Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 13:20 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಚೀಯೋನೇ, ಕಣ್ಣೆತ್ತು, ಉತ್ತರ ದಿಕ್ಕಿನಿಂದ ಬರುವವರನ್ನು ನೋಡು. ನಿನಗೆ ಒಪ್ಪಿಸಿದ ಹಿಂಡು, ನಿನ್ನ ಅಂದವಾದ ಹಿಂಡೂ ಎಲ್ಲಿ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 “ಜೆರುಸಲೇಮ್, ಕಣ್ಣೆತ್ತಿ ನೋಡು, ಉತ್ತರದಿಂದ ಬರುವವರನ್ನು ನೋಡು. ನಿನಗೆ ಒಪ್ಪಿಸಿದ ಹಿಂಡು, ಅಂದವಾದ ಆ ನಿನ್ನ ಹಿಂಡು ಎಲ್ಲಿ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 [ಚೀಯೋನೇ] ಕಣ್ಣೆತ್ತು, ಬಡಗಲಿಂದ ಬರುವವರನ್ನು ನೋಡು; ನಿನಗೆ ಒಪ್ಪಿಸಿದ ಹಿಂಡು, ನಿನ್ನ ಅಂದವಾದ ಹಿಂಡು ಎಲ್ಲಿ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಜೆರುಸಲೇಮೇ, ಮುಖವೆತ್ತಿ ನೋಡು. ಉತ್ತರ ದಿಕ್ಕಿನಿಂದ ಬರುವ ಶತ್ರುಗಳನ್ನು ನೋಡು. ನಿನ್ನ ಮಂದೆ ಎಲ್ಲಿದೆ? ದೇವರು ನಿನಗೆ ಆ ಸುಂದರವಾದ ಮಂದೆಯನ್ನು ದಯಪಾಲಿಸಿದನು. ನೀನು ಆ ಮಂದೆಯನ್ನು ನೋಡಿಕೊಳ್ಳಬೇಕಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಚೀಯೋನೇ, ಕಣ್ಣೆತ್ತು, ಉತ್ತರ ದಿಕ್ಕಿನಿಂದ ಬರುವವರನ್ನು ನೋಡು, ನಿನಗೆ ಒಪ್ಪಿಸಿದ ಹಿಂಡು, ನಿನ್ನ ಅಂದವಾದ ಹಿಂಡು ಎಲ್ಲಿ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 13:20
14 ತಿಳಿವುಗಳ ಹೋಲಿಕೆ  

“ಆಹಾ, ಉತ್ತರ ದಿಕ್ಕಿನಿಂದ ಜನಸಮೂಹ ಬರುತ್ತದೆ, ಮಹಾ ಜನಾಂಗವು ಎಬ್ಬಿಸಲ್ಪಟ್ಟು ಲೋಕದ ಕಟ್ಟಕಡೆಯಿಂದ ಹೊರಡುತ್ತದೆ.


ಇಗೋ, ನಾನು ಶಕ್ತಿಶಾಲಿಗಳೂ, ತೀಕ್ಷ್ಣಬುದ್ಧಿಯುಳ್ಳವರೂ ಆಗಿರುವ ಕಸ್ದೀಯ ಜನಾಂಗದವರನ್ನು ನಿಮ್ಮ ವಿರುದ್ಧ ಹುರಿದುಂಬಿಸಿ ಎಬ್ಬಿಸುತ್ತೇನೆ; ಆ ಜನರು ಭಯಂಕರರೂ, ಉಗ್ರರೂ ಆಗಿ ತಮ್ಮದಲ್ಲದ ಸಂಸ್ಥಾನವನ್ನು ವಶಮಾಡಿಕೊಳ್ಳುವರು ಮತ್ತು ಲೋಕದಲ್ಲೆಲ್ಲಾ ಸಂಚರಿಸುವರು.


ಇಸ್ರಾಯೇಲರ ದೇವರಾದ ಯೆಹೋವನು ತನ್ನ ಜನರೆಂಬ ಕುರಿಗಳನ್ನು ಮೇಯಿಸುವ ಕುರುಬರ ದ್ರೋಹವನ್ನು ಕಂಡು ಅವರನ್ನು ಕುರಿತು ಇಂತೆನ್ನುತ್ತಾನೆ, “ನೀವು ನನ್ನ ಮಂದೆಯನ್ನು ಚದರಿಸಿ ಅಟ್ಟಿಬಿಟ್ಟಿದ್ದೀರಿ, ವಿಚಾರಿಸಲೇ ಇಲ್ಲ. ಆಹಾ, ನಿಮ್ಮ ದುಷ್ಕೃತ್ಯಗಳ ನಿಮಿತ್ತ ನಾನು ನಿಮ್ಮನ್ನು ವಿಚಾರಿಸುವೆನು.


ಆಗ ಯೆಹೋವನು ನನಗೆ, “ಈ ದೇಶದ ನಿವಾಸಿಗಳೆಲ್ಲರ ಮೇಲೆ ಉತ್ತರ ದಿಕ್ಕಿನಿಂದ ಕೇಡು ಉಕ್ಕಿ ಬರುವುದು.


ನೀವು ಕೇಳದಿದ್ದರೆ ನನ್ನ ಆತ್ಮವು ಗುಟ್ಟಾದ ಸ್ಥಳದಲ್ಲಿ ನಿಮ್ಮ ಗರ್ವದ ನಿಮಿತ್ತ ಗೋಳಾಡುವುದು. ಯೆಹೋವನ ಮಂದೆಯು ಸೆರೆಯಾಗಿ ಹೋದುದರಿಂದ ಬಹಳವಾಗಿ ಅಳುವೆನು, ನನ್ನ ನೇತ್ರವು ಅಶ್ರುಧಾರೆಯನ್ನು ಸುರಿಸುವುದು.


ಇಗೋ, ಒಂದು ಸದ್ದು! ಆಹಾ, ಬರುತ್ತಿದೆ! ಯೆಹೂದದ ಪಟ್ಟಣಗಳನ್ನು ನಾಶಪಡಿಸಿ ನರಿಗಳ ಹಕ್ಕೆಯನ್ನಾಗಿ ಮಾಡುವುದಕ್ಕೆ ಉತ್ತರದೇಶದಿಂದ ಮಹಾಕಂಪನವು ಸಂಭವಿಸುತ್ತದೆ.


ಇಗೋ, ನಾನು ಉತ್ತರ ದಿಕ್ಕಿನ ರಾಜ್ಯಗಳ ಜನಾಂಗಗಳನ್ನೆಲ್ಲಾ ಕರೆಯುವೆನು; ಅವರು ಬಂದು ಯೆರೂಸಲೇಮಿನ ಊರ ಬಾಗಿಲುಗಳ ಎದುರಿನಲ್ಲಿಯೂ, ಅದರ ಎಲ್ಲಾ ಪೌಳಿಗೋಡೆಗಳ ಸುತ್ತಲೂ, ಯೆಹೂದದ ಸಕಲ ಪಟ್ಟಣಗಳ ಮುಂದೆಯೂ ತಮ್ಮ ತಮ್ಮ ನ್ಯಾಯಾಸನಗಳನ್ನು ಹಾಕಿಕೊಳ್ಳುವರು.


ನೆಮ್ಮದಿಯ ಗೋಮಾಳಗಳು ಯೆಹೋವನ ರೋಷಾಗ್ನಿಯಿಂದ ನಿಶ್ಯಬ್ದವಾಗಿವೆ.


ಪ್ರಜೆಗಳ ವೃದ್ಧಿ ರಾಜನ ಮಹಿಮೆ, ಪ್ರಜೆಗಳ ನಾಶ ಪ್ರಭುವಿಗೆ ಭಯ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು