Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 7:31 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

31 ಯಾಜಕನು ಆ ಕೊಬ್ಬನ್ನು ಯಜ್ಞವೇದಿಯ ಮೇಲೆ ಹೋಮಮಾಡಬೇಕು; ಎದೆಯ ಭಾಗವು ಆರೋನನಿಗೂ ಮತ್ತು ಅವನ ವಂಶದವರಿಗೂ ಸೇರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

31 ಯಾಜಕನು ಆ ಕೊಬ್ಬನ್ನು ಬಲಿಪೀಠದ ಮೇಲೆ ಹೋಮಮಾಡಬೇಕು. ಎದೆಯ ಭಾಗ ಆರೋನನಿಗೂ ಅವನ ವಂಶಜರಿಗೂ ಸೇರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

31 ಯಾಜಕನು ಆ ಕೊಬ್ಬನ್ನು ಯಜ್ಞವೇದಿಯ ಮೇಲೆ ಹೋಮಮಾಡಬೇಕು; ಎದೆಯ ಭಾಗವು ಆರೋನನಿಗೂ ಅವನ ವಂಶದವರಿಗೂ ಆಗಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

31 ಬಳಿಕ ಯಾಜಕನು ವೇದಿಕೆಯ ಮೇಲೆ ಕೊಬ್ಬನ್ನು ಹೋಮಮಾಡಬೇಕು. ಆದರೆ ಪಶುವಿನ ಎದೆಯ ಭಾಗವು ಆರೋನನಿಗೂ ಅವನ ಪುತ್ರರಿಗೂ ಸೇರಿದ್ದಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

31 ಯಾಜಕನು ಆ ಕೊಬ್ಬನ್ನು ಬಲಿಪೀಠದ ಮೇಲೆ ಸುಡಬೇಕು. ಆದರೆ ಎದೆಯು ಆರೋನನ ಮತ್ತು ಅವನ ಮಕ್ಕಳಿಗೆ ಸೇರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 7:31
13 ತಿಳಿವುಗಳ ಹೋಲಿಕೆ  

ಇಸ್ರಾಯೇಲರು ಸಮಾಧಾನಯಜ್ಞಪಶುವಿನ ಮಾಂಸದಲ್ಲಿ ನೈವೇದ್ಯರೂಪವಾಗಿ ನಿವಾಳಿಸುವ ಎದೆಯ ಭಾಗವನ್ನು ಮತ್ತು ಯಾಜಕನಿಗೋಸ್ಕರ ಪ್ರತ್ಯೇಕಿಸುವ ತೊಡೆಯನ್ನು ನಾನು ತೆಗೆದುಕೊಂಡು ಮಹಾಯಾಜಕನಾದ ಆರೋನನಿಗೂ ಹಾಗು ಅವನ ವಂಶದವರಿಗೂ ಕೊಟ್ಟು ಇವು ಇಸ್ರಾಯೇಲರಿಂದ ಯಾಜಕರಿಗೆ ಯಾವಾಗಲೂ ಸಲ್ಲಬೇಕೆಂದು ಶಾಶ್ವತವಾದ ನಿಯಮವನ್ನು ಮಾಡಿದ್ದೇನೆ’” ಎಂದು ಹೇಳಿದನು.


ಯಾಜಕನು ಅದನ್ನು ಯಜ್ಞವೇದಿಯ ಮೇಲೆ ಹೋಮಮಾಡಬೇಕು. ಅದು ಯೆಹೋವನಿಗೆ ಸುಗಂಧಹೋಮದ ರೂಪವಾಗಿ ಅರ್ಪಿಸಿದ ಆಹಾರವಾಗಿರುವುದು. ಯಜ್ಞಪಶುಗಳ ಕೊಬ್ಬೆಲ್ಲವೂ ಯೆಹೋವನದು.


ಯಾಜಕನು ಯಜ್ಞವೇದಿಯ ಮೇಲೆ ಅವುಗಳನ್ನು ಹೋಮಮಾಡಬೇಕು. ಅದು ಯೆಹೋವನಿಗೆ ಅಗ್ನಿಯ ಮೂಲಕವಾಗಿ ಅರ್ಪಿಸಿದ ಆಹಾರವಾಗುವುದು.


ಆರೋನನ ವಂಶದವರಾದ ಯಾಜಕರು ಅದನ್ನು ಯಜ್ಞವೇದಿಯಲ್ಲಿ ಉರಿಯುವ ಕಟ್ಟಿಗೆಯ ಮೇಲಿರುವ ಸರ್ವಾಂಗಹೋಮ ದ್ರವ್ಯದೊಡನೆ ಹೋಮಮಾಡಬೇಕು. ಅದು ಯೆಹೋವನಿಗೆ ಸುಗಂಧಹೋಮ ಆಗಿರುವುದು.


ಅವುಗಳ ಮಾಂಸವು ಸಮಾಧಾನಯಜ್ಞಗಳಲ್ಲಿ ನೈವೇದ್ಯವಾಗಿ ನಿವಾಳಿಸುವ ಎದೆಯ ಭಾಗದಂತೆಯೂ, ಬಲತೊಡೆಯಂತೆಯೂ ನಿನಗೇ ಸಲ್ಲಬೇಕು.


ಮೋಶೆ ಅದರ ಎದೆಯ ಭಾಗವನ್ನು ತೆಗೆದುಕೊಂಡು ನೈವೇದ್ಯವಾಗಿ ಯೆಹೋವನ ಸನ್ನಿಧಿಯಲ್ಲಿ ನಿವಾಳಿಸಿದನು. ಯೆಹೋವನು ಆಜ್ಞಾಪಿಸಿದಂತೆ ಆ ಪಟ್ಟಾಭಿಷೇಕಯಜ್ಞದ ಟಗರಿನಲ್ಲಿ ಆ ಎದೆಯ ಭಾಗವೇ ಮೋಶೆಗೆ ಸಲ್ಲಬೇಕಾದದ್ದು.


ಅದನ್ನು ಸಮರ್ಪಿಸುವ ಯಾಜಕನು ಅದರ ಮಾಂಸವನ್ನು ಊಟಮಾಡಬೇಕು. ಪವಿತ್ರಸ್ಥಳದೊಳಗೆ ಅಂದರೆ ದೇವದರ್ಶನದ ಗುಡಾರದ ಅಂಗಳದಲ್ಲಿ ಅದನ್ನು ಊಟಮಾಡಬೇಕು.


ಉಳಿದದ್ದನ್ನು ಆರೋನನೂ ಮತ್ತು ಅವನ ವಂಶದವರೂ ತಿನ್ನಬಹುದು; ಅವರು ಅದರಿಂದ ಹುಳಿಯಿಲ್ಲದ ರೊಟ್ಟಿಗಳನ್ನು ಮಾಡಿಸಿಕೊಂಡು ಪವಿತ್ರಸ್ಥಳದೊಳಗೆ ಅಂದರೆ ದೇವದರ್ಶನದ ಗುಡಾರದ ಅಂಗಳದಲ್ಲಿ ತಿನ್ನಬೇಕು.


ಮೇಲೆ ಕಂಡ ವಿಷಯಗಳಲ್ಲಿ ಯಾವ ವಿಧವಾಗಿ ಅವನು ದೋಷಿಯಾದರೂ, ಯಾಜಕನು ಅವನಿಗೋಸ್ಕರ ಹೀಗೆ ದೋಷಪರಿಹಾರವನ್ನು ಮಾಡಿದನಂತರ ಅವನಿಗೆ ಕ್ಷಮಾಪಣೆಯಾಗುವುದು. ಧಾನ್ಯನೈವೇದ್ಯ ದ್ರವ್ಯದಲ್ಲಿ ಉಳಿದದ್ದು ಹೇಗೆ ಯಾಜಕನಿಗೆ ಸಲ್ಲುತ್ತದೋ ಇದರಲ್ಲಿಯೂ ಉಳಿದದ್ದು ಯಾಜಕನಿಗೆ ಸಲ್ಲಬೇಕು.’”


ದೇವಾಲಯದಲ್ಲಿ ಸೇವೆ ಸಲ್ಲಿಸುವವರು ದೇವಾಲಯದಿಂದ ತಮ್ಮ ಬದುಕನ್ನು ಸಾಗಿಸಬೇಕೆಂದೂ ಮತ್ತು ಯಜ್ಞವೇದಿಯ ಬಳಿ ಸೇವೆಮಾಡುವವರು ಆ ವೇದಿಗೆ ಬರುವ ಪದಾರ್ಥಗಳಲ್ಲಿ ಪಾಲುಹೊಂದುತ್ತಾರೆಂಬುದೂ ನಿಮಗೆ ತಿಳಿಯದೋ?


ಮತ್ತು ಆರೋನನ ಪಟ್ಟಾಭೀಷೇಕಕ್ಕಾಗಿ ಪ್ರತಿಷ್ಠಿಸಿದ ಟಗರಿನ ಎದೆಯ ಭಾಗವನ್ನು ತೆಗೆದುಕೊಂಡು ಅದನ್ನು ನೈವೇದ್ಯವಾಗಿ ಯೆಹೋವನ ಸನ್ನಿಧಿಯಲ್ಲಿ ನಿವಾಳಿಸಬೇಕು. ಅದು ನಿನಗೇ ಸಲ್ಲತಕ್ಕ ಪಾಲಾಗಿರುತ್ತದೆ.


“ಇದಲ್ಲದೆ ಇಸ್ರಾಯೇಲರು ಮಾಡುವ ಸಮಾಧಾನಯಜ್ಞಗಳಿಂದ ನನಗೋಸ್ಕರ ಪ್ರತ್ಯೇಕಿಸಿಕೊಡುವ ದ್ರವ್ಯಗಳೂ, ನೈವೇದ್ಯವಾಗಿ ನಿವಾಳಿಸುವ ದ್ರವ್ಯಗಳೂ ನಿಮಗೆ ಸೇರಬೇಕು. ಇವು ನಿನಗೂ, ನಿನ್ನ ಸಂತತಿಯವರಾದ ಸ್ತ್ರೀಪುರುಷರೆಲ್ಲರಿಗೂ ಶಾಶ್ವತ ನಿಯಮವಾಗಿ ಸಲ್ಲಬೇಕೆಂದು ಅನುಗ್ರಹಿಸಿದ್ದೇನೆ. ಇವುಗಳನ್ನು ನಿಮ್ಮ ಮನೆಗಳಲ್ಲಿರುವ ಶುದ್ಧರಾದವರೆಲ್ಲರೂ ಊಟ ಮಾಡಬಹುದು.


ಜನರ ಕಡೆಯಿಂದ ಯಾಜಕರು ಹೊಂದಬೇಕಾದವುಗಳು ಯಾವುವೆಂದರೆ: ದನಗಳಲ್ಲಿಯಾಗಲಿ, ಆಡು ಮತ್ತು ಕುರಿಗಳಲ್ಲಿಯಾಗಲಿ ಪಶುವನ್ನು ಕೊಯಿದು ಯಜ್ಞಮಾಡುವವರೆಲ್ಲರೂ ಅದರ ಮುಂದೊಡೆಯನ್ನೂ, ಎರಡು ದವಡೆಗಳನ್ನೂ, ಕೋಷ್ಠವನ್ನೂ (ಒಳಭಾಗವನ್ನು) ಯಾಜಕರಿಗೆ ಕೊಡಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು