Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 14:10 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಯೆಹೋವನು ಈ ಜನರನ್ನು ಕುರಿತು, “ಇವರು ಪ್ರಯಾಣಿಕನ ಹಾಗೆ ಅಲೆಯುವುದಕ್ಕೆ ಇಷ್ಟಪಟ್ಟಿದ್ದಾರೆ, ಕಾಲನ್ನು ಹಿಂದೆಗೆಯಲಿಲ್ಲ. ಆದಕಾರಣ ಯೆಹೋವನಾದ ನಾನು ಇವರನ್ನು ಕಟಾಕ್ಷಿಸೆನು; ಈಗಲೇ ಇವರ ಅಪರಾಧವನ್ನು ಮನಸ್ಸಿಗೆ ತಂದುಕೊಂಡು ಇವರ ಪಾಪಗಳಿಗೆ ದಂಡನೆಯನ್ನು ವಿಧಿಸುವೆನು” ಎಂದು ಹೇಳಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಈ ಜನರನ್ನು ಕುರಿತು ಸರ್ವೇಶ್ವರ ನನಗೆ ಹೇಳಿದ ಮಾತುಗಳು : “ಇವರು ಅಲೆದಾಡಲು ಇಷ್ಟಪಡುವ ಜನರು. ತಮ್ಮ ಕಾಲಿನ ಮೇಲೆ ಹತೋಟಿಯಿಲ್ಲದವರು. ಆದಕಾರಣ ಸರ್ವೇಶ್ವರನಾದ ನಾನು ಇವರನ್ನು ಕರುಣೆಯಿಂದ ನೋಡುವುದಿಲ್ಲ. ಇದೀಗಲೆ ಇವರ ಅಪರಾಧಗಳನ್ನು ನೆನಪಿಗೆ ತಂದುಕೊಂಡು ಇವರ ಪಾಪಗಳಿಗೆ ದಂಡನೆಯನ್ನು ವಿಧಿಸುವೆನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಯೆಹೋವನು ಈ ಜನರನ್ನು ಕುರಿತು - ಇವರು [ನನ್ನನ್ನು ಪ್ರಯಾಣಿಕನು ಎಂದ] ಹಾಗೆಯೇ ಅಲೆಯುವದಕ್ಕೆ ಇಷ್ಟಪಟ್ಟಿದ್ದಾರೆ, ಕಾಲನ್ನು ಹಿಂದೆಗೆಯಲಿಲ್ಲ; ಆದಕಾರಣ ಯೆಹೋವನಾದ ನಾನು ಇವರನ್ನು ಕಟಾಕ್ಷಿಸೆನು; ಈಗಲೇ ಇವರ ಅಪರಾಧವನ್ನು ಮನಸ್ಸಿಗೆ ತಂದುಕೊಂಡು ಇವರ ಪಾಪಗಳಿಗೆ ದಂಡನೆಯನ್ನು ವಿಧಿಸುವೆನು ಎಂದು ಹೇಳಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಯೆಹೂದದ ಜನರ ಬಗ್ಗೆ ಯೆಹೋವನು ಹೀಗೆ ಹೇಳುತ್ತಾನೆ: “ಯೆಹೂದದ ಜನರು ನನ್ನಿಂದ ದೂರವಾಗಲು ಮನಃಪೂರ್ವಕವಾಗಿ ಇಚ್ಛಿಸುತ್ತಾರೆ. ಅವರು ಮೊದಲಿಂದಲೂ ಹೀಗೆ ಮಾಡುತ್ತಲೇ ಇದ್ದಾರೆ. ಆದ್ದರಿಂದ ಈಗ ಯೆಹೋವನು ಅವರನ್ನು ಸ್ವಿಕರಿಸುವದಿಲ್ಲ. ಆತನು ಅವರ ದುಷ್ಕೃತ್ಯಗಳನ್ನು ಜ್ಞಾಪಕಕ್ಕೆ ತಂದುಕೊಂಡು ಅವರ ಪಾಪಗಳಿಗಾಗಿ ಅವರನ್ನು ದಂಡಿಸುತ್ತಾನೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಯೆಹೋವ ದೇವರು ಈ ಜನರಿಗೆ ಹೀಗೆ ಹೇಳುತ್ತಾರೆ: “ಹೀಗೆ ತಿರುಗಾಡುವುದಕ್ಕೆ ಅವರು ಇಷ್ಟಪಡುತ್ತಾರೆ. ತಮ್ಮ ಕಾಲುಗಳನ್ನು ಹಿಂದೆಗೆಯುವುದಿಲ್ಲ. ಆದ್ದರಿಂದ ಯೆಹೋವ ದೇವರು ಅವರನ್ನು ಅಂಗೀಕರಿಸುವುದಿಲ್ಲ. ಈಗಲೇ ಅವರ ಅಕ್ರಮವನ್ನು ಜ್ಞಾಪಕಮಾಡಿಕೊಳ್ಳುವೆನು. ಅವರ ಪಾಪಗಳಿಗಾಗಿ ಅವರನ್ನು ದಂಡಿಸುವೆನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 14:10
25 ತಿಳಿವುಗಳ ಹೋಲಿಕೆ  

ಪೂರ್ವದಲ್ಲಿ ಗಿಬ್ಯದವರು ಕೆಡಿಸಿಕೊಂಡಂತೆ ಎಫ್ರಾಯೀಮ್ಯರು ತಮ್ಮನ್ನು ತೀರಾ ಕೆಡಿಸಿಕೊಂಡಿದ್ದಾರೆ. ದೇವರು ಅವರ ಅಧರ್ಮವನ್ನು ಜ್ಞಾಪಕಕ್ಕೆ ತಂದುಕೊಂಡು ಅವರ ಪಾಪಗಳಿಗೆ ಪ್ರತಿದಂಡನೆ ಮಾಡುವನು.


ಎಫ್ರಾಯೀಮ್ಯರು ಯಜ್ಞಪಶುಗಳನ್ನು ನನಗೆ ನೈವೇದ್ಯವಾಗಿ ವಧಿಸಿ ಮಾಂಸಭೋಜನ ಮಾಡುತ್ತಾರೆ; ಯೆಹೋವನು ಆ ಯಜ್ಞಗಳನ್ನು ಮೆಚ್ಚುವುದಿಲ್ಲ; ಅವರ ಅಧರ್ಮವನ್ನು ಜ್ಞಾಪಕಕ್ಕೆ ತಂದುಕೊಂಡು ಅವರ ಪಾಪಕ್ಕೆ ದಂಡನೆಮಾಡುವನು; ಅವರು ಐಗುಪ್ತಕ್ಕೆ ಹಿಂದಿರುಗಬೇಕಾಗುವುದು.


ನಿನ್ನ ವಾಕ್ಯವನ್ನೇ ಅನುಸರಿಸಬೇಕೆಂದು, ನನ್ನ ಕಾಲುಗಳನ್ನು ಯಾವ ಕೆಟ್ಟ ದಾರಿಗೂ ಹೋಗದಂತೆ ಕಾದಿದ್ದೇನೆ.


ನೀವು ನನಗೆ ಸರ್ವಾಂಗಹೋಮಗಳನ್ನು ಮತ್ತು ಧಾನ್ಯನೈವೇದ್ಯಗಳನ್ನು ಅರ್ಪಿಸಿದರೂ, ನಾನು ಅದನ್ನು ಸ್ವೀಕರಿಸುವುದಿಲ್ಲ, ಸಮಾಧಾನದ ಯಜ್ಞವಾಗಿ ನೀವು ಒಪ್ಪಿಸಿದ ಕೊಬ್ಬಿದ ಪಶುಗಳನ್ನು ನೋಡುವುದಿಲ್ಲ.


ನೀವು ಶೆಬದ ಧೂಪವನ್ನು ಮತ್ತು ದೂರ ದೇಶದ ಒಳ್ಳೆಯ ಬಜೆಯನ್ನು ನನಗೆ ಅರ್ಪಿಸುವುದರಿಂದ ಏನು ಪ್ರಯೋಜನ? ನಿಮ್ಮ ಹೋಮಗಳು ನನಗೆ ಮೆಚ್ಚಿಕೆಯಲ್ಲ, ನಿಮ್ಮ ಯಜ್ಞಗಳು ನನಗೆ ಇಷ್ಟವಿಲ್ಲ.


ನಾನು ಅವರ ದುಷ್ಕೃತ್ಯಗಳನ್ನು ಕರುಣೆಯಿಂದ ಕ್ಷಮಿಸುವೆನು ಮತ್ತು ಅವರ ಪಾಪಗಳನ್ನು ಎಂದಿಗೂ ನೆನಪಿಗೆ ತಂದುಕೊಳ್ಳುವುದಿಲ್ಲ’” ಎಂದು ಕರ್ತನು ನುಡಿಯುತ್ತಾನೆ.


ನೆರೆಹೊರೆಯವರೂ, ಅಣ್ಣತಮ್ಮಂದಿರೂ ಒಬ್ಬರಿಗೊಬ್ಬರು, ‘ಯೆಹೋವನ ಜ್ಞಾನವನ್ನು ಪಡೆಯಿರಿ’ ಎಂದು ಇನ್ನು ಮೇಲೆ ಬೋಧಿಸಬೇಕಾಗಿರುವುದಿಲ್ಲ; ಚಿಕ್ಕವರು ಮೊದಲುಗೊಂಡು ದೊಡ್ಡವರ ತನಕ ಎಲ್ಲರೂ ನನ್ನ ಜ್ಞಾನವನ್ನು ಪಡೆದಿರುವರು. ನಾನು ಅವರ ಅಪರಾಧವನ್ನು ಕ್ಷಮಿಸಿ ಅವರ ಪಾಪವನ್ನು ನನ್ನ ನೆನಪಿಗೆ ಎಂದಿಗೂ ತರುವುದಿಲ್ಲ. ಇದು ಯೆಹೋವನ ನುಡಿ” ಎಂಬುದೇ.


ನನ್ನ ಉಗ್ರಕೋಪವನ್ನು ತೀರಿಸೆನು, ಎಫ್ರಾಯೀಮನ್ನು ನಾಶಮಾಡಲು ತಿರಿಗಿಕೊಳ್ಳೆನು. ನಾನು ಮನುಷ್ಯನಲ್ಲ, ದೇವರೇ; ನಾನು ನಿಮ್ಮಲ್ಲಿ ನೆಲೆಯಾಗಿರುವ ಸದಮಲಸ್ವಾಮಿ, ನಾನು ನಿನ್ನ ಬಳಿಗೆ ರೋಷದಿಂದ ಬಾರೆನು.


ನನ್ನ ಕಡೆಯಿಂದ ತಿರಿಗಿಕೊಳ್ಳುವುದು ನನ್ನ ಜನರ ಗುಣವೇ; ಅವರನ್ನು ಮೇಲಕ್ಕೆ ಕರೆಯುವವರು ಇದ್ದರೂ, ಮೇಲಕ್ಕೆತ್ತುವವರು ಯಾರೂ ಇಲ್ಲ.


ಈ ಜನರು, ಯೆರೂಸಲೇಮ್ ಎಂದಿಗೂ ಹಿಂದಿರುಗದಂತೆ ಬಿಟ್ಟುಹೋದದ್ದೇಕೆ? ಮೋಸವನ್ನೇ ಪಟ್ಟಾಗಿ ಹಿಡಿದಿದ್ದಾರೆ, ತಿರುಗಿ ಬರುವುದಿಲ್ಲ.


ಹೊಸ ಹೊಸ ಮಾರ್ಗಗಳನ್ನು ಅನುಸರಿಸಲು ಏಕೆ ಅಷ್ಟು ಪ್ರಯತ್ನಿಸುತ್ತೀ? ಅಶ್ಶೂರದ ವಿಷಯವಾಗಿ ಹೇಗೆ ಆಶಾಭಂಗಪಟ್ಟೆಯೋ ಹಾಗೆಯೇ ಐಗುಪ್ತದ ವಿಷಯವಾಗಿಯೂ ಆಶಾಭಂಗಪಡುವಿ.


ಆಗ ಆ ಸ್ತ್ರೀಯು ಎಲೀಯನಿಗೆ, “ದೇವರ ಮನುಷ್ಯನೇ, ನನ್ನ ಗೊಡವೆ ನಿನಗೇಕೆ? ನೀನು ನನ್ನ ಪಾಪವನ್ನು ದೇವರ ನೆನಪಿಗೆ ತಂದು ನನ್ನ ಮಗನನ್ನು ಸಾಯಿಸುವುದಕ್ಕೆ ಬಂದಿರುವೆಯೋ?” ಎಂದಳು.


ಸೇನಾಧೀಶ್ವರನಾದ ಯೆಹೋವನು ನಿನಗೆ, ‘ಇಸ್ರಾಯೇಲರು ಐಗುಪ್ತದಿಂದ ಬರುತ್ತಿರುವಾಗ ದಾರಿಯಲ್ಲಿ ಅಮಾಲೇಕ್ಯರು ಅವರಿಗೆ ವಿರೋಧವಾಗಿ ನಿಂತು ತೊಂದರೆಪಡಿಸಿದ್ದನ್ನು ನೆನಪುಮಾಡಿಕೊಂಡು ನಾನು ಅವರಿಗೆ ಮುಯ್ಯಿತೀರಿಸುವೆನು.


ಇದೊಂದನ್ನು ಮಾಡು, ನೀನು ನೋಡಿದ ಕಡೆಯೆಲ್ಲಾ ತಿರುಗುತ್ತಾ, ಸೊಂಪಾಗಿ ಬೆಳೆದಿರುವ ಪ್ರತಿಯೊಂದು ಮರದ ಕೆಳಗೆ ಅನ್ಯರನ್ನು ಸೇರಿ, ನನ್ನ ಮಾತನ್ನು ಕೇಳದೆ, ನಿನ್ನ ದೇವರಾದ ಯೆಹೋವನೆಂಬ ನನಗೆ ದ್ರೋಹ ಮಾಡಿದ್ದಿ ಎಂಬುವುದನ್ನು ಒಪ್ಪಿಕೋ’ ಇದೇ ಯೆಹೋವನ ನುಡಿ.


ಐಗುಪ್ತವು ಇನ್ನು ಇಸ್ರಾಯೇಲ್ ವಂಶದವರ ಭರವಸೆಯಾಗದೆ, ಅದರ ಕಡೆಗೆ ಕಣ್ಣೆತ್ತುವ ದೇವದ್ರೋಹದ ನೆನಪು ಇಸ್ರಾಯೇಲರಲ್ಲಿ ಐಗುಪ್ತದಿಂದ ಇನ್ನು ಹುಟ್ಟುವುದಿಲ್ಲ. ನಾನೇ ಯೆಹೋವನು’” ಎಂದು ಅವರಿಗೆ ತಿಳಿಯುವುದು.


ತಮ್ಮ ದುರ್ಮಾರ್ಗವೆಲ್ಲಾ ಯೆಹೋವನ ಜ್ಞಾಪಕದಲ್ಲಿರುತ್ತದೆ ಎಂದು ಅವರು ಮನದಟ್ಟು ಮಾಡಿಕೊಳ್ಳುವುದಿಲ್ಲ; ಅವರ ದುಷ್ಕೃತ್ಯಗಳು ಈಗ ಅವರನ್ನು ಮುತ್ತಿಕೊಂಡಿವೆ, ನನ್ನ ಕಣ್ಣೆದುರಿಗಿವೆ.


ಅವರು ನನ್ನಿಂದ ಅಗಲಿ ಹೋಗಿದ್ದಾರೆ, ಹಾಳಾಗಲಿ! ನನಗೆ ದ್ರೋಹಮಾಡಿದ್ದಾರೆ, ನಾಶವಾಗಲಿ! ನಾನು ಅವರನ್ನು ಉದ್ಧರಿಸಬೇಕೆಂದು ಇರುವಾಗಲೂ ನನ್ನ ವಿಷಯವಾಗಿ ಸುಳ್ಳಾಡಿದ್ದಾರೆ, ಅವರನ್ನು ಹೇಗೆ ಉದ್ಧರಿಸಲಿ!


ಭೂಮಿಯ ಸಕಲ ಕುಲಗಳೊಳಗೆ ನಿಮ್ಮನ್ನು ಮಾತ್ರ ನನ್ನವರೆಂದು ಆರಿಸಿಕೊಂಡಿದ್ದೇನೆ. ಆದಕಾರಣ ನಿಮ್ಮ ಎಲ್ಲಾ ಪಾಪಗಳ ಫಲವನ್ನು ನೀವು ಅನುಭವಿಸುವಂತೆ ಮಾಡುವೆನು.


ನೀನು ಇಲ್ಲಿಂದ ಹೊರಟು ನಾನು ನಿನಗೆ ಹೇಳಿದ ದೇಶಕ್ಕೆ ಈ ಜನರನ್ನು ನಡೆಸಿಕೊಂಡು ಹೋಗು. ನೋಡು, ನನ್ನ ದೂತನು ನಿನ್ನ ಮುಂದೆ ನಡೆದು ಮುನ್ನಡೆಸುವನು, ಆದರೂ ನನ್ನ ನ್ಯಾಯತೀರ್ಪಿನ ದಿನದಲ್ಲಿ ನಾನು ಅವರ ಪಾಪಕ್ಕೆ ತಕ್ಕಂತೆ ಅವರನ್ನು ದಂಡಿಸುವೆನು.”


ನಾನು ನಲ್ವತ್ತು ವರ್ಷ ಆ ಸಂತತಿಯವರ ವಿಷಯದಲ್ಲಿ ಬೇಸರಗೊಂಡೆನು; “ಈ ಜನರು ಹೃದಯದಲ್ಲಿ ತಪ್ಪಿಹೋಗುವವರು, ನನ್ನ ಆಜ್ಞೆಗಳಿಗೆ ವಿಧೇಯರಾಗದವರು” ಎಂದು ಹೇಳಿದೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು