Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 8:14 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಅನಂತರ ಅವನು ದೋಷಪರಿಹಾರಕ್ಕಾಗಿ ಹೋರಿಯನ್ನು ತರಿಸಿದನು. ಆಗ ಆರೋನನೂ ಮತ್ತು ಅವನ ಮಕ್ಕಳೂ ತಮ್ಮ ಕೈಗಳನ್ನು ಅದರ ತಲೆಯ ಮೇಲೆ ಇಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಅನಂತರ ಅವನು ದೋಷಪರಿಹಾರಾರ್ಥವಾದ ಹೋರಿಯನ್ನು ತರಿಸಿದನು. ಆರೋನನು ಮತ್ತು ಅವನ ಮಕ್ಕಳು ತಮ್ಮ ಕೈಗಳನ್ನು ಅದರ ತಲೆಯ ಮೇಲೆ ಚಾಚಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಅನಂತರ ಅವನು ದೋಷಪರಿಹಾರಾರ್ಥವಾದ ಹೋರಿಯನ್ನು ತರಿಸಿದನು. ಆರೋನನೂ ಅವನ ಮಕ್ಕಳೂ ತಮ್ಮ ಕೈಗಳನ್ನು ಅದರ ತಲೆಯ ಮೇಲೆ ಇಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ತರುವಾಯ ಮೋಶೆಯು ಪಾಪಪರಿಹಾರಕ್ಕಾಗಿ ಯಜ್ಞದ ಹೋರಿಯನ್ನು ತಂದನು. ಆರೋನನು ಮತ್ತು ಅವನ ಪುತ್ರರು ಆ ಪಾಪಪರಿಹಾರಕ ಯಜ್ಞದ ಹೋರಿಯ ತಲೆಯ ಮೇಲೆ ತಮ್ಮ ಕೈಗಳನ್ನು ಇಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಪಾಪ ಪರಿಹಾರದ ಬಲಿಗಾಗಿ ಅವನು ಹೋರಿಯನ್ನು ತಂದನು. ಆರೋನನೂ ಅವನ ಪುತ್ರರೂ ಪಾಪ ಪರಿಹಾರದ ಬಲಿಗಾಗಿ ಆ ಹೋರಿಯ ತಲೆಯ ಮೇಲೆ ತಮ್ಮ ಕೈಗಳನ್ನು ಇಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 8:14
17 ತಿಳಿವುಗಳ ಹೋಲಿಕೆ  

ಲೇವಿಯರೂ, ಚಾದೋಕನ ಸಂತಾನದವರೂ, ನನ್ನ ಸನ್ನಿಧಿಸೇವಕರೂ ಆದ ಯಾಜಕರಿಗೆ ನೀನು ಒಂದು ಹೋರಿಯನ್ನು ದೋಷ ಪರಿಹಾರಕಯಜ್ಞಕ್ಕಾಗಿ ಕೊಡು ಇದು ಕರ್ತನಾದ ಯೆಹೋವನ ನುಡಿ.


ಕ್ರಿಸ್ತನು ಸಹ ನೀತಿವಂತನಾಗಿದ್ದು ಅನೀತಿವಂತರಿಗೋಸ್ಕರ ಪ್ರಾಣ ಕೊಟ್ಟು ನಮ್ಮನ್ನು ದೇವರ ಬಳಿಗೆ ಸೇರಿಸುವುದಕ್ಕಾಗಿ ಒಂದೇ ಸಾರಿ ಪಾಪನಿವಾರಣೆಗೋಸ್ಕರ ಬಾಧೆಪಟ್ಟು ಸತ್ತನು. ಆತನು ಶರೀರಸಂಬಂಧವಾಗಿ ಕೊಲ್ಲಲ್ಪಟ್ಟು, ಆತ್ಮ ಸಂಬಂಧವಾಗಿ ತಿರುಗಿ ಬದುಕುವವನಾದನು.


ಪಾಪವನ್ನೇ ಅರಿಯದ ಕ್ರಿಸ್ತ ಯೇಸುವನ್ನು ದೇವರು ನಮಗೋಸ್ಕರ ಪಾಪಸ್ವರೂಪಿಯನ್ನಾಗಿಸಿದರು. ಕ್ರಿಸ್ತ ಯೇಸುವಿನಲ್ಲಿ ನಾವು ನೀತಿವಂತರಾಗಬೇಕೆಂದು ದೇವರು ಹೀಗೆ ಮಾಡಿದರು.


ಧರ್ಮಶಾಸ್ತ್ರವು ನಮ್ಮ ಶರೀರಾಧೀನಸ್ವಭಾವದ ನಿಮಿತ್ತ ದುರ್ಬಲವಾಗಿ ಯಾವ ಕೆಲಸವನ್ನು ಮಾಡಲಾರದೆ ಇತ್ತೋ, ಅದನ್ನು ದೇವರೇ ಮಾಡಿದನು. ಹೇಗೆಂದರೆ ಆತನು ಪಾಪನಿವಾರಣೆಗಾಗಿ ತನ್ನ ಮಗನನ್ನು ಪಾಪಾಧೀನವಾದ ಶರೀರ ರೂಪದಲ್ಲಿ ಕಳುಹಿಸಿಕೊಟ್ಟು ಶರೀರದಲ್ಲಿಯೇ ಪಾಪಕ್ಕೆ ಮರಣದಂಡನೆಯನ್ನು ವಿಧಿಸಿದನು.


ಅವನನ್ನು ಜಜ್ಜುವುದು ಯೆಹೋವನ ಸಂಕಲ್ಪವಾಗಿತ್ತು. ಆತನು ಅವನನ್ನು ವ್ಯಾಧಿಯಿಂದ ಬಾಧಿಸಿ ಹೀಗೆಂದುಕೊಂಡನು, ಇವನು ತನ್ನ ಆತ್ಮವನ್ನು ಪ್ರಾಯಶ್ಚಿತ್ತಯಜ್ಞಕ್ಕಾಗಿ ಒಪ್ಪಿಸಿದ ಮೇಲೆ ತನ್ನ ಸಂತಾನವನ್ನು ನೋಡುವನು, ಚಿರಂಜೀವಿಯಾಗುವನು, ನನ್ನ ಸಂಕಲ್ಪವು ಇವನ ಕೈಯಿಂದ ನೆರವೇರುವುದು;


ನಿನಗೆ ಟಗರು ಮುಂತಾದ ಪುಷ್ಟಪಶುಗಳನ್ನು ಯಜ್ಞರೂಪವಾಗಿ ಸಮರ್ಪಿಸಿ, ಸುವಾಸನೆಯನ್ನು ಉಂಟುಮಾಡುವೆನು; ಯಜ್ಞಕ್ಕಾಗಿ ಹೋತ ಮತ್ತು ಹೋರಿಗಳನ್ನು ಅರ್ಪಿಸುವೆನು. ಸೆಲಾ


ಅವನು ಅದರ ತಲೆಯ ಮೇಲೆ ಎರಡು ಕೈಗಳನ್ನು ಇಟ್ಟು, ಇಸ್ರಾಯೇಲರ ಎಲ್ಲಾ ಪಾಪಗಳನ್ನು, ದ್ರೋಹಗಳನ್ನು ಮತ್ತು ಅಪರಾಧಗಳನ್ನು ಯೆಹೋವನಿಗೆ ಅರಿಕೆಮಾಡಿ ಆ ಹೋತದ ತಲೆಯ ಮೇಲೆ ಹೊರಿಸಿ, ಅದನ್ನು ಆ ಕೆಲಸಕ್ಕೆ ನೇಮಕವಾದವನ ಕೈಯಿಂದ ಅರಣ್ಯಕ್ಕೆ ಕಳುಹಿಸಿಬಿಡಬೇಕು.


ಆರೋನನು ತನಗಾಗಿಯೂ ಮತ್ತು ತನ್ನ ಮನೆತನದವರಿಗಾಗಿಯೂ ದೋಷಪರಿಹಾರ ಮಾಡಬೇಕು.


“ನೀನು ಆರೋನನನ್ನು ಮತ್ತು ಅವನ ಗಂಡು ಮಕ್ಕಳನ್ನು ಕರೆದುಕೊಂಡು ಅವರಿಗೆ ಬೇಕಾದ ದೀಕ್ಷಾವಸ್ತ್ರಗಳನ್ನು ಮತ್ತು ಅಭಿಷೇಕತೈಲವನ್ನು, ದೋಷಪರಿಹಾರಕ್ಕಾಗಿ ಸಮರ್ಪಿಸಬೇಕಾದ ಹೋರಿಯನ್ನು, ಎರಡು ಟಗರುಗಳನ್ನು ಮತ್ತು ಹುಳಿಯಿಲ್ಲದ ಭಕ್ಷ್ಯಗಳು ತುಂಬಿರುವ ಪುಟ್ಟಿಯನ್ನು ತೆಗೆದುಕೊಂಡುಬಂದು,


ಅವನು ಆ ಯಜ್ಞ ಪಶುವಿನ ತಲೆಯ ಮೇಲೆ ಕೈಯಿಡಬೇಕು; ಆಗ ಅದು ಅವನಿಗೋಸ್ಕರ ದೋಷಪರಿಹಾರವನ್ನು ಮಾಡುವುದಕ್ಕಾಗಿ ಅಂಗೀಕಾರವಾಗುವುದು.


ಸಮೂಹದ ಹಿರಿಯರು ಯೆಹೋವನ ಸನ್ನಿಧಿಯಲ್ಲಿ ಅದರ ತಲೆಯ ಮೇಲೆ ತಮ್ಮ ಕೈಗಳನ್ನಿಟ್ಟು ಯೆಹೋವನ ಸನ್ನಿಧಿಯಲ್ಲಿ ಅದನ್ನು ವಧಿಸಬೇಕು.


“ಲೇವಿಯರು ಆ ಹೋರಿಗಳ ತಲೆಯ ಮೇಲೆ ತಮ್ಮ ಕೈಗಳನ್ನಿಡಬೇಕು. ನಂತರ ನೀನು ಯೆಹೋವನಿಗೆ ದೋಷಪರಿಹಾರಕ ಯಜ್ಞವಾಗಿ ಒಂದು ಹೋರಿಯನ್ನೂ, ಸರ್ವಾಂಗಹೋಮವಾಗಿ ಮತ್ತೊಂದು ಹೋರಿಯನ್ನು ಸಮರ್ಪಿಸಬೇಕು. ಅವರಿಗೋಸ್ಕರ ದೋಷಪರಿಹಾರವನ್ನು ಮಾಡಬೇಕು.


ಆಮೇಲೆ ಅದರ ರಕ್ತದಲ್ಲಿ ಸ್ವಲ್ಪವನ್ನು ನೀನು ತೆಗೆದುಕೊಂಡು ಯಜ್ಞವೇದಿಯ ನಾಲ್ಕು ಕೊಂಬುಗಳಿಗೂ, ದೊಡ್ಡ ಅಂತಸ್ತಿನ ನಾಲ್ಕು ಮೂಲೆಗಳಿಗೂ, ಸುತ್ತಣ ದಿಂಡಿಗೂ ಹಚ್ಚಿ, ಯಜ್ಞವೇದಿಯ ದೋಷವನ್ನು ಪರಿಹರಿಸಿ ಅದನ್ನು ಶುದ್ಧಿಮಾಡು.


ಅವನು ಸೇವೆಮಾಡಲು ಪವಿತ್ರಾಲಯವನ್ನು ಪ್ರವೇಶಿಸಿ, ಒಳಗಿನ ಅಂಗಳಕ್ಕೆ ಸೇರುವ ದಿನದಲ್ಲಿ ತನ್ನ ದೋಷಪರಿಹಾರಕ್ಕಾಗಿ ಬಲಿಯನ್ನು ಅರ್ಪಿಸಬೇಕು.” ಇದು ಕರ್ತನಾದ ಯೆಹೋವನ ನುಡಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು