Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 10:10 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಯೆಹೋವನಾದರೋ ಸತ್ಯದೇವರು; ಆತನು ಚೈತನ್ಯಸ್ವರೂಪನಾದ ದೇವನೂ ಮತ್ತು ಶಾಶ್ವತ ರಾಜನೂ ಆಗಿದ್ದಾನೆ. ಆತನ ಕೋಪಕ್ಕೆ ಭೂಲೋಕವು ನಡುಗುತ್ತದೆ, ಜನಾಂಗಗಳು ಆತನ ರೋಷವನ್ನು ತಾಳಲಾರವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಹೇ ಸರ್ವೇಶ್ವರಾ, ನೀವಾದರೋ ಸತ್ಯದೇವರು, ಜೀವಸ್ವರೂಪ ದೇವರು, ಶಾಶ್ವತ ರಾಜರು ನಿಮ್ಮ ಕೋಪಕ್ಕೆ ನಡುಗುತ್ತದೆ ಭೂಲೋಕ ನಿಮ್ಮ ರೋಷವನ್ನು ತಾಳಲಾರದು ಜನಾಂಗ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಯೆಹೋವನಾದರೋ ಸತ್ಯದೇವರು; ಆತನು ಚೈತನ್ಯಸ್ವರೂಪನಾದ ದೇವನೂ ಶಾಶ್ವತರಾಜನೂ ಆಗಿದ್ದಾನೆ; ಆತನ ಕೋಪಕ್ಕೆ ಭೂಲೋಕವು ನಡುಗುತ್ತದೆ, ಜನಾಂಗಗಳು ಆತನ ರೋಷವನ್ನು ತಾಳಲಾರವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಯೆಹೋವನೊಬ್ಬನೇ ನಿಜವಾದ ದೇವರು. ಆತನು ನಿಜವಾಗಿಯೂ ಜೀವಸ್ವರೂಪನಾಗಿದ್ದಾನೆ. ಆತನು ಶಾಶ್ವತವಾಗಿ ಆಳುವ ರಾಜನಾಗಿದ್ದಾನೆ. ಆತನು ಕೋಪಿಸಿಕೊಂಡಾಗ ಭೂಮಿಯು ನಡುಗುತ್ತದೆ. ಜನಾಂಗಗಳು ಆತನ ಕೋಪವನ್ನು ತಡೆಯಲಾರವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಆದರೆ ಯೆಹೋವ ದೇವರು ನಿಜವಾದ ದೇವರಾಗಿದ್ದಾರೆ. ಅವರು ಜೀವಸ್ವರೂಪರಾದ ದೇವರೂ, ನಿತ್ಯನಾದ ಅರಸರೂ ಆಗಿದ್ದಾರೆ. ಅವರ ರೌದ್ರದಿಂದ ಭೂಮಿ ಕಂಪಿಸುವುದು. ಅವರ ಉಗ್ರತೆಯನ್ನು ಜನಾಂಗಗಳು ತಾಳಲಾರವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 10:10
69 ತಿಳಿವುಗಳ ಹೋಲಿಕೆ  

ನಮಗೆ ಶರಣನಾದ ದೇವರು ಮಾಡುವ ಕಾರ್ಯದಲ್ಲಿ ಯಾವ ಕುಂದೂ ಇಲ್ಲ; ಆತನು ನಡೆಸುವುದೆಲ್ಲಾ ನ್ಯಾಯ; ಆತನು ನಿರ್ವಂಚಕನಾದ ನಂಬಿಗಸ್ತ ದೇವರು, ನೀತಿಯುಳ್ಳವನೂ ಮತ್ತು ಯಥಾರ್ಥನೂ ಆಗಿದ್ದಾನೆ.


ಸದಮಲನೆನಿಸಿಕೊಂಡು ಶಾಶ್ವತಲೋಕದಲ್ಲಿ ನಿತ್ಯನಿವಾಸಿಯಾದ ಮಹೋನ್ನತನು ಹೀಗೆನ್ನುತ್ತಾನೆ, “ಉನ್ನತಲೋಕವೆಂಬ ಪವಿತ್ರಾಲಯದಲ್ಲಿ ವಾಸಿಸುವ ನಾನು, ಜಜ್ಜಿಹೋದ ದೀನಮನದೊಂದಿಗೆ ಇದ್ದುಕೊಂಡು, ದೀನನ ಆತ್ಮವನ್ನೂ ಜಜ್ಜಿಹೋದವನ ಮನಸ್ಸನ್ನೂ ಉಜ್ಜೀವಿಸುವವನಾಗಿದ್ದೇನೆ.


ನೀನು ಮಹಾಶಕ್ತಿಶಾಲಿ; ನೀನು ಸಿಟ್ಟುಗೊಂಡಾಗ ನಿನ್ನ ಮುಂದೆ ಯಾರು ನಿಂತಾರು?


ಆತನ ಸಿಟ್ಟಿಗೆ ಯಾರು ಎದುರು ನಿಲ್ಲಲು ಸಾಧ್ಯ? ಆತನ ರೋಷಾಗ್ನಿಯ ಎದುರು ಯಾರು ನಿಂತಾರು? ಆತನ ರೌದ್ರವು ಜ್ವಾಲಾಪ್ರವಾಹದಂತೆ ಹರಿಯುತ್ತದೆ. ಬಂಡೆಗಳು ಆತನಿಂದ ಕೆಡವಲ್ಪಟ್ಟಿವೆ.


ನನ್ನ ಮನಸ್ಸು ದೇವರಿಗಾಗಿ, ಚೈತನ್ಯಸ್ವರೂಪನಾದ ದೇವರಿಗಾಗಿ ಹಾರೈಸುತ್ತದೆ; ನಾನು ಯಾವಾಗ ಹೋಗಿ ದೇವರ ಸನ್ನಿಧಿಯಲ್ಲಿ ಸೇರುವೆನೋ?


ಯೆಹೋವನು ಒಳ್ಳೆಯವನು; ಆತನ ಕೃಪೆಯು ಯುಗಯುಗಕ್ಕೂ, ಆತನ ಸತ್ಯತೆಯು ತಲತಲಾಂತರಕ್ಕೂ ಇರುವವು.


ಆ ಮೇಲೆ ಬೆಳ್ಳಗಿರುವ ಮಹಾ ಸಿಂಹಾಸನವನ್ನೂ ಅದರ ಮೇಲೆ ಕುಳಿತಿದ್ದಾತನನ್ನೂ ಕಂಡೆನು. ಆತನೆದುರಿನಿಂದ ಭೂಮ್ಯಾಕಾಶಗಳು ಓಡಿಹೋದವು, ಆದರೆ ಹೋಗುವುದಕ್ಕೆ ಅವುಗಳಿಗೆ ಸ್ಥಳವಿರಲಿಲ್ಲ.


ನೀನೇ ನನಗೆ ಆಧಾರವಲ್ಲವೇ; ನನ್ನ ಆತ್ಮವನ್ನು ನಿನ್ನ ಕೈಗೆ ಒಪ್ಪಿಸಿಕೊಟ್ಟಿದ್ದೇನೆ. ಯೆಹೋವನೇ, ನಂಬಿಗಸ್ತನಾದ ದೇವರೇ, ನನ್ನನ್ನು ವಿಮೋಚಿಸಿದ್ದೀ.


ಯೆಹೋವನು ಯುಗಯುಗಾಂತರಗಳಲ್ಲಿಯೂ ಅರಸನಾಗಿರುವನು; ಆತನ ದೇಶದಲ್ಲಿ ಅನ್ಯಜನಗಳು ನಿಶ್ಶೇಷರಾದರು.


ಆಗ ಆತನಿಗೆ ಸಿಟ್ಟೇರಿದ್ದರಿಂದ, ಭೂಮಿಯು ಗಡಗಡನೆ ಕಂಪಿಸಿತು, ಪರ್ವತಗಳ ಬುಡಗಳು ನಡುಗಿ ಕದಲಿದವು.


ದೇವರ ಮಗನು ಈ ಲೋಕಕ್ಕೆ ಬಂದು ನಾವು ಸತ್ಯವಾಗಿರುವಾತನನ್ನು ಅರಿತುಕೊಳ್ಳುವ ಹಾಗೆ ನಮಗೆ ವಿವೇಕವನ್ನು ಕೊಟ್ಟಿದ್ದಾನೆಂಬುದು ನಮಗೆ ಗೊತ್ತಿದೆ, ಮತ್ತು ನಾವು ದೇವರ ಮಗನಾದ ಯೇಸುಕ್ರಿಸ್ತನಲ್ಲಿ ಇರುವವರಾಗಿ ಸತ್ಯದೇವರಾಗಿರುವಾತನಲ್ಲಿದ್ದೇವೆ. ಈ ಕ್ರಿಸ್ತನೇ ಸತ್ಯದೇವರೂ, ನಿತ್ಯಜೀವವೂ ಆಗಿದ್ದಾನೆ.


ಜೀವಸ್ವರೂಪನಾದ ದೇವರ ಕೈಯಲ್ಲಿ ಸಿಕ್ಕಿಬೀಳುವುದು ಎಷ್ಟೋ ಭಯಂಕರವಾದದ್ದು.


ಸರ್ವಯುಗಗಳ ಅರಸನೂ, ಅಮರನೂ, ಅದೃಶ್ಯನೂ ಆಗಿರುವ ಏಕ ದೇವರಿಗೆ ಘನವೂ ಮಹಿಮೆಯೂ ಯುಗಯುಗಾಂತರಗಳಲ್ಲಿಯೂ ಇರಲಿ. ಆಮೆನ್.


ನಾವು ನಿಮ್ಮಲ್ಲಿಗೆ ಬಂದಾಗ ನೀವು ನಮ್ಮನ್ನು ಹೇಗೆ ಸ್ವಾಗತಿಸಿದಿರಿ; ನೀವು ವಿಗ್ರಹಗಳನ್ನು ತೊರೆದು ದೇವರ ಕಡೆಗೆ ತಿರುಗಿಕೊಂಡು ಜೀವಸ್ವರೂಪನಾದ ಸತ್ಯ ದೇವರನ್ನು ಸೇವಿಸುವವರಾಗಿದ್ದೀರಿ


“ಜನರೇ, ನೀವು ಹೀಗೇಕೆ ಮಾಡುತ್ತೀರೀ? ನಾವೂ ಮನುಷ್ಯರೇ, ನಿಮ್ಮಂಥ ಸ್ವಭಾವವುಳ್ಳವರು. ನೀವು ಈ ವ್ಯರ್ಥವಾದ ಕೆಲಸಗಳನ್ನು ಬಿಟ್ಟುಬಿಟ್ಟು ಭೂಮ್ಯಾಕಾಶಗಳನ್ನೂ, ಸಮುದ್ರವನ್ನೂ, ಅವುಗಳಲ್ಲಿರುವ ಸಮಸ್ತವನ್ನೂ ಸೃಷ್ಟಿಮಾಡಿದ ಜೀವಸ್ವರೂಪನಾದ ದೇವರ ಕಡೆಗೆ ತಿರುಗಿಕೊಳ್ಳಬೇಕೆಂಬ ಸುವಾರ್ತೆಯನ್ನು ನಿಮಗೆ ಸಾರಿಹೇಳುವವರಾಗಿದ್ದೇವೆ.


ಆತನು ಬರುವ ದಿನವನ್ನು ಯಾರು ತಾಳಾರು? ಆತನು ಕಾಣಿಸಿಕೊಳ್ಳುವಾಗ ಯಾರು ನಿಂತಾರು? ಆತನು ಅಕ್ಕಸಾಲಿಗನ ಬೆಂಕಿಗೂ, ಅಗಸನ ಸಾಬೂನಿಗೂ ಸಮಾನನಾಗಿದ್ದಾನೆ.


ಆತನು ನಿಂತುಕೊಳ್ಳಲು ಭೂಮಿಯು ಅಳೆದನು. ಆತನು ದೃಷ್ಟಿಸಲು ಜನಾಂಗಗಳು ಬೆದರುತ್ತವೆ; ಪುರಾತನ ಪರ್ವತಗಳು ಸೀಳಿಹೋಗುತ್ತವೆ; ಸನಾತನ ಗಿರಿಶಿಖರಗಳು ಕುಸಿದು ಬೀಳುತ್ತವೆ; ಆತನ ಆಗಮನವು ಅನಾದಿಯಿಂದ ಹೀಗೆಯೇ ಇರುವುದು.


ಬೆಂಕಿಗೆ ಎದುರು ಕರಗುವ ಮೇಣದಂತೆಯೂ ಮತ್ತು ಇಳಿಜಾರು ಪ್ರದೇಶದಲ್ಲಿ ರಭಸವಾಗಿ ಹರಿಯುವ ನೀರಿನಂತೆ ಕಣಿವೆಗಳು, ಪರ್ವತಗಳು ಆತನ ಮುಂದೆ ಸೀಳಿ ಕರಗಿ ಕೊಚ್ಚಿಹೊಗುತ್ತಿವೆ.


ಭೂಮಿ, ಆಕಾಶ, ಸಾಗರ, ಜಲಚರ ಇವುಗಳನ್ನು ನಿರ್ಮಿಸಿದವನೂ, ವಾಗ್ದಾನವನ್ನು ಯಾವಾಗಲೂ ನೆರವೇರಿಸುವವನೂ,


ನಿನ್ನ ರಾಜ್ಯವು ಶಾಶ್ವತವಾಗಿದೆ, ನಿನ್ನ ಆಳ್ವಿಕೆಯು ತಲತಲಾಂತರಕ್ಕೂ ಇರುವುದು.


ಭೂಲೋಕವೇ, ಕರ್ತನು ಪ್ರತ್ಯಕ್ಷನಾಗಿದ್ದಾನೆ, ಯಾಕೋಬನ ದೇವರು ನಿನ್ನ ಮುಂದೆ ಇದ್ದಾನೆ, ಕಂಪಿಸು.


ಆತನು ದೃಷ್ಟಿಸಿದ ಮಾತ್ರದಿಂದಲೇ ಭೂಮಿಯು ಕಂಪಿಸುತ್ತದೆ; ಮುಟ್ಟುತ್ತಲೇ ಪರ್ವತಗಳು ಹೊಗೆಹಾಯುತ್ತವೆ.


ಆತನ ಮಿಂಚುಗಳು ಲೋಕವನ್ನು ಬೆಳಗಿಸಿದವು; ಭೂಮಿಯು ಅದನ್ನು ಕಂಡು ನಡುಗಿತು.


ಅನಾದಿಯಿಂದ ನಿನ್ನ ಸಿಂಹಾಸನವು ಸ್ಥಿರವಾಗಿದೆ; ಯುಗಯುಗಾಂತರದಿಂದಲೂ ನೀನು ಇರುವಿ.


ನಿನ್ನ ಕೋಪದ ಬಲವನ್ನೂ, ಭಯಭಕ್ತಿಗೆ ಕಾರಣವಾಗಿರತಕ್ಕ ನಿನ್ನ ರೌದ್ರವನ್ನೂ ಗ್ರಹಿಸುವವರಾರು?


ಯೆಹೋವನ ಆಲಯದ ಅಂಗಳಗಳಲ್ಲಿ ಸೇರಬೇಕೆಂದು, ನನ್ನ ಆತ್ಮವು ಹಂಬಲಿಸುತ್ತಾ ಕುಂದಿಹೋಗಿತ್ತು. ಆದರೆ ಈಗ ಚೈತನ್ಯಸ್ವರೂಪನಾದ ದೇವರಿಗೆ ನನ್ನ ತನುಮನಗಳಿಂದ ಹರ್ಷಧ್ವನಿಮಾಡುತ್ತೇನೆ.


ಬಿರುಗಾಳಿಯಲ್ಲಿ ನಿನ್ನ ಗುಡುಗು ಕೇಳಿಸಿತು; ಮಿಂಚುಗಳು ಭೂಮಂಡಲವನ್ನು ಬೆಳಗಿಸಿದವು; ಭೂಮಿಯು ಅಲ್ಲಾಡಿ ಕಂಪಿಸಿತು.


ಭೂಲೋಕವನ್ನು ಕದಲಿಸಿ ಅದರ ಸ್ತಂಭಗಳನ್ನು ನಡುಗಿಸುತ್ತಾನೆ.


ಆಗ ಇಸ್ರಾಯೇಲರಿಗೆ ಬಹುಕಾಲದಿಂದ ಸತ್ಯವಾದ ದೇವರೂ, ಬೋಧಿಸುವ ಯಾಜಕರೂ ಹಾಗೂ ಧರ್ಮಶಾಸ್ತ್ರವೂ ಇರಲಿಲ್ಲ.


ಜನರೆಲ್ಲರೂ ಅದನ್ನು ಕಂಡು ಬೋರ್ಲಬಿದ್ದು, “ಯೆಹೋವನೇ ದೇವರು! ಯೆಹೋವನೇ ದೇವರು!” ಎಂದು ಕೂಗಿದರು.


ನಿನ್ನ ಸೇವಕನಿಂದ ಕೊಲ್ಲಲ್ಪಟ್ಟ ಸಿಂಹಕ್ಕೂ, ಕರಡಿಗೂ ಆದ ಗತಿಯೇ ಜೀವಸ್ವರೂಪನಾದ ದೇವರ ಸೈನ್ಯವನ್ನು ನಿಂದಿಸುವಂಥ ಈ ಸುನ್ನತಿಯಿಲ್ಲದ ಫಿಲಿಷ್ಟಿಯನಿಗೂ ಆಗಬೇಕು.


ದಾವೀದನು, “ಜೀವಸ್ವರೂಪನಾದ ದೇವರ ಸೈನ್ಯವನ್ನು ಹೀಯಾಳಿಸುವುದಕ್ಕೆ ಸುನ್ನತಿಯಿಲ್ಲದ ಈ ಫಿಲಿಷ್ಟಿಯನು ಎಷ್ಟರವನು? ಇವನನ್ನು ಕೊಂದು ಇಸ್ರಾಯೇಲ್ಯರಿಗೆ ಬಂದಿರುವ ನಿಂದೆಯನ್ನು ತೆಗೆದುಹಾಕುವವನಿಗೆ ಏನು ಸಿಕ್ಕುವುದು ಹೇಳಿರಿ” ಎಂದು ತನ್ನ ಬಳಿಯಲ್ಲಿ ನಿಂತಿದ್ದ ಮನುಷ್ಯರನ್ನು ಕೇಳಿದನು,


“ಯೆಹೋವನೇ, ನೀನು ಹೊರಟು ಎದೋಮ್ಯರ ಪ್ರಾಂತ್ಯವಾದ ಸೇಯೀರಿನ ಮಾರ್ಗವಾಗಿ ಪಯಣಮಾಡುತ್ತಾ ಬರುವಾಗ ಭೂಲೋಕವು ಕಂಪಿಸಿತು, ಆಕಾಶವು ನಡುಗಿತು; ಮೇಘಮಂಡಲವು ಮಳೆಗರೆಯಿತು.


ಬೆಂಕಿಯ ಜ್ವಾಲೆಯೊಳಗಿಂದ ಮಾತನಾಡುವ ಚೈತನ್ಯಸ್ವರೂಪನಾದ ದೇವರ ಸ್ವರವನ್ನು ನಾವು ಕೇಳಿದಂತೆ ಎಲ್ಲಾ ಮನುಷ್ಯರೊಳಗೆ ಯಾರು ಕೇಳಿ ಬದುಕಿದರು? ಹೀಗಿರುವುದರಿಂದ ನಾವು ಯಾಕೆ ಸಾಯಬೇಕು?


ಇಹಲೋಕ ವಿಷಯದಲ್ಲಿ ಐಶ್ವರ್ಯವುಳ್ಳವರು ಅಹಂಕಾರಿಗಳಾಗಿರದೆ, ಅಸ್ಥಿರವಾದ ಐಶ್ವರ್ಯದ ಮೇಲೆ ನಿರೀಕ್ಷೆಯನ್ನಿಡದೆ, ನಮ್ಮ ಅನುಭೋಗಕ್ಕೋಸ್ಕರ ನಮಗೆ ಎಲ್ಲವನ್ನೂ ಹೇರಳವಾಗಿ ದಯಪಾಲಿಸುವ ದೇವರ ಮೇಲೆ ನಿರೀಕ್ಷೆಯನ್ನಿಡಬೇಕು.


ಒಬ್ಬನೇ ಸತ್ಯ ದೇವರಾಗಿರುವ ನಿನ್ನನ್ನೂ ಮತ್ತು ನೀನು ಕಳುಹಿಸಿಕೊಟ್ಟ ಯೇಸು ಕ್ರಿಸ್ತನನ್ನೂ ತಿಳಿಯುವುದೇ ನಿತ್ಯಜೀವವು.


ಮಹಾಯಾಜಕನು ಯೇಸುವಿಗೆ, “ನಿನಗೆ ಜೀವಸ್ವರೂಪನಾದ ದೇವರ ಮೇಲೆ ಆಣೆಯಿಟ್ಟು ಕೇಳುತ್ತಿದ್ದಾನೆ; ನೀನು ದೇವಕುಮಾರನಾದ ಕ್ರಿಸ್ತನಾದರೆ ನಮಗೆ ಹೇಳಬೇಕು” ಅಂದನು.


ಆಗ ಸೀಮೋನ ಪೇತ್ರನು, “ನೀನು ಜೀವವುಳ್ಳ ದೇವರ ಕುಮಾರನಾದ ಕ್ರಿಸ್ತನು” ಎಂದು ಉತ್ತರ ಕೊಟ್ಟನು.


ಬೆಟ್ಟಗಳು ನಿನ್ನನ್ನು ನೋಡಿ ತಳಮಳಗೊಳ್ಳುತ್ತಿವೆ; ಪ್ರವಾಹದೋಪಾದಿಯಲ್ಲಿ ಆಕಾಶವು ಮಳೆಗರೆಯುತ್ತಿದೆ; ಸಾಗರವು ಆರ್ಭಟಿಸಿ ಅಲೆಗಳನ್ನು ಮೇಲಕ್ಕೆ ಎತ್ತುತ್ತದೆ.


ಯೆಹೋವನು ತನ್ನ ಸೈನ್ಯದ ಮುಂದೆ ಗುಡುಗಿನಂತೆ ಧ್ವನಿಗೈಯುತ್ತಾನೆ, ಆತನ ಸೈನ್ಯ ಬಹಳ ದೊಡ್ಡದಾಗಿದೆ; ಆತನ ಆಜ್ಞೆಯನ್ನು ಪಾಲಿಸುವವನು ಬಲಿಷ್ಠನಾಗಿದ್ದಾನೆ. ಯೆಹೋವನ ದಿನವು ಮಹತ್ತರವೂ ಮತ್ತು ಅತಿಭಯಂಕರವೂ ಆಗಿದೆ. ಅದನ್ನು ಸಹಿಸಿಕೊಳ್ಳುವವರು ಯಾರು?


ಸಕಲ, ಜನಾಂಗ, ಕುಲ, ಭಾಷೆಗಳವರು ಅವನ ಸೇವೆ ಮಾಡಲೆಂದು ಅವನಿಗೆ ದೊರೆತನವೂ, ಘನತೆಯೂ, ರಾಜ್ಯವೂ ಕೊಡಲಾಯಿತು. ಅವನ ಆಳ್ವಿಕೆಯು ಅಂತ್ಯವಿಲ್ಲದ್ದು. ಶಾಶ್ವತವಾದದ್ದು, ಅವನ ರಾಜ್ಯವು ಎಂದಿಗೂ ಅಳಿಯದು.


“ನಾನು ಆಳುವ ರಾಜ್ಯದವರೆಲ್ಲರೂ ದಾನಿಯೇಲನ ದೇವರಿಗೆ ಭಯಭಕ್ತಿಯಿಂದ ನಡೆದುಕೊಳ್ಳಬೇಕೆಂದು ಆಜ್ಞಾಪಿಸುತ್ತೇನೆ; ಆತನೇ ಜೀವಸ್ವರೂಪನಾದ ಸನಾತನ ದೇವರು, ಆತನ ರಾಜ್ಯವು ಎಂದಿಗೂ ಅಳಿಯದು, ಆತನ ಆಳ್ವಿಕೆಯು ಶಾಶ್ವತವಾಗಿರುವುದು;


ನೇಮಿಸಿದ ಆ ಕಾಲವು ಕಳೆದ ಮೇಲೆ ನೆಬೂಕದ್ನೆಚ್ಚರನಾದ ನಾನು ಪರಲೋಕದ ಕಡೆಗೆ ಕಣ್ಣೆತ್ತಲು ನನ್ನ ಬುದ್ಧಿಯು ಪುನಃ ನನ್ನ ಸ್ವಾಧೀನವಾಯಿತು. “ಆಗ ನಾನು ಪರಾತ್ಪರನಾದ ದೇವರನ್ನು ಕೊಂಡಾಡಿ, ಸದಾ ಜೀವಸ್ವರೂಪನಾದವನಿಗೆ ಸ್ತುತಿಸ್ತೋತ್ರಗಳನ್ನು ಸಲ್ಲಿಸಿದೆನು; ಆತನ ಆಳ್ವಿಕೆಯು ಶಾಶ್ವತ, ಆತನ ರಾಜ್ಯವು ತಲತಲಾಂತರಕ್ಕೂ ಸ್ಥಿರವಾಗಿರುವುದು.


ಆತನ ಮಹತ್ತುಗಳು ಎಷ್ಟೋ ಅತಿಶಯ! ಆತನ ಅದ್ಭುತಗಳು ಎಷ್ಟೋ ವಿಶೇಷ! ಆತನ ರಾಜ್ಯವು ಶಾಶ್ವತರಾಜ್ಯ, ಆತನ ಆಳ್ವಿಕೆಯು ತಲತಲಾಂತರಕ್ಕೂ ಸ್ಥಿರವಾಗಿ ನಿಲ್ಲುವುದು.”


ಎಂದು ಕೇಳಬೇಕೇ ಹೊರತು ಯೆಹೋವನ ಹೊರೆ ಎಂಬ ಮಾತನ್ನು ಇನ್ನು ಎತ್ತಲೇ ಕೂಡದು. ಪ್ರತಿಯೊಬ್ಬನ ನುಡಿಯೇ ಅವನವನಿಗೆ ಹೊರೆಯಾಗಿರುವುದು; ಜೀವಸ್ವರೂಪನಾದ ದೇವರ ನುಡಿಗಳನ್ನು, ಹೌದು, ನಮ್ಮ ದೇವರೂ ಸೇನಾಧೀಶ್ವರನೂ ಆದ ಯೆಹೋವನ ನುಡಿಗಳನ್ನು ತಲೆ ಕೆಳಗೆ ಮಾಡಿದ್ದೀರಷ್ಟೆ.


ಯೆಹೋವನೇ, ಕಿವಿಗೊಟ್ಟು ಕೇಳು. ಯೆಹೋವನೇ, ಕಣ್ಣಿಟ್ಟು ನೋಡು. ಸನ್ಹೇರೀಬನು ಜೀವಸ್ವರೂಪ ದೇವರಾದ ನಿನ್ನನ್ನು ನಿಂದಿಸುವುದಕ್ಕೋಸ್ಕರ ಹೇಳಿ ಕಳುಹಿಸಿದ ಮಾತುಗಳನ್ನೆಲ್ಲಾ ಮನಸ್ಸಿಗೆ ತಂದುಕೋ.


ನಿನ್ನ ದೇವರಾದ ಯೆಹೋವನು ಅಶ್ಶೂರದ ಅರಸನಿಂದ ಕಳುಹಿಸಲ್ಪಟ್ಟ ರಬ್ಷಾಕೆಯ ನಿಂದಾವಾಕ್ಯಗಳನ್ನು ಕೇಳಿರುವನು, ಅವನು ತನ್ನ ಯಜಮಾನನ ಹೆಸರಿನಲ್ಲಿ ಜೀವಸ್ವರೂಪನಾದ ದೇವರನ್ನು ದೂಷಿಸಿದ್ದರಿಂದ ಆತನು ಅವನಿಗೆ ಮುಯ್ಯಿತೀರಿಸಾನು. ಆದುದರಿಂದ ಉಳಿದಿರುವ ಸ್ವಲ್ಪ ಜನರಿಗೋಸ್ಕರ ಯೆಹೋವನನ್ನು ಪ್ರಾರ್ಥಿಸು’” ಎಂದು ಹೇಳಿದರು.


ಕರ್ತನು ಆಜ್ಞಾಪಿಸಿದನು; ಶುಭವಾರ್ತೆಯನ್ನು ಪ್ರಸಿದ್ಧಪಡಿಸುವ ಸ್ತ್ರೀಸಮೂಹವು ಎಷ್ಟೋ ದೊಡ್ಡದು.


ಅಬ್ರಹಾಮನು ಬೇರ್ಷೆಬದಲ್ಲಿ ಪಿಚುಲ ವೃಕ್ಷವನ್ನು ನೆಟ್ಟು ಅಲ್ಲಿ ನಿತ್ಯದೇವರಾದ ಯೆಹೋವನ ಹೆಸರನ್ನು ಹೇಳಿಕೊಂಡು ಆರಾಧಿಸಿದನು.


ಭೂಲೋಕದ ಜನರೆಲ್ಲರೂ ಯೆಹೋವನ ಹೊರತು ಬೇರೆ ದೇವರಿಲ್ಲವೆಂಬುದನ್ನು ತಿಳಿದುಕೊಳ್ಳುವಂತೆ ಆತನು ಅಗತ್ಯವಿರುವಾಗೆಲ್ಲಾ ತನ್ನ ಸೇವಕನ ಮತ್ತು ಪ್ರಜೆಗಳಾದ ಇಸ್ರಾಯೇಲರ ನ್ಯಾಯವನ್ನು ಸ್ಥಾಪಿಸುತ್ತಾ ಬರಲಿ.


ಯೆಹೋವನು ಜಲಪ್ರಳಯದಲ್ಲಿ ಆಸೀನನಾಗಿರುವನು; ಆತನು ಸದಾಕಾಲವೂ ಅರಸನಾಗಿ ಕುಳಿತಿರುವನು.


ದೇವರು ಪ್ರತ್ಯಕ್ಷನಾಗಿದ್ದಾನೆಂದು ಭೂಮಿಯು ಕಂಪಿಸಿತು; ಮೇಘಮಂಡಲವು ಮಳೆಸುರಿಸಿತು. ಇಸ್ರಾಯೇಲರ ದೇವರು ಪ್ರತ್ಯಕ್ಷನಾಗಿದ್ದಾನೆಂದು, ಆ ಸೀನಾಯ್ ಬೆಟ್ಟವು ಕದಲಿತು.


ಬೆಟ್ಟಗಳು ಉಂಟಾಗುವುದಕ್ಕಿಂತ ಮೊದಲೇ, ಭೂಮಿಯೂ ಅದರ ದೇಶಗಳೂ ನಿರ್ಮಾಣವಾಗುವುದಕ್ಕಿಂತ ಮೊದಲೇ, ಯುಗಯುಗಾಂತರಗಳಲ್ಲಿಯೂ ನೀನೇ ದೇವರು.


ಆಹಾ, ಆತನ ಗಣನೆಯಲ್ಲಿ ಜನಾಂಗಗಳು ಕಪಿಲೆಯಿಂದ ಉದುರುವ ತುಂತುರಿನಂತೆಯೂ, ತಕ್ಕಡಿಯಲ್ಲಿನ ಧೂಳಿನ ಹಾಗೂ ಇರುತ್ತವೆ. ಇಗೋ, ದ್ವೀಪಗಳನ್ನು ಅಣುರೇಣುವಿನಂತೆ ಎತ್ತುತ್ತಾನೆ.


ನಿಮ್ಮ ಪೂರ್ವದ ಕಷ್ಟಗಳು ಇನ್ನು ನನ್ನ ಕಣ್ಣಿಗೆ ಬೀಳದೆ ಮರೆತು ಹೋಗಿರುವುದರಿಂದ ಲೋಕದಲ್ಲಿ ತನ್ನನ್ನು ಆಶೀರ್ವದಿಸಿಕೊಳ್ಳುವ ಪ್ರತಿಯೊಬ್ಬನೂ ಸತ್ಯಸಂಧನಾದ ದೇವರ ಹೆಸರಿನಿಂದ ಆಶೀರ್ವದಿಸಿಕೊಳ್ಳುವನು; ಲೋಕದಲ್ಲಿ ಆಣೆಯಿಡುವ ಪ್ರತಿಯೊಬ್ಬನೂ ಸತ್ಯವಂತನಾದ ದೇವರ ಮೇಲೆ ಆಣೆಯಿಡುವನು.


‘ಯೆಹೋವನ ಜೀವದಾಣೆ’ ಎಂದು ಸತ್ಯ, ನ್ಯಾಯ ಮತ್ತು ಧರ್ಮಾನುಸಾರವಾಗಿ ನೀನು ಪ್ರಮಾಣ ಮಾಡಿದರೆ, ಜನಾಂಗಗಳು ಆತನಿಂದ ತಮ್ಮನ್ನು ಆಶೀರ್ವದಿಸಿಕೊಂಡು ಆತನಲ್ಲಿ ಹೆಚ್ಚಳಪಡುವರು” ಎಂದು ಹೇಳುತ್ತಾನೆ.


ಪರ್ವತಗಳನ್ನು ನೋಡಿದೆನು, ಆಹಾ, ನಡುಗುತ್ತಿದ್ದವು, ಎಲ್ಲಾ ಗುಡ್ಡಗಳೂ ಅಲ್ಲಕಲ್ಲೋಲವಾಗಿದ್ದವು.


ಬಾಬೆಲು ಶತ್ರುವಶವಾಯಿತೆಂಬ ಕೋಲಾಹಲಕ್ಕೆ ಭೂಮಿಯು ಕಂಪಿಸುತ್ತದೆ, ಅದರ ಮೊರೆಯು ಜನಾಂಗಗಳಲ್ಲಿ ಕೇಳಿಸುತ್ತದೆ.


ದೇಶವೆಲ್ಲಾ ನೊಂದು ನಡುಗುತ್ತದೆ; ಏಕೆಂದರೆ ಬಾಬೆಲ್ ದೇಶವು ಹಾಳುಬಿದ್ದು ನಿರ್ಜನವಾಗಲಿ ಎಂದು ಯೆಹೋವನು ಅದರ ವಿಷಯವಾಗಿ ಮಾಡಿಕೊಂಡಿರುವ ಸಂಕಲ್ಪಗಳು ಸ್ಥಿರವಾಗಿವೆ.


“ಜೀವಸ್ವರೂಪನಾದ ದೇವರು ನಿಮ್ಮ ಮಧ್ಯದಲ್ಲಿ ಇದ್ದಾನೆಂದು ಆತನು ಕಾನಾನ್ಯರನ್ನು, ಹಿತ್ತಿಯರನ್ನು, ಹಿವ್ವಿಯರನ್ನು, ಪೆರಿಜೀಯರನ್ನು, ಗಿರ್ಗಾಷಿಯರನ್ನು, ಅಮೋರಿಯರನ್ನು, ಯೆಬೂಸಿಯರನ್ನು ನಿಮ್ಮ ಮುಂದೆ ಓಡಿಸಿಬಿಡುವನೆಂದು ನಿಮಗೆ ಗೊತ್ತಾಗುವುದು.


ಯೆಹೋವನೇ, ಎಲ್ಲಾ ಮಹಿಮೆ, ವೈಭವ, ಪರಾಕ್ರಮ, ಪ್ರಭಾವ, ಪ್ರತಾಪ, ಪ್ರತಿಭೆ ಎಲ್ಲವೂ ನಿನ್ನವೆ. ಭೂಮ್ಯಾಕಾಶಗಳಲ್ಲಿ ಇರುವದೆಲ್ಲಾ ನಿನ್ನದೇ. ಯೆಹೋವನೇ ರಾಜ್ಯವು ನಿನ್ನದು. ನೀನು ಮಹೋನ್ನತನಾಗಿ ಸರ್ವವನ್ನು ಆಳುವವನಾಗಿರುತ್ತೀ.


ಆತನೇ ನೀತಿಗನುಸಾರವಾಗಿ ಲೋಕಕ್ಕೆ ನ್ಯಾಯ ತೀರಿಸುವವನು; ಆತನು ಜನಾಂಗಗಳಿಗೆ ಸತ್ಯಕ್ಕನುಸಾರವಾಗಿ ತೀರ್ಪುಕೊಡುವನು.


ದೇವರೇ, ನೀನು ಮೊದಲಿನಿಂದಲೂ ನನ್ನ ಅರಸನೂ, ಲೋಕಮಧ್ಯದಲ್ಲಿ ರಕ್ಷಣೆಗಳನ್ನು ನಡೆಸಿದಾತನೂ ಆಗಿದ್ದೀಯಲ್ಲವೇ?


ಪರಲೋಕದಲ್ಲಿರುವ ನೀನು ನಿನ್ನ ನ್ಯಾಯವಿಧಿಯನ್ನು ಆಜ್ಞಾಪಿಸುವಾಗ,


ಯೆಹೋವನೇ ದೇವರೆಂದು ತಿಳಿದುಕೊಳ್ಳಿರಿ. ನಮ್ಮನ್ನು ಉಂಟುಮಾಡಿದವನು ಆತನೇ; ನಾವು ಆತನವರು, ಆತನ ಪ್ರಜೆಯೂ, ಆತನು ಪಾಲಿಸುವ ಹಿಂಡೂ ಆಗಿದ್ದೇವೆ.


ನೀನು ಗ್ರಹಿಸಲಿಲ್ಲವೋ? ಕೇಳಲಿಲ್ಲವೋ? ಯೆಹೋವನು ನಿರಂತರ ದೇವರೂ, ಭೂಮಿಯ ಕಟ್ಟಕಡೆಗಳನ್ನು ನಿರ್ಮಿಸಿದವನೂ ಆಗಿದ್ದಾನೆ. ಆತನು ದಣಿದು ಬಳಲುವುದಿಲ್ಲ, ಆತನ ವಿವೇಕವು ಪರಿಶೋಧನೆಗೆ ಅಗಮ್ಯ.


ಆತನು ಉದ್ಧರಿಸುವವನೂ, ರಕ್ಷಿಸುವವನೂ, ಭೂಮ್ಯಾಕಾಶಗಳಲ್ಲಿ ಅದ್ಭುತಮಹತ್ವಗಳನ್ನು ನಡೆಸುವವನೂ ಆಗಿದ್ದಾನೆ; ಆತನೇ ದಾನಿಯೇಲನನ್ನು ಸಿಂಹಗಳ ಬಾಯಿಂದ ತಪ್ಪಿಸಿದನು.”


ಆತನ ಮುಂದೆ ಬೆಟ್ಟಗಳು ಅದರುತ್ತವೆ, ಗುಡ್ಡಗಳು ಕರಗುತ್ತವೆ; ಆತನ ದರ್ಶನಕ್ಕೆ ಭೂಮಿಯು ಕಂಪಿಸುತ್ತದೆ, ಹೌದು, ಲೋಕವೂ ಲೋಕನಿವಾಸಿಗಳೆಲ್ಲರೂ ತಲ್ಲಣಿಸುತ್ತವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು