Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 11:11 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಆದಕಾರಣ ಯೆಹೋವನೆಂಬ ನಾನು ಹೀಗೆನ್ನುತ್ತೇನೆ, ‘ಇಗೋ, ಅವರು ತಪ್ಪಿಸಿಕೊಳ್ಳಲಾರದ ಕೇಡನ್ನು ಅವರ ಮೇಲೆ ಬರಮಾಡುವೆನು; ನನಗೆ ಮೊರೆಯಿಟ್ಟರೂ ಕೇಳೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಆದಕಾರಣ ಸರ್ವೇಶ್ವರನಾದ ನಾನು ಹೇಳುವುದೇನೆಂದರೆ : ಇಗೋ, ತಪ್ಪಿಸಿಕೊಳ್ಳಲಾಗದ ಕೇಡನ್ನು ಅವರ ಮೇಲೆ ಬರಮಾಡುವೆನು. ಇವರು ನನಗೆ ಮೊರೆಯಿಟ್ಟರೂ ನಾನೂ ಕಿವಿಗೊಡೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಆದಕಾರಣ ಯೆಹೋವನೆಂಬ ನಾನು ಹೀಗನ್ನುತ್ತೇನೆ - ಇಗೋ, ಅವರು ತಪ್ಪಿಸಿಕೊಳ್ಳಲಾರದ ಕೇಡನ್ನು ಅವರ ಮೇಲೆ ಬರಮಾಡುವೆನು; ನನಗೆ ಮೊರೆಯಿಟ್ಟರೂ ಕೇಳೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಯೆಹೋವನು ಹೇಳುತ್ತಾನೆ, “ನಾನು ಶೀಘ್ರವಾಗಿ ಯೆಹೂದದ ಜನರಿಗೆ ಏನಾದರೊಂದು ಭಯಂಕರ ಅನಾಹುತ ಸಂಭವಿಸುವಂತೆ ಮಾಡುತ್ತೇನೆ. ಅವರು ಅದರಿಂದ ತಪ್ಪಿಸಿಕೊಳ್ಳಲು ಸಾಧ್ಯವಾಗುವದಿಲ್ಲ. ಅವರು ಪಶ್ಚಾತ್ತಾಪಪಡುವರು. ಅವರು ಸಹಾಯಕ್ಕಾಗಿ ನನಗೆ ಮೊರೆಯಿಡುವರು. ಆದರೆ ನಾನು ಅವರ ಮೊರೆಯನ್ನು ಕೇಳುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಆದ್ದರಿಂದ ಯೆಹೋವ ದೇವರು ಹೀಗೆ ಹೇಳುತ್ತಾರೆ: ‘ಇಗೋ, ಅವರು ತಪ್ಪಿಸಿಕೊಳ್ಳಲಾಗದ ಕೇಡನ್ನು ಅವರ ಮೇಲೆ ತರುವೆನು. ಅವರು ನನಗೆ ಕೂಗಿದರೂ ನಾನು ಅವರನ್ನು ಕೇಳುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 11:11
35 ತಿಳಿವುಗಳ ಹೋಲಿಕೆ  

ಆದಕಾರಣ ನಾನು ಕೋಪೋದ್ರೇಕದಿಂದ ವರ್ತಿಸುವೆನು, ಕಟಾಕ್ಷಿಸುವುದಿಲ್ಲ, ಉಳಿಸುವುದಿಲ್ಲ; ಅವರು ಕೂಗಿಕೊಳ್ಳುವ ಮಹಾ ಶಬ್ದವು ನನ್ನ ಕಿವಿಗೆ ಬಿದ್ದರೂ ಆಲಿಸುವುದಿಲ್ಲ.”


ನೀವು ನನ್ನ ಕಡೆಗೆ ಪ್ರಾರ್ಥಿಸಲು ಕೈಯೆತ್ತುವಾಗ, ನಿಮ್ಮನ್ನು ನೋಡದಂತೆ ನನ್ನ ಕಣ್ಣುಗಳನ್ನು ಮರೆಮಾಡಿಕೊಳ್ಳುವೆನು. ಹೌದು, ನೀವು ಬಹಳ ಪ್ರಾರ್ಥನೆಗಳನ್ನು ಮಾಡಿದರೂ ನಾನು ಆಲಿಸುವುದಿಲ್ಲ. ನಿಮ್ಮ ಕೈಗಳಲ್ಲಿ ರಕ್ತವು ತುಂಬಿದೆ.


ಆಗ ಅವರು ನನಗೆ ಮೊರೆಯಿಟ್ಟರೂ ನಾನು ಉತ್ತರಕೊಡೆನು, ನನ್ನನ್ನು ಆತುರದಿಂದ ಹುಡುಕಿದರೂ ನಾನು ಕಾಣಿಸೆನು.


“ಆಗ ಸೇನಾಧೀಶ್ವರ ಯೆಹೋವನು ಇಂತೆಂದನು, ‘ನಾನು ಕೂಗಿದರೂ ಅವರು ಹೇಗೆ ಕೇಳಲಿಲ್ಲವೋ ಹಾಗೆ ಅವರು ಕೂಗಿದರೂ ನಾನು ಕೇಳುವುದಿಲ್ಲ.


ಇಷ್ಟೆಲ್ಲಾ ನಡೆಸಿ ಇವರು ಯೆಹೋವನಿಗೆ ಮೊರೆಯಿಡಲು ಆತನು ಇವರಿಗೆ ಉತ್ತರಕೊಡನು. ಇವರ ನಡತೆಯ ದುಷ್ಕೃತ್ಯಗಳಿಗೆ ತಕ್ಕ ಹಾಗೆ ಆ ಕಾಲದಲ್ಲಿ ಇವರಿಗೆ ವಿಮುಖನಾಗುವೆನು.”


ಇವರು ಉಪವಾಸಮಾಡುವಾಗ ಇವರ ಮೊರೆಯನ್ನು ಕೇಳೆನು. ಹೋಮನೈವೇದ್ಯಗಳನ್ನು ಅರ್ಪಿಸಲು ಸ್ವೀಕರಿಸೆನು. ಖಡ್ಗ, ಕ್ಷಾಮ ಮತ್ತು ವ್ಯಾಧಿಗಳಿಂದ ಇವರನ್ನು ನಿರ್ಮೂಲಮಾಡುವೆನು” ಎಂದು ಹೇಳಿದನು.


ಯೆಹೋವನು, ‘ಈ ದೇಶದ ಮೇಲೆಯೂ ಮತ್ತು ಜನರ ಮೇಲೆಯೂ ಯೆಹೂದದ ಅರಸನು ಓದಿಸಿದ ಗ್ರಂಥದಲ್ಲಿ ಬರೆದಿರುವ ಎಲ್ಲಾ ಆಪತ್ತುಗಳನ್ನು ಬರಮಾಡುವನು.


ಇಸ್ರಾಯೇಲ್ ವಂಶವೂ ಮತ್ತು ಯೆಹೂದ ವಂಶವೂ ಬಾಳನಿಗೆ ಹೋಮವನ್ನರ್ಪಿಸಿ, ನನ್ನನ್ನು ಕೆಣಕಿ ತಮಗೆ ಕೆಡುಕನ್ನು ಮಾಡಿಕೊಂಡಿದ್ದರಿಂದ ನಿನ್ನನ್ನು ನೆಟ್ಟ ಸೇನಾಧೀಶ್ವರನಾದ ಯೆಹೋವನು, “ನಿನಗೆ ಕೆಡುಕಾಗಲಿ” ಎಂದು ಶಪಿಸಿದ್ದಾನೆ.


ಭೂಲೋಕವೇ, ಕೇಳು! ಆಹಾ, ಈ ಜನರು ನನ್ನ ಮಾತುಗಳನ್ನು ಕೇಳದೆ, ನನ್ನ ಧರ್ಮಬೋಧನೆಯನ್ನು ಅಸಡ್ಡೆಮಾಡಿದ್ದರಿಂದ ಇವರ ಆಲೋಚನೆಗಳ ಫಲವಾದ ಕೇಡನ್ನು ಇವರ ಮೇಲೆ ಬರಮಾಡುವೆನು.


ಭೂನಿವಾಸಿಗಳೇ, ಭಯವೂ, ಗುಂಡಿಯೂ, ಬಲೆಯೂ ನಿಮಗೆ ಕಾದಿವೆ.


ಅವರು ಕೂಗಿಕೊಂಡರೂ ರಕ್ಷಿಸುವವನಿಲ್ಲ; ಯೆಹೋವನಿಗೆ ಮೊರೆಯಿಟ್ಟರೂ ಆತನು ಉತ್ತರವನ್ನು ಕೊಡಲೇ ಇಲ್ಲ.


ಈತನು ದೇವರ ಮಹಿಮೆಯ ಪ್ರಕಾಶವೂ, ಆತನ ವ್ಯಕ್ತಿತ್ವದ ಪ್ರತಿರೂಪವೂ, ತನ್ನ ಶಕ್ತಿಯುಳ್ಳ ವಾಕ್ಯದಿಂದ ಸಮಸ್ತಕ್ಕೆ ಆಧಾರವೂ ಆಗಿದ್ದು ತಾನೇ ನಮ್ಮ ಪಾಪಗಳನ್ನು ಶುದ್ಧಿಮಾಡಿ, ಉನ್ನತದಲ್ಲಿರುವ ಮಹೋನ್ನತನಾದ ದೇವರ ಬಲಗಡೆಯಲ್ಲಿ ಕುಳಿತುಕೊಂಡನು.


“ಸಮಾಧಾನವಾಗಿಯೂ ನಿರ್ಭಯವಾಗಿಯೂ ಇರುತ್ತೇವೆಂದು” ಜನರು ಹೇಳುತ್ತಿರುವಾಗಲೇ ನಾಶನವು ಅವರ ಮೇಲೆ ಗರ್ಭಿಣಿಗೆ ಪ್ರಸವವೇದನೆ ಬರುವ ಪ್ರಕಾರ ಬರುವುದು, ಅವರು ಹೇಗೂ ತಪ್ಪಿಸಿಕೊಳ್ಳಲಾರರು.


ಸಿಂಹದ ಕಡೆಯಿಂದ ಓಡಿದವನಿಗೆ, ಕರಡಿಯು ಎದುರುಬಿದ್ದಂತಾಗುವುದು, ಅವನು ಮನೆಗೆ ಓಡಿಬಂದು, ಕೈಯನ್ನು ಗೋಡೆಯ ಮೇಲೆ ಇಡಲು, ಹಾವು ಕಚ್ಚಿದ ಹಾಗಾಗುವುದು.


ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಕೇಡು, ಎಂದೂ ಕಾಣದ ಕೇಡು, ಇಗೋ ಬಂದಿತು!


ಇವನೂ, ಇವನ ಸಂತತಿಯವರೂ ಮತ್ತು ಸೇವಕರೂ ನಡೆಸಿದ ಅಧರ್ಮಕ್ಕಾಗಿ ಇವರನ್ನು ದಂಡಿಸುವೆನು. ನಾನು ಇವರನ್ನೂ, ಯೆರೂಸಲೇಮಿನವರನ್ನೂ ಮತ್ತು ಯೆಹೂದ್ಯರನ್ನೂ ನಿಮಗೆ ಬಹು ಕೇಡಾಗುವುದೆಂದು ಎಚ್ಚರಿಸಿದರೂ ಇವರುಗಳು ಕೇಳಲಿಲ್ಲವಾದುದರಿಂದ ಆ ಕೇಡನ್ನೆಲ್ಲಾ ಇವರೆಲ್ಲರ ಮೇಲೆ ಬರಮಾಡುವೆನು’” ಎಂದು ಹೇಳಿದನು.


ಇಗೋ, ನಾನು ಯೆಹೂದ್ಯರಿಗೂ, ಯೆರೂಸಲೇಮಿನವರೆಲ್ಲರಿಗೂ ಕೊಟ್ಟ ಶಾಪದ ಕೇಡನ್ನೆಲ್ಲಾ ಅವರ ಮೇಲೆ ಬರಮಾಡುವೆನು; ನಾನು ಹೇಳಿದರೂ ಅವರು ಕೇಳಲಿಲ್ಲ, ಕೂಗಿದರೂ ಉತ್ತರಕೊಡಲಿಲ್ಲ ಎಂದು ಸೇನಾಧೀಶ್ವರ ಸ್ವಾಮಿಯೂ, ಇಸ್ರಾಯೇಲರ ದೇವರೂ ಆದ ಯೆಹೋವನು ಅನ್ನುತ್ತಾನೆ” ಎಂಬುದೇ.


ಆದಕಾರಣ ಅವರ ಮಾರ್ಗವು ಕತ್ತಲಲ್ಲಿ ಜಾರಿಬೀಳುವ ಸ್ಥಳಗಳಿಗೆ ಸಮಾನವಾಗುವುದು. ಅವರು ಅಟ್ಟಲ್ಪಟ್ಟು ಅಂಧಕಾರದಲ್ಲಿ ಬಿದ್ದುಹೋಗುವರು; ನಾನು ಅವರ ಮೇಲೆ ಕೇಡನ್ನು, ದಂಡನೆಯ ವರ್ಷದ ಕೇಡನ್ನು ಬರಮಾಡುವೆನು ಎಂದು ಯೆಹೋವನು ನುಡಿಯುತ್ತಾನೆ.


“ಇಸ್ರಾಯೇಲರ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ, ಆಹಾ, ಈ ಪಟ್ಟಣದವರೂ ಮತ್ತು ಇದರ ಸುತ್ತಣ ಎಲ್ಲಾ ಊರುಗಳವರೂ ನನ್ನ ಮಾತುಗಳನ್ನೂ ಕೇಳದೆ, ತಮ್ಮ ಮನಸ್ಸನ್ನು ಕಠಿಣಮಾಡಿಕೊಂಡ ಕಾರಣ, ನಾನು ಈ ಪಟ್ಟಣಕ್ಕೆ ಕೊಟ್ಟ ಶಾಪದ ಕೇಡನ್ನೆಲ್ಲಾ ಇವರಿಗೆ ಬರಮಾಡುವೆನು” ಎಂದು ಸಮಸ್ತ ಜನರಿಗೆ ಸಾರಿದನು.


ನೀನು ಅವರಿಗೆ, ‘ಯೆಹೂದದ ಅರಸರೇ, ಯೆರೂಸಲೇಮಿನ ನಿವಾಸಿಗಳೇ, ಯೆಹೋವನ ಮಾತನ್ನು ಕೇಳಿರಿ! ಇಸ್ರಾಯೇಲರ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ, ಆಹಾ, ನಾನು ಈ ಸ್ಥಳದ ಮೇಲೆ ಕೇಡನ್ನು ಬರಮಾಡುವೆನು; ಅದರ ಸುದ್ದಿಯನ್ನು ಕೇಳುವವರ ಎರಡು ಕಿವಿಗಳೂ ಗಿರುಗುಟ್ಟುವವು.


ಅವರು, ‘ನಾವು ಎಲ್ಲಿಗೆ ಹೋಗೋಣ?’ ಎಂದು ನಿನ್ನನ್ನು ಕೇಳಲು ನೀನು ಅವರಿಗೆ, ‘ಮರಣ ವ್ಯಾಧಿಗೆ ನೇಮಿತರಾದವರು ಮರಣವ್ಯಾಧಿಗೆ, ಖಡ್ಗಕ್ಕೆ ನೇಮಿತರಾದವರು ಖಡ್ಗಕ್ಕೆ ಬಲಿಯಾಗಲಿ. ಕ್ಷಾಮಕ್ಕೆ ನೇಮಿತರಾದವರು ಕ್ಷಾಮಕ್ಕೆ, ಸೆರೆಗೆ ನೇಮಿತರಾದವರು ಸೆರೆಗೆ ಗುರಿಯಾಗಿ ಹೋಗಲಿ; ಇದೇ ಯೆಹೋವನ ನುಡಿ’” ಎಂದು ಹೇಳು.


ಆದಕಾರಣ ಈ ಜನರಿಗೋಸ್ಕರ ಬೇಡಿಕೊಳ್ಳಬೇಡ, ಇವರಿಗಾಗಿ ಮೊರೆಯಿಡಬೇಡ, ಪ್ರಾರ್ಥಿಸಲೂ ಬೇಡ. ಅವರು ತಮ್ಮ ಕೇಡಿನ ನಿಮಿತ್ತ ನನಗೆ ಮೊರೆಯಿಡುವಾಗ ನಾನು ಕೇಳುವುದಿಲ್ಲ” ಎಂದು ಹೇಳಿದನು.


ಬಹಳವಾಗಿ ಗದರಿಸಿದರೂ ತಗ್ಗದವನು, ಏಳದ ಹಾಗೆ ಫಕ್ಕನೆ ಮುರಿದು ಬೀಳುವನು.


ನಾನು ಕೆಟ್ಟತನದ ಮೇಲೆ ಮನಸ್ಸಿಟ್ಟಿದ್ದರೆ, ಸ್ವಾಮಿಯು ನನ್ನ ವಿಜ್ಞಾಪನೆಯನ್ನು ಕೇಳುತ್ತಿದ್ದಿಲ್ಲ.


ಯೆಹೋವನು ಹೇಳಿದ್ದೇನೆಂದರೆ, “ಈ ದೇಶದ ಮೇಲೆಯೂ, ಜನರ ಮೇಲೆಯೂ ಯೆಹೂದದ ಅರಸನ ಮುಂದೆ ಪಾರಾಯಣವಾದ ಆ ಗ್ರಂಥದಲ್ಲಿ ಬರೆದಿರುವ ಎಲ್ಲಾ ಶಾಪಗಳನ್ನು ಬರಮಾಡುವೆನು;


ದೇವರು ಮೂರ್ಖನ ಮಾತಿಗೆ ಕಿವಿಗೊಡುವುದೇ ಇಲ್ಲ, ಸರ್ವಶಕ್ತನಾದ ದೇವರು ಅದನ್ನು ಎಂದಿಗೂ ಲಕ್ಷಿಸುವುದಿಲ್ಲ.


ಯೆಹೂದವು ದುಃಖಿಸುತ್ತದೆ, ಅಲ್ಲಿಯ ಜನರು ಕಂಗೆಟ್ಟು ಕರ್ರಗಾಗಿ ನೆಲದ ಮೇಲೆ ಬಿದ್ದಿದ್ದಾರೆ, ಯೆರೂಸಲೇಮಿನವರ ಗೋಳಾಟವು ಕೇಳಿಸುತ್ತದೆ.


ಈಗ ನೀನು ಯೆಹೂದ್ಯರಿಗೂ ಯೆರೂಸಲೇಮಿನವರಿಗೂ ಯೆಹೋವನು ಹೀಗೆನ್ನುತ್ತಾನೆ, ‘ಆಹಾ, ನಾನು ನಿಮ್ಮ ವಿರುದ್ಧವಾಗಿ ಯೋಚಿಸಿ, ಕೇಡನ್ನು ಕಲ್ಪಿಸುತ್ತಿದ್ದೇನೆ; ನಿಮ್ಮಲ್ಲಿ ಪ್ರತಿಯೊಬ್ಬನೂ ತನ್ನ ತನ್ನ ದುರ್ಮಾರ್ಗದಿಂದ ಹಿಂದಿರುಗಲಿ, ನಡತೆಯನ್ನೂ ಕೃತ್ಯಗಳನ್ನೂ ಸರಿಪಡಿಸಿಕೊಳ್ಳಲಿ’ ಎಂಬ ಮಾತನ್ನು ಹೇಳು.


ಕುರುಬರು ಓಡಿಹೋಗುವುದಕ್ಕೆ ಮಾರ್ಗವು ಸಿಕ್ಕದು, ಮಂದೆಯ ಹಿರಿಯ ನಾಯಕರು ತಪ್ಪಿಸಿಕೊಳ್ಳುವುದಕ್ಕೆ ಆಸ್ಪದ ದೊರೆಯದು.


ಮಹೋತ್ಸವಕ್ಕೆ ಕರೆಯಿಸಿದಂತೆ ನನ್ನನ್ನು ಹೆದರಿಸುವ ದಿಗಿಲುಗಳನ್ನು ನನ್ನ ಸುತ್ತುಮುತ್ತಲು ಕರೆಯಿಸಿದ್ದೀ; ಯೆಹೋವನು ಕೋಪತೀರಿಸಿಕೊಳ್ಳುವ ದಿನದಲ್ಲಿ ಯಾರೂ ತಪ್ಪಿಸಿಕೊಳ್ಳಲಿಲ್ಲ, ಯಾರೂ ಉಳಿಯಲಿಲ್ಲ; ನಾನು ನಲಿದಾಡಿಸಿ ಸಾಕಿದವರನ್ನು ನನ್ನ ಶತ್ರುವು ಸಂಹರಿಸಿದ್ದಾನೆ.


“ನರಪುತ್ರನೇ, ಇವರು ತಮ್ಮ ವಿಗ್ರಹಗಳನ್ನು, ಮನಸ್ಸಿನಲ್ಲಿ ನೆಲೆಗೊಳಿಸಿ, ಪಾಪಕಾರಿಯಾದ ಈ ವಿಘ್ನವನ್ನು ತಮ್ಮ ಮುಂದೆ ಇಟ್ಟುಕೊಂಡಿದ್ದಾರೆ; ಇಂಥವರಿಗೆ ನಾನು ದೈವೋತ್ತರವನ್ನು ದಯಪಾಲಿಸುವುದು ಸರಿಯೆ? ಎಂದಿಗೂ ಇಲ್ಲ.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು