Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೂದನು 1:9 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಆದರೂ ಪ್ರಧಾನ ದೇವದೂತನಾದ ಮೀಕಾಯೇಲನು ಮೋಶೆಯ ದೇಹದ ವಿಷಯದಲ್ಲಿ ಸೈತಾನನೊಂದಿಗೆ ವಾಗ್ವಾದ ಮಾಡಿದಾಗ, ಅವನು ಸೈತಾನನಿಗೆ ವಿರೋಧವಾಗಿ ಒಂದೂ ನಿಂದೆಯ ಮಾತನಾಡದೆ, “ಕರ್ತನು ನಿನ್ನನ್ನು ಗದರಿಸಲಿ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಪ್ರಧಾನ ದೇವದೂತ ಮಿಕಾಯೇಲನೂ ಇಂಥ ದೂಷಣೆಯನ್ನು ಆಡಲಿಲ್ಲ. ಮೋಶೆಯ ಪಾರ್ಥಿವ ಶರೀರದ ವಿಷಯದಲ್ಲಿ ಸೈತಾನನೊಡನೆ ವಾಗ್ವಾದ ಮಾಡಿದಾಗಲೂ ಅಂಥ ದೂಷಣೆಯನ್ನು ಆಡಲು ಧೈರ್ಯಗೊಳ್ಳದೆ, “ಸರ್ವೇಶ್ವರ ನಿನ್ನನ್ನು ಖಂಡಿಸಲಿ,” ಎಂದಷ್ಟೇ ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಆದರೆ ಪ್ರಧಾನ ದೇವದೂತನಾದ ಮೀಕಾಯೇಲನು ಮೋಶೆಯ ಶವದ ವಿಷಯದಲ್ಲಿ ಸೈತಾನನೊಂದಿಗೆ ವ್ಯಾಜ್ಯವಾಡಿ ವಾಗ್ವಾದಮಾಡಿದಾಗ ಅವನು ಸೈತಾನನ ಮೇಲೆ ದೂಷಣಾಭಿಪ್ರಾಯವನ್ನು ಹೇಳುವದಕ್ಕೆ ಧೈರ್ಯಗೊಳ್ಳದೆ - ಕರ್ತನು ನಿನ್ನನ್ನು ಖಂಡಿಸಲಿ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಪ್ರಧಾನ ದೇವದೂತನಾದ ಮಿಕಾಯೇಲನೂ ಸಹ ಹೀಗೆ ಮಾಡಲಿಲ್ಲ. ಮೋಶೆಯ ದೇಹವು ಯಾರಿಗೆ ಸೇರಬೇಕೆಂಬುದರ ಬಗ್ಗೆ ಮಿಕಾಯೇಲನು ಸೈತಾನನ ಬಗ್ಗೆ ದೂಷಣೆ ಮಾಡಲು ಧೈರ್ಯಗೊಳ್ಳದೆ, “ಪ್ರಭುವು ನಿನ್ನನ್ನು ದಂಡಿಸುತ್ತಾನೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಆದರೂ ಪ್ರಧಾನ ದೇವದೂತನಾದ ಮೀಕಾಯೇಲನು, ಮೋಶೆಯ ಶವದ ವಿಷಯದಲ್ಲಿ ಸೈತಾನನೊಂದಿಗೆ ವ್ಯಾಜ್ಯವಾಡಿ ವಾಗ್ವಾದ ಮಾಡಿದಾಗ, ಅವನು ಸೈತಾನನನ್ನು ದೂಷಿಸುವುದಕ್ಕೆ ಧೈರ್ಯಗೊಳ್ಳದೆ, “ಕರ್ತದೇವರು ನಿನ್ನನ್ನು ಗದರಿಸಲಿ!” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

9 ಮುಖ್ಯ್ ದೆವಾಚ್ಯಾ ದುತಾ ಮಿಂಗೆಲಾನ್ ಮೊಯ್ಜೆಚ್ಯಾ ಮಡ್ಯಾಚ್ಯಾ ವಿಶಯಾತ್ ಸೈತಾನಾಚ್ಯಾ ವಾಂಗ್ಡಾ ವಾದ್ ಖೆಳ್ತಾನಾ, ತೆನಿ ತೆಕಾ ಬರೆ ಬುರ್ಶೆ ಬೊಲುನ್ ತೆಕಾ ತೆಚಿ ಮರ್ಯಾದ್ ಕಾಡುಕ್ ಧೈರೊ ಕರುಕ್ ನಾ, ತೆನಿ ತೆಕಾ,“ಧನಿ ತುಕಾ ಗದ್ಮುಂದಿತ್,” ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೂದನು 1:9
16 ತಿಳಿವುಗಳ ಹೋಲಿಕೆ  

ಆಗ ಯೆಹೋವನ ದೂತನು ಸೈತಾನನಿಗೆ, “ಯೆಹೋವನು ನಿನ್ನನ್ನು ಖಂಡಿಸಲಿ! ಹೌದು, ಯೆರೂಸಲೇಮನ್ನು ಆರಿಸಿಕೊಂಡಿರುವ ಯೆಹೋವನು ನಿನ್ನನ್ನು ಖಂಡಿಸಲಿ! ಅದು ಉರಿಯುವ ಬೆಂಕಿಯಿಂದ ಎಳೆದ ಕೊಳ್ಳಿಯಾಗಿದೆಯಲ್ಲಾ?” ಎಂದು ಹೇಳಿದನು.


ದೇವದೂತರು ಬಲದಲ್ಲಿಯೂ ಮಹತ್ತಿನಲ್ಲಿಯೂ ಶ್ರೇಷ್ಠರಾಗಿದ್ದರೂ ಕರ್ತನ ಮುಂದೆ ಅವರಿಗೆ ವಿರೋಧವಾಗಿ ದೂಷಣೆಯನ್ನು, ನಿಂದೆಯನ್ನು ಹೇಳದಿರಲು, ಆ ಗರ್ವಿಷ್ಠರು ಮಹಿಮಾಪದವಿಗಳನ್ನು ದೂಷಿಸಲು ಹಿಂಜರಿಯುವುದಿಲ್ಲ.


ಪರಲೋಕದಲ್ಲಿ ಯುದ್ಧ ನಡೆಯಿತು. ಮೀಕಾಯೇಲನೂ ಅವನ ದೂತರೂ ಘಟಸರ್ಪದ ವಿರುದ್ಧ ಯುದ್ಧ ಮಾಡಿದರು. ಘಟಸರ್ಪವೂ ಅವನ ದೂತರೂ ಯುದ್ಧ ಮಾಡಿ ಕಾದಾಡಿದರು.


“ನಿನ್ನ ಜನರ ಪಕ್ಷವನ್ನು ಹಿಡಿದಿರುವ ಮಹಾಪಾಲಕನಾದ ದೇವದೂತ ಮೀಕಾಯೇಲನು ಆ ಕಾಲದಲ್ಲಿ ಏಳುವನು. ಮೊಟ್ಟಮೊದಲು ಜನಾಂಗವು ಉಂಟಾದ ದಿನದಿಂದ ಇಂದಿನವರೆಗೂ ಸಂಭವಿಸದಂಥ ಸಂಕಟವು ಸಂಭವಿಸುವುದು. ಆಗ ನಿನ್ನ ಜನರೊಳಗೆ ಯಾರ ಹೆಸರುಗಳು ಜೀವಬಾಧ್ಯರ ಪಟ್ಟಿಯಲ್ಲಿ ಸಿಕ್ಕುವವೋ ಅವರೆಲ್ಲರೂ ರಕ್ಷಿಸಲ್ಪಡುವರು.


ಮೋವಾಬ್ಯರ ದೇಶದಲ್ಲಿ ಬೇತ್‍ಪೆಗೋರದ ಎದುರಾಗಿರುವ ಕಣಿವೆಯಲ್ಲಿ (ಯೆಹೋವನು) ಅವನ ದೇಹವನ್ನು ಸಮಾಧಿಮಾಡಿದನು; ಅವನ ಸಮಾಧಿ ಎಲ್ಲಿದೆಯೋ ಇಂದಿನ ವರೆಗೆ ಯಾರಿಗೂ ತಿಳಿಯದು.


ಆದರೂ ಸತ್ಯಶಾಸನದಲ್ಲಿ ಲಿಖಿತವಾದದ್ದನ್ನು ಈಗ ನಿನಗೆ ತಿಳಿಸುವೆನು. ಇವರಿಬ್ಬರೊಂದಿಗೆ ಹೋರಾಡುವಲ್ಲಿ ನಿಮ್ಮ ಪಾಲಕನಾದ ಮೀಕಾಯೇಲನ ಹೊರತು ನನಗೆ ಬೆಂಬಲರಾಗತಕ್ಕವರು ಇನ್ನಾರೂ ಇಲ್ಲ ಎಂದನು.”


ಪಾರಸಿಯ ರಾಜ್ಯದ ದಿವ್ಯಪಾಲಕನು ಇಪ್ಪತ್ತೊಂದು ದಿನ ನನ್ನನ್ನು ತಡೆಯಲು ಇಗೋ, ಪ್ರಧಾನ ದಿವ್ಯಪಾಲಕರಲ್ಲೊಬ್ಬನಾದ ಮೀಕಾಯೇಲನು ನನ್ನ ಸಹಾಯಕ್ಕೆ ಬಂದನು; ಅಲ್ಲಿ ಪಾರಸಿಯ ರಾಜರ ಸಂಗಡ ಹೋರಾಡಿ,


ಅಪಕಾರಕ್ಕೆ ಅಪಕಾರವನ್ನು, ನಿಂದೆಗೆ ನಿಂದೆಯನ್ನು ಮಾಡದೇ ಆಶೀರ್ವದಿಸಿರಿ. ಇದಕ್ಕಾಗಿ ದೇವರು ನಿಮ್ಮನ್ನು ಕರೆದಿದ್ದಾನಲ್ಲಾ. ಹೀಗೆ ಮಾಡುವುದಾದರೆ ನೀವು ಆಶೀರ್ವಾದವನ್ನು ಬಾಧ್ಯವಾಗಿ ಹೊಂದುವಿರಿ.


ಯಾಕೆಂದರೆ ಕರ್ತನು ತಾನೇ ಆಜ್ಞಾಘೋಷದೊಡನೆಯೂ, ಪ್ರಧಾನದೂತನ ಶಬ್ದದೊಡನೆಯೂ, ದೇವರ ತುತ್ತೂರಿ ಧ್ವನಿಯೊಡನೆಯೂ ಆಕಾಶದಿಂದ ಇಳಿದುಬರುವನು. ಆಗ ಕ್ರಿಸ್ತನಲ್ಲಿ ಸತ್ತವರು ಮೊದಲು ಎದ್ದು ಬರುವರು.


ದೇವರನ್ನು ದೂಷಿಸಬಾರದು. ನಿನ್ನ ಜನರ ಅಧಿಕಾರಿಗಳನ್ನು ನೀನು ಶಪಿಸಬಾರದು.


“ನೀವು ಸ್ನೇಹಭಾವದಿಂದ ಸಹಾಯ ಮಾಡುವುದಕ್ಕಾಗಿ ನನ್ನ ಬಳಿಗೆ ಬಂದಿರುವುದಾದರೆ ನಿಮ್ಮೊಡನೆ ನನಗೆ ಐಕ್ಯಭಾವವಿರುವುದು. ನಿರಪರಾಧಿಯಾದ ನನ್ನನ್ನು ನನ್ನ ವಿರೋಧಿಗಳಿಗೆ ಒಪ್ಪಿಸುವ ಕುಯುಕ್ತಿಯಿಂದ ಬಂದಿರುವುದಾದರೆ ನಮ್ಮ ಪೂರ್ವಿಕರ ದೇವರು ನಿಮ್ಮನ್ನು ನೋಡಿ ದಂಡಿಸಲಿ” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು