Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 26:43 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

43 ಅವರು ಬಿಟ್ಟುಹೋದ ಸ್ವದೇಶವು ನಿರ್ಜನವಾಗಿ ಬಿದ್ದಿರುವಾಗ ತನಗೆ ಸಲ್ಲಬೇಕಾದ ಸಬ್ಬತ್ ವಿಶ್ರಾಂತಿಯನ್ನು ಅನುಭವಿಸಬೇಕು. ಅವರು ಯೆಹೋವನ ಆಜ್ಞೆ ಬೇಡವೆಂದು ಆತನ ವಿಧಿಗಳನ್ನು ತಾತ್ಸಾರ ಮಾಡಿದ ಕಾರಣವೇ ತಮ್ಮ ಪಾಪದ ಫಲವನ್ನು ಅನುಭವಿಸಬೇಕಾಗಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

43 ಆದರೆ ಅವರು ಬಿಟ್ಟುಹೋದ ಸ್ವಂತ ನಾಡು ಮೊಟ್ಟಮೊದಲು ನಿರ್ಜನವಾಗಬೇಕು; ಅದು ತನಗೆ ಸಲ್ಲಬೇಕಾದ ಸಬ್ಬತ್ ವಿಶ್ರಾಂತಿಯನ್ನು ಅನುಭವಿಸಬೇಕು; ಅವರು ಸರ್ವೇಶ್ವರನ ಆಜ್ಞೆ ಬೇಡವೆಂದು ಆತನ ವಿಧಿಗಳನ್ನು ತಾತ್ಸಾರ ಮಾಡಿದ ಕಾರಣ ತಮ್ಮ ಪಾಪದ ಫಲವನ್ನು ಸವಿಯಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

43 ಅವರು ಬಿಟ್ಟುಹೋದ ಸ್ವದೇಶವು ನಿರ್ಜನವಾಗಿ ಬಿದ್ದಿರುವಾಗ ತನಗೆ ಸಲ್ಲಬೇಕಾದ ಸಬ್ಬತ್ ವಿಶ್ರಾಂತಿಯನ್ನು ಹೊಂದುವದು. ಅವರು ಯೆಹೋವನ ಆಜ್ಞೆಬೇಡವೆಂದು ಆತನ ವಿಧಿಗಳನ್ನು ತಾತ್ಸಾರ ಮಾಡಿದ ಕಾರಣವೇ ತಮ್ಮ ಪಾಪದ ಫಲವನ್ನು ಅನುಭವಿಸಬೇಕಾಗಿರುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

43 “ದೇಶವು ಬರಿದಾಗಿದ್ದು ವಿಶ್ರಾಂತಿಯನ್ನು ಅನುಭವಿಸುವುದು. ಆಗ ಜೀವಂತವಾಗಿ ಉಳಿದವರು ತಮ್ಮ ಪಾಪಗಳಿಗೆ ಬರತಕ್ಕ ಶಿಕ್ಷೆಯನ್ನು ಅನುಭವಿಸುವರು. ನನ್ನ ನಿಯಮಗಳನ್ನು ದ್ವೇಷಿಸಿ ನನ್ನ ವಿಧಿಗಳಿಗೆ ಅವಿಧೇಯರಾದ್ದರಿಂದ ತಮಗೆ ಶಿಕ್ಷೆಯಾಯಿತೆಂದು ಅವರು ಅರಿತುಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

43 ಅವರು ಬಿಟ್ಟುಹೋದ ಸ್ವದೇಶವು ಯಾರೂ ಇಲ್ಲದೆ ಹಾಳಾದ ವೇಳೆಯಲ್ಲಿ ತನ್ನ ವಿಶ್ರಾಂತಿಯನ್ನು ಅನುಭವಿಸುವುದು. ಆದರೆ ಅವರು ತಮ್ಮ ಪಾಪಗಳಿಗಾಗಿ ಶಿಕ್ಷೆಯನ್ನು ಅನುಭವಿಸುವರು. ಅದು ಏಕೆಂದರೆ, ಅವರು ನನ್ನ ನ್ಯಾಯಗಳನ್ನು ಹೇಸಿ, ತಮ್ಮ ಹೃದಯಗಳಲ್ಲಿ ನನ್ನ ನಿಯಮಗಳನ್ನು ತಾತ್ಸಾರ ಮಾಡಿದ್ದರಿಂದಲೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 26:43
28 ತಿಳಿವುಗಳ ಹೋಲಿಕೆ  

ಯಾಕೆಂದರೆ ಶರೀರಭಾವಗಳ ಮೇಲೆ ಮನಸ್ಸಿಡುವುದು ದೇವರಿಗೆ ವಿರುದ್ಧವಾಗಿದೆ; ಅಂಥ ಮನಸ್ಸು ಧರ್ಮನಿಯಮಕ್ಕೆ ಒಳಪಡುವುದೂ ಇಲ್ಲ, ಒಳಪಡುವುದಕ್ಕಾಗುವುದೂ ಇಲ್ಲ.


ನನ್ನ ನಿಯಮಗಳನ್ನು ಬೇಡವೆಂದು ನನ್ನ ವಿಧಿಗಳನ್ನು ತಳ್ಳಿಬಿಟ್ಟರೆ ನೀವು ನನ್ನ ಆಜ್ಞೆಗಳನ್ನು ಅನುಸರಿಸದೆ ನನ್ನ ನಿಬಂಧನೆಯನ್ನು ಮೀರಿ ನಡೆದರೆ,


ಲೋಕವು ನಿಮ್ಮನ್ನು ದ್ವೇಷಿಸಲಾರದು, ಆದರೆ ನಾನು ಅದರ ಕ್ರಿಯೆಗಳು ಕೆಟ್ಟವುಗಳೆಂದು ಸಾಕ್ಷಿ ಹೇಳುವುದರಿಂದ, ಅದು ನನ್ನನ್ನು ದ್ವೇಷಿಸುತ್ತದೆ.


ಒಂದೇ ತಿಂಗಳೊಳಗೆ ಮೂವರು ಕುರುಬರನ್ನು ಅಡಗಿಸಿಬಿಟ್ಟೆನು; ಅನಂತರ ನನಗೆ ಕುರಿಗಳ ವಿಷಯವಾಗಿ ತಾಳ್ಮೆ ತಪ್ಪಿತು; ಅವುಗಳಿಂದ ನನಗೆ ಬೇಸರವಾಯಿತು.


ಕಂಡ ದೋಷವನ್ನು ಚಾವಡಿಯಲ್ಲಿ ಖಂಡಿಸುವವನ ಮೇಲೆ ಹಗೆತೋರಿಸುತ್ತೀರಿ, ಯಥಾರ್ಥರನ್ನು ದ್ವೇಷಿಸುತ್ತೀರಿ.


ಆದಕಾರಣ ಯೆಹೋವನು ಆ ಕೇಡನ್ನು ನೋಡಿಕೊಂಡಿದ್ದು ನಮ್ಮ ಮೇಲೆ ಬರಮಾಡಿದ್ದಾನೆ; ನಮ್ಮ ದೇವರಾದ ಯೆಹೋವನು ತಾನು ಮಾಡುವ ಸಕಲಕಾರ್ಯಗಳಲ್ಲಿ ಧರ್ಮಸ್ವರೂಪನೇ; ನಾವೋ ಆತನ ಮಾತನ್ನು ಕೇಳಲಿಲ್ಲ.


ತಿರುಗಿಸಲ್ಪಟ್ಟ ಮೇಲೆಯೇ ಪಶ್ಚಾತ್ತಾಪ ಪಟ್ಟೆನು; ತಿಳಿವಳಿಕೆಯನ್ನು ಹೊಂದಿದ ಮೇಲೆಯೇ ತೊಡೆಯನ್ನು ಬಡಿದುಕೊಂಡೆನು. ನನ್ನ ಯೌವನದ ಅವಮಾನವನ್ನು ನನ್ನ ಮೇಲೆ ಹೊತ್ತುಕೊಂಡ ಕಾರಣ ಲಜ್ಜೆಗೊಂಡೆನು, ಹೌದು, ತುಂಬಾ ನಾಚಿಕೆಪಟ್ಟೆನು.’”


ಯೆಹೋವನೇ, ನಿನ್ನ ಜನರು ಇಕ್ಕಟ್ಟಿಗೆ ಸಿಕ್ಕಿ ನಿನ್ನನ್ನು ಹುಡುಕಿದರು. ನಿನ್ನ ಶಿಕ್ಷೆ ಅವರ ಮೇಲಿರುವಾಗ ಅವರು ಪ್ರಾರ್ಥನೆಯನ್ನು ಮಾಡಿದರು.


ಯೆಹೋವನೇ, ನಿನ್ನ ವಿಧಿಗಳು ನೀತಿಯುಳ್ಳವುಗಳಾಗಿವೆ ಎಂದೂ, ನೀನು ನಂಬಿಗಸ್ತಿಕೆಯಿಂದಲೇ ನನ್ನನ್ನು ಕುಗ್ಗಿಸಿದ್ದೀ ಎಂದೂ ತಿಳಿದುಕೊಂಡಿದ್ದೇನೆ.


ಕಷ್ಟಾನುಭವವು ಹಿತಕರವಾಯಿತು, ಅದುದರಿಂದಲೇ ನಿನ್ನ ನಿಬಂಧನೆಗಳನ್ನು ಕಲಿತೆನು.


ಕಷ್ಟಾನುಭವಕ್ಕಿಂತ ಮೊದಲೇ ತಪ್ಪಿಹೋಗುತ್ತಿದ್ದೆನು, ಈಗಲಾದರೋ ನಿನ್ನ ನುಡಿಗಳನ್ನು ಕೈಗೊಳ್ಳುತ್ತೇನೆ.


ನೀವೋ ನನ್ನ ಸುಶಿಕ್ಷಣವನ್ನು ಹಗೆಮಾಡುತ್ತೀರಲ್ಲಾ; ನನ್ನ ಆಜ್ಞೆಯನ್ನು ಉಲ್ಲಂಘಿಸುತ್ತೀರಿ.


ಕಷ್ಟಕಾಲದಲ್ಲಿ ನನಗೆ ಮೊರೆಯಿಡಿರಿ, ಬಿಡಿಸುವೆನು; ಆಗ ನನ್ನನ್ನು ಕೊಂಡಾಡುವಿರಿ.


ಇಗೋ, ದೇವರು ಯಾರನ್ನು ಶಿಕ್ಷಿಸುವನೋ ಅವನು ಧನ್ಯನು; ಸರ್ವಶಕ್ತನಾದ ದೇವರ ದಂಡನೆಯನ್ನು ತಾತ್ಸಾರಮಾಡಬೇಡ.


ಆದರೆ ಆ ಕಷ್ಟದಲ್ಲಿ ಮನಸ್ಸೆಯು ತನ್ನ ದೇವರಾದ ಯೆಹೋವನ ಪ್ರಸನ್ನತೆಯನ್ನು ಬೇಡಿಕೊಂಡನು. ಅವನು ತನ್ನ ಪೂರ್ವಿಕರ ದೇವರ ಮುಂದೆ ತನ್ನನ್ನು ಬಹಳವಾಗಿ ತಗ್ಗಿಸಿಕೊಂಡು ಆತನನ್ನು ಪ್ರಾರ್ಥಿಸಲು


ನಾನು ಅವರಿಗೆ ವಿರೋಧವಾಗಿ ನಡೆದುಕೊಂಡು ಶತ್ರುದೇಶದಲ್ಲಿ ಸೆರೆಯವರನ್ನಾಗಿ ಮಾಡಬೇಕಾಯಿತೆಂದೂ ಒಪ್ಪಿ, ತಮ್ಮ ಮೊಂಡತನವನ್ನು ಬಿಟ್ಟು ನನ್ನ ಆಜ್ಞೆಗೆ ತಲೆ ಬಾಗಿ ತಮ್ಮ ಪಾಪದಿಂದುಂಟಾದ ಶಿಕ್ಷೆಯನ್ನು ಸ್ವೀಕರಿಸುವುದಾದರೆ,


ನಿಮ್ಮ ಪೂಜಾಸ್ಥಳಗಳನ್ನು ಇಲ್ಲದಂತೆ ಮಾಡುವೆನು; ನೀವು ಸೂರ್ಯನ ಪೂಜೆಗೆ ಇಟ್ಟಿರುವ ಕಂಬಗಳನ್ನು ಕಡಿದುಹಾಕುವೆನು; ನಿಮ್ಮ ವಿಗ್ರಹಗಳ ಮೇಲೆ ನಿಮ್ಮ ಹೆಣಗಳನ್ನು ಬೀಸಾಡುವೆನು; ನಾನು ನಿಮ್ಮ ವಿಷಯದಲ್ಲಿ ಅಸಹ್ಯಪಡುವೆನು.


ನಾನು ನಿಮ್ಮ ನಡುವೆ ವಾಸಮಾಡುವೆನು; ನಿಮ್ಮನ್ನು ತಳ್ಳಿಬಿಡುವುದಿಲ್ಲ.


ಆಗ ಯೆಹೋವನು ತನ್ನ ಜನರಿಗಾಗಿ ನ್ಯಾಯತೀರಿಸುವನು. ಪರತಂತ್ರರಾಗಲಿ ಅಥವಾ ಸ್ವತಂತ್ರರಾಗಲಿ ಅವರೆಲ್ಲರೂ ನಿರಾಶ್ರಿತರಾಗಿ ನಿಶ್ಶೇಷರಾದುದ್ದನ್ನು ಆತನು ತಿಳಿದು ತನ್ನ ಸೇವಕರ ವಿಷಯದಲ್ಲಿ ಕನಿಕರಪಡುವನು.


ಈ ಪ್ರಕಾರ ಯೆರೆಮೀಯನ ಮುಖಾಂತರ ಹೇಳಿಸಿದ ಯೆಹೋವನ ಮಾತು ನೆರವೇರಿತು; ದೇಶವು ತನ್ನ ಸಬ್ಬತ್ ಕಾಲವನ್ನು ಅನುಭವಿಸುವವರೆಗೂ ಸಮಾಧಾನವಾಗಿತ್ತಷ್ಟೇ. ದೇಶವು ಎಪ್ಪತ್ತು ವರ್ಷಗಳು ಪೂರ್ಣವಾಗುವವರೆಗೂ ಅದು ಶೂನ್ಯವಾಗಿದ್ದ ಸಬ್ಬತ್ತನ್ನು ಅನುಭವಿಸಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು