Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 12:7 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ನಾನು ನನ್ನ ಮನೆಯನ್ನು ತೊರೆದು ನನ್ನ ಸ್ವತ್ತನ್ನು ನಿರಾಕರಿಸಿದ್ದೇನೆ; ನನ್ನ ಪ್ರಾಣಪ್ರಿಯಳನ್ನು ಅವಳ ಶತ್ರುಗಳ ಕೈಗೆ ಒಪ್ಪಿಸಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 “ನಾನು ನನ್ನ ಮನೆಯನ್ನೇ ತೊರೆದಿದ್ದೇನೆ ನನ್ನ ಸ್ವಂತ ಸೊತ್ತನ್ನೇ ನಿರಾಕರಿಸಿದ್ದೇನೆ ನನಗೆ ಪ್ರಾಣಪ್ರಿಯರಾದ ಜನರನ್ನು ಅವರ ಶತ್ರುಗಳ ಕೈಗೊಪ್ಪಿಸಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ನಾನು ನನ್ನ ಮನೆಯನ್ನು ತೊರೆದು ನನ್ನ ಸ್ವಾಸ್ತ್ಯವನ್ನು ನಿರಾಕರಿಸಿದ್ದೇನೆ; ನನ್ನ ಪ್ರಾಣಪ್ರಿಯಳನ್ನು ಅವಳ ಶತ್ರುಗಳ ಕೈಗೆ ಒಪ್ಪಿಸಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 “ನಾನು (ಯೆಹೋವನು) ನನ್ನ ಮನೆಯನ್ನು ತ್ಯಜಿಸಿದ್ದೇನೆ. ನಾನು ನನ್ನ ಆಸ್ತಿಯನ್ನು ಬಿಟ್ಟುಬಿಟ್ಟಿದ್ದೇನೆ. ನಾನು ನನ್ನ ಪ್ರಿಯತಮೆಯನ್ನು (ಯೆಹೂದ) ಅವಳ ಶತ್ರುಗಳಿಗೆ ಕೊಟ್ಟಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 “ನನ್ನ ಮನೆಯನ್ನು ಬಿಟ್ಟಿದ್ದೇನೆ, ನನ್ನ ಸೊತ್ತನ್ನು ತ್ಯಜಿಸಿದ್ದೇನೆ. ನನ್ನ ಪ್ರಾಣಕ್ಕೆ ಅತಿ ಪ್ರಿಯವಾದವಳನ್ನು ಅವಳ ಶತ್ರುಗಳ ಕೈಯಲ್ಲಿ ಒಪ್ಪಿಸಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 12:7
23 ತಿಳಿವುಗಳ ಹೋಲಿಕೆ  

ಯಾಕೋಬಿನ ಮನೆತನದವರು ಪೂರ್ವದೇಶಗಳಲ್ಲಿ ಮಂತ್ರತಂತ್ರಗಳಲ್ಲಿ ಮಗ್ನರೂ, ಫಿಲಿಷ್ಟಿಯರ ಹಾಗೆ ಕಣಿ ಹೇಳುವವರೂ, ಅನ್ಯದೇಶಗಳವರ ಸಂಗಡ ಒಪ್ಪಂದ ಮಾಡುವವರೂ ಆಗಿರುವುದರಿಂದ ಯೆಹೋವನೇ ಈ ನಿನ್ನ ಜನರನ್ನು ಕೈಬಿಟ್ಟಿದ್ದೀ.


ನನ್ನ ಆಪ್ತಜನವು ನನ್ನ ಮನೆಯಲ್ಲಿ ಅಸಹ್ಯ ಕಾರ್ಯವನ್ನು ಮಾಡಿದ್ದೇಕೆ? ವ್ರತಗಳೂ, ಮೀಸಲಿನ ಮಾಂಸವೂ ನಿನ್ನ ದುಷ್ಟತನವನ್ನು ಪರಿಹರಿಸುವುದೋ? ಇಂಥವುಗಳ ಮೂಲಕ ತಪ್ಪಿಸಿಕೊಂಡೆಯಾ?


ಅವರ ದುಷ್ಟತನವು ಗಿಲ್ಗಾಲಿನಲ್ಲಿ ತುಂಬಿದೆ; ಅಲ್ಲೇ ನನ್ನ ದ್ವೇಷಕ್ಕೆ ಗುರಿಯಾಗಿದ್ದಾರೆ; ಅವರ ದುಷ್ಕೃತ್ಯಗಳ ನಿಮಿತ್ತ ನಾನು ಅವರನ್ನು ನನ್ನ ನಿವಾಸದೊಳಗಿಂದ ಓಡಿಸಿಬಿಡುವೆನು; ಅವರನ್ನು ಇನ್ನು ಪ್ರೀತಿಸೆನು; ಅವರ ಅಧಿಕಾರಿಗಳೆಲ್ಲರೂ ದ್ರೋಹಿಗಳೇ ಸರಿ.


ಅವರು ಕತ್ತಿಯ ಬಾಯಿಗೆ ಗುರಿಯಾಗುವರು. ಅವರು ಸೆರೆಯಾಗಿ ಅನ್ಯದೇಶಗಳಿಗೆಲ್ಲಾ ಹಿಡಿದುಕೊಂಡು ಹೋಗುವರು. ಅನ್ಯದೇಶದವರ ಸಮಯಗಳು ಪೂರೈಸುವ ತನಕ ಯೆರೂಸಲೇಮ್ ಪಟ್ಟಣವು ಅನ್ಯದೇಶದವರಿಂದ ತುಳಿದಾಡಲ್ಪಡುತ್ತಿರುವುದು.


ನಾನು ಸಕಲ ಜನಾಂಗಗಳನ್ನು ಕೂಡಿಸುವೆನು, ಮತ್ತು ಯೆಹೋಷಾಫಾಟನ ನ್ಯಾಯತೀರ್ಪಿನ ತಗ್ಗಿಗೆ ಬರಮಾಡುವೆನು. ಅಲ್ಲಿ ನನ್ನ ಜನರಿಗೆ ನ್ಯಾಯತೀರ್ಪನ್ನು ಕೊಡುವೆನು. ಏಕೆಂದರೆ ನನ್ನ ಜನರು ನನ್ನ ಬಾಧ್ಯತೆಯೂ ಆಗಿರುವ ಇಸ್ರಾಯೇಲಿನ ವಿಷಯ ಅವರೊಂದಿಗೆ ವ್ಯಾಜ್ಯ ಮಾಡುವೆನು. ಅವರು ನನ್ನ ಜನರನ್ನು ದೇಶದೇಶಗಳಿಗೆ ಚದುರಿಸಿ ನನ್ನ ದೇಶವನ್ನು ಹಂಚಿಕೊಂಡರು.


ಚೀಯೋನ್ ಪರ್ವತದ ಮೇಲೆ ನಿಂತು ಕೊಂಬೂದಿರಿ, ಉಪವಾಸ ದಿನವನ್ನು ಗೊತ್ತುಮಾಡಿರಿ, ಪವಿತ್ರ ಸಭೆಯನ್ನು ಕರೆಯಿರಿ.


ಇಸ್ರಾಯೇಲ್ ವಂಶದವರಿಗೆ ಹೀಗೆ ಸಾರು, ‘ಇಗೋ, ನಿಮಗೆ ಮುಖ್ಯಬಲವೂ ನೇತ್ರಾನಂದವೂ ಪ್ರಾಣಪ್ರಿಯವೂ ಆದ ನನ್ನ ಪವಿತ್ರಾಲಯವನ್ನು ನಾನು ಅಪವಿತ್ರಪಡಿಸುವೆನು, ನೀವು ಬಿಟ್ಟು ಬಂದಿರುವ ನಿಮ್ಮ ಗಂಡು ಮತ್ತು ಹೆಣ್ಣು ಮಕ್ಕಳು ಖಡ್ಗಕ್ಕೆ ತುತ್ತಾಗುವರು, ಎಂಬುದಾಗಿ ಸೇನಾದೀಶ್ವರನಾದ ಯೆಹೋವನು ನುಡಿದಿದ್ದಾರೆ


ಇಸ್ರಾಯೇಲರ ಸದಮಲಸ್ವಾಮಿಗೆ ಆತನ ಜನರು ಮಾಡಿದ ಅಪರಾಧವು ತಮ್ಮ ದೇಶದಲ್ಲಿ ತುಂಬಿದ್ದರೂ, ಸೇನಾಧೀಶ್ವರನಾದ ಯೆಹೋವನೆಂಬ ದೇವರು ಇಸ್ರಾಯೇಲನ್ನಾಗಲಿ ಅಥವಾ ಯೆಹೂದವನ್ನಾಗಲಿ ತ್ಯಜಿಸಲಿಲ್ಲ.


ಯೆರೂಸಲೇಮೇ, ತಲೆಯನ್ನು ಬೋಳಿಸಿಕೊಂಡು ಕೂದಲನ್ನು ಬಿಸಾಡಿಬಿಟ್ಟು, ಬೋಳುಗುಡ್ಡಗಳಲ್ಲಿ ಶೋಕಗೀತವನ್ನು ಹಾಡು; ಯೆಹೋವನು ತನ್ನ ಕೋಪಕ್ಕೆ ಗುರಿಯಾದ ಈ ವಂಶವನ್ನು ನಿರಾಕರಿಸಿ ತ್ಯಜಿಸಿದ್ದಾನೆ.


ಆದಕಾರಣ ನನ್ನ ನಾಮಕ್ಕೆ ನೆಲೆಯಾದ ನಿಮ್ಮ ಭರವಸೆಗೆ ಆಧಾರವಾದ ಆಲಯಕ್ಕೂ, ನಾನು ನಿಮಗೂ ನಿಮ್ಮ ಪೂರ್ವಿಕರಿಗೂ ದಯಪಾಲಿಸಿದ ಸ್ಥಳಕ್ಕೂ ಶೀಲೋವಿಗೆ ತಂದ ಗತಿಯನ್ನೇ ಈಗ ತರುವೆನು.


ನೀನು ಯೆಹೂದವನ್ನು ಸಂಪೂರ್ಣವಾಗಿ ತ್ಯಜಿಸಿಬಿಟ್ಟಿದ್ದೀಯೋ? ಚೀಯೋನನ್ನು ಮನಃಪೂರ್ವಕವಾಗಿ ಅಸಹ್ಯಪಟ್ಟಿದ್ದಿಯೋ? ನಮಗೆ ಗುಣವಾಗದಂತೆ ಏಕೆ ಪೆಟ್ಟುಹೊಡೆದಿ? ಸುಖವನ್ನು ನಿರೀಕ್ಷಿಸಿದೆವು, ಯಾವ ಮೇಲೂ ಆಗಲಿಲ್ಲ; ಕ್ಷೇಮ ಕಾಲವನ್ನೂ ಎದುರುನೋಡಿದೆವು, ಹಾ, ಅಂಜಿಕೆಯೇ!


ನಾನು ನಿಮಗೆ ದಯಪಾಲಿಸಿದ ಸ್ವತ್ತನ್ನು ನಿಮ್ಮ ದೋಷದಿಂದಲೇ ಕಳೆದುಕೊಳ್ಳುವಿರಿ. ನೀವು ನೋಡದ ದೇಶದಲ್ಲಿ ನಿಮ್ಮನ್ನು ನಿಮ್ಮ ಶತ್ರುಗಳಿಗೆ ದಾಸರನ್ನಾಗಿ ಮಾಡುವೆನು. ನೀವು ನನ್ನ ರೋಷಾಗ್ನಿಯನ್ನು ಹೆಚ್ಚಿಸಿದ್ದೀರಿ, ಅದು ನಿತ್ಯವೂ ಉರಿಯುತ್ತಿರುವುದು.


ಪ್ರವಾದಿಯಾಗಲಿ ಅಥವಾ ಯಾಜಕನಾಗಲಿ ಈ ಜನರಲ್ಲಿ ಯಾರೇ ಆಗಲಿ “ಯೆಹೋವನು ದಯಪಾಲಿಸಿರುವ ವಾಕ್ಯದ ಆಧಾರವೇನು?” ಎಂದು ನಿನ್ನನ್ನು ಕೇಳಿದರೆ ನೀನು ಅವರಿಗೆ ಹೀಗೆ ಹೇಳು, “ಯೆಹೋವನು ಇಂತೆನ್ನುತ್ತಾನೆ, ನೀವೇ ನನ್ನ ಹೊರೆ, ನಾನು ನಿಮ್ಮನ್ನು ಎಸೆದುಬಿಡುವೆನು.


ಖಂಡಿತವಾಗಿ ನಿಮ್ಮನ್ನೂ ನಾನು ನಿಮಗೆ ಮತ್ತು ನಿಮ್ಮ ಪೂರ್ವಿಕರಿಗೆ ದಯಪಾಲಿಸಿದ ಪಟ್ಟಣವನ್ನೂ ಹೊರೆಯೆಂದು ಎತ್ತಿ ನನ್ನೆದುರಿನಿಂದ ಎಸೆದುಬಿಡುವೆನು.


ಇಸ್ರಾಯೇಲ್ ಇನ್ನೂ ಬಾಲ್ಯದಲ್ಲಿದ್ದಾಗ ನಾನು ಅದರ ಮೇಲೆ ಪ್ರೀತಿಯಿಟ್ಟು, ಆ ನನ್ನ ಮಗನನ್ನು ಐಗುಪ್ತ ದೇಶದಿಂದ ಕರೆದೆನು.


ಬೆನ್ಯಾಮೀನ್ ಕುಲದವರ ವಿಷಯದಲ್ಲಿ, “ಯೆಹೋವನು ಇವರ ಬೆಟ್ಟಗಳ ತಪ್ಪಲುಗಳಲ್ಲೇ ವಾಸಿಸುತ್ತಾ ಇವರನ್ನು ಯಾವಾಗಲೂ ಆವರಿಸಿಕೊಂಡಿರುವುದರಿಂದ ಆತನ ಪ್ರಿಯರಾದ ಇವರು ನಿರ್ಭಯವಾಗಿ ವಾಸಿಸುವರು” ಎಂದು ಹೇಳಿದನು.


ನನ್ನ ಪ್ರಜೆಗಳಲ್ಲಿ ಉಳಿದಿರುವವರನ್ನು ಶತ್ರುಗಳ ಕೈಗೆ ಒಪ್ಪಿಸುವೆನು. ಅವರ ಎಲ್ಲಾ ಶತ್ರುಗಳು ಬಂದು ಅವರ ಸ್ವತ್ತನ್ನು ಸುಲಿದು ಸೂರೆಮಾಡುವರು.


ಆತನು ತನ್ನ ಪ್ರಜೆಯನ್ನು ಖಡ್ಗಕ್ಕೆ ಗುರಿಮಾಡಿ, ತನ್ನ ಬಾಧ್ಯತೆಯ ಮೇಲೆ ಉಗ್ರನಾದನು.


ಆಗ ಯೆಹೋವನ ಕೋಪವು ಅವರ ಮೇಲೆ ಉರಿಗೊಂಡಿತು; ಆತನು ತನ್ನ ಸ್ವಾಸ್ತ್ಯವಾದ ಪ್ರಜೆಗಳನ್ನು ಅಸಹ್ಯಿಸಿ,


ನೀವು ಈ ಮಾತುಗಳನ್ನು ಕೇಳದಿದ್ದರೆ ಈ ಅರಮನೆಯು ಹಾಳುಬೀಳುವುದು ಎಂದು ನನ್ನ ಮೇಲೆ ಆಣೆಯಿಡುತ್ತೇನೆ ಇದು ಯೆಹೋವನ ನುಡಿ” ಎಂಬುದೇ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು