Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 9:18 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಬಳಿಕ ಜನರಿಗೋಸ್ಕರ ಸಮಾಧಾನಯಜ್ಞಕ್ಕಾಗಿ ನೇಮಕವಾದ ಹೋರಿಯನ್ನು ಮತ್ತು ಟಗರನ್ನು ವಧಿಸಿದನು. ಆರೋನನ ಮಕ್ಕಳು ಅವುಗಳ ರಕ್ತವನ್ನು ಒಪ್ಪಿಸಲಾಗಿ ಅವನು ಅದನ್ನು ಯಜ್ಞವೇದಿಯ ಸುತ್ತಲೂ ಎರಚಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಅನಂತರ ಜನರ ಪರವಾಗಿ ಶಾಂತಿಸಮಾಧಾನದ ಬಲಿದಾನಕ್ಕಾಗಿ ನೇಮಕವಾದ ಹೋರಿಯನ್ನೂ ಟಗರನ್ನೂ ವಧಿಸಿದನು. ಆರೋನನ ಮಕ್ಕಳು ಅವುಗಳ ರಕ್ತವನ್ನು ಒಪ್ಪಿಸಿದಾಗ, ಅವನು ಅದನ್ನು ಬಲಿಪೀಠದ ಸುತ್ತಲೂ ಚಿಮುಕಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಬಳಿಕ ಜನರಿಗೋಸ್ಕರ ಸಮಾಧಾನಯಜ್ಞಕ್ಕಾಗಿ ನೇಮಕವಾದ ಹೋರಿಯನ್ನೂ ಟಗರನ್ನೂ ವಧಿಸಿದನು. ಆರೋನನ ಮಕ್ಕಳು ಅವುಗಳ ರಕ್ತವನ್ನು ಒಪ್ಪಿಸಲಾಗಿ ಅವನು ಅದನ್ನು ಯಜ್ಞವೇದಿಗೆ ಸುತ್ತಲೂ ಎರಚಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಆರೋನನು ಜನರಿಗಾಗಿ ಸಮಾಧಾನಯಜ್ಞವಾದ ಹೋರಿಯನ್ನೂ ಟಗರನ್ನೂ ವಧಿಸಿದನು. ಆರೋನನ ಪುತ್ರರು ಅವುಗಳ ರಕ್ತವನ್ನು ಅವನ ಬಳಿಗೆ ತಂದರು. ಆರೋನನು ಈ ರಕ್ತವನ್ನು ಯಜ್ಞವೇದಿಕೆಯ ಸುತ್ತಲೂ ಚಿಮಿಕಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಅವನು ಜನರಿಗಾಗಿದ್ದ ಹೋರಿ ಮತ್ತು ಟಗರನ್ನು ಸಮಾಧಾನ ಬಲಿಗಳ ಯಜ್ಞಕ್ಕಾಗಿ ವಧಿಸಿದನು. ಆರೋನನ ಪುತ್ರರು ರಕ್ತವನ್ನು ಅವನ ಬಳಿಗೆ ತರಲು, ಅದನ್ನು ಅವನು ಬಲಿಪೀಠದ ಮೇಲೆ ಸುತ್ತಲೂ ಚಿಮುಕಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 9:18
7 ತಿಳಿವುಗಳ ಹೋಲಿಕೆ  

ಮತ್ತು ಆತನು ಶಿಲುಬೆಯ ಮೇಲೆ ಸುರಿಸಿದ ರಕ್ತದಿಂದ ತಾನು ಸಮಾಧಾನವನ್ನುಂಟುಮಾಡಿ, ಭೂಪರಲೋಕಗಳಲ್ಲಿರುವ ಸಮಸ್ತವನ್ನೂ ತನ್ನ ಕುಮಾರನ ಮೂಲಕ ತನಗೆ ಸಂಧಾನಪಡಿಸಿಕೊಳ್ಳಬೇಕೆಂತಲೂ ತಂದೆಯಾದ ದೇವರು ಇಚ್ಛಿಸಿದನು.


ಹೀಗಿರಲಾಗಿ ನಾವು ನಂಬಿಕೆಯಿಂದ ನೀತಿವಂತರಾದ ಕಾರಣ ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೂಲಕ ದೇವರೊಂದಿಗೆ ನಮಗೆ ಸಮಾಧಾನವುಂಟು.


ನಾವು ದೇವರಿಗೆ ಶತ್ರುಗಳಾಗಿದ್ದಾಗಲೇ ನಮಗೆ ಆತನ ಮಗನ ಮರಣದ ಮೂಲಕ ಆತನೊಂದಿಗೆ ಸಂಧಾನವಾಯಿತು ಆತನ ಕೂಡ ಸಂಧಾನವಾದ ನಮಗೆ ಮಗನ ಜೀವದಿಂದ ರಕ್ಷಣೆಯಾಗುವುದು ಅಷ್ಟೇ ನಿಶ್ಚಯವಲ್ಲವೇ?


ಆರೋನನ ಮಕ್ಕಳು ಅದರ ರಕ್ತವನ್ನು ಅವನಿಗೆ ಒಪ್ಪಿಸಿದಾಗ ಅವನು ಅದರಲ್ಲಿ ತನ್ನ ಬೆರಳನ್ನು ಅದ್ದಿ, ಯಜ್ಞವೇದಿಯ ಕೊಂಬುಗಳಿಗೆ ಹಚ್ಚಿ, ಉಳಿದ ರಕ್ತವನ್ನು ಯಜ್ಞವೇದಿಯ ಬುಡದಲ್ಲಿ ಹೊಯ್ದುಬಿಟ್ಟನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು