Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 4:32 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

32 “‘ಅವನು ತನ್ನ ದೋಷಪರಿಹಾರಕ್ಕಾಗಿ ತರುವುದು ಕುರಿಯಾದರೆ ಅದು ಪೂರ್ಣಾಂಗವಾದ ಹೆಣ್ಣಾಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

32 ಅವನು ತನ್ನ ದೋಷಪರಿಹಾರಾರ್ಥವಾಗಿ ತರುವುದು ಒಂದು ಕುರಿಯಾದರೆ ಅದು ಕಳಂಕರಹಿತವಾದ ಹೆಣ್ಣಾಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

32 ಅವನು ತನ್ನ ದೋಷಪರಿಹಾರಾರ್ಥವಾಗಿ ತರುವದು ಕುರಿಯಾದರೆ ಅದು ಪೂರ್ಣಾಂಗವಾದ ಹೆಣ್ಣಾಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

32 “ಆ ವ್ಯಕ್ತಿಯು ಕುರಿಮರಿಯನ್ನು ತನ್ನ ಪಾಪಪರಿಹಾರಕ ಯಜ್ಞವಾಗಿ ತರುವುದಾದರೆ ಅದು ದೋಷವಿಲ್ಲದ ಹೆಣ್ಣು ಕುರಿಮರಿಯಾಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

32 “ ‘ಯಾರಾದರೂ ಪಾಪ ಪರಿಹಾರದ ಬಲಿಗಾಗಿ ಒಂದು ಕುರಿಮರಿಯನ್ನು ತರುವುದಾದರೆ, ಕಳಂಕರಹಿತವಾದ ಒಂದು ಹೆಣ್ಣನ್ನು ತರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 4:32
19 ತಿಳಿವುಗಳ ಹೋಲಿಕೆ  

ತನ್ನ ತಪ್ಪು ತನಗೆ ತಿಳಿದುಬಂದಾಗ ಆ ದೋಷಪರಿಹಾರಕ್ಕಾಗಿ ಪೂರ್ಣಾಂಗವಾದ ಹೆಣ್ಣು ಮೇಕೆಯನ್ನು ತಂದು ಸಮರ್ಪಿಸಬೇಕು.


ಕ್ರಿಸ್ತನು ಸಹ ನೀತಿವಂತನಾಗಿದ್ದು ಅನೀತಿವಂತರಿಗೋಸ್ಕರ ಪ್ರಾಣ ಕೊಟ್ಟು ನಮ್ಮನ್ನು ದೇವರ ಬಳಿಗೆ ಸೇರಿಸುವುದಕ್ಕಾಗಿ ಒಂದೇ ಸಾರಿ ಪಾಪನಿವಾರಣೆಗೋಸ್ಕರ ಬಾಧೆಪಟ್ಟು ಸತ್ತನು. ಆತನು ಶರೀರಸಂಬಂಧವಾಗಿ ಕೊಲ್ಲಲ್ಪಟ್ಟು, ಆತ್ಮ ಸಂಬಂಧವಾಗಿ ತಿರುಗಿ ಬದುಕುವವನಾದನು.


ಆತನು ಯಾವ ಪಾಪವನ್ನೂ ಮಾಡಲಿಲ್ಲ, ಆತನ ಬಾಯಲ್ಲಿ ಯಾವ ವಂಚನೆಯೂ ಸಿಕ್ಕಲಿಲ್ಲ.


ಸಿಂಹಾಸನವು, ನಾಲ್ಕು ಜೀವಿಗಳೂ ಇದ್ದ ಸ್ಥಳಕ್ಕೂ ಮತ್ತು ಹಿರಿಯರು ಇದ್ದ ಸ್ಥಳಕ್ಕೂ ಮಧ್ಯದಲ್ಲಿ ಒಂದು ಕುರಿಮರಿಯು ವಧಿಸಲ್ಪಟಂತೆ ನಿಂತಿರುವುದನ್ನು ಕಂಡೆನು. ಅದಕ್ಕೆ ಏಳು ಕೊಂಬುಗಳೂ ಏಳು ಕಣ್ಣುಗಳೂ ಇದ್ದವು. ಅವು ಏನೆಂದರೆ ಭೂಮಿಯ ಮೇಲೆಲ್ಲಾ ಕಳುಹಿಸಲ್ಪಟ್ಟಿರುವ ದೇವರ ಏಳು ಆತ್ಮಗಳೇ.


ನಾವು ಪಾಪದ ಪಾಲಿಗೆ ಸತ್ತು ನೀತಿವಂತರಾಗಿ ಜೀವಿಸುವಂತೆ ಆತನು ನಮ್ಮ ಪಾಪಗಳನ್ನು ತಾನೇ ತನ್ನ ದೇಹದಲ್ಲಿ ಹೊತ್ತುಕೊಂಡು ಶಿಲುಬೆಯನ್ನು ಏರಿ ಮರಣ ಹೊಂದಿದನು. ಆತನ ಬಾಸುಂಡೆಗಳಿಂದ ನಮಗೆ ಗುಣವಾಯಿತು.


ನಿತ್ಯಾತ್ಮನಿಂದ ತನ್ನನ್ನು ತಾನೇ ನಿರ್ದೋಷಿಯನ್ನಾಗಿ, ದೇವರಿಗೆ ಸಮರ್ಪಿಸಿಕೊಂಡ ಕ್ರಿಸ್ತನ ರಕ್ತವು ಎಷ್ಟೋ ಹೆಚ್ಚಾಗಿ, ನಮ್ಮನ್ನು ನಿರ್ಜೀವ ಕ್ರಿಯೆಗಳಿಂದ ಬಿಡಿಸಿ, ನಾವು ಜೀವವುಳ್ಳ ದೇವರನ್ನು ಆರಾಧಿಸುವಂತೆ ನಮ್ಮ ಮನಸ್ಸಾಕ್ಷಿಯನ್ನು ಶುದ್ಧೀಕರಿಸುತ್ತದಲ್ಲವೇ?


ಇಂಥವನೇ ನಮಗೆ ಬೇಕಾಗಿರುವ ಮಹಾಯಾಜಕನು, ಈತನು ಪರಿಶುದ್ಧನೂ, ನಿರ್ದೋಷಿಯೂ, ನಿಷ್ಕಳಂಕನೂ, ಪಾಪಿಗಳಲ್ಲಿ ಸೇರದೆ ಪ್ರತ್ಯೇಕವಾಗಿರುವವನು, ಆಕಾಶಮಂಡಲಗಳಿಗಿಂತ ಉನ್ನತದಲ್ಲಿರುವವನೂ ಆಗಿರುವನು.


ಅದನ್ನು ಕಳಂಕ ಸುಕ್ಕು ಮುಂತಾದದ್ದೊಂದೂ ಇಲ್ಲದಂತೆ ಪರಿಶುದ್ಧವೂ, ನಿರ್ದೋಷವೂ, ಮಹಿಮೆಯುಳ್ಳದ್ದೂ ಆಗಿರುವ ಸಭೆಯನ್ನಾಗಿ ತನ್ನೆದುರಿನಲ್ಲಿ ನಿಲ್ಲಿಸಿಕೊಳ್ಳಬೇಕೆಂದು ವಾಕ್ಯೋಪದೇಶ ಸಹಿತವಾದ ಜಲಸ್ನಾನವನ್ನು ಮಾಡಿಸಿ ಶುದ್ಧಿಮಾಡಿದನು.


ಆಗ ಅಲ್ಲಿ ಯೇಸು ಹೋಗುತ್ತಿರುವುದನ್ನು ನೋಡಿ, ಯೋಹಾನನೂ ಅಗೋ, “ಯಜ್ಞಕ್ಕೆ ದೇವರು ನೇಮಿಸಿರುವ ಕುರಿಮರಿ” ಎಂದು ಹೇಳಿದನು.


ಮರುದಿನ ಯೋಹಾನನು ತನ್ನ ಕಡೆಗೆ ಬರುತ್ತಿದ್ದ ಯೇಸುವನ್ನು ನೋಡಿ, “ಅಗೋ, ಲೋಕದ ಪಾಪವನ್ನು ನಿವಾರಣೆ ಮಾಡಲು ದೇವರು ನೇಮಿಸಿದ ಯಜ್ಞದಕುರಿಮರಿ.


ಅದಕ್ಕೆ ದೂತನು, “ಪವಿತ್ರಾತ್ಮನು ನಿನ್ನ ಮೇಲೆ ಬರುವನು; ಪರಾತ್ಪರನಾದ ದೇವರ ಶಕ್ತಿಯು ನಿನ್ನನ್ನು ಅವರಿಸುವುದು; ಆದುದರಿಂದ ನಿನಗೆ ಹುಟ್ಟುವ ಆ ಪವಿತ್ರ ಶಿಶು ದೇವರ ಮಗನೆನಿಸಿಕೊಳ್ಳುವನು.


ಅವನು ಬಾಧೆಗೆ ಒಳಗಾಗಿ ತನ್ನನ್ನು ತಗ್ಗಿಸಿಕೊಂಡನು, ಬಾಯಿ ತೆರೆಯಲಿಲ್ಲ; ವಧ್ಯಸ್ಥಾನಕ್ಕೆ ಒಯ್ಯಲ್ಪಡುವ ಕುರಿಯಂತೆಯೂ, ಉಣ್ಣೆ ಕತ್ತರಿಸುವವರ ಮುಂದೆ ಮೌನವಾಗಿರುವ ಕುರಿಯ ಹಾಗೂ ಇದ್ದನು, ಬಾಯಿ ತೆರೆಯಲೇ ಇಲ್ಲ.


ಅವನು ದೋಷದ ಪ್ರಾಯಶ್ಚಿತ್ತಕ್ಕಾಗಿ ಹೆಣ್ಣು ಕುರಿಯನ್ನಾಗಲಿ ಅಥವಾ ಹೆಣ್ಣು ಮೇಕೆಯನ್ನಾಗಲಿ ಯೆಹೋವನಿಗೆ ಸಮರ್ಪಿಸಬೇಕು. ಯಾಜಕನು ಅವನಿಗೋಸ್ಕರ ದೋಷಪರಿಹಾರ ಮಾಡುವನು.


ಆ ಮರಿಯು ಊನವಿಲ್ಲದ ಒಂದು ವರ್ಷದ ಗಂಡುಮರಿಯಾಗಿರಬೇಕು. ನೀವು ಕುರಿಗಳಿಂದಾಗಲಿ ಅಥವಾ ಆಡುಗಳಿಂದಾಗಲಿ ಅದನ್ನು ತೆಗೆದುಕೊಳ್ಳಬಹುದು.


ಇದರ ವಿಷಯದಲ್ಲಿ ನೀವು ಇಸ್ರಾಯೇಲರ ಸಮೂಹಕ್ಕೆಲ್ಲಾ ಹೀಗೆ ಅಪ್ಪಣೆಮಾಡಬೇಕು, ‘ಈ ತಿಂಗಳಿನ ಹತ್ತನೆಯ ದಿನದಲ್ಲಿ ನಿಮ್ಮ ನಿಮ್ಮ ಗೋತ್ರಗಳ ಪ್ರತಿಯೊಂದು ಮನೆಯವರು ಒಂದೊಂದು ಕುರಿಮರಿಯನ್ನಾಗಲಿ, ಆಡುಮರಿಯನ್ನಾಗಲಿ ತೆಗೆದುಕೊಳ್ಳಬೇಕು.


“‘ಅವನು ದನವನ್ನು ಸರ್ವಾಂಗಹೋಮವಾಗಿ ಸಮರ್ಪಿಸುವುದಾದರೆ ಪೂರ್ಣಾಂಗವಾದ ಗಂಡನ್ನು ತರಬೇಕು. ತನ್ನನ್ನು ಯೆಹೋವನು ಮೆಚ್ಚುವಂತೆ ದೇವದರ್ಶನದ ಗುಡಾರದ ಬಾಗಿಲಿಗೆ ಅದನ್ನು ತರಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು