Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 12:1 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಯೆಹೋವನೇ, ನೀನು ಧರ್ಮಸ್ವರೂಪನಾಗಿರುವುದರಿಂದ ನಾನು ನಿನ್ನೊಡನೆ ವ್ಯಾಜ್ಯವಾಡಲಾರೆನು. ಆದರೂ ನಿನ್ನ ಸಂಗಡ ನ್ಯಾಯವನ್ನು ಚರ್ಚಿಸುವೆನು. ದುಷ್ಟರ ನಡತೆ ಏಕೆ ಸಫಲವಾಗುತ್ತದೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಸರ್ವೇಶ್ವರಾ, ನೀವು ಸತ್ಯಸ್ವರೂಪಿ. ನಿಮ್ಮೊಡನೆ ವ್ಯಾಜ್ಯ ನನಗೆ ಅಸಾಧ್ಯ. ಆದರೂ ನಿಮ್ಮೊಡನೆ ಚರ್ಚಿಸಬೇಕೆಂದಿರುವೆ ಈ ನ್ಯಾಯ : ದುರುಳರ ಬಾಳು ಬೆಳಗುತ್ತಿರುವುದು ಏಕೆ? ದ್ರೋಹಿಗಳೆಲ್ಲರು ನೆಮ್ಮದಿಯಾಗಿರುವುದು ಏಕೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಯೆಹೋವನೇ, ನೀನು ಧರ್ಮಸ್ವರೂಪನಾಗಿರುವದರಿಂದ ನಾನು ನಿನ್ನೊಡನೆ ವ್ಯಾಜ್ಯವಾಡಲಾರೆನು, ಆದರೂ ನಿನ್ನ ಸಂಗಡ ನ್ಯಾಯವನ್ನು ಚರ್ಚಿಸುವೆನು. ದುಷ್ಟರ ನಡತೆಗೆ ಏಕೆ ಸುಫಲವಾಗುತ್ತದೆ? ದ್ರೋಹಿಗಳೆಲ್ಲರೂ ನೆಮ್ಮದಿಯಾಗಿರುವದೇಕೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಯೆಹೋವನೇ, ನಾನು ನಿನ್ನ ಜೊತೆ ವಾದ ಮಾಡಿದರೆ, ನೀನು ಯಾವಾಗಲೂ ನ್ಯಾಯಪರನೆಂಬುದು ರುಜುವಾತಾಗುತ್ತದೆ. ಆದರೂ ನ್ಯಾಯಪೂರ್ಣವಲ್ಲದ ಕೆಲವು ವಿಷಯಗಳ ಬಗ್ಗೆ ನಾನು ನಿನ್ನನ್ನು ಕೇಳಬಯಸುತ್ತೇನೆ. ದುಷ್ಟರು ಏಕೆ ಅಭಿವೃದ್ಧಿ ಹೊಂದುತ್ತಾರೆ? ನಿನ್ನ ವಿಶ್ವಾಸಕ್ಕೆ ಪಾತ್ರರಾಗದವರು ನೆಮ್ಮದಿಯ ಜೀವನ ನಡೆಸಲು ಹೇಗೆ ಸಾಧ್ಯ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಓ ಯೆಹೋವ ದೇವರೇ, ನಾನು ನಿಮ್ಮ ಸಂಗಡ ವಾದಿಸುವಾಗ, ನೀವು ನೀತಿವಂತರೇ ಆಗಿದ್ದೀರಿ. ಆದರೂ ನಾನು ನಿಮ್ಮ ಸಂಗಡ ನ್ಯಾಯವಾದವುಗಳನ್ನು ಕುರಿತು ಮಾತನಾಡುವೆನು. ದುಷ್ಟರ ಮಾರ್ಗವು ಸಮೃದ್ಧಿಯಾಗುವುದು ಏಕೆ? ಮಹಾ ವಂಚನೆ ಮಾಡುವವರೆಲ್ಲರು ಸುಖವಾಗಿರುವುದು ಏಕೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 12:1
44 ತಿಳಿವುಗಳ ಹೋಲಿಕೆ  

ಈಗ ಅಹಂಕಾರಿಗಳನ್ನು ಭಾಗ್ಯವಂತರೆಂದು ಕೊಂಡಾಡಬೇಕಾಗಿ ಬಂತು; ಹೌದು, ದುಷ್ಕರ್ಮಿಗಳು ಏಳಿಗೆಗೆ ಬಂದಿದ್ದಾರೆ, ದೇವರನ್ನು ಪರೀಕ್ಷಿಸಿದರೂ ಸುರಕ್ಷಿತರಾಗಿದ್ದಾರೆ” ಅಂದುಕೊಂಡಿದ್ದೀರಲ್ಲಾ.


ದುಷ್ಟರು ಹುಲ್ಲಿನಂತೆ ಬೆಳೆಯುವುದೂ, ಕೆಡುಕರು ಹೂವಿನಂತೆ ಮೆರೆಯುವುದೂ ತೀರಾ ಹಾಳಾಗುವುದಕ್ಕಾಗಿಯೇ.


ಕೆಟ್ಟ ನಡತೆಯುಳ್ಳವರನ್ನು ನೋಡಿ ತಳಮಳಗೊಳ್ಳಬೇಡ; ದುರಾಚಾರಿಗಳನ್ನು ನೋಡಿ ಅಸೂಯೆಪಡಬೇಡ.


ಕರ್ತನೇ, ನೀನು ಧರ್ಮಸ್ವರೂಪನು, ನಾವೋ ನಾಚಿಕೆಗೆ ಈಡಾದವರು; ಹೌದು, ಈಗಲೇ ಯೆಹೂದ್ಯರೂ ಯೆರೂಸಲೇಮಿನ ನಿವಾಸಿಗಳೂ ನಿನ್ನ ವಿರುದ್ಧವಾಗಿ ಮಾಡಿದ ದ್ರೋಹದ ನಿಮಿತ್ತ ನಿನ್ನಿಂದ ದೇಶದೇಶಗಳಿಗೆ ತಳ್ಳಲ್ಪಟ್ಟು ದೂರದಲ್ಲಿಯೂ, ಸಮೀಪದಲ್ಲಿಯೂ ಚದರಿರುವ ಎಲ್ಲಾ ಇಸ್ರಾಯೇಲರೂ ನಾಚಿಕೆಗೆ ಈಡಾಗಿದ್ದಾರೆ.


ಕಳ್ಳರ ಗುಡಾರಗಳಾದರೋ ಸಮೃದ್ಧವಾಗಿರುವವು, ಕೈಯಲ್ಲಿರುವುದನ್ನೇ ದೇವರನ್ನಾಗಿ ಮಾಡಿಕೊಂಡು, ದೇವರನ್ನು ಕೋಪಕ್ಕೆ ಗುರಿಮಾಡುವವರು ಸುರಕ್ಷಿತರಾಗಿದ್ದಾರೆ ಎಂದು ತಿಳಿದಿರುವರು.


ಹೀಗಿರಲು ಧರ್ಮೋಪದೇಶವು ಜಡವಾಗಿದೆ, ನ್ಯಾಯವು ಎಂದಿಗೂ ಸಾಧ್ಯವಾಗುತ್ತಿಲ್ಲ; ದುಷ್ಟರು ಶಿಷ್ಟರನ್ನು ಆಕ್ರಮಿಸಿರುವುದರಿಂದ ದೊರೆಯುವ ನ್ಯಾಯವೂ ವಕ್ರವಾಗಿಯೇ ಇರುತ್ತದೆ.


ನಿನಗೇ, ಕೇವಲ ನಿನಗೇ ತಪ್ಪುಮಾಡಿದ್ದೇನೆ; ನಿನ್ನ ದೃಷ್ಟಿಗೆ ಕೆಟ್ಟದ್ದಾಗಿರುವುದನ್ನೇ ಮಾಡಿದ್ದೇನೆ. ನಿನ್ನ ನಿರ್ಣಯ ನ್ಯಾಯವಾಗಿಯೂ, ನಿನ್ನ ತೀರ್ಪು ನಿಷ್ಕಳಂಕವಾಗಿಯೂ ಇರುತ್ತದೆ.


ದುಷ್ಟನು ಭೀಕರನಾಗಿ ಸ್ವಸ್ಥಳದಲ್ಲಿ ಹಸಿರಾಗಿ ಬೆಳೆದ ಮರದಂತೆ ವಿಸ್ತರಿಸಿಕೊಂಡಿರುವುದನ್ನು ನೋಡಿದ್ದೆನು.


ಅದರ ಮಧ್ಯ ನೆಲೆಗೊಂಡಿರುವ ಯೆಹೋವನು ನೀತಿಸ್ವರೂಪನು; ಎಂದಿಗೂ ಅನ್ಯಾಯವನ್ನು ಮಾಡನು; ಪ್ರತಿ ಬೆಳಿಗ್ಗೆ ತನ್ನ ನ್ಯಾಯವನ್ನು ತಪ್ಪದೆ ಪ್ರಕಾಶಗೊಳಿಸುವನು; ಅನ್ಯಾಯಗಾರನೋ ನಾಚಿಕೆಪಡುವುದಿಲ್ಲ.


ಹೃದಯವನ್ನೂ, ಅಂತರಿಂದ್ರಿಯವನ್ನೂ ಪರೀಕ್ಷಿಸಿ, ನ್ಯಾಯವಾಗಿ ತೀರ್ಪುಮಾಡುವ ಸೇನಾಧೀಶ್ವರನಾದ ಯೆಹೋವನೇ, ನೀನು ಅವರಿಗೆ ಕೊಡುವ ಪ್ರತಿಫಲವನ್ನು ನಾನು ಕಾಣುವೆನು; ನನ್ನ ವ್ಯಾಜ್ಯವನ್ನು ನಿನಗೇ ಅರಿಕೆಮಾಡಿದ್ದೇನಷ್ಟೆ ಎಂದು ಹೇಳಿದೆನು.


ನಿನ್ನ ಸಹೋದರರೂ, ನಿನ್ನ ತಂದೆಯ ಮನೆಯವರೂ ನಿನಗೆ ದ್ರೋಹಮಾಡಿದ್ದಾರೆ. ಇವರೇ ನಿನ್ನ ಬೆನ್ನಟ್ಟುತ್ತಾ ಕೂಗುತ್ತಾರೆ; ಒಳ್ಳೆಯ ಮಾತನಾಡಿದರೂ ಇವರನ್ನು ನಂಬಬೇಡ” ಎಂದು ಹೇಳಿದ್ದಾನೆ.


ಇಸ್ರಾಯೇಲ್ ವಂಶದವರೂ, ಯೆಹೂದ ವಂಶದವರೂ ನನಗೆ ಕೇವಲ ದ್ರೋಹವನ್ನು ಮಾಡಿರುತ್ತಾರೆ ಎಂದು ಯೆಹೋವನು ನುಡಿಯುತ್ತಾನೆ.


ಆದರೆ ನಾನು ಸರ್ವಶಕ್ತನಾದ ದೇವರ ಸಂಗಡ ಮಾತನಾಡಬೇಕು, ದೇವರೊಂದಿಗೆ ವಾದಿಸಲು ಅಪೇಕ್ಷಿಸುತ್ತೇನೆ.


ಯೆಹೋವನೇ, ಇಸ್ರಾಯೇಲ್ ದೇವರೇ, ಈಗಿರುವಷ್ಟು ಜನರನ್ನು ನಮ್ಮಲ್ಲಿ ಉಳಿಸಿದ್ದರಿಂದ ನೀನು ಧರ್ಮಸ್ವರೂಪನೆಂದು ಪ್ರಕಟವಾಯಿತು. ನಾವಾದರೋ ನಿನ್ನ ದೃಷ್ಟಿಯಲ್ಲಿ ಅಪರಾಧಿಗಳು. ಈ ನಮ್ಮ ದುಷ್ಕೃತ್ಯದ ನಿಮಿತ್ತವಾಗಿ ನಿನ್ನೆದುರಿನಲ್ಲಿ ನಿಲ್ಲಲಾರೆವು” ಎಂದು ಬೇಡಿಕೊಂಡೆನು.


ಅವರು ಆದಾಮನಂತೆ ನನ್ನ ನಿಬಂಧನೆಯನ್ನು ಮೀರಿದ್ದಾರೆ; ಅಲ್ಲಲ್ಲಿ ನನಗೆ ದ್ರೋಹಮಾಡಿದ್ದಾರೆ.


ನೀನು ಕೇಳಿಲ್ಲ, ತಿಳಿದೂ ಇಲ್ಲ, ಪುರಾತನಕಾಲದಿಂದ ನಿನ್ನ ಕಿವಿಯು ತೆರೆದೇ ಇಲ್ಲ; ನೀನು ದೊಡ್ಡ ವಂಚಕನೆಂದೂ, ಗರ್ಭದಿಂದಲೇ ದ್ರೋಹಿಯೆಂದು ನಾನು ತಿಳಿದುಕೊಂಡಿದ್ದೇನೆ.


ಯಾಕೋಬ್ಯರ ಅರಸನಾದ ಯೆಹೋವನು ಹೀಗೆನ್ನುತ್ತಾನೆ, “ನಿಮ್ಮ ವ್ಯಾಜ್ಯವು ಈಚೆಗೆ ಬರಲಿ, ನಿಮ್ಮ ವಿಗ್ರಹಗಳಿಗಾಗಿ ನಿಮ್ಮ ಬಲವಾದ ನ್ಯಾಯಗಳನ್ನು ತೋರ್ಪಡಿಸಿರಿ”


ಮೂಢರು ತಮ್ಮ ಉದಾಸೀನತೆಯಿಂದಲೇ ಹತರಾಗುವರು, ಜ್ಞಾನಹೀನರು ತಮ್ಮ ನಿಶ್ಚಿಂತೆಯಿಂದಲೇ ನಾಶವಾಗುವರು.


ಯೆಹೋವನ ಮಾರ್ಗಗಳೆಲ್ಲಾ ನೀತಿಯುಳ್ಳವುಗಳು, ಆತನು ಎಲ್ಲಾ ಕಾರ್ಯಗಳಲ್ಲಿ ಕೃಪೆ ತೋರಿಸುವವನು.


ಯೆಹೋವನೇ, ನೀನು ನೀತಿಸ್ವರೂಪನು, ನಿನ್ನ ವಿಧಿಗಳು ನ್ಯಾಯವಾಗಿವೆ.


ಯೆಹೋವನೇ, ನಿನ್ನ ವಿಧಿಗಳು ನೀತಿಯುಳ್ಳವುಗಳಾಗಿವೆ ಎಂದೂ, ನೀನು ನಂಬಿಗಸ್ತಿಕೆಯಿಂದಲೇ ನನ್ನನ್ನು ಕುಗ್ಗಿಸಿದ್ದೀ ಎಂದೂ ತಿಳಿದುಕೊಂಡಿದ್ದೇನೆ.


ನಮಗೆ ಶರಣನಾದ ದೇವರು ಮಾಡುವ ಕಾರ್ಯದಲ್ಲಿ ಯಾವ ಕುಂದೂ ಇಲ್ಲ; ಆತನು ನಡೆಸುವುದೆಲ್ಲಾ ನ್ಯಾಯ; ಆತನು ನಿರ್ವಂಚಕನಾದ ನಂಬಿಗಸ್ತ ದೇವರು, ನೀತಿಯುಳ್ಳವನೂ ಮತ್ತು ಯಥಾರ್ಥನೂ ಆಗಿದ್ದಾನೆ.


ಆ ರೀತಿಯಾಗಿ ದುಷ್ಟರಿಗೂ ಶಿಷ್ಟರಿಗೂ ಭೇದ ಮಾಡದೆ ದುಷ್ಟರ ಸಂಗಡ ನೀತಿವಂತರನ್ನೂ ಸಂಹರಿಸುವುದು ನಿನ್ನಿಂದ ಎಂದಿಗೂ ಆಗಬಾರದು; ಸರ್ವಲೋಕಕ್ಕೆ ನ್ಯಾಯತೀರಿಸುವವನು ನ್ಯಾಯವನ್ನೇ ನಡಿಸುವನಲ್ಲವೇ” ಎಂದು ಹೇಳಲು.


ನೀನು ನಮ್ಮ ಮೇಲೆ ಎಷ್ಟು ಕೇಡನ್ನು ಬರಮಾಡಿದರೂ ನೀನು ನೀತಿಸ್ವರೂಪನೇ. ನೀನು ಸತ್ಯವನ್ನೇ ನಡಿಸಿದೆ. ನಾವಾದರೋ ದುಷ್ಟರು.


ಯೆಹೋವನು ಕೃಪಾಳುವೂ, ನೀತಿವಂತನೂ ಆಗಿದ್ದಾನೆ; ನಮ್ಮ ದೇವರು ಕನಿಕರವುಳ್ಳವನು.


ಲೋಕದಲ್ಲಿ ನಡೆಯುವ ವ್ಯರ್ಥಕಾರ್ಯವು ಒಂದುಂಟು. ದುಷ್ಟರ ನಡತೆಗೆ ತಕ್ಕ ಗತಿಯು ಶಿಷ್ಟನಿಗೆ ಆಗುವುದು. ಶಿಷ್ಟರ ನಡತೆಗೆ ತಕ್ಕ ಗತಿಯು ದುಷ್ಟರಿಗೆ ಆಗುವುದು. ಇದು ವ್ಯರ್ಥವೆಂದು ನಾನು ಹೇಳಿದೆನು.


ಅವಳು ಇವುಗಳನ್ನೆಲ್ಲಾ ನಡೆಸಿದ ಮೇಲೆ ನನ್ನ ಬಳಿಗೆ ಪುನಃ ಬಂದಾಳು ಅಂದುಕೊಂಡೆನು. ಆದರೆ ಬರಲಿಲ್ಲ. ಆಗ ಯೆಹೂದವೆಂಬ ದ್ರೋಹಿಯಾದ ಅವಳ ತಂಗಿಯು ಇದನ್ನು ನೋಡಿದಳು.


ಆದರೆ ಇಸ್ರಾಯೇಲ್ ವಂಶದವರೇ, ಒಬ್ಬ ಹೆಂಗಸು ಪತಿದ್ರೋಹ ಮಾಡಿದಂತೆ ನೀವು ನನಗೆ ದ್ರೋಹವನ್ನು ಮಾಡಿದ್ದೀರಿ” ಎಂದು ಯೆಹೋವನು ನುಡಿಯುತ್ತಾನೆ.


ಆಹಾ! ದಾರಿಗರು ತಂಗುವ ಗುಡಿಸಲು ಕಾಡಿನಲ್ಲಿ ನನಗೆ ಸಿಕ್ಕಿದರೆ ಎಷ್ಟೋ ಒಳ್ಳೆಯದು! ಆಗ ನಾನು ನನ್ನ ಜನರನ್ನು ತ್ಯಜಿಸಿ ಹೋಗುತ್ತಿದ್ದೆನು. ಅವರೆಲ್ಲರೂ ವ್ಯಭಿಚಾರಿಗಳ, ದ್ರೋಹಿಗಳ ಗುಂಪೇ.


ಕ್ರಯಪತ್ರವನ್ನು ನೇರೀಯನ ಮಗನಾದ ಬಾರೂಕನ ಕೈಗೆ ಕೊಟ್ಟ ಮೇಲೆ ನಾನು ಯೆಹೋವನಿಗೆ,


ಯೆಹೋವನು ನೀತಿಸ್ವರೂಪನು, ನಾನಾದರೋ ಆತನ ಆಜ್ಞೆಗಳನ್ನು ಮೀರಿದ ದ್ರೋಹಿ; ಜನಾಂಗಗಳೇ, ನೀವೆಲ್ಲರೂ ಕಿವಿಗೊಡಿರಿ, ನನ್ನ ವ್ಯಥೆಯನ್ನು ನೋಡಿರಿ; ನನ್ನ ಕನ್ಯೆಯರು ಮತ್ತು ಯುವಕರು ಸೆರೆಹೋಗಿದ್ದಾರಲ್ಲಾ!


“ಆದರೆ ನೀವು, ‘ಕರ್ತನ ಕ್ರಮವು ಸರಿಯಲ್ಲ’ ಎಂದು ಹೇಳುತ್ತಿದ್ದೀರಿ; ಇಸ್ರಾಯೇಲ್ ವಂಶದವರೇ, ನನ್ನ ಕ್ರಮವು ಸರಿಯಲ್ಲವೋ? ನಿಮ್ಮ ಕ್ರಮವೇ ಸರಿಯಲ್ಲ.


(ಕಲ್ಲು) ಕುಪ್ಪೆಯ ಮೇಲೆ ತನ್ನ ಬೇರುಗಳನ್ನು ಹೆಣೆದುಕೊಂಡು, ಕಲ್ಲುಬಿರುಕಿನಲ್ಲಿಯೂ ನುಗ್ಗಬಲ್ಲನು.


ತುಂಬಿದ ಪಟ್ಟಣದೊಳಗಿಂದ ಜನರು ನರಳುವರು, ಗಾಯಪಟ್ಟವರು ಮೊರೆಯಿಡುವರು, ಆದರೆ ದೇವರಾದರೋ ಅವರ ಮೊರೆಗೆ ಕಿವಿಗೊಡನು.


ದೇವರು ಅವರಿಗೆ ಅಭಯವನ್ನು ಕೊಟ್ಟಿದ್ದರಿಂದ ಅವರು ಅದನ್ನು ಆಧಾರಮಾಡಿಕೊಳ್ಳುವರು; ಆತನ ಕಟಾಕ್ಷವು ಅವರ ಮಾರ್ಗಗಳ ಮೇಲಿರುವುದು.


ಯಥಾರ್ಥಚಿತ್ತವೇ ನಿನಗೆ ಸಂತೋಷ; ಸುಜ್ಞಾನದ ರಹಸ್ಯಗಳನ್ನು ನನಗೆ ತಿಳಿಯಪಡಿಸು.


ಆದಕಾರಣ ಯೆಹೋವನು ಆ ಕೇಡನ್ನು ನೋಡಿಕೊಂಡಿದ್ದು ನಮ್ಮ ಮೇಲೆ ಬರಮಾಡಿದ್ದಾನೆ; ನಮ್ಮ ದೇವರಾದ ಯೆಹೋವನು ತಾನು ಮಾಡುವ ಸಕಲಕಾರ್ಯಗಳಲ್ಲಿ ಧರ್ಮಸ್ವರೂಪನೇ; ನಾವೋ ಆತನ ಮಾತನ್ನು ಕೇಳಲಿಲ್ಲ.


ನೀವು ಯೆಹೋವನನ್ನು ನಿಮ್ಮ ಮಾತುಗಳಿಂದ ಬೇಸರಗೊಳಿಸಿದ್ದೀರಿ. “ಯಾವ ವಿಷಯದಲ್ಲಿ ಆತನನ್ನು ಬೇಸರಗೊಳಿಸಿದ್ದೇವೆ ಅನ್ನುತ್ತೀರಾ? ಪ್ರತಿಯೊಬ್ಬ ದುರಾಚಾರಿಯು ಯೆಹೋವನ ದೃಷ್ಟಿಗೆ ಒಳ್ಳೆಯವನು. ಅವರೇ ಆತನಿಗೆ ಇಷ್ಟ. ನ್ಯಾಯತೀರಿಸುವ ದೇವರು ಎಲ್ಲಿದ್ದಾನೆ?” ಎಂದು ನೀವು ಕೇಳುವುದರಿಂದ ಆತನ ಗಮನದಲ್ಲಿ ಇದ್ದೀರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು