Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 3:17 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಕೊಬ್ಬನ್ನಾಗಲಿ ಅಥವಾ ರಕ್ತವನ್ನಾಗಲಿ ತಿನ್ನಬಾರದೆಂಬುದು ನಿಮಗೂ ಮತ್ತು ನಿಮ್ಮ ಸಂತತಿಯವರಿಗೂ ನೀವು ವಾಸಿಸುವ ಎಲ್ಲಾ ಸ್ಥಳಗಳಲ್ಲಿಯೂ ಶಾಶ್ವತವಾದ ನಿಯಮವಾಗಿದೆ’” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಕೊಬ್ಬನ್ನಾಗಲಿ, ರಕ್ತವನ್ನಾಗಲಿ ತಿನ್ನಕೂಡದೆಂಬುದು ನಿಮಗೂ ನಿಮ್ಮ ಸಂತತಿಯವರಿಗೂ ನೀವು ವಾಸಿಸುವ ಎಲ್ಲ ಸ್ಥಳಗಳಲ್ಲಿಯೂ ಶಾಶ್ವತ ನಿಯಮವಾಗಿದೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಕೊಬ್ಬನ್ನಾಗಲಿ ರಕ್ತವನ್ನಾಗಲಿ ತಿನ್ನಕೂಡದೆಂಬದು ನಿಮಗೂ ನಿಮ್ಮ ಸಂತತಿಯವರಿಗೂ ನೀವು ವಾಸಿಸುವ ಎಲ್ಲಾ ಸ್ಥಳಗಳಲ್ಲಿಯೂ ಶಾಶ್ವತ ನಿಯಮ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ನಿಮ್ಮ ಎಲ್ಲಾ ಸಂತತಿಗಳವರಿಗೆ ಈ ನಿಯಮವು ಶಾಶ್ವತವಾದದ್ದು. ನೀವೆಲ್ಲೇ ವಾಸಿಸಿದರೂ ಕೊಬ್ಬನ್ನಾಗಲಿ ರಕ್ತವನ್ನಾಗಲಿ ಎಂದಿಗೂ ತಿನ್ನಬಾರದು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 “ ‘ನೀವು ಕೊಬ್ಬನ್ನಾಗಲಿ, ರಕ್ತವನ್ನಾಗಲಿ ತಿನ್ನದೆ ಇರುವುದು ನಿಮ್ಮ ಸಂತತಿಯವರಿಗೆಲ್ಲಾ ನಿಮ್ಮ ಎಲ್ಲಾ ನಿವಾಸಗಳಲ್ಲಿ ನಿರಂತರವಾದ ಕಟ್ಟಳೆಯಾಗಿರುವುದು,’ ” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 3:17
42 ತಿಳಿವುಗಳ ಹೋಲಿಕೆ  

ಆದರೆ ಮಾಂಸವನ್ನು ಅದರ ಜೀವಸತ್ವವಾದ ರಕ್ತದೊಂದಿಗೆ ನೀವು ತಿನ್ನಬಾರದು. ಏಕೆಂದರೆ ರಕ್ತದಲ್ಲಿ ಜೀವ ಇದೆ.


ಇದು ಬಹು ಜನರ ಪಾಪಗಳ ಕ್ಷಮಾಪಣೆಗಾಗಿ ಸುರಿಸಲ್ಪಡುವ ಹೊಸ ಒಡಂಬಡಿಕೆಯ ರಕ್ತ.


ನೀವು ರಕ್ತವನ್ನು ಮಾತ್ರ ಊಟಮಾಡಬಾರದು; ಅದನ್ನು ನೀರಿನಂತೆ ಭೂಮಿಯ ಮೇಲೆ ಸುರಿದುಬಿಡಬೇಕು.


ಆದರೆ ರಕ್ತವು ಜೀವಾಧಾರವಾದ್ದರಿಂದ ಮಾಂಸದೊಡನೆ ರಕ್ತವನ್ನು ತಿನ್ನಲೇ ಕೂಡದೆಂಬುದನ್ನು ಜ್ಞಾಪಕದಲ್ಲಿಡಿರಿ. ಪಶುಮಾಂಸದೊಡನೆ ಅದರ ಜೀವಾಧಾರವಾದದ್ದನ್ನೂ ತಿನ್ನಬಾರದಷ್ಟೆ.


“ನೀನು ಇಸ್ರಾಯೇಲರಿಗೆ ಹೀಗೆ ಆಜ್ಞಾಪಿಸು, ‘ನೀವು ಎತ್ತು, ಕುರಿ ಮತ್ತು ಆಡುಗಳ ಕೊಬ್ಬನ್ನು ತಿನ್ನಬಾರದು.


ರಕ್ತವನ್ನು ಮಾತ್ರ ತಿನ್ನಬಾರದು; ಅದನ್ನು ನೀರಿನಂತೆ ಭೂಮಿಯ ಮೇಲೆ ಸುರಿದುಬಿಡಬೇಕು.


ಅವರು ಇದುವರೆಗೆ ಪೂಜಿಸುತ್ತಿದ್ದ ಅಜದೇವತೆಗಳಿಗೆ ಇನ್ನು ಮುಂದೆ ಬಲಿಕೊಟ್ಟು ದೇವದ್ರೋಹಿಗಳಾಗಬಾರದು. ಅವರಿಗೂ ಮತ್ತು ಅವರ ಸಂತತಿಯವರಿಗೂ ಇದು ಶಾಶ್ವತನಿಯಮ.’


ಆರೋನನ ವಂಶದವರಾದ ಗಂಡಸರೆಲ್ಲರೂ ಅದನ್ನು ತಿನ್ನಬಹುದು. ಯೆಹೋವನಿಗೆ ಹೋಮವಾಗಿ ಅರ್ಪಿತವಾದ ದ್ರವ್ಯಗಳಲ್ಲಿ ಅದು ನಿಮಗೂ ಮತ್ತು ನಿಮ್ಮ ಸಂತತಿಯವರಿಗೂ ಸಲ್ಲತಕ್ಕದ್ದೆಂಬುದು ಶಾಶ್ವತನಿಯಮ. ಆ ದ್ರವ್ಯಗಳಿಗೆ ತಗಲಿದ್ದೆಲ್ಲಾ ಪರಿಶುದ್ಧವಾಗುವುದು’” ಎಂದು ಹೇಳಿದನು.


ಯಾಜಕನು ಅದನ್ನು ಯಜ್ಞವೇದಿಯ ಮೇಲೆ ಹೋಮಮಾಡಬೇಕು. ಅದು ಯೆಹೋವನಿಗೆ ಸುಗಂಧಹೋಮದ ರೂಪವಾಗಿ ಅರ್ಪಿಸಿದ ಆಹಾರವಾಗಿರುವುದು. ಯಜ್ಞಪಶುಗಳ ಕೊಬ್ಬೆಲ್ಲವೂ ಯೆಹೋವನದು.


ಆತನು ಅದನ್ನು ಪಾವನಗೊಳಿಸುವುದಕ್ಕಾಗಿ ತನ್ನನ್ನು ತಾನೇ ಒಪ್ಪಿಸಿಕೊಟ್ಟನು.


ಯೇಸುಕ್ರಿಸ್ತನು ನಮಗೋಸ್ಕರ ಸುರಿಸಿದ ರಕ್ತದ ಮೂಲಕ ನಮಗೆ ಆತನ ಕೃಪೆಯ ಐಶ್ವರ್ಯಕ್ಕನುಸಾರವಾಗಿ ಪಾಪ ಕ್ಷಮಾಪಣೆಯೆಂಬ ವಿಮೋಚನೆಯು ಉಂಟಾಯಿತು.


ಇದಕ್ಕಿಂತ ಹೆಚ್ಚಿನ ಹೊರೆಯನ್ನು ನಿಮ್ಮ ಮೇಲೆ ಹೊರಿಸಬಾರದೆಂದು ಪವಿತ್ರಾತ್ಮನಿಗೂ ನಮಗೂ ಹಿತವಾಗಿ ತೋರಿತು; ನೀವು ಎಚ್ಚರವಾಗಿದ್ದು ಇವುಗಳ ಗೊಡವೆಗೆ ಹೋಗದಿದ್ದರೆ ನಿಮಗೆ ಒಳ್ಳೆಯದಾಗುವುದು. ಶುಭವಾಗಲಿ.”


“‘ಆದರೆ ಇಸ್ರಾಯೇಲರು ನನ್ನನ್ನು ತೊರೆದಾಗ, ಲೇವಿಯರೂ, ಚಾದೋಕನ ಸಂತಾನದವರೂ ಆದ ಯಾಜಕರು ನನ್ನ ಪವಿತ್ರಾಲಯದ ಪಾರುಪತ್ಯವನ್ನು ನೆರವೇರಿಸಿದ್ದರಿಂದ ಅವರು ನನ್ನನ್ನು ಸೇವಿಸಲು ನನ್ನ ಸನ್ನಿಧಿಗೆ ಸೇರುವರು, ನನಗೆ ಕೊಬ್ಬನ್ನೂ, ರಕ್ತವನ್ನೂ ಅರ್ಪಿಸಲು ನನ್ನ ಸಮ್ಮುಖದಲ್ಲಿ ನಿಂತುಕೊಳ್ಳುವರು’ ಇದು ಕರ್ತನಾದ ಯೆಹೋವನ ನುಡಿ.


ಆದುದರಿಂದ ನೀನು ಅವರಿಗೆ ಹೀಗೆ ನುಡಿ, ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ರಕ್ತದಿಂದ ಕೂಡಿದ ಮಾಂಸವನ್ನು ತಿನ್ನುತ್ತೀರಲ್ಲವೇ? ವಿಗ್ರಹಗಳ ಕಡೆಗೆ ನಿಮ್ಮ ಕಣ್ಣೆತ್ತಿ ನೋಡುತ್ತೀರಿ ಜನರ ರಕ್ತವನ್ನು ಚೆಲ್ಲುತ್ತೀರಿ; ನಿಮ್ಮಂಥವರು ದೇಶವನ್ನು ಸ್ವಾಧೀನಪಡಿಸಿಕೊಳ್ಳಬಹುದೋ?


ಆಹಾರಕ್ಕಾಗಿ ಆಕಳಿನ ಮೊಸರು, ಆಡು ಕುರಿಗಳ ಹಾಲು, ಕೊಬ್ಬಿದ ಕುರಿ ಟಗರುಗಳ ಮಾಂಸವು, ಬಾಷಾನ್ ಸೀಮೆಯ ಉತ್ತಮಪಶುಗಳು, ಹೋತಗಳು, ಶ್ರೇಷ್ಠವಾದ ಗೋದಿ ಇವುಗಳನ್ನೂ ಮತ್ತು ಪಾನಕ್ಕಾಗಿ ದ್ರಾಕ್ಷಿಯರಸವನ್ನೂ ಕೊಟ್ಟದ್ದೂ; ಇದನ್ನೆಲ್ಲಾ ನೆನಪಿಗೆ ತಂದುಕೊಳ್ಳಿರಿ.”


ನೀವು ನಿಮ್ಮ ದೇವರಿಗೆ ಸಲ್ಲಿಸಬೇಕಾದದ್ದನ್ನು ತಂದು ಕೊಡುವವರೆಗೂ ಆ ವರ್ಷದ ಬೆಳೆಯ ರೊಟ್ಟಿಯನ್ನಾಗಲಿ, ಸುಟ್ಟ ತೆನೆಗಳನ್ನಾಗಲಿ ಅಥವಾ ಹಸಿತೆನೆಗಳನ್ನಾಗಲಿ ತಿನ್ನಲೇಬಾರದು. ನಿಮಗೂ, ನಿಮ್ಮ ಸಂತತಿಯವರಿಗೂ ಮತ್ತು ನಿಮ್ಮ ಎಲ್ಲಾ ವಾಸಸ್ಥಾನಗಳಲ್ಲಿಯೂ ಇದು ಶಾಶ್ವತನಿಯಮ.


ಇಸ್ರಾಯೇಲರು ಇವುಗಳನ್ನು ಯಾಜಕರಿಗೆ ಸಲ್ಲಿಸಬೇಕೆಂದು ಯೆಹೋವನು ಮೋಶೆಯ ಮುಖಾಂತರ ಕೈಯಿಂದ ಅವರನ್ನು ಪ್ರತಿಷ್ಠಿಸಿ ಅಭಿಷೇಕಿಸಿದ ದಿನದಲ್ಲೇ ನೇಮಿಸಿದನು.


ದೇವರು ಉಂಟುಮಾಡಿದ್ದೆಲ್ಲವೂ ಒಳ್ಳೆಯದೇ, ನಾವು ಕೃತಜ್ಞತಾಸ್ತುತಿಮಾಡಿ ತೆಗೆದುಕೊಳ್ಳುವ ಯಾವ ಆಹಾರವನ್ನು ತಿರಸ್ಕರಿಸಬೇಕಾಗಿಲ್ಲ.


ಅನಂತರ ಯೇಸು ತನ್ನ ಶಿಷ್ಯರಿಗೆ ಹೇಳಿದ್ದೇನೆಂದರೆ “ಯಾವನಾದರೂ ನನ್ನನ್ನು ಹಿಂಬಾಲಿಸುವುದಕ್ಕೆ ಬಯಸಿದರೆ ಅವನು ತನ್ನನ್ನು ನಿರಾಕರಿಸಿ ತನ್ನ ಶಿಲುಬೆಯನ್ನು ಹೊತ್ತುಕೊಂಡು ನನ್ನನ್ನು ಹಿಂಬಾಲಿಸಲಿ.


‘ಇಸ್ರಾಯೇಲ್ ವಂಶದವರೇ, ನೀವು ನನ್ನ ರೊಟ್ಟಿಯನ್ನೂ, ಕೊಬ್ಬನ್ನೂ, ರಕ್ತವನ್ನೂ ಅರ್ಪಿಸುವಾಗ, ಹೃದಯದಲ್ಲಿಯೂ, ಶರೀರದಲ್ಲಿಯೂ ಸುನ್ನತಿಹೀನರಾದ ಮ್ಲೇಚ್ಛರನ್ನು ನನ್ನ ಪವಿತ್ರಾಲಯದೊಳಗೆ ಬರಮಾಡಿ, ನನ್ನ ಮಂದಿರವನ್ನು ಅಪವಿತ್ರಗೊಳಿಸಿ, ನನ್ನ ಒಡಂಬಡಿಕೆಯನ್ನು ಭಂಗಪಡಿಸಿ, ನಿಮ್ಮ ದುರಾಚಾರಗಳ ಲೆಕ್ಕವನ್ನು ಹೆಚ್ಚಿಸಿದ್ದೀರಿ.


ಇದಲ್ಲದೆ ನೆಹೆಮೀಯನು ಅವರಿಗೆ, “ಹೋಗಿ, ಮೃಷ್ಟಾನ್ನವನ್ನೂ, ಮಧುರಪಾನವನ್ನೂ ತೆಗೆದುಕೊಳ್ಳಿರಿ, ತಮಗೋಸ್ಕರ ಏನೂ ಸಿದ್ಧಮಾಡದವರಿಗೆ ಪಾಲನ್ನು ಕಳುಹಿಸಿರಿ. ಈ ದಿನ ನಮ್ಮ ಕರ್ತನಿಗೆ ಪರಿಶುದ್ಧ ದಿನವಾಗಿರುವುದರಿಂದ ದುಃಖಪಡಬೇಡಿರಿ; ಯೆಹೋವನ ಆನಂದವೇ ನಿಮ್ಮ ಬಲವಾಗಿದೆ” ಎಂದನು.


“ಇದು ಇಸ್ರಾಯೇಲರಿಗೆ ಶಾಶ್ವತ ನಿಯಮವಾಗಿರುವುದು. ಶುದ್ಧೀಕರಣದ ಆ ನೀರನ್ನು ಚಿಮಿಕಿಸಿದವನು ತನ್ನ ಬಟ್ಟೆಗಳನ್ನು ಒಗೆದುಕೊಳ್ಳಬೇಕು ಮತ್ತು ಆ ನೀರು ಯಾರಿಗೆ ಸೋಂಕುವುದೋ ಅವನು ಆ ದಿನದ ಸಾಯಂಕಾಲದವರೆಗೆ ಅಶುದ್ಧನಾಗಿರಬೇಕು.


ಇಸ್ರಾಯೇಲರ ಎಲ್ಲಾ ದೋಷಗಳನ್ನು ನಿವಾರಣೆಮಾಡುವುದಕ್ಕಾಗಿ ಅವರಿಗೋಸ್ಕರ ವರ್ಷಕ್ಕೆ ಒಂದಾವರ್ತಿ ದೋಷಪರಿಹಾರವನ್ನು ಮಾಡಬೇಕೆಂಬುದೇ ನಿಮಗೆ ಶಾಶ್ವತನಿಯಮ” ಎಂದು ಹೇಳಿದನು. ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆಯೇ ಆರೋನನು ಮಾಡಿದನು.


ದೇವದರ್ಶನ ಗುಡಾರದಲ್ಲಿ ಆಜ್ಞಾಶಾಸನಗಳ ಮಂಜೂಷದ ಮುಂದಿರುವ ಪರದೆಯ ಹೊರಗೆ ಆರೋನನೂ, ಅವನ ಮಕ್ಕಳೂ ಅದನ್ನು ಸಾಯಂಕಾಲದಿಂದ ಉದಯದವರೆಗೆ ಯೆಹೋವನ ಸನ್ನಿಧಿಯಲ್ಲಿ ಆ ದೀಪವು ಉರಿಯುತ್ತಿರುವಂತೆ ಸರಿಪಡಿಸುತ್ತಿರಬೇಕು. ಇಸ್ರಾಯೇಲ್ಯರು ಅವರ ಸಂತತಿಯವರು ಈ ನಿಯಮವನ್ನು ತಲತಲಾಂತರದವರೆಗೆ ಶಾಶ್ವತವಾಗಿ ಅನುಸರಿಸಬೇಕು. ಅದು ಅವರಿಗೆ ನಿತ್ಯ ನಿಯಮವಾಗಿರಬೇಕು.


ಯೆಹೋವನು ಮೋಶೆಗೆ ಇಂತೆಂದನು,


ಆರೋನನ ಸಂತತಿಯವರಲ್ಲಿ ಯಾವನು ಅವನ ತರುವಾಯ ಅಭಿಷಿಕ್ತನಾದ ಯಾಜಕನ ಪಟ್ಟಕ್ಕೆ ಬರುವನೋ ಅವನೇ ಅದನ್ನು ಸಮರ್ಪಿಸಬೇಕು; ಇದು ಶಾಶ್ವತನಿಯಮ. ಅದನ್ನು ಯೆಹೋವನಿಗೆ ಸಂಪೂರ್ಣವಾಗಿ ಹೋಮಮಾಡಬೇಕು.


ಇಸ್ರಾಯೇಲರು ಸಮಾಧಾನಯಜ್ಞಪಶುವಿನ ಮಾಂಸದಲ್ಲಿ ನೈವೇದ್ಯರೂಪವಾಗಿ ನಿವಾಳಿಸುವ ಎದೆಯ ಭಾಗವನ್ನು ಮತ್ತು ಯಾಜಕನಿಗೋಸ್ಕರ ಪ್ರತ್ಯೇಕಿಸುವ ತೊಡೆಯನ್ನು ನಾನು ತೆಗೆದುಕೊಂಡು ಮಹಾಯಾಜಕನಾದ ಆರೋನನಿಗೂ ಹಾಗು ಅವನ ವಂಶದವರಿಗೂ ಕೊಟ್ಟು ಇವು ಇಸ್ರಾಯೇಲರಿಂದ ಯಾಜಕರಿಗೆ ಯಾವಾಗಲೂ ಸಲ್ಲಬೇಕೆಂದು ಶಾಶ್ವತವಾದ ನಿಯಮವನ್ನು ಮಾಡಿದ್ದೇನೆ’” ಎಂದು ಹೇಳಿದನು.


“ನೀನೂ ಹಾಗು ನಿನ್ನ ಮಕ್ಕಳೂ ದ್ರಾಕ್ಷಾರಸವನ್ನಾಗಲಿ ಅಥವಾ ಮದ್ಯವನ್ನಾಗಲಿ ಕುಡಿದು ದೇವದರ್ಶನದ ಗುಡಾರದೊಳಗೆ ಬರಬಾರದು; ಹಾಗೆ ಬಂದರೆ ಸಾಯುವಿರಿ. ಇದು ನಿನಗೂ ಮತ್ತು ನಿನ್ನ ಸಂತತಿಯವರೆಲ್ಲರಿಗೂ ಶಾಶ್ವತನಿಯಮ.


ಜನರು ಹೋಮಕ್ಕಾಗಿ ಕೊಬ್ಬನ್ನು ತಂದು ಸಮರ್ಪಿಸುವಾಗೆಲ್ಲಾ ಯಾಜಕರಿಗೋಸ್ಕರ ಪ್ರತ್ಯೇಕಿಸಬೇಕಾದ ಆ ತೊಡೆಯನ್ನು ನೈವೇದ್ಯವಾಗಿ ನಿವಾಳಿಸಬೇಕಾದ ಆ ಎದೆಯ ಭಾಗವನ್ನು ಯೆಹೋವನ ಸನ್ನಿಧಿಯಲ್ಲಿ ತರಬೇಕು. ಯೆಹೋವನು ಆಜ್ಞಾಪಿಸಿದಂತೆ ಅವು ನಿನಗೂ ಮತ್ತು ನಿನ್ನ ವಂಶದವರಿಗೂ ಸಲ್ಲತಕ್ಕದ್ದು; ಇದು ಶಾಶ್ವತನಿಯಮ” ಎಂದು ಹೇಳಿದನು.


“ಸ್ವದೇಶಸ್ಥರಾದ ನೀವೂ ಮತ್ತು ನಿಮ್ಮಲ್ಲಿ ವಾಸವಾಗಿರುವ ಅನ್ಯದೇಶದವರು, ಎಲ್ಲರೂ ಏಳನೆಯ ತಿಂಗಳಿನ ಹತ್ತನೆಯ ದಿನದಲ್ಲಿ ಸಕಲ ವಿಧವಾದ ಕೆಲಸಗಳನ್ನು ಬಿಟ್ಟು ಉಪವಾಸಮಾಡಿ ನಿಮ್ಮ ಆತ್ಮಗಳನ್ನು ಕುಂದಿಸಿಕೊಳ್ಳಬೇಕು. ಇದು ನಿಮಗೆ ಶಾಶ್ವತವಾದ ನಿಯಮ.


ಆ ದಿನದಲ್ಲಿ ದೇವಾರಾಧನೆಗಾಗಿ ಸಭೆಸೇರಬೇಕೆಂಬುದಾಗಿ ಪ್ರಕಟಪಡಿಸಬೇಕು. ಆ ದಿನದಲ್ಲಿ ಯಾವ ಉದ್ಯೋಗವನ್ನು ನಡೆಸಬಾರದು. ಇದು ನಿಮಗೂ, ನಿಮ್ಮ ಸಂತತಿಯವರಿಗೂ ಮತ್ತು ನಿಮ್ಮ ಎಲ್ಲಾ ನಿವಾಸಗಳಲ್ಲಿ ಶಾಶ್ವತನಿಯಮ.


ದೇವದರ್ಶನದ ಗುಡಾರದಲ್ಲಿ ಆಜ್ಞಾಶಾಸನಗಳ ಮಂಜೂಷದ ಪೆಟ್ಟಿಗೆಯ ಮುಂದಣ ತೆರೆಯ ಹೊರಗೆ, ಆ ದೀಪಗಳು ಯೆಹೋವನ ಸನ್ನಿಧಿಯಲ್ಲಿ ಸಾಯಂಕಾಲದಿಂದ ಬೆಳಗಿನ ಜಾವದ ವರೆಗೂ ಉರಿಯುತ್ತಿರುವಂತೆ ಆರೋನನು ಅವುಗಳನ್ನು ಸರಿಪಡಿಸಬೇಕು. ಇದು ನಿಮಗೂ ಮತ್ತು ನಿಮ್ಮ ಸಂತತಿಯವರಿಗೂ ಶಾಶ್ವತನಿಯಮ.


ಆರೋನನೂ, ಅವನ ಮಕ್ಕಳೂ ದೇವದರ್ಶನ ಗುಡಾರದೊಳಗೆ ಹೋಗುವಾಗಲೂ, ಪವಿತ್ರಸ್ಥಾನದಲ್ಲಿ ಸೇವೆಮಾಡುವುದಕ್ಕೆ ಯಜ್ಞವೇದಿಯ ಹತ್ತಿರಕ್ಕೆ ಬರುವಾಗಲೂ ಇವುಗಳನ್ನು ಧರಿಸಿಕೊಂಡಿರಬೇಕು. ಇಲ್ಲವಾದರೆ ಅವರು ಆ ಅಪರಾಧದ ಫಲವನ್ನು ಅನುಭವಿಸಿ ಸತ್ತಾರು. ಅವನಿಗೂ ಅವನ ವಂಶಸ್ಥರಿಗೂ ಇದು ಶಾಶ್ವತವಾದ ನಿಯಮವಾಗಿದೆ.


ಅವರಲ್ಲಿ ಒಬ್ಬನು ನೈವೇದ್ಯವಾದದ್ದನ್ನು ಸೂಚಿಸುವುದಕ್ಕಾಗಿ ಎಣ್ಣೆ ಹೊಯ್ದ ಹಿಟ್ಟಿನಲ್ಲಿ ಒಂದು ಹಿಡಿಯನ್ನು ಮತ್ತು ಅದರ ಮೇಲಿರುವ ಧೂಪವೆಲ್ಲವನ್ನು ತೆಗೆದುಕೊಂಡು ಯಜ್ಞವೇದಿಯ ಮೇಲೆ ಹೋಮಮಾಡಿ ಯೆಹೋವನಿಗೆ ಪರಿಮಳವನ್ನು ಉಂಟುಮಾಡಬೇಕು.


“‘ರಕ್ತಸಹಿತವಾದ ಯಾವ ಮಾಂಸವನ್ನು ತಿನ್ನಬಾರದು. “‘ಯಂತ್ರಮಂತ್ರಗಳನ್ನು ಮಾಡಬಾರದು, ಶಕುನಗಳನ್ನು ನೋಡಬಾರದು.


ಅವು ಆರೋನನಿಗೂ ಮತ್ತು ಅವನ ಸಂತತಿಯವರಿಗೂ ಸಲ್ಲಬೇಕು. ಮಹಾಪರಿಶುದ್ಧವಾದ ಅವುಗಳನ್ನು ದೇವಸ್ಥಾನದ ಪ್ರಾಕಾರದಲ್ಲಿಯೇ ತಿನ್ನಬೇಕು. ಅವು ಯೆಹೋವನಿಗೆ ಸಮರ್ಪಿತವಾದ ಹೋಮದ್ರವ್ಯಗಳಿಗೆ ಸೇರಿದವುಗಳಾದುದರಿಂದ ಶಾಶ್ವತನಿಯಮದ ಪ್ರಕಾರ ಯಾಜಕರಿಗೇ ಸಲ್ಲಬೇಕು” ಅಂದನು.


ಅದನ್ನು ತಿನ್ನದೆ, ನೀರಿನಂತೆ ಭೂಮಿಯ ಮೇಲೆ ಸುರಿದುಬಿಡಬೇಕು.


ಇದಲ್ಲದೆ ಯಾಜಕರೂ ಯೆಹೋವನಿಗೆ ಸಮರ್ಪಿಸಬೇಕಾಗಿದ್ದ ಸರ್ವಾಂಗಹೋಮ, ಸಮಾಧಾನ ಯಜ್ಞಗಳ ಕೊಬ್ಬು ಹಾಗು ಸರ್ವಾಂಗಹೋಮ ಸಂಬಂಧವಾದ ಪಾನದ್ರವ್ಯ ಇವು ಅಪಾರವಾಗಿದ್ದವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು