನೂ ಮೀರಿ ನಡೆದರೆ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ನನ್ನ ನಿಯಮಗಳನ್ನು ಬೇಡವೆಂದು ನನ್ನ ವಿಧಿಗಳನ್ನು ತಳ್ಳಿಬಿಟ್ಟರೆ ನೀವು ನನ್ನ ಆಜ್ಞೆಗಳನ್ನು ಅನುಸರಿಸದೆ ನನ್ನ ನಿಬಂಧನವನ್ನು ಮೀರಿ ನಡೆದರೆ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ನೀವು ನನ್ನ ಕಟ್ಟಳೆಗಳಿಗೆ ಮತ್ತು ಆಜ್ಞೆಗಳಿಗೆ ವಿಧೇಯರಾಗದಿದ್ದರೆ, ಆಗ ನೀವು ನನ್ನ ಒಡಂಬಡಿಕೆಯನ್ನು ಮುರಿದವರಾಗುತ್ತೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ನನ್ನ ನಿಯಮಗಳನ್ನು ನೀವು ತಿರಸ್ಕರಿಸಿದರೆ, ನನ್ನ ನಿರ್ಣಯಗಳಿಗೆ ಅಸಹ್ಯಪಟ್ಟರೆ, ನೀವು ನನ್ನ ಒಡಂಬಡಿಕೆಯನ್ನು ಮೀರಿ, ನನ್ನ ಎಲ್ಲಾ ಆಜ್ಞೆಗಳ ಪ್ರಕಾರ ಮಾಡದೆ ಹೋದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 26:15
27 ತಿಳಿವುಗಳ ಹೋಲಿಕೆ  

ಆತನು ತಮ್ಮ ಪೂರ್ವಿಕರಿಗೆ ಕೊಟ್ಟ ವಿಧಿನಿಬಂಧನೆಗಳನ್ನೂ, ತಮಗೆ ಹೇಳಿಸಿದ ಒಡಂಬಡಿಕೆಯನ್ನು ತಿರಸ್ಕರಿಸಿ, ವ್ಯರ್ಥವಾದ ದೇವತೆಗಳನ್ನು ಸೇವಿಸಿ ನಿಷ್ಪ್ರಯೋಜಕರಾದರು. ಸುತ್ತಣ ಜನಾಂಗಗಳನ್ನು ಅನುಸರಿಸಬಾರದೆಂದು ಯೆಹೋವನು ಆಜ್ಞಾಪಿಸಿದರೂ ಅವರು ಕೇಳದೆ, ಅವರನ್ನು ಅನುಸರಿಸಿದರು.


ಯೆಹೋವನು ಮೋಶೆಗೆ, “ನೀನು ಪೂರ್ವಿಕರಲ್ಲಿ ಸೇರಿದ ಮೇಲೆ ಈ ಜನರು ನನ್ನನ್ನು ಬಿಟ್ಟು ನಾನು ಅವರೊಡನೆ ಮಾಡಿಕೊಂಡ ಒಡಂಬಡಿಕೆಯನ್ನು ಮೀರಿ ದೇವದ್ರೋಹಿಗಳಾಗಿ ತಾವು ಹೋಗುವ ದೇಶದಲ್ಲಿರುವ ಅನ್ಯದೇವತೆಗಳನ್ನು ಪೂಜಿಸುವರು.


ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ನೀನು ಒಡಂಬಡಿಕೆಯನ್ನು ಮೀರಿ ನಿನ್ನ ಆಣೆಯನ್ನು ತಿರಸ್ಕರಿಸಿರುವೆ ನೀನು ಮಾಡಿದ್ದಕ್ಕೆ ತಕ್ಕದ್ದನ್ನು ನಾನು ನಿನಗೆ ಮಾಡುವೆನು.


ನನ್ನ ಮಾತುಗಳನ್ನು ಕೇಳದಿದ್ದ ತಮ್ಮ ಪೂರ್ವಿಕರ ದುಷ್ಕೃತ್ಯಗಳ ಕಡೆಗೆ ತಿರುಗಿಕೊಂಡು, ಅನ್ಯದೇವತೆಗಳನ್ನು ಹಿಂಬಾಲಿಸಿ ಪೂಜಿಸಿದ್ದಾರೆ. ಇಸ್ರಾಯೇಲ್ ವಂಶದವರೂ ಮತ್ತು ಯೆಹೂದ ವಂಶದವರೂ ನಾನು ಅವರ ಪೂರ್ವಿಕರ ಸಂಗಡ ಮಾಡಿಕೊಂಡ ಒಡಂಬಡಿಕೆಯನ್ನು ಮೀರಿದ್ದಾರೆ.


ಭೂನಿವಾಸಿಗಳು ದೈವಾಜ್ಞೆಗಳನ್ನು ಮೀರಿ, ನಿಯಮಗಳನ್ನು ಬದಲಾಯಿಸಿ, ಶಾಶ್ವತವಾದ ಒಡಂಬಡಿಕೆಯನ್ನು ಭಂಗಪಡಿಸಿದ್ದರಿಂದ ಭೂಮಿಯು ಅವರ ಹೆಜ್ಜೆಯಿಂದ ಅಪವಿತ್ರವಾಯಿತು.


ಆ ಮನುಷ್ಯನು ಯೆಹೋವನ ಮಾತನ್ನು ತಾತ್ಸಾರಮಾಡಿ ಆತನ ಆಜ್ಞೆಯನ್ನು ಮೀರಿದುದರಿಂದ ಕುಲದಿಂದ ಹೊರಗೆ ಹಾಕಬೇಕು. ಅವನು ತನ್ನ ಪಾಪದ ಫಲವನ್ನು ಅನುಭವಿಸಲಿ.’”


‘ಈ ಒಡಂಬಡಿಕೆಯು ನಾನು ಇವರ ಪೂರ್ವಿಕರನ್ನು ಕೈಹಿಡಿದು ಐಗುಪ್ತ ದೇಶದೊಳಗಿನಿಂದ ಕರೆದುಕೊಂಡು ಬಂದ ದಿನದಲ್ಲಿ ಅವರ ಸಂಗಡ ಮಾಡಿಕೊಂಡ ಒಡಂಬಡಿಕೆಯ ಹಾಗಲ್ಲ. ಏಕೆಂದರೆ ಅವರು ನನ್ನ ಒಡಂಬಡಿಕೆಯಲ್ಲಿ ಸ್ಥಿರವಾಗಿ ನಿಲ್ಲಲಿಲ್ಲವಾದ್ದರಿಂದ ನಾನು ಅವರನ್ನು ಲಕ್ಷಿಸಲಿಲ್ಲ’ ಎಂದು ಕರ್ತನು ಹೇಳುತ್ತಾನೆ.


ಹೀಗಿರಲು ಈ ಮಾತನ್ನು ತಿರಸ್ಕರಿಸುವವನು ಮನುಷ್ಯರನ್ನು ಮಾತ್ರವಲ್ಲದೆ, ನಿಮಗೆ ಪವಿತ್ರಾತ್ಮವರವನ್ನು ದಯಪಾಲಿಸುವ ದೇವರನ್ನೂ ತಿರಸ್ಕರಿಸುವವನಾಗಿದ್ದಾನೆ.


ಯಾಕೆಂದರೆ ಶರೀರಭಾವಗಳ ಮೇಲೆ ಮನಸ್ಸಿಡುವುದು ದೇವರಿಗೆ ವಿರುದ್ಧವಾಗಿದೆ; ಅಂಥ ಮನಸ್ಸು ಧರ್ಮನಿಯಮಕ್ಕೆ ಒಳಪಡುವುದೂ ಇಲ್ಲ, ಒಳಪಡುವುದಕ್ಕಾಗುವುದೂ ಇಲ್ಲ.


“‘ಎಲೈ, ತಿರಸ್ಕಾರ ಮಾಡುವವರೇ, ಆಶ್ಚರ್ಯಪಡಿರಿ, ನಾಶವಾಗಿಹೋಗಿರಿ. ನಿಮ್ಮ ಕಾಲದಲ್ಲಿ ನಾನು ಒಂದು ಕಾರ್ಯವನ್ನು ಮಾಡುವೆನು; ಆ ಕಾರ್ಯವನ್ನು ಒಬ್ಬನು ನಿಮಗೆ ವಿವರಿಸಿದರೂ ನೀವು ಅದನ್ನು ಸ್ವಲ್ಪವೂ ನಂಬುವುದಿಲ್ಲ’” ಎಂಬುದೇ ಎಂದು ಹೇಳಿದನು.


ಈ ಒಡಂಬಡಿಕೆಯು ನಾನು ಇವರ ಪೂರ್ವಿಕರನ್ನು ಕೈ ಹಿಡಿದು ಐಗುಪ್ತ ದೇಶದೊಳಗಿಂದ ಕರೆದುಕೊಂಡು ಬಂದಾಗ ಅವರ ಸಂಗಡ ಮಾಡಿಕೊಂಡ ಒಡಂಬಡಿಕೆಯಂಥದಲ್ಲ; ನಾನು ಅವರಿಗೆ ಪತಿಯಾಗಿದ್ದರೂ ಆ ನನ್ನ ಒಡಂಬಡಿಕೆಯನ್ನು ಅವರು ಮೀರಿದರಷ್ಟೆ.


ಭೂಲೋಕವೇ, ಕೇಳು! ಆಹಾ, ಈ ಜನರು ನನ್ನ ಮಾತುಗಳನ್ನು ಕೇಳದೆ, ನನ್ನ ಧರ್ಮಬೋಧನೆಯನ್ನು ಅಸಡ್ಡೆಮಾಡಿದ್ದರಿಂದ ಇವರ ಆಲೋಚನೆಗಳ ಫಲವಾದ ಕೇಡನ್ನು ಇವರ ಮೇಲೆ ಬರಮಾಡುವೆನು.


“ಅಯ್ಯೋ, ನಾನು ಸದುಪದೇಶವನ್ನು ಎಷ್ಟು ದ್ವೇಷಿಸಿದೆ, ನನ್ನ ಹೃದಯವು ಬುದ್ಧಿವಾದವನ್ನು ಎಷ್ಟು ತಾತ್ಸಾರ ಮಾಡಿತು,


ನನ್ನ ಬೋಧನೆಯನ್ನು ಕೇಳಲೊಲ್ಲದೆ, ನನ್ನ ಗದರಿಕೆಯನ್ನೆಲ್ಲಾ ತಾತ್ಸಾರಮಾಡಿದರು.


ಯೆಹೋವನ ಭಯವೇ ತಿಳಿವಳಿಕೆಗೆ ಮೂಲವು, ಮೂರ್ಖರಾದರೋ ಜ್ಞಾನವನ್ನು ಮತ್ತು ಶಿಕ್ಷಣವನ್ನು ತಿರಸ್ಕರಿಸುವರು.


ನೀವೋ ನನ್ನ ಸುಶಿಕ್ಷಣವನ್ನು ಹಗೆಮಾಡುತ್ತೀರಲ್ಲಾ; ನನ್ನ ಆಜ್ಞೆಯನ್ನು ಉಲ್ಲಂಘಿಸುತ್ತೀರಿ.


ಅವರಾದರೋ ದೇವಪ್ರೇಷಿತರನ್ನು ಗೇಲಿಮಾಡಿ, ಯೆಹೋವನ ಮಾತುಗಳನ್ನು ಕಡೆಗಣಿಸಿ ಆತನ ಪ್ರವಾದಿಗಳನ್ನು ಹೀಯಾಳಿಸಿದ್ದರಿಂದ, ಆತನ ಕೋಪಾಗ್ನಿಯು ಆತನ ಪ್ರಜೆಗಳ ಮೇಲೆ ಉರಿಯತೊಡಗಿತು, ಅದರ ತಾಪವು ಆರಿಹೋಗಲೇ ಇಲ್ಲ.


ಅವರು ಬಿಟ್ಟುಹೋದ ಸ್ವದೇಶವು ನಿರ್ಜನವಾಗಿ ಬಿದ್ದಿರುವಾಗ ತನಗೆ ಸಲ್ಲಬೇಕಾದ ಸಬ್ಬತ್ ವಿಶ್ರಾಂತಿಯನ್ನು ಅನುಭವಿಸಬೇಕು. ಅವರು ಯೆಹೋವನ ಆಜ್ಞೆ ಬೇಡವೆಂದು ಆತನ ವಿಧಿಗಳನ್ನು ತಾತ್ಸಾರ ಮಾಡಿದ ಕಾರಣವೇ ತಮ್ಮ ಪಾಪದ ಫಲವನ್ನು ಅನುಭವಿಸಬೇಕಾಗಿರುವುದು.


ತರುವಾಯ ಒಡಂಬಡಿಕೆಯ ಗ್ರಂಥವನ್ನು ತೆಗೆದುಕೊಂಡು ಜನರಿಗೆ ಕೇಳಿಸುವಂತೆ ಓದಿದನು. ಅವರು ಕೇಳಿ, “ಯೆಹೋವನ ಆಜ್ಞೆಗಳನ್ನೆಲ್ಲಾ ನಾವು ಅನುಸರಿಸಿ ವಿಧೇಯರಾಗುವೆವು” ಅಂದರು.


ಆದ್ದರಿಂದ ನೀವು ನನ್ನ ಮಾತುಗಳನ್ನು ಶ್ರದ್ಧೆಯಿಂದ ಕೇಳಿ, ನನ್ನ ಒಡಂಬಡಿಕೆಯನ್ನು ಕಾಪಾಡಿಕೊಂಡರೆ, ನೀವು ಎಲ್ಲಾ ಜನಾಂಗಗಳಲ್ಲಿ ನನಗೆ ಸ್ವಕೀಯ ಜನರಾಗಿರುವಿರಿ. ಸಮಸ್ತ ಭೂಮಿಯು ನನ್ನದೇ.


ಸುನ್ನತಿಮಾಡಿಸಿಕೊಳ್ಳದ ಪುರುಷನಿಗೆ ನನ್ನ ಒಡಂಬಡಿಕೆಯನ್ನು ಉಲ್ಲಂಘಿಸಿದಂತೆ ಆಗುವ ಕಾರಣ ಅವನನ್ನು ಕುಲದಿಂದ ಬಹಿಷ್ಕರಿಸಬೇಕು” ಎಂದು ಹೇಳಿದನು.


ನಾನು ನಿಮ್ಮ ಮೇಲೆ ಕಟಾಕ್ಷವಿಟ್ಟು ಬಹುಸಂತಾನವನ್ನು ಕೊಟ್ಟು ಹೆಚ್ಚಿಸುವೆನು; ನಿಮ್ಮೊಂದಿಗೆ ನನ್ನ ಒಡಂಬಡಿಕೆಯನ್ನು ಸ್ಥಿರಪಡಿಸುವೆನು.


ನಾನು ನಿಮ್ಮ ನಡುವೆ ವಾಸಮಾಡುವೆನು; ನಿಮ್ಮನ್ನು ತಳ್ಳಿಬಿಡುವುದಿಲ್ಲ.


ನೀವು ಯೆಹೋವನ ಮಾತನ್ನು ಕೇಳದೆಯೂ, ಆತನ ಆಜ್ಞೆಗಳನ್ನು ಕೈಕೊಳ್ಳದೆಯೂ ಹೋದರೆ, ಆತನ ಹಸ್ತವು ನಿಮ್ಮ ಹಿರಿಯರಿಗೆ ವಿರೋಧವಾಗಿದ್ದಂತೆ ನಿಮಗೂ ವಿರೋಧವಾಗಿಯೇ ಇರುವುದು.


ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, “ನನ್ನ ನಾಮವನ್ನು ಘನಪಡಿಸಬೇಕೆಂಬ ಆಜ್ಞೆಯನ್ನು ನೀವು ಆಲಿಸಿ ಮನನಮಾಡಿ ಅರ್ಥಮಾಡಿಕೊಳ್ಳದಿದ್ದರೆ, ನಾನು ನಿಮಗೆ ಶಾಪವನ್ನು ಬರಮಾಡುವೆನು, ನಿಮಗೆ ಆಶೀರ್ವಾದವಾಗಿ ದಯಪಾಲಿಸಿದವುಗಳೆಲ್ಲವನ್ನೂ ಶಪಿಸುವೆನು; ಹೌದು, ಈ ನನ್ನ ಆಜ್ಞೆಯನ್ನು ನಿಮ್ಮಲ್ಲಿ ಯಾರೂ ಮನದಟ್ಟು ಮಾಡಿಕೊಳ್ಳದ ಕಾರಣ ನಾನು ನಿಮ್ಮನ್ನು ಶಪಿಸುತ್ತೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು