Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೂದನು 1:8 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಹೀಗಿದ್ದರೂ ಈ ಜನರು ಅದೇ ರೀತಿಯಾಗಿ ಸ್ವಪ್ನಾವಸ್ಥೆಯಲ್ಲಿರುವವರಂತೆ ತಮ್ಮ ಶರೀರವನ್ನು ಮಲಿನಮಾಡಿಕೊಳ್ಳುತ್ತಾರೆ. ಪ್ರಭುತ್ವವನ್ನು ಅಸಡ್ಡೆಮಾಡುತ್ತಾರೆ. ಮಹಾ ಪದವಿಯವರನ್ನು ದೂಷಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಈ ದುರ್ಬೋಧಕರು ಕೂಡ ಹಾಗೆಯೇ ವರ್ತಿಸುತ್ತಾರೆ. ಕನಸು ಕಾಣುವವರಂತೆ ತಮ್ಮ ಶರೀರವನ್ನು ಪಾಪಕಳಂಕದಿಂದ ಮಲಿನವಾಗಿಸಿಕೊಳ್ಳುತ್ತಾರೆ. ಪ್ರಭುವಿನ ಅಧಿಕಾರವನ್ನು ಅಸಡ್ಡೆಮಾಡುತ್ತಾರೆ. ಸ್ವರ್ಗನಿವಾಸಿಗಳನ್ನು ದೂಷಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಹೀಗಿದ್ದರೂ ಈ ಜನರು ಸ್ವಪ್ನಾವಸ್ಥೆಯಲ್ಲಿರುವವರಂತೆ ಅದೇ ರೀತಿಯಾಗಿ ಶರೀರವನ್ನು ಮಲಿನಮಾಡಿಕೊಳ್ಳುತ್ತಾರೆ. ಪ್ರಭುತ್ವವನ್ನು ಅಸಡ್ಡೆಮಾಡುತ್ತಾರೆ, ಮಹಾಪದವಿಯವರನ್ನು ದೂಷಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ನಿಮ್ಮ ಸಭೆಯಲ್ಲಿ ಪ್ರವೇಶಿಸಿರುವ ಜನರಿಗೂ ಇದೇ ರೀತಿಯಾಗುವುದು. ಅವರ ಕನಸುಗಳೇ ಅವರಿಗೆ ಮಾರ್ಗದರ್ಶಿಯಾಗಿವೆ. ಅವರು ಪಾಪಗಳಿಂದಲೇ ತಮ್ನನ್ನು ಮಲಿನ ಮಾಡಿಕೊಳ್ಳುತ್ತಾರೆ. ಅವರು ಪ್ರಭುವಿನ ಅಧಿಕಾರವನ್ನು ತಿರಸ್ಕರಿಸುತ್ತಾರೆ; ಪ್ರಭಾವದಿಂದ ಕೂಡಿದ ದೇವದೂತರ ವಿರುದ್ಧ ಕೆಟ್ಟದ್ದನ್ನು ಹೇಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಹಾಗೆಯೇ ಈ ದುಃಸ್ವಪ್ನದವರೂ ಶರೀರವನ್ನು ಮಲಿನಮಾಡಿಕೊಳ್ಳುವವರೂ ಪ್ರಭುತ್ವವನ್ನು ಅಸಡ್ಡೆಮಾಡುವವರೂ ದೇವದೂತರುಗಳನ್ನು ದೂಷಿಸುವವರೂ ಆಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

8 ತಸೆಚ್ ತೆಂಚಿ ದರ್ಶನಾಚ್ ತೆಂಕಾ ವಾಟ್ ದಾಕ್ವುತ್ಯಾತ್ ಅಪ್ಲ್ಯಾ ಪಾಪಾನಿಚ್ ಅಪ್ನಾಕ್ ಅಶುದ್ದ್ ಕರುನ್ ಘೆತಾತ್. ತೆನಿ ಧನಿಯಾಚೊ ಅಧಿಕಾರ್ ತಿರಸ್ಕಾರ್ ಕರ್ತಾತ್, ಮೊಟ್ಯಾ ಮಹಿಮೆಚ್ಯಾ ದೆವಾಚ್ಯಾ ದುತಾಂಚ್ಯಾ ವಿರೊದ್ ಹೊವ್ನ್ ಬುರ್ಶೆಚ್ ಸಾಂಗ್ತಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೂದನು 1:8
23 ತಿಳಿವುಗಳ ಹೋಲಿಕೆ  

ನಿಮ್ಮ ಸಭಾನಾಯಕರ ಮಾತನ್ನು ಕೇಳಿರಿ, ಅವರಿಗೆ ಅಧೀನರಾಗಿರಿ. ಅವರು ಲೆಕ್ಕ ಒಪ್ಪಿಸಬೇಕಾದವರಾಗಿರುವುದರಿಂದ ನಿಮ್ಮ ಆತ್ಮಗಳನ್ನು ಕಾಯುವವರಾಗಿದ್ದಾರೆ. ಅವರು ದುಃಖಿಸದೆ ಸಂತೋಷದಿಂದ ಇದನ್ನು ಮಾಡುವಂತೆ ನಡೆದುಕೊಳ್ಳಿರಿ. ಏಕೆಂದರೆ ಅವರು ವ್ಯಸನದಿಂದಿರುವುದು ನಿಮಗೆ ಪ್ರಯೋಜನಕರವಾದದ್ದಲ್ಲ.


ಎಲ್ಲರನ್ನೂ ಸನ್ಮಾನಿಸಿರಿ. ಸಹೋದರರನ್ನು ಪ್ರೀತಿಸಿರಿ. ದೇವರಿಗೆ ಭಯಪಡಿರಿ. ಅರಸನನ್ನು ಗೌರವಿಸಿರಿ.


ಜಾರರು, ಸಲಿಂಗಕಾಮಿಗಳು, ನರಚೋರರು, ಸುಳ್ಳುಗಾರರು, ಅಸತ್ಯವಾದಿಗಳು, ಸ್ವಸ್ಥಬೋಧನೆಗೆ ವಿರುದ್ಧವಾಗಿರುವಂಥವುಗಳನ್ನು ಮಾಡುವವರು, ಈ ಮೊದಲಾದ ಅನೀತಿವಂತರಿಗಾಗಿ ನೇಮಕವಾಗಿದೆ ಎಂದು ನಮಗೆ ತಿಳಿದಿದೆ.


ಪೌಲನು; “ಸಹೋದರರೇ, ಮಹಾಯಾಜಕನೆಂದು ನನಗೆ ತಿಳಿದಿರಲಿಲ್ಲ. ನಿನ್ನ ಜನರಲ್ಲಿ ಅಧಿಪತಿಯಾಗಿರುವವನ ವಿಷಯವಾಗಿ ಕೆಟ್ಟದ್ದೇನೂ ಆಡಬಾರದೆಂದು ಬರೆದದೆಯಷ್ಟೆ” ಅಂದನು.


ಮನಸ್ಸಿನಲ್ಲಿಯೂ ಅರಸನನ್ನು ದೂಷಿಸದಿರು. ಮಲಗುವ ಕೋಣೆಯಲ್ಲಿಯೂ ಧನಿಕನನ್ನು ಬಯ್ಯದಿರು. ಆಕಾಶದ ಹಕ್ಕಿಯು ಆ ಶಬ್ದವನ್ನು ಮುಟ್ಟಿಸುವವು; ಪಕ್ಷಿಯು ಆ ವಿಷಯವನ್ನು ತಿಳಿಸುವುದು.


ದೇವರನ್ನು ದೂಷಿಸಬಾರದು. ನಿನ್ನ ಜನರ ಅಧಿಕಾರಿಗಳನ್ನು ನೀನು ಶಪಿಸಬಾರದು.


ಯಾವನಾದರೂ ದೇವರ ಆಲಯವನ್ನು ನಾಶಪಡಿಸಿದರೆ ದೇವರು ಅವನನ್ನು ನಾಶಪಡಿಸುವನು. ಯಾಕೆಂದರೆ ದೇವರ ಆಲಯವು ಪವಿತ್ರವಾದದ್ದು ಆ ಆಲಯವು ನೀವೇ ಆಗಿದ್ದೀರಿ.


ಹೀಗಿರಲು ಈ ಮಾತನ್ನು ತಿರಸ್ಕರಿಸುವವನು ಮನುಷ್ಯರನ್ನು ಮಾತ್ರವಲ್ಲದೆ, ನಿಮಗೆ ಪವಿತ್ರಾತ್ಮವರವನ್ನು ದಯಪಾಲಿಸುವ ದೇವರನ್ನೂ ತಿರಸ್ಕರಿಸುವವನಾಗಿದ್ದಾನೆ.


“ಆದರೆ ನಮ್ಮ ಪೂರ್ವಿಕರು ಅವನ ಮಾತುಗಳನ್ನು ಕೇಳುವುದಕ್ಕೆ ಮನಸ್ಸಿಲ್ಲದೆ ಅವನನ್ನು ತಳ್ಳಿಬಿಟ್ಟು, ಪುನಃ ಐಗುಪ್ತದೇಶದ ಕಡೆಗೆ ಮನಸ್ಸಿಟ್ಟರು.


“ಆದರೆ ತನ್ನ ಸ್ವಕುಲದವನಿಗೆ ಅನ್ಯಾಯಮಾಡುತ್ತಿದ್ದವನು, ‘ನಿನ್ನನ್ನು ನಮ್ಮ ಮೇಲೆ ಅಧಿಕಾರಿಯನ್ನಾಗಿಯೂ, ನ್ಯಾಯಾಧಿಪತಿಯನ್ನಾಗಿಯೂ ಇಟ್ಟವರು ಯಾರು?


ಆದರೆ ಅವನ ಪಟ್ಟಣದ ನಿವಾಸಿಗಳು ಅವನನ್ನು ದ್ವೇಷಿಸಿ ಅವನ ಹಿಂದೆ ರಾಯಭಾರಿಗಳನ್ನು ಕಳುಹಿಸಿ ‘ನೀನು ನಮ್ಮ ಮೇಲೆ ದೊರೆತನಮಾಡುವುದು ನಮಗೆ ಇಷ್ಟವಿಲ್ಲ’ ಎಂದು ಹೇಳಿಸಿದರು.


ತಂದೆಯನ್ನು ಹಾಸ್ಯಮಾಡಿ ತಾಯಿಯ ಅಪ್ಪಣೆಯನ್ನು, ಧಿಕ್ಕರಿಸುವವನ ಕಣ್ಣನ್ನು, ಹಳ್ಳಕೊಳ್ಳದ ಕಾಗೆಗಳು ಕುಕ್ಕುವವು, ರಣಹದ್ದುಗಳು ತಿಂದುಬಿಡುವವು.


ತಾಯಿಗೆ ಶುಭವನ್ನು ಕೋರದೆ, ತಂದೆಯನ್ನು ಶಪಿಸುವ ಒಂದು ತರದವರು ಉಂಟು.


ಅವರು ಒಟ್ಟಾಗಿ ಕೂಡಿಕೊಂಡು ಮೋಶೆ ಮತ್ತು ಆರೋನರ ಬಳಿಗೆ ಬಂದು ಅವರಿಗೆ, “ನೀವು ಹೆಚ್ಚು ಅಧಿಕಾರ ನಡೆಸುತ್ತೀರಿ. ಈ ಸಮೂಹದವರಲ್ಲಿ ಪ್ರತಿಯೊಬ್ಬನು ದೇವರಿಗೆ ಪ್ರತಿಷ್ಠಿತನಾದವನು, ಯೆಹೋವನು ಇವರೆಲ್ಲರ ಮಧ್ಯದಲ್ಲಿ ಇದ್ದಾನೆ. ಹೀಗಿರಲಾಗಿ ಯೆಹೋವನ ಸಮೂಹದವರಿಗಿಂತಲೂ ನಿಮ್ಮನ್ನು ನೀವೇ ಹೆಚ್ಚಿಸಿಕೊಳ್ಳುವುದು ಏಕೆ?” ಎಂದು ಕೇಳಿದರು.


ನೀವು ಇದರ ಹಣ್ಣನ್ನು ತಿಂದ ಕ್ಷಣವೇ ನಿಮ್ಮ ಕಣ್ಣುಗಳು ತೆರೆಯುವವು, ನೀವು ದೇವರುಗಳಂತೆ ಆಗಿ ಒಳ್ಳೆಯದರ ಮತ್ತು ಕೆಟ್ಟದ್ದರ ಬೇಧವನ್ನು ತಿಳಿಯುವಿರಿ, ಇದು ದೇವರಿಗೆ ಚೆನ್ನಾಗಿ ಗೊತ್ತು” ಎಂದು ಹೇಳಿತು.


ಅವರು ನಿಮ್ಮನ್ನು ಸಭಾಮಂದಿರಗಳಿಗೂ, ಸಭಾಮಂದಿರಗಳ ಅಧಿಕಾರಿಗಳ ಎದುರಿಗೂ, ಅಧಿಪತಿಗಳ ಎದುರಿಗೂ, ಹಿಡಿದುಕೊಂಡು ಹೋಗುವಾಗ ಹೇಗೆ ಉತ್ತರ ಕೊಡಬೇಕು? ಏನು ಉತ್ತರ ಕೊಡಬೇಕು? ಏನು ಹೇಳಬೇಕು? ಎಂದು ಚಿಂತೆಮಾಡಬೇಡಿರಿ.


ಆ ಮನೆ ಗುಡಿಸಿ ವ್ಯವಸ್ಥಿತವಾಗಿರುವುದನ್ನು ಕಂಡು ಹೊರಟುಹೋಗಿ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು