Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 13:9 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 “ಇದು ಯೆಹೋವನಾದ ನನ್ನ ನುಡಿ, ಈ ನಡುಕಟ್ಟಿನಂತೆ ನಾನು ಯೆಹೂದದ ದೊಡ್ಡಸ್ತಿಕೆಯನ್ನೂ ಮತ್ತು ಯೆರೂಸಲೇಮಿನ ಬಲು ದೊಡ್ಡಸ್ತಿಕೆಯನ್ನೂ ಕೆಡಿಸಿಬಿಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 “ಇದು ಸರ್ವೇಶ್ವರನಾದ ನನ್ನ ನುಡಿ - ಈ ಪ್ರಕಾರವಾಗಿಯೇ ನಾನು ಜುದೇಯದ ದೊಡ್ಡಸ್ತಿಕೆಯನ್ನು ಹಾಗು ಜೆರುಸಲೇಮಿನ ಘನವಾದ ದೊಡ್ಡಸ್ತಿಕೆಯನ್ನು ತೆಗೆದುಬಿಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಇದು ಯೆಹೋವನಾದ ನನ್ನ ನುಡಿ - ಇದೇ ಪ್ರಕಾರವಾಗಿ ನಾನು ಯೆಹೂದದ ದೊಡ್ಡಸ್ತಿಕೆಯನ್ನೂ ಯೆರೂಸಲೇವಿುನ ಬಲು ದೊಡ್ಡಸ್ತಿಕೆಯನ್ನೂ ಕೆಡಿಸಿಬಿಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಯೆಹೋವನು ಹೀಗೆ ಹೇಳಿದನು, “ನಡುಪಟ್ಟಿಯು ಹಾಳಾಗಿ ನಿಷ್ಪ್ರಯೋಜಕವಾಗಿದೆ. ಅಂತೆಯೇ ನಾನು ಯೆಹೂದದ ಮತ್ತು ಜೆರುಸಲೇಮಿನ ಜಂಬದ ಜನರನ್ನು ಹಾಳುಮಾಡುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 “ಯೆಹೋವ ದೇವರು ಹೀಗೆ ಹೇಳುತ್ತಾರೆ: ‘ಈ ಪ್ರಕಾರ ನಾನು ಯೆಹೂದದ ಗರ್ವವನ್ನೂ, ಯೆರೂಸಲೇಮಿನ ಮಹಾ ಗರ್ವವನ್ನು ಕೆಡಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 13:9
19 ತಿಳಿವುಗಳ ಹೋಲಿಕೆ  

ನಿಮ್ಮ ಗರ್ವಕ್ಕೆ ಕಾರಣವಾದ ಬಲವನ್ನು ಮುರಿಯುವೆನು. ನಿಮ್ಮ ಮೇಲಿರುವ ಆಕಾಶವನ್ನು ಕಬ್ಬಿಣದಂತೆಯೂ ಹಾಗು ನೀವು ಸಾಗುವಳಿಮಾಡುವ ಭೂಮಿಯನ್ನು ತಾಮ್ರದಂತೆಯೂ ಮಾಡುವೆನು.


“ನೀನು ನನಗೆ ಮಾಡಿದ ನಾನಾ ದುಷ್ಕೃತ್ಯಗಳು ಮುಂದಿನ ಆ ಕಾಲದಲ್ಲಿ ನಿನಗೆ ನಾಚಿಕೆಗೆ ಈಡಾಗುವವು; ಆಗ ತಮ್ಮ ಅತಿಗರ್ವದಿಂದ ಮೆರೆಯುವವರನ್ನು ನಿನ್ನೊಳಗಿಂದ ತೊಲಗಿಸಿಬಿಡುವೆನು; ಅಂದಿನಿಂದ ನನ್ನ ಪವಿತ್ರಪರ್ವತದಲ್ಲಿ ಗರ್ವಪಡದೆ ಇರುವಿ.


ಗರ್ವದ ಸಕಲ ವೈಭವವನ್ನು ಹೊಲಸು ಮಾಡಬೇಕೆಂತಲೂ, ಭೂಮಿಯಲ್ಲಿ ಘನವುಳ್ಳವರೆಲ್ಲರನ್ನು ಅವಮಾನಪಡಿಸಬೇಕೆಂತಲೂ ಸೇನಾಧೀಶ್ವರನಾದ ಯೆಹೋವನೇ ಹೀಗೆ ಸಂಕಲ್ಪಿಸಿದ್ದಾನೆ.


ಗರ್ವದಿಂದ ಭಂಗ, ಉಬ್ಬಿನಿಂದ ದೊಬ್ಬು.


ಯೌವನಸ್ಥರೇ, ಅದೇ ರೀತಿಯಾಗಿ ಹಿರಿಯರಿಗೆ ಅಧೀನರಾಗಿರಿ. ನೀವೆಲ್ಲರೂ ದೀನಮನಸ್ಸೆಂಬ ವಸ್ತ್ರವನ್ನು ಧರಿಸಿಕೊಂಡು ಒಬ್ಬರಿಗೊಬ್ಬರು ಸೇವೆ ಮಾಡಿರಿ. ಏಕೆಂದರೆ “ದೇವರು ಅಹಂಕಾರಿಗಳನ್ನು ವಿರೋಧಿಸುತ್ತಾನೆ. ದೀನರಿಗಾದರೋ ಕೃಪೆಯನ್ನು ಅನುಗ್ರಹಿಸುತ್ತಾನೆ.”


ಆತನು ನಮಗೆ ಹೆಚ್ಚಾದ ಕೃಪೆಯನ್ನು ಕೊಡುತ್ತಾನೆ. ಆದುದರಿಂದ, “ದೇವರು ಅಹಂಕಾರಿಗಳಿಗೆ ಎದುರಾಳಿಯಾಗಿದ್ದಾನೆ, ದೀನರಿಗಾದರೋ ಕೃಪೆಯನ್ನು ಅನುಗ್ರಹಿಸುತ್ತಾನೆ” ಎಂದು ಧರ್ಮಶಾಸ್ತ್ರವು ಹೇಳುತ್ತದೆ.


ಇವನು ನೀತಿವಂತನೆಂದು ನಿರ್ಣಯಿಸಲ್ಪಟ್ಟವನಾಗಿ ತನ್ನ ಮನೆಗೆ ಹೋದನು. ಆ ಫರಿಸಾಯನು ಅಂಥವನಾಗಿ ಹೋಗಲಿಲ್ಲ ಎಂದು ನಿಮಗೆ ಹೇಳುತ್ತೇನೆ. ತನ್ನನ್ನು ಹೆಚ್ಚಿಸಿಕೊಳ್ಳುವ ಪ್ರತಿಯೊಬ್ಬನು ತಗ್ಗಿಸಲ್ಪಡುವನು, ತನ್ನನ್ನು ತಗ್ಗಿಸಿಕೊಳ್ಳುವವನು ಹೆಚ್ಚಿಸಲ್ಪಡುವನು” ಅಂದನು.


ಆಹಾ, ಯೆಹೋವನು ಯಾಕೋಬಿನ ಅತಿಶಯವನ್ನು, ಇಸ್ರಾಯೇಲಿನ ಅತಿಶಯದಂತೆ ಪುನರುಜ್ಜೀವನಗೋಳಿಸುವನು; ಕೊಳ್ಳೆಹೊಡೆಯುವವರು ಆ ಅತಿಶಯವನ್ನು ಸೂರೆಗೈದು ಅವುಗಳ ದ್ರಾಕ್ಷಾಲತೆಗಳನ್ನು ಹಾಳುಮಾಡಿದ್ದಾರೆ.


ಅರಾಮಿನ ಕುಮಾರ್ತೆಯರು ಮತ್ತು ಆಕೆಯ ಸುತ್ತಮುತ್ತಲಿನ ಸಮಸ್ತರು, ನಿನ್ನನ್ನು ಎಲ್ಲೆಲ್ಲೂ ಹೀನೈಸುತ್ತಿರುವ ಫಿಲಿಷ್ಟಿಯದ ಕುಮಾರ್ತೆಯರು, ಇವರೆಲ್ಲರ ದೂಷಣೆಗೆ ನೀನು ಗುರಿಯಾಗುವುದಕ್ಕೆ ಮೊದಲು,


ಅವರು ಸೊಕ್ಕೇರಿ ನನ್ನ ಕಣ್ಣೆದುರಿಗೆ ಅಸಹ್ಯಾಚಾರಗಳನ್ನು ನಡೆಸಿದರು; ನಾನು ಅದನ್ನು ನೋಡಿ ಅವರನ್ನು ನಿರ್ಮೂಲ ಮಾಡಿದೆನು.


ಮೋವಾಬ್ಯರಿಗೆ ಬಹು ಸೊಕ್ಕೇರಿದೆ ಎಂಬ ಅವರ ಹೆಮ್ಮೆಯ ಸುದ್ದಿಯೂ, ಅವರ ಡಂಭ, ಅಹಂಕಾರ, ಸ್ವಾಭಿಮಾನ ಮತ್ತು ಸ್ವಪ್ರತಿಷ್ಠೆ ಇವುಗಳ ಸಮಾಚಾರವೂ ನಮ್ಮ ಕಿವಿಗೆ ಬಿದ್ದಿವೆ.”


ಮೋವಾಬ್ಯರ ಅಹಂಕಾರವನ್ನು, ಗರ್ವವನ್ನು, ಕೊಚ್ಚಿಕೊಳ್ಳುವಿಕೆಯನ್ನು, ಕೋಪವನ್ನು ನಾವು ಕೇಳಿದ್ದೇವೆ. ಅವರು ಕೊಚ್ಚಿಕೊಳ್ಳುವುದೆಲ್ಲಾ ಬರೀ ವ್ಯರ್ಥವೇ.


ಆಗ ಯೆಹೋವನು ಈ ವಾಕ್ಯವನ್ನು ನನಗೆ ದಯಪಾಲಿಸಿದನು,


ಅದನ್ನು ಯೆರೂಸಲೇಮಿಗೂ, ಯೆಹೂದದ ಪಟ್ಟಣಗಳಿಗೂ, ಅರಸರಿಗೂ ಮತ್ತು ಪ್ರಧಾನರಿಗೂ ಕುಡಿಸಿದೆನು. ಇದರಿಂದ ಅವರು ಹಾಳಾಗಿ ಪರಿಹಾಸ್ಯಕ್ಕೂ ಮತ್ತು ಶಾಪಕ್ಕೂ ಗುರಿಯಾಗುವುದಕ್ಕೆ ಆಸ್ಪದವಾಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು