Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 8:15 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಆ ಹೋರಿಯನ್ನು ವಧಿಸಿದ ಮೇಲೆ ಮೋಶೆ ಅದರ ರಕ್ತವನ್ನು ತನ್ನ ಬೆರಳಿನಿಂದ ಯಜ್ಞವೇದಿಯ ಕೊಂಬುಗಳಿಗೆ ಸುತ್ತಲೂ ಹಚ್ಚಿ, ಯಜ್ಞವೇದಿಯನ್ನು ಶುದ್ಧಪಡಿಸಿ, ಉಳಿದ ರಕ್ತವನ್ನು ಯಜ್ಞವೇದಿಯ ಬುಡದಲ್ಲಿ ಸುರಿದುಬಿಟ್ಟನು. ಇದರ ನಿಮಿತ್ತ ದೋಷಪರಿಹಾರಕ ಆಚಾರವನ್ನು ನಡೆಸಿ, ಅದನ್ನು ಪ್ರತಿಷ್ಠಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಆ ಹೋರಿಯನ್ನು ವಧಿಸಿದ ಮೇಲೆ ಮೋಶೆ ಅದರ ರಕ್ತವನ್ನು ತನ್ನ ಬೆರಳಿನಿಂದ ಬಲಿಪೀಠದ ಕೊಂಬುಗಳಿಗೆ ಸುತ್ತಲೂ ಹಚ್ಚಿ ಬಲಿಪೀಠವನ್ನು ಪ್ರತಿಷ್ಠಿಸಿದನು. ಮಿಕ್ಕ ರಕ್ತವನ್ನು ಬಲಿಪೀಠದ ಬುಡದಲ್ಲಿ ಸುರಿದುಬಿಟ್ಟನು. ಹೀಗೆ ಬಲಿಪೀಠದ ಬಗ್ಗೆ ದೋಷಪರಿಹಾರಕ ಆಚಾರವನ್ನು ನಡೆಸಿ ಅದನ್ನು ಪವಿತ್ರೀಕರಿಸಿ ಪ್ರತಿಷ್ಠಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಆ ಹೋರಿಯನ್ನು ವಧಿಸಿದ ಮೇಲೆ ಮೋಶೆ ಅದರ ರಕ್ತವನ್ನು ತನ್ನ ಬೆರಳಿನಿಂದ ಯಜ್ಞವೇದಿಯ ಕೊಂಬುಗಳಿಗೆ ಸುತ್ತಲೂ ಹಚ್ಚಿ ಯಜ್ಞವೇದಿಯನ್ನು ಶುದ್ಧಪಡಿಸಿ ವಿುಕ್ಕ ರಕ್ತವನ್ನು ಯಜ್ಞವೇದಿಯ ಬುಡದಲ್ಲಿ ಸುರಿದುಬಿಟ್ಟನು. ಹೀಗೆ ಯಜ್ಞವೇದಿಯ ನಿವಿುತ್ತ ದೋಷಪರಿಹಾರಕಾಚಾರವನ್ನು ನಡಿಸಿ ಅದನ್ನು ಪ್ರತಿಷ್ಠಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಬಳಿಕ ಮೋಶೆಯು ಹೋರಿಯನ್ನು ವಧಿಸಿ ಅದರ ರಕ್ತವನ್ನು ತೆಗೆದುಕೊಂಡು ಆ ರಕ್ತದಲ್ಲಿ ತನ್ನ ಬೆರಳನ್ನು ಅದ್ದಿ ವೇದಿಕೆಯ ಎಲ್ಲಾ ಮೂಲೆಗಳಿಗೆ ರಕ್ತವನ್ನು ಹಚ್ಚಿದನು. ಹೀಗೆ ಮೋಶೆಯು ವೇದಿಕೆಯನ್ನು ಯಜ್ಞಗಳಿಗಾಗಿ ಶುದ್ಧಗೊಳಿಸಿ ರಕ್ತವನ್ನು ವೇದಿಕೆಯ ಬುಡದಲ್ಲಿ ಸುರಿದನು; ಜನರನ್ನು ಶುದ್ಧಿಮಾಡುವ ಯಜ್ಞಗಳನ್ನು ಸಮರ್ಪಿಸುವುದಕ್ಕಾಗಿ ವೇದಿಕೆಯನ್ನು ಪ್ರತಿಷ್ಠೆಗೊಳಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಆಗ ಅವನು ಅದನ್ನು ವಧಿಸಿದನು. ಮೋಶೆಯು ಅದರ ರಕ್ತವನ್ನು ತೆಗೆದುಕೊಂಡು, ಬಲಿಪೀಠದ ಸುತ್ತಲೂ ಇರುವ ಕೊಂಬುಗಳ ಮೇಲೆ ತನ್ನ ಬೆರಳಿನಿಂದ ಹಚ್ಚಿ, ಬಲಿಪೀಠವನ್ನು ಶುದ್ಧೀಕರಿಸಿ, ಉಳಿದ ರಕ್ತವನ್ನು ಬಲಿಪೀಠದ ಅಡಿಯಲ್ಲಿ ಹೊಯ್ದನು. ಅದರ ಮೇಲೆ ಪ್ರಾಯಶ್ಚಿತ್ತ ಮಾಡುವುದಕ್ಕಾಗಿ ಅದನ್ನು ಪವಿತ್ರ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 8:15
23 ತಿಳಿವುಗಳ ಹೋಲಿಕೆ  

ಆಗ ಯಾಜಕನು ದೇವದರ್ಶನದ ಗುಡಾರದೊಳಗೆ ಯೆಹೋವನ ಸನ್ನಿಧಿಯಲ್ಲಿರುವ ಪರಿಮಳಧೂಪವೇದಿಯ ಕೊಂಬುಗಳಿಗೆ ಆ ರಕ್ತವನ್ನು ಹಚ್ಚಿ, ಹೋರಿಯ ಉಳಿದ ರಕ್ತವನ್ನೆಲ್ಲಾ ದೇವದರ್ಶನದ ಗುಡಾರದ ಬಾಗಿಲಿಗೆ ಎದುರಾಗಿ ಸರ್ವಾಂಗಹೋಮಮಾಡುವ ಯಜ್ಞವೇದಿಯ ಬುಡದಲ್ಲಿ ಸುರಿದುಬಿಡಬೇಕು.


ಆದುದರಿಂದ ಆತನು ಎಲ್ಲಾ ವಿಷಯಗಳಲ್ಲಿಯೂ ತನ್ನ ಸಹೋದರರಿಗೆ ಸಮಾನನಾಗುವುದು ಅತ್ಯಗತ್ಯವಾಗಿತ್ತು. ಹೀಗೆ ಆತನು ಜನರ ಪಾಪಗಳನ್ನು ನಿವಾರಣೆ ಮಾಡುವುದಕ್ಕಾಗಿ, ದೇವರ ಕಾರ್ಯಗಳಲ್ಲಿ ಕರುಣೆಯೂ, ನಂಬಿಕೆಯೂ, ಉಳ್ಳ ಮಹಾಯಾಜಕನಾದನು.


ನಮ್ಮ ಮೇಲೆ ಇದ್ದ ಹಗೆತನವನ್ನು ತನ್ನ ಶಿಲುಬೆಯ ಮೇಲೆ ಇಲ್ಲವಾಗಿಸಿ, ಆ ಶಿಲುಬೆಯ ಮೂಲಕ ಉಭಯರನ್ನೂ ಒಂದೇ ಶರೀರವನ್ನಾಗಿ ಮಾಡಿ ದೇವರೊಂದಿಗೆ ಸಂಧಾನಪಡಿಸಿದ್ದಾನೆ.


ನಾವು ದೇವರಿಗೆ ಶತ್ರುಗಳಾಗಿದ್ದಾಗಲೇ ನಮಗೆ ಆತನ ಮಗನ ಮರಣದ ಮೂಲಕ ಆತನೊಂದಿಗೆ ಸಂಧಾನವಾಯಿತು ಆತನ ಕೂಡ ಸಂಧಾನವಾದ ನಮಗೆ ಮಗನ ಜೀವದಿಂದ ರಕ್ಷಣೆಯಾಗುವುದು ಅಷ್ಟೇ ನಿಶ್ಚಯವಲ್ಲವೇ?


ಅಧರ್ಮವನ್ನು ಕೊನೆಗಾಣಿಸುವುದು, ಪಾಪಗಳನ್ನು ತೀರಿಸುವುದು, ಅಪರಾಧವನ್ನು ನಿವಾರಿಸುವುದು, ಸನಾತನ ಧರ್ಮವನ್ನು ಸ್ಥಾಪಿಸುವುದು, ಕನಸನ್ನೂ ಮತ್ತು ಪ್ರವಾದಿಯ ನುಡಿಯನ್ನೂ ಮುದ್ರೆಹಾಕಿ ಯಥಾರ್ಥಮಾಡುವುದಕ್ಕೆ, ಅತಿಪರಿಶುದ್ಧವಾದದ್ದನ್ನು ಅಭಿಷೇಕಿಸುವುದು, ಇವೆಲ್ಲಾ ನೆರವೇರುವುದಕ್ಕೆ ಮೊದಲು ನಿನ್ನ ಜನಕ್ಕೂ, ನಿನ್ನ ಪರಿಶುದ್ಧ ಪುರಕ್ಕೂ ಎಪ್ಪತ್ತು ವಾರಗಳು ಕಳೆಯಬೇಕು ಎಂದು ನಿಷ್ಕರ್ಷೆಯಾಗಿದೆ.


ಅದೇ ಮೇರೆಗೆ ಏಳನೆಯ ತಿಂಗಳಿನ, ಮೊದಲನೆಯ ದಿನದಲ್ಲಿ ನೀನು ಯಜ್ಞಮಾಡಿ, ಯಾರಾದರೂ ಆಕಸ್ಮಾತ್ತಾಗಿ ಮಾಡಿದ ತಪ್ಪಿನಿಂದಾಗಲಿ, ಬುದ್ಧಿಹೀನರ ಅವಿವೇಕದಿಂದಾಗಲಿ ದೇವಾಲಯಕ್ಕೆ ಸಂಭವಿಸಿದ ದೋಷವನ್ನೆಲ್ಲಾ ಪರಿಹರಿಸಬೇಕು.


ನಂತರ ಯಾಜಕರು ಅವುಗಳನ್ನು ವಧಿಸಿ ಅವುಗಳ ರಕ್ತವನ್ನು ಸಮಸ್ತ ಇಸ್ರಾಯೇಲರ ದೋಷ ಪರಿಹಾರಕ್ಕಾಗಿ ಯಜ್ಞವೇದಿಯ ಮೇಲೆ ಸುರಿದರು. ಆ ಸರ್ವಾಂಗಹೋಮಗಳೂ, ದೋಷಪರಿಹಾರಕ ಯಜ್ಞಗಳೂ ಎಲ್ಲಾ ಇಸ್ರಾಯೇಲರಿಗಾಗಿ ಇರಬೇಕೆಂದು ಅರಸನು ಆಜ್ಞಾಪಿಸಿದ್ದನು.


“ಆರೋನನು ಮಹಾಪವಿತ್ರಸ್ಥಾನ, ದೇವದರ್ಶನದ ಗುಡಾರ, ಯಜ್ಞವೇದಿ ಇವುಗಳಿಗೋಸ್ಕರ ದೋಷಪರಿಹಾರ ಮಾಡಿ ಮುಗಿಸಿದ ಮೇಲೆ ಆ ಸಜೀವವಾದ ಹೋತವನ್ನು ತರಿಸಬೇಕು.


ಆದರೆ ದೋಷಪರಿಹಾರಕ ಯಜ್ಞಪಶುಗಳಲ್ಲಿ ಯಾವ ಪಶುವಿನ ರಕ್ತವನ್ನು ದೋಷಪರಿಹಾರಕ್ಕಾಗಿ ದೇವದರ್ಶನದ ಗುಡಾರದೊಳಗೆ, ಪವಿತ್ರ ಸ್ಥಾನದೊಳಗೆ ತಂದಿರುವರೋ ಅದರ ಮಾಂಸವನ್ನು ತಿನ್ನಲೇಬಾರದು. ಬೆಂಕಿಯಲ್ಲಿ ಸುಟ್ಟುಬಿಡಬೇಕು.


ಯಾಜಕನು ಅದರ ರಕ್ತದಲ್ಲಿ ಸ್ವಲ್ಪವನ್ನು ಬೆರಳಿನಿಂದ ತೆಗೆದುಕೊಂಡು ಯಜ್ಞವೇದಿಯ ಕೊಂಬುಗಳಿಗೆ ಹಚ್ಚಿ, ಉಳಿದ ರಕ್ತವನ್ನೆಲ್ಲಾ ಯಜ್ಞವೇದಿಯ ಬುಡದಲ್ಲಿ ಸುರಿದುಬಿಡಬೇಕು.


ಅವನು ಅದರ ತಲೆಯ ಮೇಲೆ ಕೈಯನ್ನಿಟ್ಟು ದೇವದರ್ಶನದ ಗುಡಾರದ ಎದುರಾಗಿ ಅದನ್ನು ವಧಿಸಬೇಕು. ಆರೋನನ ವಂಶದವರಾದ ಯಾಜಕರು ಅದರ ರಕ್ತವನ್ನು ಯಜ್ಞವೇದಿಯ ಸುತ್ತಲೂ ಎರಚಬೇಕು.


ಅವನು ಅದನ್ನು ಯೆಹೋವನ ಸನ್ನಿಧಿಗೆ ತಂದು ಅದರ ತಲೆಯ ಮೇಲೆ ಕೈಯನ್ನಿಟ್ಟು ದೇವದರ್ಶನದ ಗುಡಾರದ ಬಾಗಿಲಲ್ಲಿ ವಧಿಸಬೇಕು. ಆರೋನನ ವಂಶದವರಾದ ಯಾಜಕರು ಅದರ ರಕ್ತವನ್ನು ಯಜ್ಞವೇದಿಯ ಸುತ್ತಲೂ ಎರಚಬೇಕು.


ಅದನ್ನು ಯೆಹೋವನ ಸನ್ನಿಧಿಯಲ್ಲಿ ಯಜ್ಞವೇದಿಯ ಉತ್ತರ ಭಾಗದಲ್ಲಿ ವಧಿಸಬೇಕು. ತರುವಾಯ ಆರೋನನ ವಂಶದವರಾದ ಯಾಜಕರು ಅದರ ರಕ್ತವನ್ನು ಯಜ್ಞವೇದಿಯ ಸುತ್ತಲೂ ಹಾಕಬೇಕು.


“‘ಅವನು ಆ ಹೋರಿಯನ್ನು ಯೆಹೋವನ ಎದುರಿನಲ್ಲಿ ವಧಿಸಿದ ಮೇಲೆ ಆರೋನನ ವಂಶದವರಾದ ಯಾಜಕರು ಅದರ ರಕ್ತವನ್ನು ತೆಗೆದುಕೊಂಡು ದೇವದರ್ಶನದ ಗುಡಾರದ ಬಾಗಿಲಿಗೆ ಎದುರಾಗಿರುವ ಯಜ್ಞವೇದಿಯ ಸುತ್ತಲೂ ಎರಚಬೇಕು.


ಯಾಜಕನು ಆ ಪಶುರಕ್ತದಲ್ಲಿ ಸ್ವಲ್ಪವನ್ನು ಬೆರೆಳಿನಿಂದ ತೆಗೆದುಕೊಂಡು ಯಜ್ಞವೇದಿಯ ಕೊಂಬುಗಳಿಗೆ ಹಚ್ಚಿ, ಉಳಿದ ರಕ್ತವನ್ನು ಯಜ್ಞವೇದಿಯ ಬುಡದಲ್ಲಿ ಸುರಿದುಬಿಡಬೇಕು.


“ಲೇವಿಯರು ಆ ಹೋರಿಗಳ ತಲೆಯ ಮೇಲೆ ತಮ್ಮ ಕೈಗಳನ್ನಿಡಬೇಕು. ನಂತರ ನೀನು ಯೆಹೋವನಿಗೆ ದೋಷಪರಿಹಾರಕ ಯಜ್ಞವಾಗಿ ಒಂದು ಹೋರಿಯನ್ನೂ, ಸರ್ವಾಂಗಹೋಮವಾಗಿ ಮತ್ತೊಂದು ಹೋರಿಯನ್ನು ಸಮರ್ಪಿಸಬೇಕು. ಅವರಿಗೋಸ್ಕರ ದೋಷಪರಿಹಾರವನ್ನು ಮಾಡಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು