Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 1:6 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಅದಕ್ಕೆ ನಾನು, “ಅಯ್ಯೋ, ಕರ್ತನಾದ ಯೆಹೋವನೇ, ನಾನು ಮಾತು ಬಲ್ಲವನಲ್ಲ, ಬಾಲಕನು” ಎಂದು ಅರಿಕೆ ಮಾಡಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಅದಕ್ಕೆ ನಾನು, “ಅಯ್ಯೋ, ಸ್ವಾಮಿ ಸರ್ವೇಶ್ವರಾ, ನಾನು ಮಾತುಬಲ್ಲವನಲ್ಲ, ಇನ್ನೂ ತರುಣ,” ಎಂದು ಬಿನ್ನವಿಸಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಅದಕ್ಕೆ ನಾನು - ಅಯ್ಯೋ, ಕರ್ತನಾದ ಯೆಹೋವನೇ, ನಾನು ಮಾತು ಬಲ್ಲವನಲ್ಲ, ಬಾಲಕನು ಎಂದು ಬಿನ್ನವಿಸಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಆಗ ಯೆರೆಮೀಯನೆಂಬ ನಾನು, “ಸರ್ವಶಕ್ತನಾದ ಯೆಹೋವನೇ, ಹೇಗೆ ಮಾತನಾಡಬೇಕೆಂಬುದೇ ನನಗೆ ತಿಳಿಯದು. ನಾನು ಕೇವಲ ಹುಡುಗನಷ್ಟೇ” ಎಂದು ಹೇಳಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಆಗ ನಾನು, “ಹಾ, ಸಾರ್ವಭೌಮ ಯೆಹೋವ ದೇವರೇ, ಇಗೋ ನಾನು ಮಾತು ಬಲ್ಲವನಲ್ಲ, ನಾನು ಚಿಕ್ಕವನು,” ಎಂದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 1:6
12 ತಿಳಿವುಗಳ ಹೋಲಿಕೆ  

ಅದಕ್ಕೆ ಮೋಶೆ ಯೆಹೋವನ ಸನ್ನಿಧಿಯಲ್ಲಿ, “ಇಗೋ, ಇಸ್ರಾಯೇಲರೇ ನನ್ನ ಮಾತುಗಳನ್ನು ಕೇಳುತ್ತಿಲ್ಲ; ಹೀಗಿರುವಾಗ ತೊದಲು ಮಾತನಾಡುವ ನನ್ನ ಮಾತುಗಳಿಗೆ ಫರೋಹನು ಕಿವಿಗೊಟ್ಟಾನೇ?” ಅಂದನು.


“ಆಹಾ! ಕರ್ತನಾದ ಯೆಹೋವನೇ! ನೀನು ಭುಜವನ್ನೆತ್ತಿ ನಿನ್ನ ಮಹಾ ಶಕ್ತಿಯಿಂದ ಭೂಮ್ಯಾಕಾಶಗಳನ್ನು ಸೃಷ್ಟಿಸಿದ್ದಿ; ಯಾವ ಕಾರ್ಯವೂ ನಿನಗೆ ಅಸಾಧ್ಯವಲ್ಲ.


ಆದರೆ ಮೋಶೆಯು ಯೆಹೋವನಿಗೆ, “ಇಗೋ, ಸ್ವಾಮಿ ನಾನು ಮಾತನಾಡುವುದರಲ್ಲಿ ಜಾಣನಲ್ಲ, ಫರೋಹನು ನನ್ನ ಮಾತನ್ನು ಹೇಗೆ ಕೇಳಾನು” ಅಂದನು.


ಅದಕ್ಕೆ ನಾನು, “ಅಯ್ಯೋ, ಕರ್ತನಾದ ಯೆಹೋವನೇ, ಇಗೋ ಪ್ರವಾದಿಗಳು ಈ ಜನರಿಗೆ, ‘ಖಡ್ಗವು ನಿಮ್ಮ ಕಣ್ಣಿಗೆ ಕಾಣದು, ಕ್ಷಾಮವು ನಿಮಗೆ ಸಂಭವಿಸದು; ಯೆಹೋವನು ಈ ಸ್ಥಳದಲ್ಲಿ ತಾನು ಪ್ರಮಾಣ ಮಾಡಿದಂತೆ ಸಮಾಧಾನವನ್ನು ನಿಮಗೆ ಕೊಡುವನು ಎಂದು ನುಡಿಯುತ್ತಾರೆ’” ಎಂಬುದಾಗಿ ಹೇಳಿದೆನು.


ಅದಕ್ಕೆ ಮೋಶೆಯು ಉತ್ತರವಾಗಿ, “ಅವರು ನನ್ನನ್ನು ನಂಬದೆ, ನನ್ನ ಮಾತಿಗೆ ಕಿವಿಗೊಡದೆ, ಯೆಹೋವನು ನಿನಗೆ ಕಾಣಿಸಿಕೊಂಡೇ ಇಲ್ಲ ಎಂದು ಹೇಳಬಹುದು?” ಎಂದನು.


ಆಗ ನಾನು, “ಅಯ್ಯೋ, ಕರ್ತನಾದ ಯೆಹೋವನೇ, ನೀನು ಈ ಜನರಿಗೂ ಮತ್ತು ಯೆರೂಸಲೇಮಿಗೂ, ‘ನಿಮಗೆ ಸಮಾಧಾನವಾಗುವುದು’ ಎಂದು ಹೇಳಿ ನಿಶ್ಚಯವಾಗಿ ಇವರನ್ನು ಬಹಳ ಮೋಸಗೊಳಿಸಿದ್ದಿ; ಖಡ್ಗವು ಪ್ರಾಣದ ಮಟ್ಟಿಗೂ ಇಳಿಯುತ್ತದಲ್ಲಾ” ಅಂದೆನು.


ಆಗ ನಾನು, “ಅಯ್ಯೋ, ನನ್ನ ಗತಿಯನ್ನು ಏನು ಹೇಳಲಿ ನಾಶವಾದೆನಲ್ಲಾ! ನಾನು ಹೊಲಸು ತುಟಿಯವನು. ಹೊಲಸು ತುಟಿಯವರ ಮಧ್ಯದಲ್ಲಿ ವಾಸಿಸುವವನು. ಇಂಥ ನನ್ನ ಕಣ್ಣುಗಳು ರಾಜಾಧಿರಾಜನನ್ನು, ಸೇನಾಧೀಶ್ವರನಾದ ಯೆಹೋವನನ್ನು ಕಂಡೆವಲ್ಲಾ!” ಎಂದು ಕೂಗಿಕೊಳ್ಳಲು,


ಅದಕ್ಕೆ ನಾನು, “ಅಯ್ಯೋ, ಕರ್ತನಾದ ಯೆಹೋವನೇ, ನಾನು ಹೊಲಸನ್ನು ಮುಟ್ಟಿದವನಲ್ಲ, ನಾನು ಹುಟ್ಟಿದಂದಿನಿಂದ ಇಂದಿನವರೆಗೂ ಸತ್ತ ಪಶುವಿನ ಮಾಂಸವನ್ನಾಗಲಿ, ಕಾಡುಮೃಗವು ಕೊಂದ ಪಶುವಿನ ಮಾಂಸವನ್ನಾಗಲಿ ತಿಂದವನೇ ಅಲ್ಲ; ಯಾವ ಅಸಹ್ಯಪದಾರ್ಥವೂ ನನ್ನ ಬಾಯೊಳಗೆ ಸೇರಲಿಲ್ಲ” ಎಂದು ಅರಿಕೆಮಾಡಲು,


“ನೀನು ಓಡು, ಆ ಯುವಕನಿಗೆ ಈ ಮಾತನ್ನು ತಿಳಿಸು, ‘ಯೆರೂಸಲೇಮಿನಲ್ಲಿರುವ ಜನ ಮತ್ತು ಪಶುಗಳ ಸಂಖ್ಯೆಯು ಅಪಾರವಾಗಿರುವುದರಿಂದ ಅದು ಪೌಳಿಗೋಡೆಯಿಲ್ಲದ ಹಳ್ಳಿಪಳ್ಳಿಗಳಂತೆ ಹರಡಿಕೊಂಡು ನೆಲೆಯಾಗಿರುವುದು.


ಆಗ ಪ್ರವಾದಿಯಾದ ಯೆರೆಮೀಯನು ಈ ಮಾತುಗಳನ್ನೆಲ್ಲಾ ಯೆರೂಸಲೇಮಿನಲ್ಲಿ ಯೆಹೂದದ ಅರಸನಾದ ಚಿದ್ಕೀಯನಿಗೆ ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು