Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 4:12 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಕರುಳುಗಳು, ಕರುಳುಗಳಲ್ಲಿರುವ ಕಲ್ಮಷ ಇವುಗಳನ್ನೆಲ್ಲಾ ಪಾಳೆಯದ ಹೊರಗೆ ಯಜ್ಞವೇದಿಯ ಬೂದಿಯನ್ನು ಹಾಕುವ ಶುದ್ಧವಾದ ಸ್ಥಳಕ್ಕೆ ತೆಗೆದುಕೊಂಡು ಹೋಗಿ, ಕಟ್ಟಿಗೆಯ ಮೇಲಿರಿಸಿ, ಬೆಂಕಿಯಲ್ಲಿ ಸುಡಿಸಿಬಿಡಬೇಕು. ಬೂದಿಯನ್ನು ಹಾಕುವ ಸ್ಥಳದಲ್ಲೇ ಅದನ್ನು ಸುಡಿಸಿಬಿಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಹಾಗು ಕರುಳುಗಳಲ್ಲಿರುವ ಕಲ್ಮಶ ಇವುಗಳನ್ನೆಲ್ಲ ಪಾಳೆಯದ ಹೊರಗೆ, ವೇದಿಕೆಯ ಬೂದಿಯನ್ನು ಹಾಕುವ ಶುದ್ಧವಾದ ಸ್ಥಳಕ್ಕೆ ತೆಗೆದುಕೊಂಡು ಹೋಗಿ, ಕಟ್ಟಿಗೆಯ ಮೇಲಿರಿಸಿ, ಬೆಂಕಿಯಲ್ಲಿ ಸುಡಿಸಿಬಿಡಬೇಕು. ಬೂದಿಯನ್ನು ಹಾಕುವ ಸ್ಥಳದಲ್ಲೇ ಅದನ್ನು ಸುಡಿಸಿಬಿಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಕರುಳುಗಳಲ್ಲಿರುವ ಕಲ್ಮಶ ಇವುಗಳನ್ನೆಲ್ಲಾ ಪಾಳೆಯದ ಹೊರಗೆ ವೇದಿಯ ಬೂದಿಯನ್ನು ಹಾಕುವ ಶುದ್ಧವಾದ ಸ್ಥಳಕ್ಕೆ ತೆಗೆದುಕೊಂಡು ಹೋಗಿ ಕಟ್ಟಿಗೆಯ ಮೇಲಿರಿಸಿ ಬೆಂಕಿಯಲ್ಲಿ ಸುಡಿಸಿಬಿಡಬೇಕು. ಬೂದಿಯನ್ನು ಹಾಕುವ ಸ್ಥಳದಲ್ಲೇ ಅದನ್ನು ಸುಡಿಸಿಬಿಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಎಂದರೆ ಇಡೀ ಹೋರಿಯನ್ನು ಪಾಳೆಯದ ಹೊರಗೆ ಶುದ್ಧವಾದ ಸ್ಥಳಕ್ಕೆ ಅಂದರೆ ಬೂದಿ ಚೆಲ್ಲುವ ಸ್ಥಳಕ್ಕೆ ತಂದು, ಕಟ್ಟಿಗೆಯ ಮೇಲೆ ಬೆಂಕಿಯಿಂದ ಅದನ್ನು ಸುಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 4:12
16 ತಿಳಿವುಗಳ ಹೋಲಿಕೆ  

ಮಹಾಯಾಜಕನು ದೋಷಪರಿಹಾರಕ ಯಜ್ಞದ ಪಶುಗಳ ರಕ್ತವನ್ನು ತೆಗೆದುಕೊಂಡು ಪವಿತ್ರ ಸ್ಥಾನದೊಳಗೆ ಹೋಗುತ್ತಾನೆ, ಆದರೆ ಆ ಪಶುಗಳ ದೇಹಗಳು ಪಾಳೆಯದ ಆಚೆ ಸುಡಲ್ಪಡುತ್ತವಲ್ಲ.


ಹೋರಿಯ ಮಾಂಸವನ್ನು, ಚರ್ಮವನ್ನು ಮತ್ತು ಕಲ್ಮಷವನ್ನು ಪಾಳೆಯದ ಹೊರಗೆ ಬೆಂಕಿಯಿಂದ ಸುಟ್ಟುಬಿಡಬೇಕು. ಏಕೆಂದರೆ ಇದು ದೋಷಪರಿಹಾರಕ ಯಜ್ಞ.


ದೋಷಪರಿಹಾರಕ ಯಜ್ಞಪಶುಗಳಾದ ಹೋರಿ ಮತ್ತು ಹೋತಗಳ ರಕ್ತವನ್ನು ಮಹಾಪವಿತ್ರಸ್ಥಾನದಲ್ಲಿ ದೋಷಪರಿಹಾರ ಮಾಡುವುದಕ್ಕಾಗಿ ತಂದ ಮೇಲೆ ಅವುಗಳ ಶರೀರಗಳನ್ನು ಪಾಳೆಯದ ಆಚೆಗೆ ತೆಗೆದುಕೊಂಡು ಹೋಗಿ, ಚರ್ಮ, ಮಾಂಸ ಮತ್ತು ಕಲ್ಮಷಗಳೆಲ್ಲವನ್ನು ಬೆಂಕಿಯಿಂದ ಸುಡಿಸಬೇಕು.


ಆಗ ಅವನು ಆ ಆಕಳನ್ನು ಚರ್ಮ, ಮಾಂಸ, ರಕ್ತ, ಕಲ್ಮಷಗಳ ಸಹಿತವಾಗಿ ತನ್ನ ಎದುರಿನಲ್ಲಿಯೇ ಸುಡಿಸಿಬಿಡಬೇಕು.


ಅದನ್ನು ನೀವು ಯಾಜಕನಾದ ಎಲ್ಲಾಜಾರನ ಕೈಗೆ ಒಪ್ಪಿಸಬೇಕು. ಅವನು ಅದನ್ನು ಪಾಳೆಯದ ಹೊರಗೆ ಹೊರಡಿಸಿಕೊಂಡು ಹೋಗಿ ತನ್ನ ಎದುರೇ ಒಬ್ಬನ ಕೈಯಿಂದ ವಧೆಮಾಡಿಸಬೇಕು.


ತರುವಾಯ ಯೆಹೋವನು ಮೋಶೆಗೆ, “ಆ ಮನುಷ್ಯನಿಗೆ ಮರಣಶಿಕ್ಷೆಯಾಗಬೇಕು; ಸರ್ವಸಮೂಹದವರ ಪಾಳೆಯದ ಹೊರಗೆ ಅವನನ್ನು ಕಲ್ಲೆಸೆದು ಕೊಲ್ಲಬೇಕು” ಎಂದು ಆಜ್ಞಾಪಿಸಿದನು.


ಅಂಥವರು ಗಂಡಸರೇ ಆಗಲಿ ಅಥವಾ ಹೆಂಗಸರೇ ಆಗಲಿ, ಅವರೆಲ್ಲರನ್ನೂ ಪಾಳೆಯದಿಂದ ಹೊರಗೆಹಾಕಬೇಕು. ನಾನೇ ಅವರ ಪಾಳೆಯದಲ್ಲಿ ವಾಸವಾಗಿರುವುದರಿಂದ ಅವರು ಅದನ್ನು ಅಪವಿತ್ರ ಮಾಡಬಾರದು.”


ಆ ರೋಗದ ಗುರುತುಗಳು ಅವನಲ್ಲಿ ಇರುವ ದಿನಗಳೆಲ್ಲಾ ಅವನು ಅಶುದ್ಧನಾಗಿರುವನು. ಅವನು ಅಶುದ್ಧನಾದುದರಿಂದ ಪ್ರತ್ಯೇಕವಾಗಿಯೇ ವಾಸವಾಗಿರಬೇಕು; ಅವನ ನಿವಾಸವು ಪಾಳೆಯದ ಹೊರಗೆ ಇರಬೇಕು.


ಆ ಮೊದಲನೆಯ ಹೋರಿಯನ್ನು ಪಾಳೆಯದ ಹೊರಗೆ ತೆಗೆದುಕೊಂಡು ಹೋಗಿ ಸುಡಿಸಿಬಿಟ್ಟ ಪ್ರಕಾರ ಈ ಹೋರಿಯನ್ನು ಸುಡಿಸಿಬಿಡಬೇಕು. ಇದು ಜನಸಮೂಹದ ದೋಷಪರಿಹಾರಕ ಯಜ್ಞ.


ಆದರೆ ದೋಷಪರಿಹಾರಕ ಯಜ್ಞಪಶುಗಳಲ್ಲಿ ಯಾವ ಪಶುವಿನ ರಕ್ತವನ್ನು ದೋಷಪರಿಹಾರಕ್ಕಾಗಿ ದೇವದರ್ಶನದ ಗುಡಾರದೊಳಗೆ, ಪವಿತ್ರ ಸ್ಥಾನದೊಳಗೆ ತಂದಿರುವರೋ ಅದರ ಮಾಂಸವನ್ನು ತಿನ್ನಲೇಬಾರದು. ಬೆಂಕಿಯಲ್ಲಿ ಸುಟ್ಟುಬಿಡಬೇಕು.


ಯೆಹೋವನು ಆಜ್ಞಾಪಿಸಿದಂತೆ ಅದರಲ್ಲಿ ಉಳಿದದ್ದನ್ನೆಲ್ಲಾ ಅಂದರೆ ಅದರ ಚರ್ಮವನ್ನು, ಮಾಂಸವನ್ನು ಮತ್ತು ಕಲ್ಮಷವನ್ನು ಪಾಳೆಯದ ಹೊರಗೆ ತೆಗೆದುಕೊಂಡು ಹೋಗಿ ಬೆಂಕಿಯಿಂದ ಸುಡಿಸಿಬಿಟ್ಟನು.


ಅದರ ಮಾಂಸವನ್ನು ಮತ್ತು ಚರ್ಮವನ್ನು ಪಾಳೆಯದ ಹೊರಗೆ ಬೆಂಕಿಯಿಂದ ಸುಡಿಸಿಬಿಟ್ಟನು.


ಮತ್ತು ದೋಷ ಪರಿಹಾರಕಯಜ್ಞಕ್ಕಾಗಿ ವಧಿಸಲ್ಪಟ್ಟ ಹೋರಿಯನ್ನು ನೀನು ಒಪ್ಪಿಸಲು ನೇಮಿಸಲ್ಪಟ್ಟವನು, ಪವಿತ್ರಾಲಯದ ಹೊರಗೆ ಆಲಯಕ್ಕೆ ಸಂಬಂಧಪಟ್ಟ ಗೊತ್ತಾದ ಸ್ಥಳದಲ್ಲಿ ಅದನ್ನು ಸುಡಬೇಕು.


ಅವನು ಪಾಪಮಾಡಿ ಅಪರಾಧಿಯಾಗಿರುವುದರಿಂದ ಅವನು ತಾನು ಕದ್ದದ್ದನ್ನು, ಮೋಸದಿಂದ ಪಡೆದದ್ದನ್ನು ತನ್ನ ವಶಕ್ಕೆ ತೆಗೆದುಕೊಂಡದ್ದನ್ನು, ತಾನು ಕಂಡುಕೊಂಡದ್ದನ್ನು,


ಯಾಜಕರು ತಮಗೋಸ್ಕರ ಸಮರ್ಪಿಸುವ ನೈವೇದ್ಯದ್ರವ್ಯಗಳನ್ನು ಸಂಪೂರ್ಣವಾಗಿ ಹೋಮಮಾಡಬೇಕು; ಅದನ್ನು ತಿನ್ನಲೇಬಾರದು” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು