Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 3:9 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಆ ಸಮಾಧಾನಯಜ್ಞದ ಪಶುವಿನ ಕೊಬ್ಬನ್ನು ಯೆಹೋವನಿಗೋಸ್ಕರ ಹೋಮವಾಗಿ ಸಮರ್ಪಿಸಬೇಕು. ಹೇಗೆಂದರೆ, ಬಾಲದ ಕೊಬ್ಬನ್ನೆಲ್ಲಾ ಬೆನ್ನೆಲುಬಿನ ಬಳಿಯಿಂದ ತೆಗೆದುಬಿಟ್ಟು ಅದನ್ನು, ಅಂಗಾಂಶದ ಕೊಬ್ಬನ್ನು, ಕರುಳುಗಳ ಮೇಲಣ ಎಲ್ಲಾ ಕೊಬ್ಬನ್ನು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಶಾಂತಿಸಮಾಧಾನಕ್ಕಾಗಿ ಅರ್ಪಿಸುವ ಆ ಬಲಿ ಪ್ರಾಣಿಯ ಕೊಬ್ಬನ್ನು ಸರ್ವೇಶ್ವರನಿಗೆ ಹೋಮವಾಗಿ ಸಮರ್ಪಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಆ ಸಮಾಧಾನಯಜ್ಞಪಶುವಿನ ಕೊಬ್ಬನ್ನು ಯೆಹೋವನಿಗೋಸ್ಕರ ಹೋಮವಾಗಿ ಸಮರ್ಪಿಸಬೇಕು. ಹೇಗಂದರೆ, ಬಾಲದ ಕೊಬ್ಬನ್ನೆಲ್ಲಾ ಬೆನ್ನೆಲುಬಿನ ಬಳಿಯಿಂದ ತೆಗೆದುಬಿಟ್ಟು ಅದನ್ನೂ ವಪೆಯನ್ನೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಅವನು ಸಮಾಧಾನಯಜ್ಞ ಪಶುವಿನ ಕೊಬ್ಬನ್ನು ಅಂದರೆ ಬಾಲದ ಮೇಲಿರುವ ಕೊಬ್ಬನ್ನು ಕರುಳುಗಳ ಮೇಲಿರುವ ಮತ್ತು ಅವುಗಳ ಸುತ್ತಲಿರುವ ಕೊಬ್ಬನ್ನೆಲ್ಲಾ ಹೋಮಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಸಮಾಧಾನದ ಬಲಿಗಾಗಿ ಅದರ ಇಡೀ ಹಿಂಭಾಗವನ್ನೂ, ಅದರ ಕೊಬ್ಬನ್ನೂ, ಅವನು ಬೆನ್ನೆಲುಬಿನಿಂದ ತೆಗೆದು ಕರುಳುಗಳನ್ನು ಮುಚ್ಚುವ ಕೊಬ್ಬನ್ನೂ, ಕರುಳುಗಳ ಮೇಲಿರುವ ಎಲ್ಲಾ ಕೊಬ್ಬನ್ನೂ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 3:9
15 ತಿಳಿವುಗಳ ಹೋಲಿಕೆ  

ಅವರು ಹೋರಿಯ ಕೊಬ್ಬನ್ನು, ಟಗರಿನ ಬಾಲದ ಕೊಬ್ಬನ್ನು, ಅಂಗಾಂಶದ ಕೊಬ್ಬನ್ನು, ಮೂತ್ರಪಿಂಡಗಳನ್ನು, ಕಳಿಜದ ಹತ್ತಿರವಿರುವ ಕೊಬ್ಬನ್ನು,


ಪ್ರತಿಷ್ಠೆಗಾಗಿ ಸಮರ್ಪಿಸಲ್ಪಟ್ಟ ಟಗರಾಗಿರುವುದರಿಂದ ಅದರ ಕೊಬ್ಬನ್ನೆಲ್ಲಾ ಅಂದರೆ ಬಾಲದ ಕೊಬ್ಬನ್ನು, ವಪೆಯನ್ನು, ಪಿತ್ತಕೋಶದ ಮೇಲಿರುವ ಕೊಬ್ಬನ್ನು, ಎರಡು ಮೂತ್ರಕೋಶಗಳನ್ನು ಅವುಗಳ ಮೇಲಿರುವ ಕೊಬ್ಬನ್ನು ಹಾಗೂ ಬಲತೊಡೆಯನ್ನು,


ಅವನನ್ನು ಜಜ್ಜುವುದು ಯೆಹೋವನ ಸಂಕಲ್ಪವಾಗಿತ್ತು. ಆತನು ಅವನನ್ನು ವ್ಯಾಧಿಯಿಂದ ಬಾಧಿಸಿ ಹೀಗೆಂದುಕೊಂಡನು, ಇವನು ತನ್ನ ಆತ್ಮವನ್ನು ಪ್ರಾಯಶ್ಚಿತ್ತಯಜ್ಞಕ್ಕಾಗಿ ಒಪ್ಪಿಸಿದ ಮೇಲೆ ತನ್ನ ಸಂತಾನವನ್ನು ನೋಡುವನು, ಚಿರಂಜೀವಿಯಾಗುವನು, ನನ್ನ ಸಂಕಲ್ಪವು ಇವನ ಕೈಯಿಂದ ನೆರವೇರುವುದು;


ಕಂದಾ, ನಿನ್ನ ಹೃದಯವನ್ನು ನನಗೆ ಕೊಡು, ನಿನ್ನ ಕಣ್ಣುಗಳು ನನ್ನ ಮಾರ್ಗಗಳಲ್ಲಿ ಆನಂದಿಸಲಿ.


ಅವನು ಆ ಟಗರಿನ ಕೊಬ್ಬನ್ನು ಅಂದರೆ ಬಾಲದ ಕೊಬ್ಬು, ಕರುಳುಗಳ ಮೇಲಣ ಎಲ್ಲಾ ಕೊಬ್ಬು, ಕಳಿಜದ ಹತ್ತಿರವಿರುವ ಕೊಬ್ಬು, ಎರಡು ಮೂತ್ರಪಿಂಡಗಳು, ಅವುಗಳ ಮೇಲಿದ್ದ ಕೊಬ್ಬನ್ನು ಮತ್ತು ಬಲತೊಡೆಯನ್ನು,


ಅವನು ಅದರ ಕೊಬ್ಬನ್ನೆಲ್ಲಾ ಅಂದರೆ,


ಏಕೆಂದರೆ ಯಜ್ಞಪಶುಗಳನ್ನು ಬಯಲಿನಲ್ಲಿ ವಧಿಸುತ್ತಿದ್ದ ಇಸ್ರಾಯೇಲರು ಇನ್ನು ಮೇಲೆ ಅವುಗಳನ್ನು ದೇವದರ್ಶನದ ಗುಡಾರದ ಬಾಗಿಲಿಗೆ ಯಾಜಕನ ಬಳಿಗೆ ತಂದು, ಯೆಹೋವನ ಮುಂದೆ ಸಮಾಧಾನಯಜ್ಞವಾಗಿ ಯೆಹೋವನಿಗೆ ಸಮರ್ಪಿಸಬೇಕು.


ಸಮಾಧಾನಯಜ್ಞಕ್ಕಾಗಿ ಕೊಟ್ಟ ಒಟ್ಟು ಪಶುಗಳು: 24 ಹೋರಿಗಳು, 60 ಟಗರುಗಳು, 60 ಹೋತಗಳು, ಒಂದು ವರ್ಷದ 60 ಕುರಿಗಳು, ಯಜ್ಞವೇದಿಯು ಅಭಿಷೇಕಿಸಲ್ಪಟ್ಟ ನಂತರ ಇದೇ ಅದರ ಪ್ರತಿಷ್ಠೆಗೆ ಸಮರ್ಪಿಸಲ್ಪಟ್ಟ ಕಾಣಿಕೆ.


ನೀನು ಮುಂದಾಗಿ ಗಿಲ್ಗಾಲಿಗೆ ಹೋಗು; ಏಳು ದಿನಗಳಾದ ನಂತರ ನಾನು ಸರ್ವಾಂಗಹೋಮಗಳನ್ನೂ ಸಮಾಧಾನಯಜ್ಞಗಳನ್ನೂ ಸಮರ್ಪಿಸುವುದಕ್ಕೋಸ್ಕರ ಅಲ್ಲಿಗೆ ಬಂದು ನೀನು ಮಾಡಬೇಕಾದದ್ದನ್ನು ನಿನಗೆ ತಿಳಿಸುವೆನು; ಅಲ್ಲಿಯ ವರೆಗೆ ಕಾದುಕೊಂಡಿರು” ಎಂದು ಹೇಳಿದನು.


ಜನರು ಯೆಹೋವನ ಮಂಜೂಷವನ್ನು ತಂದು ದಾವೀದನು ಹಾಕಿಸಿದ ಗುಡಾರದೊಳಗೆ ನಿಯಮಿತ ಸ್ಥಳದಲ್ಲಿಟ್ಟರು. ಆಗ ದಾವೀದನು ಯೆಹೋವನಿಗೋಸ್ಕರ ಸರ್ವಾಂಗಹೋಮಗಳನ್ನು, ಸಮಾಧಾನಯಜ್ಞಗಳನ್ನೂ ಸಮರ್ಪಿಸಿದನು.


ಸೊಲೊಮೋನನು ನಿದ್ರೆಯಿಂದ ಎಚ್ಚತ್ತಾಗ ಅದು ಕನಸೆಂದು ತಿಳಿದುಕೊಂಡನು. ಅವನು ಯೆರೂಸಲೇಮಿಗೆ ಬಂದ ನಂತರ ಯೆಹೋವನ ಒಡಂಬಡಿಕೆಯ ಮಂಜೂಷದ ಮುಂದೆ ನಿಂತು ಸರ್ವಾಂಗಹೋಮಗಳನ್ನು ಸಮಾಧಾನ ಯಜ್ಞಗಳನ್ನು ಸಮರ್ಪಿಸಿ, ತನ್ನ ಎಲ್ಲಾ ಸೇವಕರಿಗಾಗಿ ಔತಣಮಾಡಿಸಿದನು.


ಸೊಲೊಮೋನನು ಯೆಹೋವನಿಗೋಸ್ಕರ ಮಾಡಿದ ಸಮಾಧಾನಯಜ್ಞಕ್ಕಾಗಿ ವಧಿಸಿದ ಹೋರಿಗಳು ಇಪ್ಪತ್ತೆರಡು ಸಾವಿರ ಮತ್ತು ಕುರಿಗಳು ಲಕ್ಷದ ಇಪ್ಪತ್ತು ಸಾವಿರ, ಈ ಪ್ರಕಾರ ಅರಸನೂ ಎಲ್ಲಾ ಇಸ್ರಾಯೇಲರೂ ಯೆಹೋವನ ಆಲಯವನ್ನು ಪ್ರತಿಷ್ಠೆ ಮಾಡಿದರು.


ಯೆಹೋವನ ಆಲಯದ ಮುಂದಿರುವ ತಾಮ್ರದ ಯಜ್ಞವೇದಿಯು ಈ ಎಲ್ಲಾ ಸರ್ವಾಂಗಹೋಮ ದ್ರವ್ಯಗಳನ್ನೂ, ಧಾನ್ಯ ನೈವೇದ್ಯಗಳನ್ನೂ ಸಮಾಧಾನಯಜ್ಞದ ಕೊಬ್ಬನ್ನೂ ಹಿಡಿಯಲಾರದಷ್ಟು ‍ಚಿಕ್ಕದಾಗಿದ್ದುದರಿಂದ ಸೊಲೊಮೋನನು ಆ ದಿನ ದೇವಾಲಯದ ಮುಂದಿನ ಪ್ರಾಕಾರದ ಮಧ್ಯಸ್ಥಳವನ್ನು ಪ್ರತಿಷ್ಠಿಸಿ, ಅಲ್ಲಿ ಅವುಗಳನ್ನೆಲ್ಲಾ ಸಮರ್ಪಿಸಿದನು.


ಅವರು ದೇವರ ಮಂಜೂಷವನ್ನು ತಂದು ದಾವೀದನು ಅದಕ್ಕೋಸ್ಕರ ಮಾಡಿಸಿದ್ದ ಗುಡಾರದಲ್ಲಿಟ್ಟು ದೇವರಿಗೋಸ್ಕರ ಸರ್ವಾಂಗಹೋಮಗಳನ್ನೂ, ಸಮಾಧಾನಯಜ್ಞಗಳನ್ನೂ ಸಮರ್ಪಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು