Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 11:16 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಯೆಹೋವನು ನಿನಗೆ ಸುಂದರವಾದ ಫಲದಿಂದ ಕೂಡಿದ ಹಸಿರಾದ ಒಲೀವ್ ಮರವೆಂದು ಹೆಸರಿಟ್ಟಿದ್ದನು. ಆದರೆ ಅವನು ಆ ಮರಕ್ಕೆ ಬೆಂಕಿ ಹಚ್ಚಿ ಬಲು ಧಗಧಗಿಸುವಂತೆ ಮಾಡಿದ್ದಾನೆ; ಅದರ ರೆಂಬೆಗಳು ಮುರಿದುಹೋಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಸರ್ವೇಶ್ವರನಾದ ನಾನು ಅದಕ್ಕೆ ‘ಸುಂದರ ಫಲದಿಂದ ಕೂಡಿದ ಚೆಲುವಾದ ಹಚ್ಚನೆಯ ಓಲಿವ್ ಮರ’ ಎಂದು ಹೆಸರಿಟ್ಟೆ. ಆದರೆ ಅದೇ ಮರಕ್ಕೆ ಬೆಂಕಿಯಿಟ್ಟು ಧಗಧಗನೆ ಉರಿಯುವಂತೆ ಮಾಡುವೆನು. ಅದರ ರೆಂಬೆಗಳು ಸುಟ್ಟುಹೋಗುವುವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಯೆಹೋವನು ನಿನಗೆ ಸುಂದರಫಲದಿಂದ ಅಂದವಾದ ಹಚ್ಚನೆಯ ಒಲೀವಮರವೆಂದು ಹೆಸರಿಟ್ಟಿದ್ದನು; ಆ ಮರಕ್ಕೆ ಬೆಂಕಿಯಿಕ್ಕಿ ಬಲು ಧಗಧಗಿಸುವಂತೆ ಮಾಡಿದ್ದಾನೆ; ಅದರ ರೆಂಬೆಗಳು ಮುರಿದುಹೋಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 “ಯೆಹೋವನು ನಿನಗೆ ‘ನೋಡಲು ಸುಂದರವಾದ ಹಸಿರು ಆಲೀವ್ ಮರ ಎಂದು’ ಹೆಸರು ಕೊಟ್ಟನು. ಆದರೆ ಯೆಹೋವನು ಬಿರುಗಾಳಿ ಬೀಸಿ ಆ ಮರಕ್ಕೆ ಬೆಂಕಿ ಇಡುವನು. ಆಗ ಅದರ ಕೊಂಬೆಗಳು ಸುಟ್ಟುಹೋಗುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಸೌಂದರ್ಯವಾದ ಒಳ್ಳೆಯ ಹಣ್ಣುಳ್ಳ ಹಸುರಾದ ಓಲಿವ್ ಗಿಡವೆಂದು ಯೆಹೋವ ದೇವರು ನಿನಗೆ ಹೆಸರಿಟ್ಟರು. ದೊಡ್ಡ ಗದ್ದಲದಿಂದ ಅದರ ಮೇಲೆ ಬೆಂಕಿ ಹತ್ತಿಸುವನು. ಅದರ ಕೊಂಬೆಗಳು ಮುರಿದು ಹೋಗುವುವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 11:16
18 ತಿಳಿವುಗಳ ಹೋಲಿಕೆ  

ಅಲ್ಲಿನ ರೆಂಬೆಗಳು ಒಣಗಿಹೋಗಿ ಮುರಿದುಹೋಗುವವು, ಹೆಂಗಸರು ಬಂದು ಅವುಗಳಿಗೆ ಬೆಂಕಿ ಹಚ್ಚಿ ಉರಿಸುವರು. ಏಕೆಂದರೆ ಆ ಪ್ರಜೆಯು ಬುದ್ಧಿಹೀನವಾದವರೇ. ಆದಕಾರಣ ಸೃಷ್ಟಿಸಿದಾತನು ಅವರಿಗೆ ಕರುಣೆ ತೋರಿಸುವುದಿಲ್ಲ, ನಿರ್ಮಿಸಿದಾತನು ಅವರಿಗೆ ದಯೆತೋರಿಸುವುದಿಲ್ಲ.


ಆದರೆ ನಾನು ದೇವಾಲಯದ ಸೊಗಸಾದ ಎಣ್ಣೇ ಮರದಂತಿರುವೆನು; ದೇವರ ಕೃಪೆಯನ್ನು ಯುಗಯುಗಾಂತರಗಳಲ್ಲಿಯೂ ನಂಬಿಕೊಂಡಿರುವೆನು.


ಅದು ಕಡಿದು ಬೆಂಕಿಯಿಂದ ಸುಡಲ್ಪಟ್ಟಿದೆ. ಅವರು ನಿನ್ನ ಗದರಿಕೆಯಿಂದ ನಾಶವಾಗುತ್ತಾರೆ.


ಯಾವನು ನನ್ನಲ್ಲಿ ನೆಲೆಗೊಂಡಿರುವುದಿಲ್ಲವೋ ಅವನು ಹೊರಕ್ಕೆ ಬಿಸಾಡಲ್ಪಟ್ಟ ಕೊಂಬೆಯಂತೆ ಒಣಗಿಹೋಗುವನು. ಅಂಥ ಕೊಂಬೆಗಳನ್ನು ಕೂಡಿಸಿ ಬೆಂಕಿಯಲ್ಲಿ ಹಾಕುವರು. ಅವು ಸುಟ್ಟು ಹೋಗುತ್ತವೆ.


ಈಗಾಗಲೇ ಮರಗಳ ಬೇರಿಗೆ ಕೊಡಲಿ ಹಾಕಿದೆ; ಆದ್ದರಿಂದ ಒಳ್ಳೆಯ ಫಲವನ್ನು ಕೊಡದ ಪ್ರತಿಯೊಂದು ಮರವನ್ನು ಕಡಿದು ಬೆಂಕಿಯಲ್ಲಿ ಹಾಕುವರು.


ನಿಮ್ಮ ದುಷ್ಕೃತ್ಯಗಳಿಗೆ ಪ್ರತಿಫಲವಾಗಿ ನಿಮ್ಮನ್ನು ದಂಡಿಸುವೆನು; ನಿಮ್ಮ ಪುರವೆಂಬ ವನಕ್ಕೆ ಬೆಂಕಿ ಹಚ್ಚುವೆನು, ಅದು ಸುತ್ತುಮುತ್ತಣದ ಪ್ರದೇಶವನ್ನೆಲ್ಲಾ ನುಂಗಿಬಿಡುವುದು.


ನೋಡು, ನಿನ್ನ ಶತ್ರುಗಳು ಘೋಷಿಸುತ್ತಿದ್ದಾರೆ; ನಿನ್ನ ದ್ವೇಷಿಗಳು ತಲೆಯೆತ್ತಿದ್ದಾರೆ.


ಭೂಲೋಕದ ಒಡೆಯನ ಮುಂದೆ ನಿಂತಿರುವ ಎರಡು ಎಣ್ಣೆಯ ಮರಗಳೂ ಮತ್ತು ಎರಡು ದೀಪಸ್ತಂಭಗಳೂ ಇವರೇ.


ನಿಮ್ಮ ಎಲ್ಲಾ ಪ್ರದೇಶಗಳಲ್ಲಿ ಎಣ್ಣೇಮರಗಳು ಎಷ್ಟಿದ್ದರೂ ಅವುಗಳ ಕಾಯಿಗಳು ಉದುರಿಹೋಗುವುದರಿಂದ ನೀವು ಎಣ್ಣೆಯನ್ನು ಮೈಗೆ ಹಚ್ಚಿಕೊಳ್ಳುವುದಿಲ್ಲ.


ಅವನು ಬಳ್ಳಿಯಂತೆ ಬಿಸಿಲಿನಲ್ಲಿಯೂ ಹಸಿಯಾಗಿದ್ದು, ತೋಟದಲ್ಲೆಲ್ಲಾ ಕವಲೊಡೆದು ಹರಡಿ


ಹೀಗಿರಲು ಕರ್ತನಾದ ಯೆಹೋವನ ಈ ಮಾತನ್ನು ಕೇಳಿರಿ, “ಆಹಾ, ನನ್ನ ಕೋಪವೆಂಬ ರೋಷಾಗ್ನಿಯು ಈ ಸ್ಥಳದಲ್ಲಿ ಸುರಿಯಲ್ಪಡುವುದು; ಮನುಷ್ಯರ ಮೇಲೆಯೂ, ಪಶುಗಳ ಮೇಲೆಯೂ, ಕಾಡುಮರಗಳ ಮೇಲೆಯೂ, ಭೂಮಿಯ ಬೆಳೆಯ ಮೇಲೆಯೂ ಅದನ್ನು ಸುರಿಯುವೆನು; ಅದು ಆರದೆ ದಹಿಸುವುದು.”


ಅದರ ರೆಂಬೆಗಳು ಹರಡುವವು, ಅದರ ಅಂದವು ಒಲೀವ್ ಮರದಂತೆ ಕಂಗೊಳಿಸುವುದು, ಅದರ ಪರಿಮಳವು ಲೆಬನೋನಿನ ಹಾಗೆ ಮನೋಹರವಾಗಿರುವುದು.


ನಿನ್ನ ಬಲಗೈ ಉದ್ಧರಿಸಿದ ಪುರುಷನೂ, ನೀನು ನಿನಗೋಸ್ಕರ ಸಾಕಿ ಬೆಳೆಸಿದ ನರಪುತ್ರನೂ ಆಗಿರುವವನನ್ನು, ನಿನ್ನ ಹಸ್ತದಿಂದ ಹಿಡಿದಿರು.


“ನಾನು ನಿನ್ನನ್ನು ಅತ್ಯುತ್ತಮ ಬೀಜದಿಂದ ಬೆಳೆದ ಒಳ್ಳೆಯ ದ್ರಾಕ್ಷಾಲತೆಯನ್ನಾಗಿ ನೆಟ್ಟಿರಲು ನೀನು ನನಗೆ ಕಾಡುದ್ರಾಕ್ಷಿಬಳ್ಳಿಯ ಕೆಟ್ಟರೆಂಬೆಗಳಂತೆ ಆಗಲು ಕಾರಣವೇನು?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು