Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೂದನು 1:25 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ನಮ್ಮ ರಕ್ಷಕನಾದ ಒಬ್ಬನೇ ದೇವರಿಗೆ, ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೂಲಕ ಮಹಿಮೆ, ಮಹತ್ವ, ಅಧಿಪತ್ಯ ಮತ್ತು ಅಧಿಕಾರಗಳು ಎಲ್ಲಾ ಕಾಲಗಳಲ್ಲಿ ಮೊದಲು ಇದ್ದ ಹಾಗೆ ಈಗಲೂ ಯಾವಾಗಲೂ ಸಲ್ಲಲ್ಲಿ. ಆಮೆನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 ನಮ್ಮ ಉದ್ಧಾರಕರಾದ ಏಕೈಕ ದೇವರಿಗೆ ನಮ್ಮ ಪ್ರಭು ಯೇಸುಕ್ರಿಸ್ತರ ಮುಖಾಂತರ ಮಹಿಮೆ, ಮಹತ್ವ, ಅಧಿಪತ್ಯ, ಅಧಿಕಾರ ಆದಿಯಲ್ಲಿ ಇದ್ದ ಹಾಗೆ ಈಗಲೂ ಯಾವಾಗಲೂ ಸಲ್ಲಲಿ! ಆಮೆನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ಶಕ್ತನಾಗಿರುವ ನಮ್ಮ ರಕ್ಷಕನಾದ ಒಬ್ಬನೇ ದೇವರಿಗೆ ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೂಲಕ ಪ್ರಭಾವ ಮಹತ್ವ ಆಧಿಪತ್ಯ ಅಧಿಕಾರಗಳು ಎಲ್ಲಾ ಕಾಲಕ್ಕಿಂತ ಮೊದಲೂ [ಇದ್ದ ಹಾಗೆ] ಈಗಲೂ ಯಾವಾಗಲೂ ಇರಲಿ. ಆಮೆನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ಆತನೊಬ್ಬನೇ ದೇವರು. ನಮ್ಮನ್ನು ರಕ್ಷಿಸುವಾತನು ಆತನೊಬ್ಬನೇ. ಆದಿಯಿಂದ ಇದ್ದಹಾಗೆ ಈಗಲೂ ಯಾವಾಗಲೂ ನಮ್ಮ ಪ್ರಭುವಾದ ಯೇಸು ಕ್ರಿಸ್ತನ ಮೂಲಕ ಆತನಿಗೆ ಪ್ರಭಾವ, ಮಹತ್ವ, ಆಧಿಪತ್ಯ ಮತ್ತು ಅಧಿಕಾರಗಳು ಇರಲಿ. ಆಮೆನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ನಮ್ಮ ರಕ್ಷಕರಾದ ಒಬ್ಬರೇ ದೇವರಿಗೆ ನಮಗೆ ಕರ್ತ ಆಗಿರುವ ಯೇಸುಕ್ರಿಸ್ತರ ಮುಖಾಂತರ ಮಹಿಮೆ, ಮಹತ್ವ, ಬಲವು, ಅಧಿಕಾರಗಳು ಎಂದೂ ಇದ್ದಂತೆ ಈಗಲೂ ಯಾವಾಗಲೂ ಇರಲಿ. ಆಮೆನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

25 ತ್ಯಾ ಅಮ್ಕಾ ರಾಕ್ತಲ್ಯಾ ಎಕ್ಲ್ಯಾಚ್ ದೆವಾಕ್, ಜೆಜು ಕ್ರಿಸ್ತಾ ಅಮ್ಚ್ಯಾ ಧನಿಯಾಚ್ಯಾ ವೈನಾ ಮಹಿಮಾ, ವೈಭವ್, ರಾಜ್ವಟ್ಕಿ ಅನಿ ಅಧಿಕಾರ್ , ಅದ್ದಿ, ಅತ್ತಾ ಅನಿ ಸದಾ ಸರ್ವತಾಕ್ ತೆಕಾಚ್ ರ್‍ಹಾಂವ್ದಿತ್, ಆಮೆನ್!

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೂದನು 1:25
32 ತಿಳಿವುಗಳ ಹೋಲಿಕೆ  

ಸರ್ವಯುಗಗಳ ಅರಸನೂ, ಅಮರನೂ, ಅದೃಶ್ಯನೂ ಆಗಿರುವ ಏಕ ದೇವರಿಗೆ ಘನವೂ ಮಹಿಮೆಯೂ ಯುಗಯುಗಾಂತರಗಳಲ್ಲಿಯೂ ಇರಲಿ. ಆಮೆನ್.


ಒಬ್ಬನೇ ದೇವರಿಂದ ಬರುವ ಮಹಿಮೆಯನ್ನು ಅಪೇಕ್ಷಿಸದೇ ನಿಮ್ಮ ನಿಮ್ಮೊಳಗೇ ಪ್ರಶಂಸೆಯನ್ನು ಸ್ವೀಕರಿಸುವವರಾದ ನೀವು ಅದನ್ನು ನಂಬಲು ಹೇಗೆ ಸಾಧ್ಯ?


ಸಮಸ್ತವೂ ಆತನಿಂದ ಉತ್ಪತ್ತಿಯಾಗಿ, ಆತನಿಂದ ನಡೆಯುತ್ತಾ, ಇರುವುದೆಲ್ಲವೂ ಅತನಿಗೋಸ್ಕರವೇ. ಆತನಿಗೇ ಸದಾಕಾಲವೂ ಮಹಿಮೆಯುಂಟಾಗಲಿ ಸ್ತೋತ್ರ. ಅಮೆನ್.


ಇಗೋ, ದೇವರೇ ನನಗೆ ರಕ್ಷಣೆ, ನಾನು ಹೆದರದೆ ಭರವಸವಿಡುವೆನು; ಯೆಹೋವನೇ ನನ್ನ ಬಲವೂ, ಕೀರ್ತನೆಯೂ ಆತನೇ, ನನಗೆ ರಕ್ಷಣೆಯೂ ಆಗಿದ್ದಾನೆ.”


ಯೇಸು ಕ್ರಿಸ್ತನು ನಿನ್ನೇ ಇದ್ದ ಹಾಗೆಯೇ, ಈ ಹೊತ್ತು, ನಿರಂತರವೂ ಇರುವನು.


ನಮ್ಮ ಕರ್ತನು ದೊಡ್ಡವನೂ, ಪರಾಕ್ರಮಿಯೂ ಆಗಿದ್ದಾನೆ, ಆತನ ಜ್ಞಾನವು ಅಪರಿಮಿತವಾಗಿದೆ.


ನಮ್ಮನ್ನು ದೇವರ ರಾಜ್ಯವನ್ನಾಗಿಯೂ ತನ್ನ ತಂದೆಯಾದ ದೇವರಿಗೆ ಯಾಜಕರನ್ನಾಗಿಯೂ ಮಾಡಿದಾತನಿಗೆ ಯುಗಯುಗಾಂತರಗಳಲ್ಲಿಯೂ ಮಹಿಮೆಯು ಬಲವು ಉಂಟಾಗಲಿ. ಆಮೆನ್.


ಅಂದರೆ ಮಹಾ ದೇವರ ಮತ್ತು ನಮ್ಮ ರಕ್ಷಕನಾದ ಯೇಸುಕ್ರಿಸ್ತನ ಮಹಿಮೆಪೂರ್ಣವಾದ ಪ್ರತ್ಯಕ್ಷತೆಯನ್ನು ಎದುರುನೋಡುತ್ತಾ ಇಹಲೋಕದಲ್ಲಿ ಸ್ವಸ್ಥಚಿತ್ತರಾಗಿಯೂ, ನೀತಿವಂತರಾಗಿಯೂ, ಭಕ್ತಿಯುಳ್ಳವರಾಗಿಯೂ ಜೀವಿಸಬೇಕೆಂದು ನಮಗೆ ಬೋಧಿಸುತ್ತದೆ.


ಜ್ಞಾನನಿಧಿಯಾದ ಒಬ್ಬನೇ ದೇವರಿಗೆ ಯೇಸು ಕ್ರಿಸ್ತನ ಮೂಲಕ ಯುಗಯುಗಾಂತರಗಳಲ್ಲಿಯೂ ಸ್ತೋತ್ರವಾಗಲಿ. ಆಮೆನ್.


ನಮ್ಮನ್ನು ಶೋಧನೆಯೊಳಗೆ ಸೇರಿಸದೆ ಕೆಡುಕನಿಂದ; ನಮ್ಮನ್ನು ತಪ್ಪಿಸು


ಈಗ ನೆಬೂಕದ್ನೆಚ್ಚರನಾದ ನಾನು ಪರಲೋಕ ರಾಜನನ್ನು ಹೊಗಳಿ, ಕೊಂಡಾಡಿ ಕೀರ್ತಿಸುತ್ತೇನೆ. ಆತನ ಕಾರ್ಯಗಳೆಲ್ಲಾ ಸತ್ಯ, ಆತನ ಮಾರ್ಗಗಳೆಲ್ಲಾ ನ್ಯಾಯ; ಸೊಕ್ಕಿನಿಂದ ನಡೆಯುವವರನ್ನು ತಗ್ಗಿಸಬಲ್ಲನು.


ಯೆಹೋವನೇ, ಎಲ್ಲಾ ಮಹಿಮೆ, ವೈಭವ, ಪರಾಕ್ರಮ, ಪ್ರಭಾವ, ಪ್ರತಾಪ, ಪ್ರತಿಭೆ ಎಲ್ಲವೂ ನಿನ್ನವೆ. ಭೂಮ್ಯಾಕಾಶಗಳಲ್ಲಿ ಇರುವದೆಲ್ಲಾ ನಿನ್ನದೇ. ಯೆಹೋವನೇ ರಾಜ್ಯವು ನಿನ್ನದು. ನೀನು ಮಹೋನ್ನತನಾಗಿ ಸರ್ವವನ್ನು ಆಳುವವನಾಗಿರುತ್ತೀ.


ಸಭೆಯಲ್ಲಿಯೂ ಕ್ರಿಸ್ತ ಯೇಸುವಿನಲ್ಲಿಯೂ ತಲತಲಾಂತರಕ್ಕೂ ಯುಗಯುಗಾಂತರಕ್ಕೂ ಮಹಿಮೆಯಾಗಲಿ. ಆಮೆನ್.


ಸಮಾರ್ಯದವರಾದ ನೀವು ಅರಿಯದೇ ಇರುವಂಥದನ್ನು ಆರಾಧಿಸುತ್ತೀರಿ, ಆದರೆ ನಾವು ಅರಿತಿರುವುದನ್ನೇ ಆರಾಧಿಸುವವರಾಗಿದ್ದೇವೆ. ಏಕೆಂದರೆ, ಬರಬೇಕಾದ ರಕ್ಷಣೆಯು ಯೆಹೂದ್ಯರೊಳಗಿಂದ ಬರುತ್ತದಷ್ಟೆ.


ಹೇಳಿರಿ, ನಿಮ್ಮ ನ್ಯಾಯಗಳನ್ನು ಮುಂದಕ್ಕೆ ತನ್ನಿರಿ, ನಿಮ್ಮ ದೇವರುಗಳು ತಮ್ಮತಮ್ಮೊಳಗೆ ಆಲೋಚಿಸಿಕೊಳ್ಳಲಿ. ಪೂರ್ವದಿಂದಲೂ ಈ ಸಂಗತಿಯನ್ನು ಪ್ರಕಟಿಸಿದವರು ಯಾರು? ಅದು ನಡೆಯುವುದಕ್ಕೆ ಮೊದಲೇ ಯಾರು ತಿಳಿಸಿದರು? ಯೆಹೋವನಾದ ನಾನೇ ಅಲ್ಲವೇ? ನನ್ನ ಹೊರತು ಬೇರೆ ದೇವರು ಇಲ್ಲವೇ ಇಲ್ಲ, ನನ್ನ ಹೊರತಾಗಿ ಸತ್ಯಸ್ವರೂಪನೂ, ರಕ್ಷಕನಾದ ದೇವರು ಇಲ್ಲವೇ ಇಲ್ಲ.


ನಮ್ಮ ಕರ್ತನೂ ರಕ್ಷಕನೂ ಆಗಿರುವ ಯೇಸು ಕ್ರಿಸ್ತನ ಕುರಿತಾದ ಕೃಪೆಯಲ್ಲಿಯೂ ಜ್ಞಾನದಲ್ಲಿಯೂ ನೀವು ಅಭಿವೃದ್ಧಿ ಹೊಂದಿರಿ. ಆತನಿಗೆ ಈಗಲೂ ಸದಾಕಾಲವೂ ಮಹಿಮೆಯುಂಟಾಗಲಿ. ಆಮೆನ್.


ಯೇಸು ಕ್ರಿಸ್ತನ ದಾಸನೂ ಅಪೊಸ್ತಲನೂ ಆಗಿರುವ ಸಿಮೆಯೋನ ಪೇತ್ರನು ನಮ್ಮ ದೇವರು ಮತ್ತು ರಕ್ಷಕನಾದ ಯೇಸು ಕ್ರಿಸ್ತನ ನೀತಿಯಿಂದ ನಮ್ಮಂತೆಯೇ ಅಮೂಲ್ಯವಾದ ನಂಬಿಕೆಯನ್ನು ಹೊಂದಿದವರಿಗೆ ಬರೆಯುವುದೇನಂದರೆ,


ಒಬ್ಬನು ಬೋಧಿಸುವವನಾದರೆ ದೈವೋಕ್ತಿಗಳನ್ನು ನುಡಿಯುವವನಾಗಿ ಬೋಧಿಸಲಿ. ಒಬ್ಬನು ಸೇವೆ ಮಾಡುವವನಾದರೆ ದೇವರು ಕೊಡುವ ಶಕ್ತಿಗನುಗುಣವಾಗಿ ಮಾಡಲಿ. ಇವೆಲ್ಲವುಗಳಿಂದ ಯೇಸು ಕ್ರಿಸ್ತನ ಮೂಲಕ ದೇವರಿಗೆ ಸ್ತೋತ್ರ ಉಂಟಾಗುವುದು. ಯೇಸು ಕ್ರಿಸ್ತನಿಗೆ ಅಧಿಪತ್ಯವೂ ಮತ್ತು ಘನವೂ ಯುಗಯುಗಾಂತರಗಳಲ್ಲಿಯೂ ಇರುವವು ಆಮೆನ್.


ಆದರೆ ನಮ್ಮ ರಕ್ಷಕನಾದ ದೇವರ ದಯೆಯೂ, ಪ್ರೀತಿಯೂ, ಮನುಷ್ಯರಿಗೆ ಪ್ರತ್ಯಕ್ಷವಾದಾಗ,


ಯಾವುದನ್ನೂ ಕದ್ದಿಟ್ಟುಕೊಳ್ಳದೆ ಒಳ್ಳೆಯ ನಂಬಿಗಸ್ತರೆಂದು ಹೆಸರನ್ನು ಹೊಂದಲು, ನಮ್ಮ ರಕ್ಷಕನಾದ ದೇವರ ಉಪದೇಶಕ್ಕೆ ಎಲ್ಲಾ ವಿಷಯಗಳಲ್ಲಿ ಗೌರವ ತರುವಂತೆ ವರ್ತಿಸಬೇಕೆಂದು ಅವರಿಗೆ ಉಪದೇಶಿಸು.


ಹಾಗೆ ಮಾಡುವುದು ನಮ್ಮ ರಕ್ಷಕನಾದ ದೇವರ ಸನ್ನಿಧಿಯಲ್ಲಿ ಒಳ್ಳೆಯದು, ಮೆಚ್ಚಿಕೆಯಾಗಿಯೂ ಇದೆ.


ದೇವರು ನಮ್ಮ ಕರ್ತನಾದ ಕ್ರಿಸ್ತಯೇಸುವಿನಲ್ಲಿ ಮಾಡಿದ ನಿತ್ಯಸಂಕಲ್ಪದ ಮೇರೆಗೆ ತನ್ನ ನಾನಾ ವಿಧವಾದ ಜ್ಞಾನವು, ಪರಲೋಕದಲ್ಲಿ ರಾಜತ್ವಗಳಿಗೂ, ಅಧಿಕಾರಗಳಿಗೂ ಈಗ ಸಭೆಯ ಮೂಲಕ ಗೊತ್ತಾಗಬೇಕೆಂದು ಉದ್ದೇಶಿಸಿದನು.


ಈ ಕೃಪೆಯನ್ನು ಆತನು ಎಲ್ಲಾ ಜ್ಞಾನ ವಿವೇಕಗಳೊಂದಿಗೆ ನಮಗೆ ಹೇರಳವಾಗಿ ಸುರಿಸಿದ್ದಾನೆ.


ಯೆಹೋವನೇ, ನಿನ್ನ ಕೈಕೆಲಸಗಳು ಬಗೆ ಬಗೆಯಾಗಿವೆ. ಅವುಗಳನ್ನೆಲ್ಲಾ ಜ್ಞಾನದಿಂದಲೇ ಮಾಡಿರುವೆ; ಭೂಲೋಕವು ನಿನ್ನ ಆಸ್ತಿಯಿಂದ ತುಂಬಿರುತ್ತದೆ.


ಬಂಡೆಯನ್ನು ಹೊಡೆದು, ನೀರು ಚಿಮ್ಮಿ ಹೊರಗೆ ಬರುವಂತೆಯೂ, ಪ್ರವಾಹವು ದಡಮೀರಿ ಹರಿಯುವಂತೆಯೂ ಮಾಡಿದನಲ್ಲವೋ? ಆತನು ರೊಟ್ಟಿಯನ್ನು ಕೊಡಲು ಶಕ್ತನೋ? ತನ್ನ ಜನರಿಗೆ ಮಾಂಸವನ್ನೂ ಒದಗಿಸುವನೋ” ಎಂಬುದೇ.


ಆಹಾ ದೇವರ ಐಶ್ವರ್ಯವೂ, ಜ್ಞಾನವೂ, ವಿವೇಕವೂ ಅಗಾಧ. ಆತನ ನ್ಯಾಯತೀರ್ಪುಗಳು ಎಷ್ಟೋ ಆಗಮ್ಯವಾದದ್ದು. ಆತನ ಮಾರ್ಗಗಳು ಆಗೋಚರವಾದವುಗಳೂ ಆಗಿವೆ.


ನನ್ನ ಆತ್ಮವು ನನ್ನ ರಕ್ಷಕನಾದ ದೇವರಲ್ಲಿ ಉಲ್ಲಾಸಗೊಂಡಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು