Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 3:16 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಯಾಜಕನು ಅದನ್ನು ಯಜ್ಞವೇದಿಯ ಮೇಲೆ ಹೋಮಮಾಡಬೇಕು. ಅದು ಯೆಹೋವನಿಗೆ ಸುಗಂಧಹೋಮದ ರೂಪವಾಗಿ ಅರ್ಪಿಸಿದ ಆಹಾರವಾಗಿರುವುದು. ಯಜ್ಞಪಶುಗಳ ಕೊಬ್ಬೆಲ್ಲವೂ ಯೆಹೋವನದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಯಾಜಕನು ಅದನ್ನು ಬಲಿಪೀಠದ ಮೇಲೆ ಹೋಮಮಾಡಬೇಕು. ಅದು ಸುಗಂಧಹೋಮ ರೂಪವಾಗಿ ಸರ್ವೇಶ್ವರನಿಗೆ ಆಹಾರವಾಗಿರುವುದು. ಬಲಿಪ್ರಾಣಿಗಳ ಕೊಬ್ಬೆಲ್ಲವು ಸರ್ವೇಶ್ವರನದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಯಾಜಕನು ಅದನ್ನು ಯಜ್ಞವೇದಿಯ ಮೇಲೆ ಹೋಮ ಮಾಡಬೇಕು. ಅದು ಸುಗಂಧ ಹೋಮರೂಪವಾಗಿ ಯೆಹೋವನಿಗೆ ಆಹಾರವಾಗಿರುವದು. ಯಜ್ಞಪಶುಗಳ ಕೊಬ್ಬೆಲ್ಲವೂ ಯೆಹೋವನದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಬಳಿಕ ಯಾಜಕನು ಅವುಗಳನ್ನು ವೇದಿಕೆಯ ಮೇಲೆ ಹೋಮಮಾಡಬೇಕು. ಇದು ಆಹಾರದ ರೂಪದಲ್ಲಿ ಯೆಹೋವನಿಗೆ ಅರ್ಪಿಸಿದ ಸುವಾಸನೆಯನ್ನು ಉಂಟುಮಾಡುವ ಸಮಾಧಾನಯಜ್ಞವಾಗಿರುತ್ತದೆ. ಆದರೆ ಅದರ ಕೊಬ್ಬು ಯೆಹೋವನಿಗೆ ಸೇರಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಯಾಜಕನು ಅವುಗಳನ್ನು ಬಲಿಪೀಠದ ಮೇಲೆ ಸುಡಬೇಕು. ಅದು ಬೆಂಕಿಯಿಂದ ಮಾಡಿದ ಸುವಾಸನೆಯ ಯಜ್ಞಾರ್ಪಣೆಯ ಆಹಾರವಾಗಿರುವುದು. ಎಲ್ಲಾ ಕೊಬ್ಬು ಯೆಹೋವ ದೇವರದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 3:16
19 ತಿಳಿವುಗಳ ಹೋಲಿಕೆ  

ಯೇಸು ಅವನಿಗೆ, “‘ನಿನ್ನ ದೇವರಾಗಿರುವ ಕರ್ತನನ್ನು ನಿನ್ನ ಪೂರ್ಣಹೃದಯದಿಂದಲೂ ನಿನ್ನ ಪೂರ್ಣಪ್ರಾಣದಿಂದಲೂ ನಿನ್ನ ಪೂರ್ಣಮನಸ್ಸಿನಿಂದಲೂ ಪ್ರೀತಿಸಬೇಕು’


ಅವನನ್ನು ಜಜ್ಜುವುದು ಯೆಹೋವನ ಸಂಕಲ್ಪವಾಗಿತ್ತು. ಆತನು ಅವನನ್ನು ವ್ಯಾಧಿಯಿಂದ ಬಾಧಿಸಿ ಹೀಗೆಂದುಕೊಂಡನು, ಇವನು ತನ್ನ ಆತ್ಮವನ್ನು ಪ್ರಾಯಶ್ಚಿತ್ತಯಜ್ಞಕ್ಕಾಗಿ ಒಪ್ಪಿಸಿದ ಮೇಲೆ ತನ್ನ ಸಂತಾನವನ್ನು ನೋಡುವನು, ಚಿರಂಜೀವಿಯಾಗುವನು, ನನ್ನ ಸಂಕಲ್ಪವು ಇವನ ಕೈಯಿಂದ ನೆರವೇರುವುದು;


ಸೊಲೊಮೋನನು ಯೆಹೋವನ ಆಲಯದ ಮುಂದಿನ ಪ್ರಾಕಾರದ ಮಧ್ಯಸ್ಥಳವನ್ನು ಪ್ರತಿಷ್ಠೆ ಮಾಡಿದನು. ಸೊಲೊಮೋನನು ಮಾಡಿಸಿದ ತಾಮ್ರದ ಯಜ್ಞವೇದಿಯ ಮೇಲೆ ಸರ್ವಾಂಗಹೋಮವನ್ನೂ, ಸಮಾಧಾನ ಯಜ್ಞದ ಕೊಬ್ಬನ್ನೂ ಇಡುವುದಕ್ಕೆ ಸ್ಥಳ ಸಾಲದೆ ಇದ್ದುದರಿಂದ, ಅಲ್ಲಿ ಅವನು ಸರ್ವಾಂಗಹೋಮವನ್ನೂ, ಧಾನ್ಯನೈವೇದ್ಯಗಳನ್ನೂ, ಸಮಾಧಾನ ಯಜ್ಞದ ಕೊಬ್ಬಿನ ಕಾಣಿಕೆಯನ್ನು ಸಮರ್ಪಿಸಿದನು.


ಯಾಜಕನು ಅವುಗಳ ರಕ್ತವನ್ನು ದೇವದರ್ಶನದ ಗುಡಾರದ ಬಾಗಿಲಿನ ಮುಂದಿರುವ ಯಜ್ಞವೇದಿಗೆ ಎರಚಿ, ಅವುಗಳ ಕೊಬ್ಬನ್ನು ಹೋಮಮಾಡಿ ಯೆಹೋವನಿಗೆ ಪರಿಮಳವನ್ನು ಉಂಟುಮಾಡಬೇಕು.


ಯೆಹೋವನ ಸನ್ನಿಧಿಯಿಂದ ಬೆಂಕಿಯು ಹೊರಟು ಯಜ್ಞವೇದಿಯ ಮೇಲಿದ್ದ ಸರ್ವಾಂಗಹೋಮದ್ರವ್ಯವನ್ನು ಮತ್ತು ಕೊಬ್ಬನ್ನು ದಹಿಸಿಬಿಟ್ಟಿತು. ಜನರೆಲ್ಲರೂ ಅದನ್ನು ಕಂಡು ಉತ್ಸಾಹದಿಂದ ಆರ್ಭಟಿಸಿ, ಅಡ್ಡಬಿದ್ದು ನಮಸ್ಕರಿಸಿದರು.


ಅವನು ಆ ಟಗರಿನ ಕೊಬ್ಬನ್ನು ಅಂದರೆ ಬಾಲದ ಕೊಬ್ಬು, ಕರುಳುಗಳ ಮೇಲಣ ಎಲ್ಲಾ ಕೊಬ್ಬು, ಕಳಿಜದ ಹತ್ತಿರವಿರುವ ಕೊಬ್ಬು, ಎರಡು ಮೂತ್ರಪಿಂಡಗಳು, ಅವುಗಳ ಮೇಲಿದ್ದ ಕೊಬ್ಬನ್ನು ಮತ್ತು ಬಲತೊಡೆಯನ್ನು,


ಸಮಾಧಾನ ಯಜ್ಞಪಶುಗಳ ಕೊಬ್ಬನ್ನು ಪ್ರತ್ಯೇಕಿಸುವ ಪ್ರಕಾರ ಯಾಜಕನು ಇದರ ಎಲ್ಲಾ ಕೊಬ್ಬನ್ನು ಪ್ರತ್ಯೇಕಿಸಿ ಯೆಹೋವನಿಗೆ ಪರಿಮಳವನ್ನು ಉಂಟುಮಾಡುವುದಕ್ಕೆ ಯಜ್ಞವೇದಿಯ ಮೇಲೆ ಹೋಮಮಾಡಬೇಕು. ಹೀಗೆ ಯಾಜಕನು ಅವನಿಗೋಸ್ಕರ ದೋಷಪರಿಹಾರವನ್ನು ಮಾಡುವುದರಿಂದ ಅವನಿಗೆ ಕ್ಷಮಾಪಣೆಯಾಗುವುದು.


ಸಮಾಧಾನಯಜ್ಞದ ಪಶುವಿನ ಕೊಬ್ಬನ್ನು ಅವನು ಹೋಮಮಾಡುವ ಪ್ರಕಾರವೇ ಇದರ ಎಲ್ಲಾ ಕೊಬ್ಬನ್ನು ಹೋಮಮಾಡಬೇಕು. ಹೀಗೆ ಯಾಜಕನು ಅವನಿಗೋಸ್ಕರ ದೋಷಪರಿಹಾರವನ್ನು ಮಾಡುವುದರಿಂದ ಅವನಿಗೆ ಕ್ಷಮಾಪಣೆಯಾಗುವುದು.


ಪ್ರತಿಷ್ಠೆಗಾಗಿ ಸಮರ್ಪಿಸಲ್ಪಟ್ಟ ಟಗರಾಗಿರುವುದರಿಂದ ಅದರ ಕೊಬ್ಬನ್ನೆಲ್ಲಾ ಅಂದರೆ ಬಾಲದ ಕೊಬ್ಬನ್ನು, ವಪೆಯನ್ನು, ಪಿತ್ತಕೋಶದ ಮೇಲಿರುವ ಕೊಬ್ಬನ್ನು, ಎರಡು ಮೂತ್ರಕೋಶಗಳನ್ನು ಅವುಗಳ ಮೇಲಿರುವ ಕೊಬ್ಬನ್ನು ಹಾಗೂ ಬಲತೊಡೆಯನ್ನು,


ಅದರ ಪಿತ್ತಕೋಶದ ಮೇಲಿರುವ ಕೊಬ್ಬನ್ನೂ ಎರಡು ಮೂತ್ರಕೋಶಗಳನ್ನೂ ಅವುಗಳ ಮೇಲಿರುವ ಕೊಬ್ಬನ್ನೂ ತೆಗೆದುಕೊಂಡು ಯಜ್ಞವೇದಿಯ ಮೇಲೆ ಹೋಮ ಮಾಡಬೇಕು.


ಇದಲ್ಲದೆ ಯಾಜಕರೂ ಯೆಹೋವನಿಗೆ ಸಮರ್ಪಿಸಬೇಕಾಗಿದ್ದ ಸರ್ವಾಂಗಹೋಮ, ಸಮಾಧಾನ ಯಜ್ಞಗಳ ಕೊಬ್ಬು ಹಾಗು ಸರ್ವಾಂಗಹೋಮ ಸಂಬಂಧವಾದ ಪಾನದ್ರವ್ಯ ಇವು ಅಪಾರವಾಗಿದ್ದವು.


“‘ಆದರೆ ಇಸ್ರಾಯೇಲರು ನನ್ನನ್ನು ತೊರೆದಾಗ, ಲೇವಿಯರೂ, ಚಾದೋಕನ ಸಂತಾನದವರೂ ಆದ ಯಾಜಕರು ನನ್ನ ಪವಿತ್ರಾಲಯದ ಪಾರುಪತ್ಯವನ್ನು ನೆರವೇರಿಸಿದ್ದರಿಂದ ಅವರು ನನ್ನನ್ನು ಸೇವಿಸಲು ನನ್ನ ಸನ್ನಿಧಿಗೆ ಸೇರುವರು, ನನಗೆ ಕೊಬ್ಬನ್ನೂ, ರಕ್ತವನ್ನೂ ಅರ್ಪಿಸಲು ನನ್ನ ಸಮ್ಮುಖದಲ್ಲಿ ನಿಂತುಕೊಳ್ಳುವರು’ ಇದು ಕರ್ತನಾದ ಯೆಹೋವನ ನುಡಿ.


ಹೇಬೆಲನು ಹಾಗೆಯೇ ತನ್ನ ಹಿಂಡಿನಿಂದ ಚೊಚ್ಚಲ ಕುರಿಗಳನ್ನು ಕಾಣಿಕೆಯಾಗಿ ತಂದು ಅವುಗಳ ಕೊಬ್ಬನ್ನು ಹೋಮ ಮಾಡಿದನು, ಯೆಹೋವನು ಹೇಬೆಲನನ್ನೂ ಅವನ ಕಾಣಿಕೆಯನ್ನು ಮೆಚ್ಚಿಕೊಂಡನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು