Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 26:22 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ನಿಮ್ಮ ಮೇಲೆ ಕಾಡುಮೃಗಗಳನ್ನು ಬರಮಾಡುವೆನು; ಅವು ನಿಮ್ಮ ಮಕ್ಕಳನ್ನು ಕದ್ದುಕೊಂಡು ಹೋಗುವವು, ನಿಮ್ಮ ಪಶುಗಳನ್ನು ಕೊಲ್ಲುವವು, ನಿಮ್ಮನ್ನು ಸ್ವಲ್ಪ ಜನರನ್ನಾಗಿ ಮಾಡುವವು; ನಿಮ್ಮ ದಾರಿಗಳು ಪಾಳು ಬೀಳುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ನಿಮ್ಮ ಮೇಲೆ ಕ್ರೂರಪ್ರಾಣಿಗಳನ್ನು ಬರಮಾಡುವೆನು. ಅವು ನಿಮ್ಮ ಮಕ್ಕಳನ್ನು ಕೊಂದುಹಾಕುವುವು; ನಿಮ್ಮ ಪಶುಪ್ರಾಣಿಗಳನ್ನು ನಾಶಮಾಡುವುವು; ನಿಮ್ಮನ್ನು ಅಲ್ಪಸಂಖ್ಯಾತರನ್ನಾಗಿ ಮಾಡುವುವು, ನಿಮ್ಮ ದಾರಿಗಳು ಪಾಳುಬೀಳುವುವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ನಿಮ್ಮ ಮೇಲೆ ಕಾಡುಮೃಗಗಳನ್ನು ಬರಮಾಡುವೆನು; ಅವು ನಿಮ್ಮನ್ನು ಸಂತಾನವಿಲ್ಲದವರನ್ನಾಗಿ ಮಾಡುವವು; ನಿಮ್ಮ ಪಶುಗಳನ್ನು ಕೊಲ್ಲುವವು; ನಿಮ್ಮನ್ನು ಸ್ವಲ್ಪ ಮಂದಿಯನ್ನಾಗಿ ಮಾಡುವವು; ನಿಮ್ಮ ದಾರಿಗಳು ಹಾಳುಬೀಳುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ನಿಮಗೆ ವಿರುದ್ಧವಾಗಿ ನಾನು ಕ್ರೂರ ಮೃಗಗಳನ್ನು ಕಳುಹಿಸುವೆನು. ಅವುಗಳು ನಿಮ್ಮ ಮಕ್ಕಳನ್ನು ತಿಂದು ಬಿಡುವವು; ನಿಮ್ಮ ಪಶುಗಳನ್ನು ನಾಶಮಾಡುವವು. ಅವು ನಿಮ್ಮಲ್ಲಿ ಅನೇಕ ಜನರನ್ನು ಕೊಲ್ಲುವವು. ದಾರಿಗಳು ಜನಸಂಚಾರವಿಲ್ಲದೆ ಬರಿದಾಗಿರುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಕಾಡುಮೃಗಗಳು ನಿಮ್ಮ ಮೇಲೆ ಬರುವಂತೆ ಮಾಡುವೆನು. ಅವು ನಿಮ್ಮನ್ನು ಮಕ್ಕಳಿಲ್ಲದವರನ್ನಾಗಿ ಮಾಡಿ, ನಿಮ್ಮ ದನಗಳನ್ನು ತಿಂದುಬಿಡುವವು. ನಿಮ್ಮನ್ನು ಸ್ವಲ್ಪ ಮಂದಿಯಾಗಿ ಮಾಡುವುವು. ನಿಮ್ಮ ಮಾರ್ಗಗಳು ಹಾಳಾಗಿ ಹೋಗುವುವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 26:22
17 ತಿಳಿವುಗಳ ಹೋಲಿಕೆ  

“ನನ್ನ ಅಪ್ಪಣೆಯ ಮೇರೆಗೆ ದುಷ್ಟ ಮೃಗಗಳು ದೇಶದಲ್ಲಿ ತಿರುಗುತ್ತಾ ಅದನ್ನು ನಿರ್ಜನಗೊಳ್ಳಿಸಿ, ಹಾಳುಮಾಡಿ, ಯಾರೂ ಹಾದು ಹೋಗದಂತೆ ಹೆದರಿಸುವ ಪಕ್ಷದಲ್ಲಿ,


ಅವರು ಬರದಿಂದ ಕ್ಷೀಣವಾಗುವರು, ತಾಪದಿಂದಲೂ ಅಂಟುರೋಗದಿಂದಲೂ ಸಾಯುವರು; ಅದಲ್ಲದೆ ನಾನು ದುಷ್ಟ ಮೃಗಗಳನ್ನೂ ಮತ್ತು ವಿಷಸರ್ಪಗಳನ್ನೂ ಅವರ ಮೇಲೆ ಬರಮಾಡುವೆನು.


“ಅನಾತನ ಮಗನಾದ ಶಮ್ಗರನ ಕಾಲದಲ್ಲಿಯೂ, ಯಾಯೇಲಳ ದಿನಗಳಲ್ಲಿಯೂ ರಾಜಮಾರ್ಗಗಳಲ್ಲಿ ಸಂಚಾರವು ನಿಂತುಹೋಯಿತು. ಪ್ರಯಾಣಿಕರು ಅಂಕುಡೊಂಕಾದ ದಾರಿಹಿಡಿದು ಹೋದರು.


ಅವರು ನೋಡದ ಎಲ್ಲಾ ಜನಾಂಗಗಳ ಮಧ್ಯಕ್ಕೆ ಅವರನ್ನು ತೂರಿಬಿಡುವೆನು. ಯೆಹೋವನ ಈ ಮಾತಿನಂತೆ ಅವರು ಚದರಿದ ಮೇಲೆ ದೇಶವು ಹಾಳಾಯಿತು. ಅದರಲ್ಲಿ ಯಾರೂ ಹೋಗುತ್ತಿರಲಿಲ್ಲ, ಬರುತ್ತಿರಲಿಲ್ಲ; ಆ ರಮ್ಯ ದೇಶವನ್ನು ಹಾಳುಮಾಡಿದರು.’”


ಯಾರೂ ಮಹೋತ್ಸವಗಳಿಗೆ ಬಾರದೆ ಇರುವುದರಿಂದ ಚೀಯೋನಿಗೆ ಹೋಗುವ ದಾರಿಗಳು ಬಿಕೋ ಎನ್ನುತ್ತಿವೆ; ಅದರ ಬಾಗಿಲುಗಳೆಲ್ಲಾ ಹಾಳು ಬಿದ್ದಿವೆ, ಅಲ್ಲಿನ ಯಾಜಕರು ನರಳಾಡುತ್ತಾರೆ; ಅಲ್ಲಿನ ಕನ್ಯೆಯರು ವ್ಯಥೆಪಡುತ್ತಾರೆ, ನಗರಿಗೆ ನಗರಿಯೇ ಶೋಕದಿಂದ ತುಂಬಿದೆ.


ರಾಜಮಾರ್ಗಗಳು ಹಾಳಾಗಿವೆ. ಹಾದಿಯಲ್ಲಿ ಹೋಗುವವರು ಇಲ್ಲವೇ ಇಲ್ಲ; ಶತ್ರುವು ಒಪ್ಪಂದವನ್ನು ಮೀರಿದ್ದಾನೆ, ಪಟ್ಟಣಗಳನ್ನು ತಿರಸ್ಕರಿಸಿದ್ದಾನೆ, ಯಾವ ಮನುಷ್ಯರನ್ನೂ ಗಣನೆಗೆ ತಾರನು.


ಅವರಿಗೆ ಆರಂಭದಲ್ಲಿ ಯೆಹೋವನ ಭಯಭಕ್ತಿ ಇರಲಿಲ್ಲ. ಆದುದರಿಂದ ಆತನು ಸಿಂಹಗಳನ್ನು ಕಳುಹಿಸಿದನು. ಅವು ಅವರಲ್ಲಿ ಕೆಲವರನ್ನು ಕೊಂದವು.


ನಿಮ್ಮ ದೇಶದಲ್ಲಿ ನಿಮಗೆ ಸಮಾಧಾನವನ್ನು ಅನುಗ್ರಹಿಸುವೆನು; ಯಾರ ಭಯವೂ ಇಲ್ಲದೆ ಮಲಗಿಕೊಳ್ಳುವಿರಿ; ದುಷ್ಟಮೃಗಗಳನ್ನು ದೇಶದಿಂದ ತೆಗೆದುಹಾಕುವೆನು; ನಿಮ್ಮ ದೇಶವು ಶತ್ರುಗಳ ಕತ್ತಿಯಿಂದ ಹಾಳಾಗುವುದಿಲ್ಲ.


ಹೀಗಿರಲು ನಿಮ್ಮ ದೆಸೆಯಿಂದ ಚೀಯೋನ್ ಪಟ್ಟಣವು ಹೊಲದಂತೆ ಉಳಲ್ಪಡುವುದು, ಯೆರೂಸಲೇಮು ಹಾಳುದಿಬ್ಬಗಳಾಗುವುದು. ಯೆಹೋವನ ಆಲಯದ ಪರ್ವತವು ಕಾಡುಗುಡ್ಡಗಳಂತಾಗುವುದು.


ನಾನು ದೇಶವನ್ನು ಹಾಳುಮಾಡುವೆನು, ಅದರ ಶಕ್ತಿಯ ಅಹಂಕಾರವು ಇಳಿದು ಹೋಗುವುದು; ಇಸ್ರಾಯೇಲಿನ ಪರ್ವತಗಳು ಹಾಳಾಗಿರುವುದರಿಂದ ಯಾರೂ ಅಲ್ಲಿ ಹಾದು ಹೋಗುವುದಿಲ್ಲ.


ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ನಾನು ಖಡ್ಗ, ಕ್ಷಾಮ, ದುಷ್ಟಮೃಗ ಮತ್ತು ವ್ಯಾಧಿ ಎಂಬ ನಾಲ್ಕು ಬಾಧೆಗಳನ್ನು ಯೆರೂಸಲೇಮಿನ ಮೇಲೆ ಒಟ್ಟಿಗೆ ತಂದು, ಜನರನ್ನು, ಪಶುಗಳನ್ನು ನಿರ್ಮೂಲ ಮಾಡುವಾಗ ಹೇಳತಕ್ಕದ್ದೇನು!


ನಾನು ಕಳುಹಿಸುವ ಕ್ಷಾಮದಿಂದಲೂ, ದುಷ್ಟಮೃಗಗಳಿಂದಲೂ ನಿನಗೆ ಪುತ್ರಶೋಕವು ಉಂಟಾಗುವುದು; ವ್ಯಾಧಿಯೂ, ರಕ್ತ ಪ್ರವಾಹವೂ ನಿನ್ನಲ್ಲಿ ವ್ಯಾಪಿಸುವವು; ನಿನ್ನನ್ನು ಖಡ್ಗಕ್ಕೆ ತುತ್ತು ಮಾಡುವೆನು” ಇದು ಯೆಹೋವನಾದ ನನ್ನ ನುಡಿ.


“ನಾನು ಅವರಿಗೆ ನಾಲ್ಕು ವಿಧವಾದ ಬಾಧಕರನ್ನು, ಅಂದರೆ ಕಡಿಯುವುದಕ್ಕೆ ಖಡ್ಗವನ್ನು, ಸೀಳುವುದಕ್ಕೆ ನಾಯಿಗಳನ್ನು, ನುಂಗಿ ಹಾಳುಮಾಡುವುದಕ್ಕೆ ಆಕಾಶದ ಪಕ್ಷಿಗಳನ್ನೂ ಮತ್ತು ಭೂಜಂತುಗಳನ್ನೂ ನೇಮಿಸುವೆನು” ಎಂಬುದು ಯೆಹೋವನಾದ ನನ್ನ ಮಾತು.


ಆದಕಾರಣ ಶಾಪವು ಲೋಕವನ್ನು ನುಂಗಿಬಿಟ್ಟಿದೆ, ಅಲ್ಲಿನವರು ದಂಡನೆಗೆ ಒಳಗಾಗಿದ್ದಾರೆ. ಭೂನಿವಾಸಿಗಳು ಸುಟ್ಟುಹೋಗಿ ಕೆಲವರು ಮಾತ್ರ ಉಳಿದಿದ್ದಾರೆ.


ಆ ಕಾಲದಲ್ಲಿ ಯಾರಿಗೂ ಸಮಾಧಾನವಾಗಿ ತಿರುಗಾಡುವುದಕ್ಕೆ ಸಾಧ್ಯವಾಗುತ್ತಾ ಇರಲಿಲ್ಲ; ದೇಶ ನಿವಾಸಿಗಳೆಲ್ಲರೂ ಕಳವಳಗೊಂಡಿದ್ದರು.


ಅವನು ಅವರ ಕಡೆಗೆ ತಿರುಗಿಕೊಂಡು ಯೆಹೋವನ ಹೆಸರಿನಲ್ಲಿ ಅವರನ್ನು ಶಪಿಸಿದನು. ಕೂಡಲೆ ಕಾಡಿನಿಂದ ಎರಡು ಹೆಣ್ಣು ಕರಡಿಗಳು ಬಂದು ಆ ಹುಡುಗರಲ್ಲಿ ನಲ್ವತ್ತೆರಡು ಮಂದಿಯನ್ನು ಹರಿದುಬಿಟ್ಟವು.


ಅವರು ಅವನಿಗೆ, “ದಯಮಾಡು, ನಮ್ಮ ಬಿನ್ನಹವನ್ನು ಲಾಲಿಸು; ನಿನ್ನ ಕಣ್ಣಿಗೆ ಕಾಣುವ ಪ್ರಕಾರ ಅಪಾರ ಜನರಲ್ಲಿ ನಾವು ಕೆಲವರು ಮಾತ್ರ ಉಳಿದಿದ್ದೇವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು