Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 4:13 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 “‘ಇಸ್ರಾಯೇಲರ ಸಮೂಹವೆಲ್ಲಾ ತಿಳಿಯದೆ ದೋಷಿಗಳಾದರೆ ಅಂದರೆ ಯೆಹೋವನು ನಿಷೇಧಿಸಿದ ಕಾರ್ಯಗಳಲ್ಲಿ ಅವರು ಯಾವುದನ್ನಾದರೂ ಮಾಡಿ ದೋಷಕ್ಕೆ ಗುರಿಯಾದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 “ಇಸ್ರಯೇಲರ ಸಮಾಜವೆಲ್ಲ ತಿಳಿಯದೆ ದೋಷಿಗಳಾದರೆ, ಅಂದರೆ ಸರ್ವೇಶ್ವರನು ನಿಷೇಧಿಸಿದ ಕಾರ್ಯಗಳಲ್ಲಿ ಅವರು ಯಾವುದನ್ನಾದರು ಮಾಡಿ ದೋಷಕ್ಕೆ ಗುರಿಯಾದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಇಸ್ರಾಯೇಲ್ಯರ ಸಮೂಹವೆಲ್ಲಾ ತಿಳಿಯದೆ ದೋಷಿಗಳಾದರೆ ಅಂದರೆ ಯೆಹೋವನು ನಿಷೇಧಿಸಿದ ಕಾರ್ಯಗಳಲ್ಲಿ ಅವರು ಯಾವದನ್ನಾದರೂ ಮಾಡಿ ದೋಷಕ್ಕೆ ಗುರಿಯಾದರೆ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 “ಇಸ್ರೇಲರ ಇಡೀ ಜನಾಂಗವೆಲ್ಲಾ ತಿಳಿಯದೆ ಪಾಪಮಾಡುವ ಸ್ಥಿತಿ ಸಂಭವಿಸಬಹುದು. ಯೆಹೋವನು ಮಾಡಬಾರದೆಂದು ಆಜ್ಞಾಪಿಸಿದವುಗಳಲ್ಲಿ ಯಾವುದಾದರೊಂದನ್ನು ಅವರು ಮಾಡಿದರೆ ಅವರು ದೋಷಿಗಳಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 “ ‘ಮಾಡಬಾರದ ಕೆಲಸಗಳನ್ನು ಯೆಹೋವ ದೇವರ ಆಜ್ಞೆಗಳಿಗೆ ವಿರೋಧವಾಗಿ ಯಾವುದನ್ನಾದರೂ ಇಸ್ರಾಯೇಲರು ಅರಿಯದೆ ಮಾಡಿ ಅಪರಾಧಿಗಳಾಗಿದ್ದರೆ ಮತ್ತು ಅದು ಸಮೂಹಕ್ಕೆ ಕಣ್ಮರೆಯಾಗಿದ್ದರೆ

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 4:13
17 ತಿಳಿವುಗಳ ಹೋಲಿಕೆ  

“ಯಾವನಾದರೂ ಯೆಹೋವನು ನಿಷೇಧಿಸಿದ ಕಾರ್ಯಗಳಲ್ಲಿ ಯಾವುದನ್ನಾದರೂ ಮಾಡಿ ದೋಷಕ್ಕೆ ಒಳಗಾದರೆ, ಅದು ಅವನಿಗೆ ತಿಳಿಯದೆ ಹೋದರೂ ಅವನು ಅದರಿಂದ ಅಪರಾಧಿಯಾಗಿ ತನ್ನ ಪಾಪಫಲವನ್ನು ಅನುಭವಿಸಬೇಕು.


ಹೀಗಿರುವುದರಿಂದ ಯಾವನಾದರೂ ಅಯೋಗ್ಯವಾಗಿ ಕರ್ತನ ರೊಟ್ಟಿಯನ್ನು ತಿಂದರೆ ಇಲ್ಲವೆ ಆತನ ಪಾನಪಾತ್ರೆಯಲ್ಲಿ ಪಾನ ಮಾಡಿದರೆ ಅವನು ಕರ್ತನ ದೇಹಕ್ಕೂ ಮತ್ತು ಕರ್ತನ ರಕ್ತಕ್ಕೂ ಸಂಬಂಧಿಸಿದಂತೆ ದ್ರೋಹಮಾಡಿದವನಾಗಿರುವನು.


ನನ್ನ ಜನರು ತಮ್ಮ ದೋಷಫಲವನ್ನು ಅನುಭವಿಸಿ, ನನ್ನ ಪ್ರಸನ್ನತೆಯನ್ನು ಬೇಡಿಕೊಳ್ಳುವ ತನಕ, ನಾನು ನನ್ನ ವಾಸಸ್ಥಾನಕ್ಕೆ ಹಿಂದಿರುಗಿ ಹೋಗುವೆನು; ಅವರು ಇಕ್ಕಟ್ಟಿಗೆ ಸಿಕ್ಕಿದ ಕೂಡಲೆ ನನ್ನನ್ನು ಆಶ್ರಯಿಸುವರು.


ಇವರು ತಮ್ಮ ಹೆಂಡತಿಯರನ್ನು ಕಳುಹಿಸಿಬಿಡುವುದಾಗಿ ಕೈ ಮುಟ್ಟಿ ಪ್ರಮಾಣಮಾಡಿ ತಾವು ಅಪರಾಧಿಗಳೆಂದು ಒಪ್ಪಿಕೊಂಡು ಪ್ರಾಯಶ್ಚಿತ್ತವಾಗಿ ಒಂದು ಟಗರನ್ನು ಸಮರ್ಪಿಸಿದರು.


ಇಸ್ರಾಯೇಲ್ಯರು ನನ್ನ ನಿಬಂಧನೆಯನ್ನು ಮೀರಿ ಪಾಪಿಷ್ಠರಾಗಿದ್ದಾರೆ. ಕೊಳ್ಳೆಯಲ್ಲಿ ಮೀಸಲಾದ ವಸ್ತುಗಳನ್ನು ಕದ್ದು ತಮ್ಮ ಸಾಮಾನುಗಳಲ್ಲಿ ಅಡಗಿಸಿಟ್ಟು ವಂಚಕರಾಗಿದ್ದಾರೆ.


ಅವನು ಪಾಪಮಾಡಿ ಅಪರಾಧಿಯಾಗಿರುವುದರಿಂದ ಅವನು ತಾನು ಕದ್ದದ್ದನ್ನು, ಮೋಸದಿಂದ ಪಡೆದದ್ದನ್ನು ತನ್ನ ವಶಕ್ಕೆ ತೆಗೆದುಕೊಂಡದ್ದನ್ನು, ತಾನು ಕಂಡುಕೊಂಡದ್ದನ್ನು,


ಆ ಮೊದಲನೆಯ ಹೋರಿಯನ್ನು ಪಾಳೆಯದ ಹೊರಗೆ ತೆಗೆದುಕೊಂಡು ಹೋಗಿ ಸುಡಿಸಿಬಿಟ್ಟ ಪ್ರಕಾರ ಈ ಹೋರಿಯನ್ನು ಸುಡಿಸಿಬಿಡಬೇಕು. ಇದು ಜನಸಮೂಹದ ದೋಷಪರಿಹಾರಕ ಯಜ್ಞ.


ಇಸ್ರಾಯೇಲರ ಜನಸಮೂಹದಿಂದ ದೋಷಪರಿಹಾರಕ ಯಜ್ಞಕ್ಕಾಗಿ ಎರಡು ಹೋತಗಳನ್ನು ಮತ್ತು ಸರ್ವಾಂಗಹೋಮಕ್ಕಾಗಿ ಒಂದು ಟಗರನ್ನು ತೆಗೆದುಕೊಂಡು ಬರಬೇಕು.


ನಾನು ಮೋಶೆಗೆ ಹೇಳಿದ ಈ ಎಲ್ಲಾ ಆಜ್ಞೆಗಳಿಗೆ ನೀವು ವಿಧೇಯರಾಗಿರದಿದ್ದರೆ,


ಅದಲ್ಲದೆ ಬೇಕೆಂದು ಪಾಪಮಾಡದಂತೆ ನಿನ್ನ ದಾಸನನ್ನು ಕಾಪಾಡು. ಅಂಥ ಪಾಪಗಳು ನನ್ನನ್ನು ಆಳದಿರಲಿ. ಆಗ ನಾನು ತಪ್ಪಿಲ್ಲದವನಾಗಿ ಮಹಾದ್ರೋಹಕ್ಕೆ ಒಳಗಾಗುವುದಿಲ್ಲ.


ಆ ದಿನದಲ್ಲಿ ಪ್ರಭುವು ತನ್ನ ನಿಮಿತ್ತವೂ, ದೇಶದ ಜನರೆಲ್ಲರ ನಿಮಿತ್ತವೂ ದೋಷಪರಿಹಾರಕ ಯಜ್ಞಕ್ಕಾಗಿ ಒಂದು ಹೋರಿಯನ್ನು ಒಪ್ಪಿಸಲಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು