Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೂದನು 1:6 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ತಮ್ಮ ಅಧಿಕಾರದ ಸ್ಥಾನವನ್ನು ಕಾಪಾಡಿಕೊಳ್ಳದೆ, ತಮ್ಮ ಸ್ವಂತ ವಾಸಸ್ಥಾನವನ್ನು ಬಿಟ್ಟ ದೇವದೂತರಿಗೆ ದೇವರು ನಿತ್ಯವಾದ ಬೇಡಿಗಳನ್ನು ಹಾಕಿ, ಮಹಾದಿನದಲ್ಲಿ ಆಗುವ ತೀರ್ಪಿಗಾಗಿ ಅವರನ್ನು ಕತ್ತಲೆಯೊಳಗೆ ಕಾದಿರಿಸಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಅಂತೆಯೇ, ತಮ್ಮ ಆದ್ಯ ಅಂತಸ್ತನ್ನು ಉಳಿಸಿಕೊಳ್ಳದೆ, ತಮ್ಮ ಯೋಗ್ಯ ನಿವಾಸವನ್ನು ಕಳೆದುಕೊಂಡ ದೇವದೂತರನ್ನು ಶಾಶ್ವತ ಸಂಕಲೆಗಳಿಂದ ಬಂಧಿಸಲಾಯಿತು; ಮಹಾದಿನದಲ್ಲಿ ಸಂಭವಿಸುವ ದಂಡನೆಯ ತೀರ್ಪಿಗಾಗಿ ಅವರನ್ನು ಕಾರ್ಗತ್ತಲೆಯಲ್ಲಿ ಕೂಡಿಡಲಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ತಮ್ಮ ದೊರೆತನವನ್ನು ಕಾಪಾಡದೆ ತಮಗೆ ತಕ್ಕ ವಾಸಸ್ಥಾನವನ್ನು ಬಿಟ್ಟ ದೇವದೂತರಿಗೆ ದೇವರು ನಿತ್ಯವಾದ ಬೇಡಿಗಳನ್ನು ಹಾಕಿ ಮಹಾ ದಿನದಲ್ಲಿ ಆಗುವ ದಂಡನೆಯ ತೀರ್ಪಿಗಾಗಿ ಅವರನ್ನು ಕತ್ತಲೆಯೊಳಗೆ ಇಟ್ಟಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ದೇವದೂತರು ಅಧಿಕಾರವನ್ನು ಹೊಂದಿದ್ದರೂ ಅದನ್ನು ಉಳಿಸಿಕೊಳ್ಳಲಾರದೆ ಸ್ವಂತ ವಾಸಸ್ಥಾನವನ್ನು ಬಿಟ್ಟುಹೋದದ್ದನ್ನು ನೆನಸಿಕೊಳ್ಳಿರಿ. ಆದ್ದರಿಂದ ಪ್ರಭುವು ಈ ದೇವದೂತರನ್ನು ಅಂಧಕಾರದಲ್ಲಿಟ್ಟನು. ಅವರನ್ನು ಶಾಶ್ವತವಾದ ಬೇಡಿಗಳಿಂದ ಬಂಧಿಸಲಾಯಿತು. ಮಹಾದಿನದಂದು ಅವರಿಗೆ ತೀರ್ಪು ನೀಡುವುದಕ್ಕಾಗಿ ಆತನು ಅವರನ್ನು ಅಲ್ಲಿಟ್ಟಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ತಮ್ಮ ಅಧಿಕಾರದ ಸ್ಥಾನವನ್ನು ಕಾಪಾಡದೆ, ತಮ್ಮ ಸ್ವಂತ ವಾಸಸ್ಥಾನವನ್ನು ಬಿಟ್ಟ ದೇವದೂತರಿಗೆ ಅವರು ನಿತ್ಯವಾದ ಬೇಡಿಗಳನ್ನು ಹಾಕಿ, ಮಹಾದಿನದ ತೀರ್ಪಿಗಾಗಿ ಅವರನ್ನು ಕತ್ತಲೆಯೊಳಗೆ ಕಾದಿಟ್ಟಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

6 ಅನಿ ಅಪ್ನಾಚೊ ಹುದ್ದೊ ಸಂಬಾಳುನ್ ಘೆವ್ನ್ ರ್‍ಹಾತಲೆ ಸೊಡುನ್, ಅಪ್ನಿ ರ್‍ಹಾತಲೊ ಜಾಗೊ ಕಳ್ದುನ್ ಘೆಟಲ್ಲ್ಯಾ ದೆವಾಚ್ಯಾ ದುತಾಕ್ನಿ ಮೊಟ್ಯಾ ಝಡ್ತಿ ಕರ್‍ತಲ್ಲ್ಯಾ ದಿಸಾಸಾಟ್ನಿ; ದಾಟ್ಲ್ಯಾ ಕಾಳ್ಕಾತ್ ಖೊಲಾತ್, ಕನ್ನಾಚ್ ತುಟಿನಸಲ್ಲ್ಯಾ ಸರ್ಪೊಳ್ಯಾನಿ ಭಾಂದುನ್ ಥವಲ್ಲೆ ಹಾಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೂದನು 1:6
12 ತಿಳಿವುಗಳ ಹೋಲಿಕೆ  

ಹೇಗೆಂದರೆ ದೇವದೂತರು ಪಾಪಮಾಡಿದಾಗ ದೇವರು ಅವರನ್ನು ಸುಮ್ಮನೆ ಬಿಡದೆ ನರಕಕ್ಕೆ ದೊಬ್ಬಿ ನ್ಯಾಯತೀರ್ಪನ್ನು ಹೊಂದುವುದಕ್ಕಾಗಿ ಸಂಕೋಲೆಗಳಿಂದ ಬಂಧಿಸಿ ಕತ್ತಲೆಯ ಕೂಪಕ್ಕೆ ಒಪ್ಪಿಸಿದನು.


ನಮಗೆ ಹೋರಾಟವಿರುವುದು ಮನುಷ್ಯಮಾತ್ರದವರ ಸಂಗಡವಲ್ಲ. ರಾಜತ್ವಗಳ ಮೇಲೆಯೂ, ಅಧಿಕಾರಿಗಳ ಮೇಲೆಯೂ, ಈ ಅಂಧಕಾರದ ಲೋಕಾಧಿಪತಿಗಳ ಮೇಲೆಯೂ, ಆಕಾಶ ಮಂಡಲಗಳಲ್ಲಿರುವ ದುರಾತ್ಮಗಳ ಸೇನೆಯ ಮೇಲೆಯೂ ನಾವು ಹೋರಾಡುವವರಾಗಿದ್ದೇವೆ.


ಆ ಮೇಲೆ ಆತನು ಎಡಗಡೆಯಲ್ಲಿರುವವರಿಗೆ, ‘ಶಾಪಗ್ರಸ್ತರೇ, ನನ್ನನ್ನು ಬಿಟ್ಟು ಪಿಶಾಚಿಗೂ ಅವನ ದೂತರಿಗೂ ಸಿದ್ಧಮಾಡಿರುವ ನಿತ್ಯ ಬೆಂಕಿಯೊಳಕ್ಕೆ ಹೋಗಿರಿ.


ಅವರು, “ದೇವರ ಕುಮಾರನೇ, ನಮ್ಮ ಗೊಡವೆ ನಿನಗೇಕೆ? ಕಾಲ ಬರುವುದಕ್ಕಿಂತ ಮೊದಲೇ ನಮ್ಮನ್ನು ದಂಡಿಸುವುದಕ್ಕೆ ಇಲ್ಲಿಗೆ ಬಂದಿರುವೆಯಾ” ಎಂದು ಕೂಗಿದರು.


ಕರ್ತನು ಭಕ್ತರನ್ನು ಕಷ್ಟಗಳಿಂದ ರಕ್ಷಿಸುವುದಕ್ಕೂ ಅನೀತಿವಂತರನ್ನು ಶಿಕ್ಷಿಸುವುದಕ್ಕಾಗಿ ನ್ಯಾಯತೀರ್ಪಿನ ದಿನದ ತನಕ ಇಡುವುದಕ್ಕೂ ಬಲ್ಲವನಾಗಿದ್ದಾನೆ.


ಬದಲಿಗೆ, ಅತ್ಯಂತ ಭಯಂಕರವಾದ ನ್ಯಾಯತೀರ್ಪಿನ ನಿರೀಕ್ಷೆ ಹಾಗೂ ದೇವರ ವಿರೋಧಿಗಳನ್ನು ದಹಿಸುವ ಕೋಪಾಗ್ನಿಯೂ ಮಾತ್ರ ಇರುವವು.


ಸೈತಾನನು ನಿಮ್ಮ ತಂದೆ, ನೀವು ಆತನಿಗೆ ಸೇರಿದವರಾಗಿದ್ದು ನಿಮ್ಮ ತಂದೆಯ ದುರಾಶೆಗಳನ್ನೇ ನೀವು ಮಾಡಬಯಸುತ್ತೀರಿ. ಅವನು ಆದಿಯಿಂದಲೂ ಕೊಲೆಗಾರನಾಗಿದ್ದು ಸತ್ಯದಲ್ಲಿ ನೆಲೆಗೊಂಡಿಲ್ಲ. ಏಕೆಂದರೆ ಅವನಲ್ಲಿ ಸತ್ಯವೇ ಇಲ್ಲ. ಅವನು ತನ್ನ ಸ್ವಭಾವಕ್ಕನುಸಾರವಾಗಿ ಸುಳ್ಳಾಡುತ್ತಾನೆ, ಏಕೆಂದರೆ ಅವನು ಸುಳ್ಳುಗಾರನೂ ಮತ್ತು ಸುಳ್ಳಿನ ತಂದೆಯೂ ಆಗಿದ್ದಾನೆ.


ಇದಲ್ಲದೆ ಅವರನ್ನು ಮೋಸಗೊಳಿಸಿದ ಪಿಶಾಚನು ಬೆಂಕಿ ಗಂಧಕಗಳು ಉರಿಯುವ ಕೆರೆಯಲ್ಲಿ ದೊಬ್ಬಲ್ಪಟ್ಟನು. ಅಲ್ಲಿ ಮೃಗವೂ, ಸುಳ್ಳುಪ್ರವಾದಿಯೂ ಸಹ ಇದ್ದಾರೆ. ಅವರು ಹಗಲಿರುಳು ಯುಗಯುಗಾಂತರಗಳಲ್ಲಿಯೂ ಯಾತನೆ ಪಡುತ್ತಿರುವರು.


ನ್ಯಾಯವಿಚಾರಣೆಯ ದಿನದಲ್ಲಿ ಅಂಥ ಊರಿನ ಗತಿಯು ಸೊದೋಮ್ ಗೊಮೋರಗಳ ಸೀಮೆಯ ಗತಿಗಿಂತಲೂ ಕಠಿಣವಾಗಿರುವುದು ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.


ನೀನು ನಿನ್ನ ಮೊಂಡತನವನ್ನೂ, ಪಶ್ಚಾತ್ತಾಪವಿಲ್ಲದ ಮನಸ್ಸನ್ನೂ ಅನುಸರಿಸಿ ನ್ಯಾಯತೀರ್ಪಿನ ದಿನದವರೆಗೂ ನಿನಗಾಗಿ ದೇವರ ಕೋಪವನ್ನು ಸಂಗ್ರಹಿಸಿಕೊಳ್ಳುತ್ತಾ ಇದ್ದೀ.


ಸ್ವಂತ ಅವಮಾನವೆಂಬ ನೊರೆಯನ್ನು ಕಾರುವ ಸಮುದ್ರದ ಹುಚ್ಚುತೆರೆಗಳೂ ಆಗಿದ್ದಾರೆ. ಅಲೆಯುವ ನಕ್ಷತ್ರಗಳಾದ ಇವರ ಪಾಲಿಗೆ ಕಗ್ಗತ್ತಲೆಯು ಸದಾಕಾಲಕ್ಕೆ ಇಡಲ್ಪಟ್ಟಿದೆ.


ಅವನು ಪಿಶಾಚಿಯೂ ಸೈತಾನನೂ ಆಗಿರುವ ಪುರಾತನ ಸರ್ಪವೆಂಬ ಘಟಸರ್ಪವನ್ನು ಹಿಡಿದು ಸಾವಿರ ವರ್ಷ ಬಂಧನದಲ್ಲಿಟ್ಟನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು