Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೂದನು 1:19 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಇವರು ತಮ್ಮನ್ನು ತಾವು ಪ್ರತ್ಯೇಕಿಸಿಕೊಳ್ಳುವವರೂ, ಪ್ರಾಕೃತ ಮನುಷ್ಯರೂ, ದೇವರಾತ್ಮ ಇಲ್ಲದವರೂ ಆಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಇವರು ನಿಮ್ಮಲ್ಲಿ ಭಿನ್ನಭೇದವನ್ನು ಉಂಟುಮಾಡುವವರು, ಪ್ರಾಪಂಚಿಕ ವಿಷಯಾಸಕ್ತರು; ಪವಿತ್ರಾತ್ಮರಹಿತರಾಗಿ ಬಾಳುವವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಇವರು ಭೇದಗಳನ್ನು ಉಂಟುಮಾಡುವವರೂ ಪ್ರಾಕೃತಮನುಷ್ಯರೂ ದೇವರಾತ್ಮವಿಲ್ಲದವರೂ ಆಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಈ ಜನರು ನಿಮ್ಮಲ್ಲಿ ಭೇದವನ್ನು ಹುಟ್ಟಿಸುತ್ತಾರೆ. ಈ ಜನರು ತಮ್ಮ ಪಾಪಸ್ವಭಾವದ ಅಪೇಕ್ಷೆಯಂತೆ ಮಾತ್ರ ಮಾಡುತ್ತಾರೆ. ಅವರಲ್ಲಿ ಪವಿತ್ರಾತ್ಮನಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಇವರು ನಿಮ್ಮಲ್ಲಿ ಭಿನ್ನಾಭಿಪ್ರಾಯವನ್ನು ಉಂಟುಮಾಡುವವರೂ ಪ್ರಾಪಂಚಿಕ ಮನುಷ್ಯರೂ ಪವಿತ್ರಾತ್ಮ ದೇವರಿಲ್ಲದವರೂ ಆಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

19 ಹಿ ಲೊಕಾ ಹ್ಯಾ ಜಗಾಚಿ ಲೊಕಾತ್ನಿ ಭೆದ್‍ಭಾವ್ ಯೆವ್ಕ್ ಕಾರನ್ ಹೊತಾತ್, ತೆನಿ ಹ್ಯಾ ಜಗಾಚ್ಯಾ ಆಶಾಚ್ಯಾ ಪರ್ಕಾರ್ ಚಲ್ತಾತ್, ತೆಂಚ್ಯಾಕ್ಡೆ ಪವಿತ್ರ್ ಆತ್ಮೊ ನಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೂದನು 1:19
11 ತಿಳಿವುಗಳ ಹೋಲಿಕೆ  

ಪ್ರಾಪಂಚಿಕನಾದವನು ದೇವರಾತ್ಮನ ವಿಷಯಗಳನ್ನು ಬೇಡವೆನ್ನುತ್ತಾನೆ; ಅವು ಅವನಿಗೆ ಹುಚ್ಚುಮಾತನಾಗಿ ತೋರುತ್ತವೆ; ಅವು ಆಧ್ಯಾತ್ಮದ ಮೂಲಕ ತಿಳಿದುಕೊಳ್ಳ ಬೇಕಾಗಿರುವುದರಿಂದ ಅವನು ಅವುಗಳನ್ನು ಗ್ರಹಿಸಲಾರನು.


ಆದಾಗ್ಯೂ, ನೀವೂ ದೇವರ ಆತ್ಮನ ಸ್ವಭಾವದ ಮೇಲೆ ಆತುಕೊಂಡು ಜೀವಿಸುವವರೇ ಹೊರತು ದೇಹಸ್ವಭಾವದವರಲ್ಲಾ. ನಿಮ್ಮಲ್ಲಿ ದೇವರ ಆತ್ಮನು ವಾಸವಾಗಿರುವುದಾದರೆ ನೀವು ಶರೀರ ಭಾವಾಧೀನರಲ್ಲ, ದೇವರಾತ್ಮನಿಗೆ ಅಧೀನರಾಗಿದ್ದೀರಿ. ಯಾರಲ್ಲಿ ಕ್ರಿಸ್ತನ ಆತ್ಮನು ಇಲ್ಲವೋ ಅವನು ಕ್ರಿಸ್ತನವನಲ್ಲ.


ಅದು ಮೇಲಿಂದ ಬಂದ ಜ್ಞಾನವಲ್ಲ. ಅದು ಭೂಸಂಬಂಧವಾದದ್ದು, ಲೌಕಿಕವಾದುದು, ದೆವ್ವಗಳಿಗೆ ಸಂಬಂಧಪಟ್ಟದ್ದು.


ಸಭೆಯಾಗಿ ಸೇರುವ ರೂಢಿಯನ್ನು ಕೆಲವರು ಬಿಟ್ಟಂತೆ ನಾವು ಬಿಟ್ಟು ಬಿಡದೆ, ಆ ದಿನವು ಸಮೀಪಿಸುತ್ತಾ ಬರುತ್ತದೆಂದು ನೀವು ತಿಳಿದುಕೊಂಡಿರುವುದರಿಂದ ಒಬ್ಬರನ್ನೊಬ್ಬರು ಮತ್ತಷ್ಟು ಹೆಚ್ಚಾಗಿಯೇ ಪ್ರೋತ್ಸಾಹಿಸುತ್ತಿರೋಣ.


ಕಾಡಿನಲ್ಲಿ ದ್ರಾಕ್ಷಿಯ ಹಣ್ಣು ಸಿಕ್ಕಿದಂತೆ ಇಸ್ರಾಯೇಲು ನನಗೆ ಸಿಕ್ಕಿತು; ಹೊಸದಾಗಿ ಫಲಕ್ಕೆ ಬಂದ ಅಂಜೂರದ ಗಿಡದಲ್ಲಿ ಮೊದಲು ಮಾಗಿದ ಹಣ್ಣನ್ನು ಕಂಡ ಹಾಗೆ ನಿಮ್ಮ ಪೂರ್ವಿಕರನ್ನು ಕಂಡೆನು. ಆದರೆ ಅವರು ಬಾಳ್ ಪೆಗೋರಿಗೆ ಬಂದು ಬಾಳ್ ದೇವತೆಯ ಭಕ್ತರಾಗಿ ದೀಕ್ಷೆಗೊಂಡು, ತಾವು ಪ್ರೀತಿಸಿದ ದೇವತೆಯ ಹಾಗೆ ಅಸಹ್ಯರಾದರು.


ಜನರಲ್ಲಿ ಸೇರದವನು ಸ್ವೇಚ್ಛಾನುಸಾರ ನಡೆಯುತ್ತಾ, ಸಮಸ್ತ ಸುಜ್ಞಾನಕ್ಕೂ ರೇಗುವನು.


ವ್ಯಭಿಚಾರಿಣಿಯರಾಗಿ ನಡೆಯುವ ನಿಮ್ಮ ಕುಮಾರಿಯರನ್ನೂ ವ್ಯಭಿಚಾರ ಮಾಡುವ ನಿಮ್ಮ ವಧುಗಳನ್ನೂ ನಾನು ದಂಡಿಸುವುದಿಲ್ಲ; ನೀವೇ ವ್ಯಭಿಚಾರಿಗಳನ್ನು ಕರೆದುಕೊಂಡು ಓರೆಯಾಗಿ ಹೋಗುತ್ತೀರಿ; ದೇವದಾಸಿಯರೊಂದಿಗೆ ಯಜ್ಞಮಾಡುತ್ತೀರಿ; ಆಹಾ, ವಿವೇಕವಿಲ್ಲದ ಜನರು ಕೆಡವಲ್ಪಡುವರು.


“ಏಕೆಂದರೆ ಇಸ್ರಾಯೇಲ್ ವಂಶದವರಲ್ಲಾಗಲಿ ಮತ್ತು ಇಸ್ರಾಯೇಲಿನೊಳಗೆ ವಾಸವಾಗಿರುವ ವಿದೇಶಿಗಳಲ್ಲಾಗಲಿ ಯಾವನು ನನ್ನಿಂದ ದೂರವಾಗಿ, ತನ್ನ ವಿಗ್ರಹಗಳನ್ನು ಮನಸ್ಸಿನಲ್ಲಿ ನೆಲೆಗೊಳಿಸಿ, ತನಗೆ ಪಾಪಕಾರಿಯಾದ ವಿಘ್ನವನ್ನು ತನ್ನ ಮುಂದೆ ಇಟ್ಟುಕೊಂಡು ಪ್ರವಾದಿಯ ಬಳಿಗೆ ಬಂದು ಅವನ ಮೂಲಕ ದೈವೋತ್ತರವನ್ನು ಕೇಳಿಕೊಳ್ಳುವನೋ ಅವನಿಗೆ ಯೆಹೋವನಾದ ನಾನೇ ಉತ್ತರಕೊಡುವೆನು.


ನೀವು ನಿಮ್ಮ ಸ್ವಂತ ಸೊತ್ತಲ್ಲವೆಂದು ಮತ್ತು ದೇವರಿಂದ ದಾನವಾಗಿ ಲಭಿಸಿದ ಪವಿತ್ರಾತ್ಮನು ನಿಮ್ಮೊಳಗೆ ನೆಲೆಗೊಂಡಿರುವುದರಿಂದ ನಿಮ್ಮ ದೇಹವು ದೇವರ ಪವಿತ್ರಾಲಯವಾಗಿದೆಂಬುದು ನಿಮಗೆ ತಿಳಿಯದೋ?


ಅವರು, ‘ಹತ್ತಿರ ಬರಬೇಡ, ನಾನು ಮಡಿವಂತನು, ನೀನು ಸೇರತಕ್ಕವನಲ್ಲ’ ಎನ್ನುತ್ತಾ, ಅಂತು ಪ್ರತಿನಿತ್ಯವೂ ಮುಖದೆದುರಿಗೆ ನನ್ನನ್ನು ಕೆಣಕುತ್ತಾ, ನನ್ನ ಮೂಗಿಗೆ ದಿನವೆಲ್ಲಾ ಉರಿಯುವ ಬೆಂಕಿಯ ಹೊಗೆಯಾಗಿದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು