Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 7:1 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 “‘ಪ್ರಾಯಶ್ಚಿತ್ತಯಜ್ಞದ ನಿಯಮಗಳು: ಆ ಯಜ್ಞವು ಮಹಾಪರಿಶುದ್ಧವಾದದ್ದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 “ಪ್ರಾಯಶ್ಚಿತ್ತ ಬಲಿ ನಿಯಮಗಳು ಹೀಗಿವೆ: ಈ ಬಲಿ ಮಹಾಪರಿಶುದ್ಧವಾದುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಪ್ರಾಯಶ್ಚಿತ್ತ ಯಜ್ಞನಿಯಮಗಳು. ಆ ಯಜ್ಞವು ಮಹಾಪರಿಶುದ್ಧವಾದದ್ದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 “ದೋಷಪರಿಹಾರಕ ಯಜ್ಞದ ನಿಯಮಗಳು: ಅದು ಪವಿತ್ರವಾದದ್ದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 “ ‘ಇವು ಪ್ರಾಯಶ್ಚಿತ್ತ ಬಲಿಯ ನಿಯಮಗಳು: ಇದು ಮಹಾಪರಿಶುದ್ಧವಾದದ್ದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 7:1
17 ತಿಳಿವುಗಳ ಹೋಲಿಕೆ  

“ನೀನು ಆರೋನನಿಗೂ ಮತ್ತು ಅವನ ವಂಶದವರಿಗೂ ಹೀಗೆ ಆಜ್ಞಾಪಿಸು, ‘ದೋಷಪರಿಹಾರಕ ಯಜ್ಞದ ನಿಯಮಗಳು: ಸರ್ವಾಂಗಹೋಮದ ಪಶುವನ್ನು ವಧಿಸುವ ಸ್ಥಳದಲ್ಲೇ ದೋಷಪರಿಹಾರಕ ಯಜ್ಞಪಶುವನ್ನು ಯೆಹೋವನ ಸನ್ನಿಧಿಯಲ್ಲಿ ವಧಿಸಬೇಕು. ಅದು ಮಹಾಪರಿಶುದ್ಧವಾದದ್ದು.


ಅದಕ್ಕೆ ಹುಳಿಹಿಟ್ಟು ಸೇರಿಸಿ ಸುಡಬಾರದು. ನನಗೆ ಹೋಮರೂಪವಾಗಿ ಸಮರ್ಪಿಸಿದ ದ್ರವ್ಯಗಳಲ್ಲಿ ಅದನ್ನು ಅವರ ಪಾಲಿಗೆ ಬಿಟ್ಟಿದ್ದೇನೆ. ದೋಷಪರಿಹಾರಕ ಯಜ್ಞದ್ರವ್ಯದಂತೆಯೂ ಮತ್ತು ಪ್ರಾಯಶ್ಚಿತ್ತ ಯಜ್ಞದ್ರವ್ಯದಂತೆಯೂ ಅದು ಮಹಾಪರಿಶುದ್ಧವಾದದ್ದು.


ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ,


ಆಗ ಅವನು ನನಗೆ, “ಯಾಜಕರು ಅಪರಾಧ ಬಲಿಯನ್ನೂ, ಪ್ರಾಯಶ್ಚಿತ್ತಯಜ್ಞ ಬಲಿಯನ್ನೂ, ಬೇಯಿಸಿದ ಧಾನ್ಯನೈವೇದ್ಯವನ್ನು ಸುಡುವುದಕ್ಕೆ ಏರ್ಪಡಿಸಿರುವ ಪರಿಶುದ್ಧ ಸ್ಥಳವು ಇದೆ” ಎಂದು ಹೇಳಿದನು.


ಅವರು ಧಾನ್ಯನೈವೇದ್ಯವನ್ನೂ ದೋಷಪರಿಹಾರಕ ಯಜ್ಞದ್ರವ್ಯವನ್ನೂ, ಪ್ರಾಯಶ್ಚಿತ್ತ ಯಜ್ಞದ್ರವ್ಯವನ್ನೂ ಅನುಭವಿಸಲಿ; ಕೇವಲ ಯೆಹೋವನದಾಗಿಯೇ ಇರಲೆಂದು ಇಸ್ರಾಯೇಲರಲ್ಲಿ ಹರಕೆ ಮಾಡಿದ್ದೆಲ್ಲವೂ ಅವರಿಗೆ ಸಲ್ಲಬೇಕು.


ಹೆಬ್ಬಾಗಿಲಿನ ಕೈಸಾಲೆಯಲ್ಲಿ ಎರಡು ಕಡೆಯಲ್ಲಿಯೂ ಎರಡೆರಡು ಪೀಠಗಳಿದ್ದವು; ಅವುಗಳ ಮೇಲೆ ಸರ್ವಾಂಗಹೋಮ ಪಶು, ದೋಷಪರಿಹಾರಕ ಯಜ್ಞ ಪಶು, ಪ್ರಾಯಶ್ಚಿತ್ತಯಜ್ಞ ಪಶು ಇವುಗಳನ್ನು ವಧಿಸುತ್ತಿದ್ದರು.


ಅವನು ಎಷ್ಟು ದಿನಗಳವರೆಗೆ ತನ್ನನ್ನು ಪ್ರತಿಷ್ಠಿಸಿಕೊಂಡಿದ್ದಾನೋ, ಅಷ್ಟು ದಿನಗಳವರೆಗೆ ಹೊಸದಾಗಿ ತನ್ನನ್ನು ಯೆಹೋವನಿಗೆ ಪ್ರತಿಷ್ಠಿಸಿಕೊಳ್ಳಬೇಕು ಮತ್ತು ಪ್ರಾಯಶ್ಚಿತ್ತಯಜ್ಞವಾಗಿ ಒಂದು ವರ್ಷದ ಕುರಿಮರಿಯನ್ನು ಸಮರ್ಪಿಸಬೇಕು. ಮೊದಲು ಮಾಡಿದ್ದ ಹರಕೆಗೆ ವಿಘ್ನಪ್ರಾಪ್ತವಾದುದರಿಂದ ಕಳೆದುಹೋದ ದಿನಗಳು ವ್ಯರ್ಥವಾದುದೆಂದು ಪರಿಗಣಿಸಬೇಕು.


ದೇವರಿಗೆ ನೈವೇದ್ಯವಾದ ಆಹಾರದಲ್ಲಿ ಪರಿಶುದ್ಧವಾದದ್ದನ್ನು ಮತ್ತು ಮಹಾಪರಿಶುದ್ಧವಾದುದನ್ನು ಅವನು ಊಟಮಾಡಬಹುದು.


“‘ಎರಡು ಬೆಳವಕ್ಕಿಗಳನ್ನಾಗಲಿ ಅಥವಾ ಎರಡು ಪಾರಿವಾಳದ ಮರಿಗಳನ್ನಾಗಲಿ ಕೊಡುವುದಕ್ಕೂ ಗತಿಯಿಲ್ಲದೆ ಹೋದರೆ, ಅವನು ದೋಷಪರಿಹಾರಕ್ಕಾಗಿ ಮೂರು ಸೇರು ಗೋದಿಹಿಟ್ಟನ್ನು ತರಬೇಕು. ಆ ಹೋಮದ್ರವ್ಯವು ದೋಷಪರಿಹಾರಾರ್ಥವಾಗಿ ಇರುವುದರಿಂದ ಅದರ ಮೇಲೆ ಎಣ್ಣೆಯನ್ನು ಹೊಯ್ಯಬಾರದು ಅಥವಾ ಧೂಪವನ್ನು ಇಡಬಾರದು.


ಅವನು ಅವುಗಳನ್ನು ಯಾಜಕನ ಬಳಿಗೆ ತಂದಾಗ ಯಾಜಕನು ಮೊದಲು ದೋಷಪರಿಹಾರಾರ್ಥವಾದದ್ದನ್ನು ಸಮರ್ಪಿಸಬೇಕು. ಅವನು ಅದರ ಕುತ್ತಿಗೆ ಮುರಿಯಬೇಕು; ಆದರೆ ತಲೆಯನ್ನು ಪೂರ್ಣವಾಗಿ ತೆಗೆದುಬಿಡಬಾರದು.


“‘ಕುರಿಯನ್ನು ಕೊಡುವುದಕ್ಕೆ ಅವನಿಗೆ ಗತಿಯಿಲ್ಲದ ಪಕ್ಷದಲ್ಲಿ ದೋಷದ ಪ್ರಾಯಶ್ಚಿತ್ತಕ್ಕಾಗಿ ಎರಡು ಬೆಳವಕ್ಕಿಗಳನ್ನಾಗಲಿ ಅಥವಾ ಎರಡು ಪಾರಿವಾಳದ ಮರಿಗಳನ್ನಾಗಲಿ ತೆಗೆದುಕೊಂಡು ಬಂದು, ಒಂದನ್ನು ದೋಷಪರಿಹಾರಕ ಯಜ್ಞವಾಗಿ ಮತ್ತೊಂದನ್ನು ಸರ್ವಾಂಗಹೋಮವಾಗಿ ಯೆಹೋವನಿಗೆ ಸಮರ್ಪಿಸಬೇಕು.


“ಯಾವನಾದರೂ ಯೆಹೋವನಿಗೆ ಸಲ್ಲಿಸಬೇಕಾದ ದೇವರ ವಸ್ತುಗಳನ್ನು ಸಮರ್ಪಿಸುವುದರಲ್ಲಿ ಅಜಾಗ್ರತೆಯಿಂದ ದ್ರೋಹಮಾಡಿ ದೋಷಕ್ಕೆ ಒಳಗಾದರೆ ಅವನು ಆ ಅಪರಾಧದ ಪ್ರಾಯಶ್ಚಿತ್ತಕ್ಕಾಗಿ ಪೂರ್ಣಾಂಗವಾದ ಟಗರನ್ನು ಆಡುಕುರಿಗಳ ಹಿಂಡಿನಿಂದ ತೆಗೆದುಕೊಂಡು ಬಂದು ಯೆಹೋವನಿಗೆ ಸಮರ್ಪಿಸಬೇಕು ಅಥವಾ ದೇವರ ಸೇವೆಗೆ ನೇಮಕವಾದ ಎರಡು ಬೆಳ್ಳಿ ನಾಣ್ಯ ಅಥವಾ ಹೆಚ್ಚು ಬೆಲೆ ಬಾಳುವ ಟಗರನ್ನು ಹಿಂಡಿನಿಂದ ತಂದು ಅರ್ಪಿಸಬೇಕು.


ಮೂಡಣದಿಕ್ಕಿನ ದ್ವಾರಪಾಲಕನಾಗಿದ್ದ ಇಮ್ನನ ಮಗನಾದ ಕೋರೆ ಎಂಬ ಲೇವಿಯನು, ಜನರು ಸ್ವಂತ ಇಚ್ಛೆಯಿಂದ ದೇವರಿಗೆ ಕಾಣಿಕೆಯಾಗಿ ಸಮರ್ಪಿಸುತ್ತಿದ್ದ ವಸ್ತುಗಳ ಮೇಲ್ವಿಚಾರಕನಾಗಿದ್ದನು. ಅಲ್ಲದೆ ಯೆಹೋವನ ನೈವೇದ್ಯಕ್ಕಾಗಿ ಪ್ರತ್ಯೇಕಿಸಲ್ಪಟ್ಟ ದ್ರವ್ಯ, ಮಹಾಪರಿಶುದ್ಧ ವಸ್ತು, ಇವುಗಳನ್ನು ಹಂಚಿಕೊಡುವವನೂ ಆಗಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು