Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 6:21 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಕಬ್ಬಿಣದ ಹಂಚಿನ ಮೇಲೆ ಎಣ್ಣೆ ಸವರಿ ಅದನ್ನು ಸುಡಬೇಕು. ಅದನ್ನು ತರುವಾಗ ಅದು ಎಣ್ಣೆಯಿಂದ ನೆನಸಿದ್ದಾಗಿರಬೇಕು. ಅದನ್ನು ಭಾಗಭಾಗವಾಗಿ ಮಾಡಿ ಯೆಹೋವನಿಗೆ ಸುವಾಸನೆಯುಳ್ಳ ನೈವೇದ್ಯವನ್ನಾಗಿ ಸಮರ್ಪಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಕಬ್ಬಿಣದ ಹೆಂಚಿನ ಮೇಲೆ ಎಣ್ಣೆ ಸವರಿ ಅದನ್ನು ಸುಡಬೇಕು. ಅದನ್ನು ತರುವಾಗ ಅದು ಎಣ್ಣೆಯಿಂದ ನೆನೆದೇ ಇರಬೇಕು. ಅದನ್ನು ಭಾಗಭಾಗವಾಗಿ ಮಾಡಿ ಸರ್ವೇಶ್ವರನಿಗೆ ಸುವಾಸನೆಯುಳ್ಳ ನೈವೇದ್ಯವನ್ನಾಗಿ ಸಮರ್ಪಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಕಬ್ಬಿಣದ ಹಂಚಿನ ಮೇಲೆ ಎಣ್ಣೆ ಸವರಿ ಅದನ್ನು ಸುಡಬೇಕು. ಅದನ್ನು ತರುವಾಗ ಅದು ಎಣ್ಣೆಯಿಂದ ನೆನೆದೇ ಇರಬೇಕು. ಅದನ್ನು ಭಾಗ ಭಾಗವಾಗಿ ಮಾಡಿ ಯೆಹೋವನಿಗೆ ಸುವಾಸನೆಯುಳ್ಳ ನೈವೇದ್ಯವನ್ನಾಗಿ ಸಮರ್ಪಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಶ್ರೇಷ್ಠವಾದ ಗೋಧಿಹಿಟ್ಟಿಗೆ ಎಣ್ಣೆಯನ್ನು ಬೆರೆಸಿ ಕಬ್ಬಿಣದ ಹಂಚಿನ ಮೇಲೆ ರೊಟ್ಟಿ ಸುಟ್ಟು ಅದನ್ನು ಒಳಗೆ ತರಬೇಕು. ನೀವು ಈ ಸಮರ್ಪಣೆಯನ್ನು ತುಂಡುತುಂಡಾಗಿ ಮುರಿದು ಸಮರ್ಪಿಸಬೇಕು. ಅದರ ಸುವಾಸನೆಯು ಯೆಹೋವನಿಗೆ ಪ್ರಿಯವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಅದನ್ನು ಒಂದು ಬೋಗುಣಿಯಲ್ಲಿ ಎಣ್ಣೆಯೊಂದಿಗೆ ಮಾಡಬೇಕು. ಅದನ್ನು ತರುವಾಗ ಅದು ಎಣ್ಣೆಯಿಂದ ನೆನೆದೇ ಇರಬೇಕು. ಬೇಯಿಸಿದ ಧಾನ್ಯ ಸಮರ್ಪಣೆಯ ತುಂಡುಗಳನ್ನು ನೀನು ಯೆಹೋವ ದೇವರಿಗೆ ಸುವಾಸನೆಯಾಗಿ ಸಮರ್ಪಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 6:21
8 ತಿಳಿವುಗಳ ಹೋಲಿಕೆ  

ನೀವು ಅರ್ಪಿಸುವ ಧಾನ್ಯ ನೈವೇದ್ಯವು ಕಬ್ಬಿಣದ ಹಂಚಿನ ಮೇಲೆ ಸುಟ್ಟದ್ದಾದರೆ ಅದು ಎಣ್ಣೆ ಬೆರಸಿದ ಹುಳಿಯಿಲ್ಲದ ಗೋದಿಹಿಟ್ಟಿನದಾಗಿರಬೇಕು.


ಒಲೆಯಲ್ಲಾಗಲಿ, ಕಬ್ಬಿಣದ ಹಂಚಿನಲ್ಲಾಗಲಿ ಅಥವಾ ಬಾಂಡ್ಲಿಯಲ್ಲಾಗಲಿ ಬೇಯಿಸಿದ ನೈವೇದ್ಯಪದಾರ್ಥವೆಲ್ಲಾ ಸಮರ್ಪಿಸುವ ಯಾಜಕನಿಗೆ ಆಗಬೇಕು.


ಲೇವಿಯರಲ್ಲಿ ಕೋರಹಿಯನಾದ ಶಲ್ಲೂಮನ ಚೊಚ್ಚಲ ಮಗನಾದ ಮತ್ತಿತ್ಯನು ರೊಟ್ಟಿ ಸುಡುವ ಕೆಲಸದ ಮೇಲ್ವಿಚಾರಕನು.


ಆರೋನನ ಸಂತತಿಯವರಲ್ಲಿ ಯಾವನು ಅವನ ತರುವಾಯ ಅಭಿಷಿಕ್ತನಾದ ಯಾಜಕನ ಪಟ್ಟಕ್ಕೆ ಬರುವನೋ ಅವನೇ ಅದನ್ನು ಸಮರ್ಪಿಸಬೇಕು; ಇದು ಶಾಶ್ವತನಿಯಮ. ಅದನ್ನು ಯೆಹೋವನಿಗೆ ಸಂಪೂರ್ಣವಾಗಿ ಹೋಮಮಾಡಬೇಕು.


ಯಾರಾದರೂ ಕೃತಜ್ಞತೆಯನ್ನು ತೋರಿಸುವುದಕ್ಕಾಗಿ ಸಮಾಧಾನಯಜ್ಞವನ್ನು ಯೆಹೋವನಿಗೆ ಮಾಡುವುದಾದರೆ ಅದರೊಡನೆ ಎಣ್ಣೆ ಮಿಶ್ರವಾದ ಹುಳಿಯಿಲ್ಲದ ಕಡುಬುಗಳನ್ನು ಮತ್ತು ಎಣ್ಣೆಯಿಂದ ಪೂರಾ ನೆನಸಿದ ಗೋದಿ ಹಿಟ್ಟಿನ ಹೋಳಿಗೆಗಳನ್ನು ಸಮರ್ಪಿಸಬೇಕು.


ದೇವಾಲಯದಲ್ಲಿ ಸೇವೆಮಾಡುವುದೂ, ನೈವೇದ್ಯದ ಮೀಸಲು ರೊಟ್ಟಿ, ನೈವೇದ್ಯಕ್ಕೆ ಬೇಕಾದ ಗೋದಿಹಿಟ್ಟು, ಹುಳಿಯಿಲ್ಲದ ರೊಟ್ಟಿ, ಕಬ್ಬಿಣದ ಹಂಚಿನಲ್ಲಿ ಸುಟ್ಟ ರೊಟ್ಟಿ, ಎಣ್ಣೆಯಿಂದ ನೆನೆದ ಭಕ್ಷ್ಯಗಳು ಇವುಗಳನ್ನು ಒದಗಿಸುವುದೂ, ಸೇರು, ಅಳತೆಗೋಲುಗಳನ್ನು ಪರೀಕ್ಷಿಸುವುದೂ,


ಆ ಜಂತುಗಳ ಹೆಣ ಮಣ್ಣಿನ ಪಾತ್ರೆಯಲ್ಲಿ ಬಿದ್ದರೆ ಆ ಪಾತ್ರೆಯಲ್ಲಿರುವುದೆಲ್ಲಾ ಅಶುದ್ಧವಾಗಿರುವುದು ಮತ್ತು ಆ ಪಾತ್ರೆಯನ್ನು ನೀವು ಒಡೆದುಬಿಡಬೇಕು.


ಸ್ರಾವವುಳ್ಳವನು ಮುಟ್ಟಿದ ಮಣ್ಣಿನ ಪಾತ್ರೆಯನ್ನು ಒಡೆದುಬಿಡಬೇಕು. ಅವನು ಮರದ ಪಾತ್ರೆಯನ್ನು ಮುಟ್ಟಿದರೆ ಅದನ್ನು ನೀರಿನಿಂದ ತೊಳೆಯಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು