Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 13:10 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ನನ್ನ ಮಾತುಗಳನ್ನು ಕೇಳದೆ ತಮ್ಮ ಹೃದಯದ ಹಟದಂತೆ ನಡೆದು, ಅನ್ಯದೇವತೆಗಳನ್ನು ಹಿಂಬಾಲಿಸಿ, ಸೇವಿಸಿ ಪೂಜಿಸುತ್ತಿರುವ ಈ ದುಷ್ಟ ಜನರು ಯಾವ ಕೆಲಸಕ್ಕೂ ಬಾರದ ಈ ನಡುಕಟ್ಟಿಗೆ ಸಮಾನವಾಗಿರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಈ ದುಷ್ಟಜನರು ನನ್ನ ಮಾತುಗಳನ್ನು ಕೇಳಲೊಲ್ಲರು. ತಮ್ಮ ಹೃದಯದ ಒರಟುತನದಂತೆ ನಡೆದುಬರುತ್ತಿದ್ದಾರೆ. ಅನ್ಯದೇವತೆಗಳನ್ನು ಹಿಂಬಾಲಿಸಿ, ಪೂಜಿಸುತ್ತಿದ್ದಾರೆ. ಇವರು ಯಾವ ಕೆಲಸಕ್ಕೂ ಬಾರದ ಈ ನಡುಕಟ್ಟಿಗೆ ಸಾಟಿಯಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ನನ್ನ ಮಾತುಗಳನ್ನು ಕೇಳಲೊಲ್ಲದೆ ತಮ್ಮ ಹೃದಯದ ಹಟದಂತೆ ನಡೆದು ಅನ್ಯದೇವತೆಗಳನ್ನು ಹಿಂಬಾಲಿಸಿ ಸೇವಿಸಿ ಪೂಜಿಸುತ್ತಿರುವ ಈ ದುಷ್ಟ ಜನರು ಯಾವ ಕೆಲಸಕ್ಕೂ ಬಾರದ ಈ ನಡುಕಟ್ಟಿಗೆ ಸಾಟಿಯಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಯೆಹೂದದಲ್ಲಿ ದುಷ್ಟರೂ ಗರ್ವಿಷ್ಠರೂ ಆಗಿರುವ ಜನರನ್ನು ಹಾಳುಮಾಡುವೆನು. ಅವರು ನನ್ನ ಸಂದೇಶವನ್ನು ಕೇಳುವುದಿಲ್ಲ. ಅವರು ಹಟಮಾರಿಗಳೂ ತಮ್ಮ ಮನಸ್ಸಿಗೆ ಬಂದಂತೆ ಮಾಡುವವರೂ ಆಗಿದ್ದಾರೆ. ಅವರು ಬೇರೆ ದೇವರುಗಳನ್ನು ಅನುಸರಿಸುತ್ತಾರೆ ಮತ್ತು ಪೂಜಿಸುತ್ತಾರೆ. ಯೆಹೂದದ ಜನರು ಈ ನಾರಿನ ನಡುಪಟ್ಟಿಯಂತೆ ಆಗುವರು. ಅವರು ಹಾಳಾಗಿ ನಿಷ್ಪ್ರಯೋಜಕರಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ನನ್ನ ವಾಕ್ಯಗಳನ್ನು ಕೇಳಲೊಲ್ಲದೆ ತಮ್ಮ ಹೃದಯದ ಕಲ್ಪನೆಯಂತೆ ನಡೆದುಕೊಂಡು, ಬೇರೆ ದೇವರುಗಳನ್ನು ಸೇವಿಸುವುದಕ್ಕೂ, ಅವುಗಳನ್ನು ಆರಾಧಿಸುವುದಕ್ಕೂ ಹಿಂಬಾಲಿಸುವ ಈ ದುಷ್ಟಜನರು ಯಾವ ಕೆಲಸಕ್ಕಾದರೂ ಬಾರದ ಈ ನಡುಕಟ್ಟಿನ ಹಾಗಿರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 13:10
32 ತಿಳಿವುಗಳ ಹೋಲಿಕೆ  

ಇಗೋ, ನೀವೆಲ್ಲರೂ ನಿಮ್ಮ ದುಷ್ಟಹೃದಯದ ಹಟದಂತೆ ನಡೆಯುತ್ತಾ ನನ್ನನ್ನು ಕೇಳದೆ ನಿಮ್ಮ ಪೂರ್ವಿಕರಿಗಿಂತ ಹೆಚ್ಚು ಕೇಡನ್ನು ಮಾಡಿದ್ದರಿಂದಲೂ,


ಅವರು ಧರ್ಮದ ಮಾರ್ಗದಲ್ಲಿ ನಡೆಯದೆ, ಸ್ವಂತ ಹೃದಯದ ಹಟದಂತೆ ನಡೆದು, ತಮ್ಮ ಪೂರ್ವಿಕರು ತಮಗೆ ಕಲಿಸಿಕೊಟ್ಟ ಹಾಗೆ ಬಾಳ್ ದೇವತೆಗಳನ್ನು ಹಿಂಬಾಲಿಸಿದರು.


ಯೆಹೋವನು ಮೋಶೆಗೆ, “ಈ ಜನರು ಇನ್ನು ಎಷ್ಟರವರೆಗೆ ನನ್ನನ್ನು ಅಲಕ್ಷ್ಯಮಾಡುವರು? ನಾನು ನಡೆಸಿದ ಎಲ್ಲಾ ಮಹತ್ಕಾರ್ಯಗಳನ್ನು ಇವರು ಪ್ರತ್ಯಕ್ಷವಾಗಿ ನೋಡಿದಾಗ್ಯೂ ಇನ್ನು ಎಷ್ಟು ದಿನ ನನ್ನನ್ನು ನಂಬದೆ ಇರುವರು?


“ಹಠಮಾರಿಗಳೇ, ಮನಶುದ್ಧಿಯೂ, ಕರ್ಣಶುದ್ಧಿಯೂ ಇಲ್ಲದವರೇ, ನಿಮ್ಮ ಪೂರ್ವಿಕರು ಹೇಗೋ ಹಾಗೆಯೇ ನೀವೂ ಯಾವಾಗಲೂ ಪವಿತ್ರಾತ್ಮನಿಗೆ ಎದುರಾಗಿ ನಡೆಯುವವರಾಗಿದ್ದೀರಿ.


ನಾನು ಯೂಫ್ರೆಟಿಸ್ ನದಿಗೆ ಹೋಗಿ ಅಗೆದು, ನಾನು ಬಚ್ಚಿಟ್ಟ ಸ್ಥಳದೊಳಗಿಂದ ನಡುಕಟ್ಟನ್ನು ತೆಗೆದೆನು, ಆಹಾ, ಅದು ಕೆಟ್ಟು ಯಾವ ಕೆಲಸಕ್ಕೂ ಬಾರದ್ದಾಗಿತ್ತು.


ಆ ಕಾಲದಲ್ಲಿ ಯೆರೂಸಲೇಮನ್ನು ಯೆಹೋವನ ಸಿಂಹಾಸನವೆಂದು ಕರೆಯುವರು; ಯೆಹೋವನ ನಾಮಮಹತ್ವದ ಸ್ಥಾನವಾದ ಯೆರೂಸಲೇಮಿಗೆ ಸಕಲ ಜನಾಂಗಗಳವರು ನೆರೆದು ಬರುವರು; ಅವರು ಇನ್ನು ಮೇಲೆ ತಮ್ಮ ದುಷ್ಟ ಹೃದಯದ ಹಟದಂತೆ ನಡೆಯರು.


ಮಾತನಾಡುತ್ತಿರುವಾತನನ್ನು ನೀವು ಅಸಡ್ಡೆ ಮಾಡದಂತೆ ನೋಡಿಕೊಳ್ಳಿರಿ. ಏಕೆಂದರೆ ಭೂಮಿಯ ಮೇಲೆ ದೈವೋಕ್ತಿಗಳನ್ನಾಡಿದವನನ್ನು ಅಸಡ್ಡೆಮಾಡಿದವರು ದಂಡನೆಗೆ ತಪ್ಪಿಸಿಕೊಳ್ಳಲಾಗದಿದ್ದರೆ, ಪರಲೋಕದಿಂದ ಮಾತನಾಡುವಾತನನ್ನು ಬಿಟ್ಟು ದೂರವಾಗಿ ನಾವು ಹೋದರೆ ದಂಡನೆಯಿಂದ ಹೇಗೆ ತಪ್ಪಿಸಿಕೊಂಡೆವು?


ಅವರು ಘೋರವಾದ ಮರಣಕ್ಕೆ ಗುರಿಯಾಗುವರು, ಅವರಿಗಾಗಿ ಯಾರೂ ಗೋಳಾಡುವುದಿಲ್ಲ, ಅವರನ್ನು ಯಾರೂ ಹೂಣಿಡುವುದಿಲ್ಲ; ಅವರು ಭೂಮಿಯ ಮೇಲೆ ಗೊಬ್ಬರವಾಗುವರು. ಖಡ್ಗವೂ, ಕ್ಷಾಮವೂ ಅವರನ್ನು ನಿರ್ಮೂಲ ಮಾಡುವವು; ಅವರ ಹೆಣಗಳು ಆಕಾಶದ ಪಕ್ಷಿಗಳಿಗೂ ಮತ್ತು ಭೂಜಂತುಗಳಿಗೂ ಆಹಾರವಾಗುವವು” ಎಂಬುದೇ.


ಯೆಹೋವನು ತಿಳಿಸಿದ್ದರಿಂದ ಅವರ ಕುತಂತ್ರವು ನನಗೆ ಗೊತ್ತಾಯಿತು; ಆಗಲೇ ಅವರ ಕೃತ್ಯಗಳನ್ನು ನನಗೆ ತೋರಿಸಿದಿ.


ಈ ಜನರು, ಯೆರೂಸಲೇಮ್ ಎಂದಿಗೂ ಹಿಂದಿರುಗದಂತೆ ಬಿಟ್ಟುಹೋದದ್ದೇಕೆ? ಮೋಸವನ್ನೇ ಪಟ್ಟಾಗಿ ಹಿಡಿದಿದ್ದಾರೆ, ತಿರುಗಿ ಬರುವುದಿಲ್ಲ.


ಈ ಜನರ ಹೃದಯವೋ ನನ್ನ ಅಧೀನ ತಪ್ಪಿ ತಿರುಗಿಬಿದ್ದಿದೆ; ಇವರು ನನ್ನ ಅಧೀನವನ್ನು ಮೀರಿ ಬಿಟ್ಟುಹೋಗಿದ್ದಾರೆ.


ಆಗ ಸುಗಂಧದ ಬದಲಾಗಿ ದುರ್ವಾಸನೆ, ಡಾಬಿಗೆ ಬದಲಾಗಿ ಹಗ್ಗ, ಅಂದವಾದ ಜಡೆಯ ಬದಲಾಗಿ ಬೋಳುತಲೆ, ನಡುವಿನ ಶಲ್ಯಕ್ಕೆ ಬದಲಾಗಿ ಗೋಣಿತಟ್ಟು, ಸೌಂದರ್ಯಕ್ಕೆ ಬದಲಾಗಿ ಕುರೂಪ, ಬೆತ್ತಲೆ ಉಂಟಾಗುವುದು.


ಯೌವನಸ್ಥನೇ, ಯೌವನಪ್ರಾಯದಲ್ಲಿ ಆನಂದಿಸು, ಯೌವನದ ದಿನಗಳಲ್ಲಿ ಹೃದಯವು ನಿನ್ನನ್ನು ಹರ್ಷಗೊಳಿಸಲಿ. ಮನಸ್ಸಿಗೆ ತಕ್ಕಂತೆಯೂ, ಕಣ್ಣಿಗೆ ಸರಿಬೀಳುವ ಹಾಗೆಯೂ ನಡೆದುಕೋ. ಆದರೆ ಈ ಎಲ್ಲಾ ವಿಷಯಗಳಲ್ಲಿಯೂ ದೇವರು ನಿನ್ನನ್ನು ನ್ಯಾಯವಿಚಾರಣೆಗೆ ಗುರಿಮಾಡುವನೆಂದು ತಿಳಿದಿರು.


ನನ್ನ ಮಹತ್ಕಾರ್ಯಗಳನ್ನು ಮರೆಯದೆ, ನನ್ನಲ್ಲಿಯೇ ಭರವಸೆಯಿಟ್ಟು, ನನ್ನ ಆಜ್ಞೆಗಳನ್ನು ಕೈಗೊಳ್ಳುವರು” ಎಂಬುದೇ.


ಪರದೇಶಿಯನ್ನಾಗಲಿ, ಅನಾಥನನ್ನಾಗಲಿ ಅಥವಾ ವಿಧವೆಯನ್ನಾಗಲಿ ಹಿಂಸಿಸದೆ, ಈ ಸ್ಥಳದಲ್ಲಿ ನಿರ್ದೋಷಿಗಳ ರಕ್ತವನ್ನು ಸುರಿಸದೆ, ನಿಮಗೆ ಹಾನಿಕರವಾದ ಅನ್ಯದೇವತೆಗಳಲ್ಲಿ ಭಕ್ತಿ ಇಡದೆ ಇದ್ದರೆ,


ನಿಮ್ಮ ನಿವಾಸವು ಮೋಸದೊಳಗೆ ಇದೆ; ಅಯ್ಯೋ, ಅವರು ಮೋಸಗಾರರಾಗಿರುವುದರಿಂದ ನನ್ನನ್ನು ತಿಳಿಯರು ಎಂದು ಯೆಹೋವನು ನುಡಿಯುತ್ತಾನೆ.


ನನ್ನ ಮಾತುಗಳನ್ನು ಕೇಳದಿದ್ದ ತಮ್ಮ ಪೂರ್ವಿಕರ ದುಷ್ಕೃತ್ಯಗಳ ಕಡೆಗೆ ತಿರುಗಿಕೊಂಡು, ಅನ್ಯದೇವತೆಗಳನ್ನು ಹಿಂಬಾಲಿಸಿ ಪೂಜಿಸಿದ್ದಾರೆ. ಇಸ್ರಾಯೇಲ್ ವಂಶದವರೂ ಮತ್ತು ಯೆಹೂದ ವಂಶದವರೂ ನಾನು ಅವರ ಪೂರ್ವಿಕರ ಸಂಗಡ ಮಾಡಿಕೊಂಡ ಒಡಂಬಡಿಕೆಯನ್ನು ಮೀರಿದ್ದಾರೆ.


ಏಕೆಂದರೆ, ಇಗೋ, ನಾನು ನಿನ್ನನ್ನು ನಿನಗೂ ಮತ್ತು ನಿನ್ನ ಎಲ್ಲಾ ಸ್ನೇಹಿತರಿಗೂ ದಿಗಿಲಿಗಿ ಆಸ್ಪದನನ್ನಾಗಿ ಮಾಡುವೆನು; ಅವರು ತಮ್ಮ ಶತ್ರುಗಳ ಖಡ್ಗದಿಂದ ಬೀಳುವರು, ನೀನು ಅದನ್ನು ಕಣ್ಣಾರೆ ಕಾಣುವಿ. ನಾನು ಯೆಹೂದ್ಯರನ್ನೆಲ್ಲಾ ಬಾಬೆಲಿನ ಅರಸನ ಕೈಗೆ ಒಪ್ಪಿಸುವೆನು; ಅವನು ಅವರನ್ನು ಬಾಬಿಲೋನಿಗೆ ಸೆರೆಯಾಗಿ ಒಯ್ದು ಕತ್ತಿಯಿಂದ ಕಡಿಯುವನು.


ನಾನು ನೆಮ್ಮದಿಯಲ್ಲಿ ನಿನ್ನೊಡನೆ ಮಾತನಾಡಿದಾಗ “ನಾನು ಕೇಳುವುದಿಲ್ಲ” ಎಂದು ನೀನು ಹೇಳಿದಿ. ನನ್ನ ಮಾತನ್ನು ಕೇಳದಿರುವುದು ನಿನಗೆ ಬಾಲ್ಯದಿಂದಲೇ ಅಭ್ಯಾಸ.


ನನ್ನನ್ನು ಅಸಡ್ಡೆಮಾಡುವವರಿಗೆ, ‘ನಿಮಗೆ ಶುಭವಾಗುವುದು ಎಂಬುದಾಗಿ ಯೆಹೋವನು ನುಡಿದಿದ್ದಾನೆ’ ಎಂದು ಹೇಳುತ್ತಲೇ ಇದ್ದಾರೆ. ಸ್ವಂತ ಹೃದಯದ ಹಟದಂತೆ ನಡೆಯುವವರೆಲ್ಲರಿಗೂ, ‘ನಿಮಗೆ ಯಾವ ಕೇಡೂ ಸಂಭವಿಸದು’ ಎಂದು ನುಡಿಯುತ್ತಾರೆ.


ಇದಲ್ಲದೆ ನಾನು ನನ್ನ ಸೇವಕರಾದ ಪ್ರವಾದಿಗಳನ್ನೆಲ್ಲಾ ನಿಮ್ಮ ಬಳಿಗೆ ನಿತ್ಯವೂ ಕಳುಹಿಸುತ್ತಾ, ನೀವೆಲ್ಲರೂ ನಿಮ್ಮ ನಿಮ್ಮ ದುರ್ಮಾರ್ಗಗಳಿಂದ ಹಿಂದಿರುಗಿ ನಿಮ್ಮ ನಡತೆಗಳನ್ನು ಸರಿಪಡಿಸಿಕೊಳ್ಳಿರಿ, ಅನ್ಯದೇವತೆಗಳನ್ನು ಹಿಂಬಾಲಿಸಿ ಸೇವಿಸದಿರಿ; ಹೀಗೆ ಮಾಡಿದರೆ ನಾನು ನಿಮಗೂ, ನಿಮ್ಮ ಪೂರ್ವಿಕರಿಗೂ ದಯಪಾಲಿಸಿದ ದೇಶದಲ್ಲಿ ನೀವು ಸುಖವಾಸಿಗಳಾಗಿರುವಿರಿ ಎಂದು ಹೇಳಿಸಿದರೂ ನೀವು ನನ್ನ ಮಾತನ್ನು ಕೇಳಲಿಲ್ಲ, ಕಿವಿಗೊಡಲೂ ಇಲ್ಲ.


ಅವರು ಕಿವಿಗೊಟ್ಟು ಕೇಳಲಿಲ್ಲ, ಅನ್ಯದೇವತೆಗಳಿಗೆ ಧೂಪಹಾಕುವುದನ್ನು ನಿಲ್ಲಿಸಲಿಲ್ಲ, ತಮ್ಮ ದುರಾಚಾರವನ್ನು ಬಿಡಲಿಲ್ಲ.


“ಯೆಹೋವನ ಹೆಸರಿನಿಂದ ನೀನು ನಮಗೆ ನುಡಿದ ಮಾತುಗಳನ್ನು ಕೇಳುವುದಿಲ್ಲ.


ನಾನು ಸಾವಕಾಶ ಮಾಡದೆ ನಿಮಗೆ ನುಡಿದ ಮಾತುಗಳನ್ನು ನೀವು ಕೇಳದೆ, ನಿಮ್ಮನ್ನು ಕರೆದ ನನಗೆ ಉತ್ತರ ಕೊಡದೆ ಈ ಕೃತ್ಯಗಳನ್ನೆಲ್ಲಾ ನಡೆಸಿದಿರಿ.


ಇಸ್ರಾಯೇಲಿನ ದೇವರೂ ಸೇನಾಧೀಶ್ವರನೂ ಆದ ಯೆಹೋವನು, “ನಾನು ಇವರ ಕಣ್ಣೆದುರಿಗೇ ಇಟ್ಟಿರುವ ಧರ್ಮೋಪದೇಶವನ್ನು ಇವರು ಲಕ್ಷ್ಯಕ್ಕೆ ತಾರದೆ, ನನ್ನ ಮಾತನ್ನು ಕೇಳದೆ ಹೋದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು