Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 1:11 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಇದಲ್ಲದೆ, “ಯೆರೆಮೀಯನೇ, ಏನು ನೋಡುತ್ತಿರುವೆ?” ಎಂಬ ಯೆಹೋವನ ಮಾತು ನನಗೆ ಕೇಳಿ ಬಂತು. ಅದಕ್ಕೆ ನಾನು, “ಬಾದಾಮಿ ಮರದ ಕೊಂಬೆಯನ್ನು ನೋಡುತ್ತೇನೆ” ಅಂದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಇದಲ್ಲದೆ ಸರ್ವೇಶ್ವರ ಸ್ವಾಮಿ, “ಎಲೈ ಯೆರೆಮೀಯನೇ, ಏನು ನೋಡುತ್ತಿರುವೆ?” ಎಂದು ಕೇಳಿದರು. ಅದಕ್ಕೆ ನಾನು, ಚಚ್ಚರ ಮರದ ರೆಂಬೆಯನ್ನು ನೋಡುತ್ತಿದ್ದೇನೆ,” ಎಂದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಇದಲ್ಲದೆ ಯೆಹೋವನು - ಯೆರೆಮೀಯನೇ, ಏನು ನೋಡುತ್ತೀ ಎಂದು ನನ್ನನ್ನು ಕೇಳಿದನು, ಅದಕ್ಕೆ ನಾನು - ಚಚ್ಚರ ಮರದ ರೆಂಬೆಯನ್ನು ನೋಡುತ್ತೇನೆ ಅಂದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಯೆಹೋವನಿಂದ ನನಗೆ ಈ ಸಂದೇಶ ಬಂದಿತು: “ಯೆರೆಮೀಯನೇ, ನಿನಗೆ ಏನು ಕಾಣುತ್ತಿದೆ?” ಎಂದು ಯೆಹೋವನು ಕೇಳಿದನು. ನಾನು ಆತನಿಗೆ, “ಬಾದಾಮಿಯ ಮರದಿಂದ ಮಾಡಿದ ಒಂದು ದಂಡ ಕಾಣಿಸುತ್ತಿದೆ” ಎಂದು ಉತ್ತರಕೊಟ್ಟೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಇದಲ್ಲದೆ ಯೆಹೋವ ದೇವರ ವಾಕ್ಯವು ನನಗೆ, “ಯೆರೆಮೀಯನೇ, ನೀನು ಏನು ಕಾಣುತ್ತೀ?” ಎಂದು ಕೇಳಿದರು. ಅದಕ್ಕೆ ನಾನು, “ಬಾದಾಮಿ ಮರದ ಕೊಂಬೆಯನ್ನು ನೋಡುತ್ತೇನೆ,” ಎಂದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 1:11
11 ತಿಳಿವುಗಳ ಹೋಲಿಕೆ  

ಯೆಹೋವನು ನನಗೆ, “ಆಮೋಸನೇ, ನಿನ್ನ ಕಣ್ಣಿಗೆ ಕಾಣಿಸುವುದೇನು?” ಎಂದು ಕೇಳಲು ನಾನು, “ಒಂದು ನೂಲುಗುಂಡು” ಎಂದು ಉತ್ತರ ಕೊಟ್ಟೆನು. ಆಗ ಕರ್ತನು, “ಇಗೋ, ನನ್ನ ಜನರಾದ ಇಸ್ರಾಯೇಲಿನ ಮಧ್ಯದಲ್ಲಿ ನೂಲುಗುಂಡನ್ನು ಇಡುತ್ತೇನೆ. ಇನ್ನು ಅವರನ್ನು ಕಂಡುಕಾಣದಂತೆ ದಂಡಿಸುವೆನು.


ಆತನು ನನಗೆ, “ಆಮೋಸನೇ, ನಿನ್ನ ಕಣ್ಣಿಗೆ ಕಾಣಿಸುವುದೇನು?” ಎಂದು ಕೇಳಲು, ನಾನು ಅದಕ್ಕೆ, “ಮಾಗಿದ ಹಣ್ಣಿನ ಪುಟ್ಟಿ” ಎಂದೆನು. ಆಗ ಯೆಹೋವನು ನನಗೆ ಹೀಗೆ ಹೇಳಿದನು, “ಇಸ್ರಾಯೇಲೆಂಬ ನನ್ನ ಜನರಿಗೆ ಕಡೆಗಾಲವು ಮಾಗುತ್ತಾ ಬಂದಿದೆ. ಇನ್ನು ಮೇಲೆ ನಾನು ಅವರನ್ನು ಉಳಿಸುವುದಿಲ್ಲ.


ಆಗ ದೂತನು ನನಗೆ, “ನಿನಗೆ ಏನು ಕಾಣಿಸುತ್ತದೆ?” ಎಂದಾಗ ನಾನು, ಹಾರುತ್ತಿರುವ ಒಂದು ಸುರುಳಿಯು ಕಾಣಿಸುತ್ತದೆ ಅದರ ಉದ್ದ ಇಪ್ಪತ್ತು ಮೊಳ, ಅಗಲ ಹತ್ತು ಮೊಳ ಎಂದು ಉತ್ತರಕೊಟ್ಟೆನು.


“ಇಗೋ, ಏಳು ದೀಪಗಳುಳ್ಳ ಸುವರ್ಣಮಯವಾದ ಒಂದು ದೀಪಸ್ತಂಭವನ್ನು ನೋಡುತ್ತೇನೆ; ಅದರ ಮೇಲಿನ ದೀಪಗಳಿಗೆ ಏಳು ನಾಳಗಳಿವೆ; ಅದರ ಮೇಲ್ಗಡೆ ಎಣ್ಣೆಯ ಪಾತ್ರೆಯಿದೆ;


ಆಗ ಯೆಹೋವನು ನನ್ನನ್ನು, “ಯೆರೆಮೀಯನೇ, ಏನು ನೋಡುತ್ತೀ?” ಎಂದು ಕೇಳಲು ನಾನು, “ಅಂಜೂರದ ಫಲಗಳನ್ನು ನೋಡುತ್ತೇನೆ; ಉತ್ತಮ ಫಲಗಳು ಅತ್ಯುತ್ತಮವಾಗಿವೆ, ಕೆಟ್ಟ ಫಲಗಳು ಬಹಳ ಕೆಟ್ಟಿವೆ, ಯಾರೂ ತಿನ್ನದ ಹಾಗೆ ಕೇವಲ ಅಸಹ್ಯವಾಗಿವೆ” ಎಂದು ಉತ್ತರ ಕೊಟ್ಟೆನು.


ಮರುದಿನ ಮೋಶೆಯು ಆಜ್ಞಾಶಾಸನಗಳಿರುವ ಗುಡಾರದಲ್ಲಿ ಹೋಗಿ ನೋಡಲಾಗಿ ಅಗೋ, ಲೇವಿ ಕುಲಕ್ಕೋಸ್ಕರ ಆರೋನನಿಗೆ ಕೊಟ್ಟಿದ್ದ ಕೋಲು ಚಿಗುರಿ, ಮೊಗ್ಗುಬಿಟ್ಟು ಹೂವಾಗಿ ಬಾದಾಮಿ ಹಣ್ಣುಗಳನ್ನು ಫಲಿಸಿತ್ತು!


“ಆಹಾ, ದಂಡನೆಯ ದಿನವು, ಇಗೋ ಬಂತು! ನಿನಗೆ ದುರ್ಗತಿಯು ಅಂಕುರಿಸಿದೆ, ಕೋಲು ಹೂಬಿಟ್ಟಿದೆ, ಹೆಮ್ಮೆಯು ಚಿಗುರಿದೆ.


ಹೀಗಿರುವಲ್ಲಿ ಯಾಕೋಬನು ಚಿನಾರು, ಬಾದಾಮಿ, ಅರ್ಮೋನ್ ಎಂಬ ಮರಗಳ ಹಸಿ ಕೋಲುಗಳನ್ನು ತೆಗೆದುಕೊಂಡು ಪಟ್ಟೆಪಟ್ಟೆಯಾಗಿ ತೊಗಟೆಯನ್ನು ಸುಲಿದು,


ಹಾಗೆಯೇ ನನ್ನ ಬಾಯಿಂದ ಹೊರಟ ಮಾತು, ನನ್ನ ಇಷ್ಟಾರ್ಥವನ್ನು ನೆರವೇರಿಸಿ, ನಾನು ಉದ್ದೇಶಿಸಿದ್ದನ್ನು ಕೈಗೂಡಿಸಿದ ಹೊರತು ನನ್ನ ಕಡೆಗೆ ವ್ಯರ್ಥವಾಗಿ ಹಿಂದಿರುಗುವುದಿಲ್ಲ.


ನಾನೇ ಯೆಹೋವನು; ನಾನು ನುಡಿದೇ ನುಡಿಯುವೆನು; ನಾನು ನುಡಿದ ಮಾತು ನೆರವೇರುವುದು, ಇನ್ನು ನಿಧಾನವಾಗದು; ದ್ರೋಹಿ ವಂಶದವರೇ, ನಾನು ನಿಮ್ಮ ಕಾಲದಲ್ಲಿ ನುಡಿಯುವುದು ಮಾತ್ರವಲ್ಲದೆ ನುಡಿದದ್ದನ್ನು ನೆರವೇರಿಸುವೆನು’” ಇದು ಕರ್ತನಾದ ಯೆಹೋವನ ವಾಕ್ಯ.


“ಆದಕಾರಣ ನೀನು ಅವರಿಗೆ ಹೀಗೆ ಹೇಳು, ‘ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ಇನ್ನು ಮೇಲೆ ನನ್ನ ಮಾತುಗಳಲ್ಲಿ ಯಾವುದೂ ನೆರವೇರದೆ ಇರದು; ನಾನಾಡುವ ಮಾತು ನೆರವೇರುವುದು ಖಂಡಿತ’ ಇದು ಕರ್ತನಾದ ಯೆಹೋವನ ನುಡಿ.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು