Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 14:16 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಮತ್ತು ಇವರ ಪ್ರವಾದನೆಯನ್ನು ಕೇಳುವ ಜನರು ಕ್ಷಾಮ ಮತ್ತು ಖಡ್ಗಗಳ ದೆಸೆಯಿಂದ ಯೆರೂಸಲೇಮಿನ ಬೀದಿಗಳಲ್ಲಿ ಬಿಸಾಡಲ್ಪಡುವರು; ಅವರನ್ನೂ ಅವರ ಹೆಂಡತಿ ಮತ್ತು ಮಕ್ಕಳನ್ನೂ ಹೂಣಿಡುವುದಕ್ಕೆ ಯಾರೂ ಇರುವುದಿಲ್ಲ; ನಾನು ಅವರ ದುಷ್ಟತನವನ್ನೇ ಅವರ ಮೇಲೆ ಹೊಯ್ದುಬಿಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಅವರ ಪ್ರವಾದನೆಗೆ ಕಿವಿಗೊಡುವ ಜನರು ಕೂಡ ಕ್ಷಾಮಖಡ್ಗಗಳಿಗೆ ತುತ್ತಾಗುವರು. ಜೆರುಸಲೇಮಿನ ಬೀದಿಗಳಲ್ಲಿ ಬಿಸಾಡಲ್ಪಡುವರು. ಅವರನ್ನೂ ಅವರ ಮಡದಿ ಮಕ್ಕಳನ್ನೂ ಹೂಣಲು ಸಹ ಯಾರೂ ಇರುವುದಿಲ್ಲ. ಅವರ ದುಷ್ಟತನವನ್ನು ಅವರ ಮೇಲೆಯೆ ಸುರಿದುಬಿಡುವೆನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಮತ್ತು ಇವರ ಪ್ರವಾದನೆಯನ್ನು ಕೇಳುವ ಜನರು ಕ್ಷಾಮಖಡ್ಗಗಳ ದೆಸೆಯಿಂದ ಯೆರೂಸಲೇವಿುನ ಬೀದಿಗಳಲ್ಲಿ ಬಿಸಾಡಲ್ಪಡುವರು; ಅವರನ್ನೂ ಅವರ ಹೆಂಡರುಮಕ್ಕಳನ್ನೂ ಹೂಣಿಡುವದಕ್ಕೆ ಯಾರೂ ಇರುವದಿಲ್ಲ; ನಾನು ಅವರ ದುಷ್ಟತನವನ್ನೇ ಅವರ ಮೇಲೆ ಹೊಯ್ದುಬಿಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಯಾರಿಗೆ ಪ್ರವಾದಿಗಳು ಬೋಧನೆ ಮಾಡಿದ್ದರೋ ಅವರನ್ನು ಬೀದಿಗಳಲ್ಲಿ ಎಸೆಯಲಾಗುವದು. ಆ ಜನರು ಹಸಿವಿನಿಂದ ಮತ್ತು ಶತ್ರುಗಳ ಖಡ್ಗಗಳಿಂದ ಮಡಿಯುವರು. ಆ ಜನರನ್ನೂ ಅವರ ಹೆಂಡತಿಯರನ್ನೂ ಮಕ್ಕಳನ್ನೂ ಹೂಣಿಡುವದಕ್ಕೆ ಯಾರೂ ಇರುವದಿಲ್ಲ. ನಾನು ಅವರನ್ನು ದಂಡಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಅವರು ಪ್ರವಾದಿಸುವ ಜನರು ಕ್ಷಾಮದ ಮತ್ತು ಖಡ್ಗದ ನಿಮಿತ್ತ ಯೆರೂಸಲೇಮಿನ ಬೀದಿಪಾಲಾಗುವರು. ಅವರನ್ನೂ, ಅವರ ಹೆಂಡತಿಯರನ್ನೂ, ಅವರ ಪುತ್ರಪುತ್ರಿಯರನ್ನೂ ಹೂಳಿಡುವುದಕ್ಕೆ ಯಾರೂ ಇರುವುದಿಲ್ಲ. ಏಕೆಂದರೆ ಅವರಿಗೆ ಅರ್ಹವಾದ ಆಪತ್ತನ್ನು ನಾನು ಅವರ ಮೇಲೆ ಸುರಿಯುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 14:16
23 ತಿಳಿವುಗಳ ಹೋಲಿಕೆ  

ಈ ಜನರ ಹೆಣಗಳು ಆಕಾಶದ ಪಕ್ಷಿಗಳಿಗೂ ಹಾಗು ಭೂಜಂತುಗಳಿಗೂ ಆಹಾರವಾಗುವವು; ಅವುಗಳನ್ನು ಬೆದರಿಸುವವರು ಯಾರೂ ಇರುವುದಿಲ್ಲ.


ಆದುದರಿಂದ ಅವರು ತಮ್ಮ ನಡತೆಯ ಫಲವನ್ನು ಅನುಭವಿಸಿ, ಸ್ವಂತ ಕುಯುಕ್ತಿಗಳನ್ನೇ ಹೊಟ್ಟೆತುಂಬಾ ಉಣ್ಣಬೇಕಾಗುವುದು.


ಆದಕಾರಣ ಅವರ ಮಕ್ಕಳನ್ನು ಕ್ಷಾಮಕ್ಕೆ ಗುರಿಮಾಡಿ, ಕತ್ತಿಯ ಬಾಯಿಗೆ ಒಪ್ಪಿಸು; ಅವರ ಹೆಂಡತಿಯರು ಮಕ್ಕಳ್ಳಿಲ್ಲದವರಾಗಿಯೂ, ವಿಧವೆಯರಾಗಿಯೂ ಇರಲಿ; ಮೃತ್ಯುವು ಅವರ ಗಂಡಂದಿರನ್ನು ಸಂಹರಿಸಲಿ. ಯುದ್ಧದಲ್ಲಿ ಖಡ್ಗವು ಅವರ ಯುವಕರನ್ನು ವಧಿಸಲಿ.


ಅವರು ಘೋರವಾದ ಮರಣಕ್ಕೆ ಗುರಿಯಾಗುವರು, ಅವರಿಗಾಗಿ ಯಾರೂ ಗೋಳಾಡುವುದಿಲ್ಲ, ಅವರನ್ನು ಯಾರೂ ಹೂಣಿಡುವುದಿಲ್ಲ; ಅವರು ಭೂಮಿಯ ಮೇಲೆ ಗೊಬ್ಬರವಾಗುವರು. ಖಡ್ಗವೂ, ಕ್ಷಾಮವೂ ಅವರನ್ನು ನಿರ್ಮೂಲ ಮಾಡುವವು; ಅವರ ಹೆಣಗಳು ಆಕಾಶದ ಪಕ್ಷಿಗಳಿಗೂ ಮತ್ತು ಭೂಜಂತುಗಳಿಗೂ ಆಹಾರವಾಗುವವು” ಎಂಬುದೇ.


ಆಗ ಆಲಯದೊಳಗಿಂದ ಬಂದ ಮಹಾಧ್ವನಿಯನ್ನು ನಾನು ಕೇಳಿದೆನು. ಅದು ಆ ಏಳು ಮಂದಿ ದೇವದೂತರಿಗೆ, “ನೀವು ಹೋಗಿ ಆ ಏಳು ಬಟ್ಟಲುಗಳಲ್ಲಿರುವ ದೇವರ ಕೋಪವನ್ನು ಭೂಮಿಯ ಮೇಲೆ ಸುರಿಯಿರಿ” ಎಂದು ಹೇಳಿತು.


ಅವರನ್ನು ಬಿಡಿರಿ, ಅವರು ಕುರುಡರಿಗೆ ದಾರಿ ತೋರಿಸುವವರು ಕುರುಡರ ಹಾಗಿದ್ದಾರೆ. ಕುರುಡನು ಕುರುಡನಿಗೆ ದಾರಿ ತೋರಿಸಿದರೆ ಅವರಿಬ್ಬರೂ ಕುಣಿಯೊಳಗೆ ಬೀಳುವರು” ಅಂದನು.


“ಈ ಜನರ ಹೆಣಗಳು ನೆಲದ ಮೇಲೆ ಬಿದ್ದು ಗೊಬ್ಬರವಾಗುವುದು; ಅವು ಹೊಲ ಕೊಯ್ಯುವವನ ಹಿಂದೆ ಯಾರೂ ಕೂಡಿಸದೆ ಬಿದ್ದಿರುವ ಸಿವುಡಿನಂತೆ ಇರುವವು, ಯೆಹೋವನ ಈ ಮಾತನ್ನು ಸಾರು” ಎಂದು ನನಗೆ ಅಪ್ಪಣೆಯಾಯಿತು.


ಪ್ರವಾದಿಗಳು ಸುಳ್ಳಾಗಿ ಪ್ರವಾದಿಸುತ್ತಾರೆ, ಯಾಜಕರು ಅವರಿಂದ ಅಧಿಕಾರ ಹೊಂದಿ ದೊರೆತನ ಮಾಡುತ್ತಾರೆ. ನನ್ನ ಜನರು ಇದನ್ನೇ ಪ್ರೀತಿಸುತ್ತಾರೆ; ಕಟ್ಟಕಡೆಗೆ ನೀವು ಏನು ಮಾಡುವಿರಿ?


ನಿನ್ನ ನಡತೆಯೂ ನಿನ್ನ ಕೃತ್ಯಗಳೂ ಈ ಕಷ್ಟವನ್ನು ನಿನಗೆ ಒದಗಿಸಿವೆ, ಇದು ನಿನ್ನ ದುರ್ನೀತಿಯ ಫಲ, ಇದು ವಿಷವೇ; ಹೃದಯದವರೆಗೂ ಏರುತ್ತದೆ.


ಈ ಜನರನ್ನು ನಡೆಸುವವರು ದಾರಿ ತಪ್ಪಿಸುವವರಾಗಿದ್ದಾರೆ. ಅವರಿಂದ ನಡೆಸಲ್ಪಟ್ಟವರು ನಾಶವಾಗಿದ್ದಾರೆ.


ನಿನ್ನ ಮಕ್ಕಳು ಪ್ರಜ್ಞೆತಪ್ಪಿದವರಾಗಿ ಬಲೆಗೆ ಸಿಕ್ಕಿದ ಜಿಂಕೆಗಳಂತೆ ಬೀದಿಗಳಲ್ಲಿ, ಚೌಕದಲ್ಲಿ ಬಿದ್ದಿದ್ದಾರೆ. ಯೆಹೋವನ ರೋಷವನ್ನೂ, ನಿನ್ನ ದೇವರ ಗದರಿಕೆಯನ್ನೂ ಸಾಕಷ್ಟು ಅನುಭವಿಸಿದ್ದಾರೆ.


ಯೆಹೋವನು ಹೀಗೆನ್ನುತ್ತಾನೆ, “ಆ ಕಾಲದಲ್ಲಿ ಯೆಹೂದದ ಅರಸರು, ಅಧಿಪತಿಗಳು, ಯಾಜಕರು, ಪ್ರವಾದಿಗಳು, ಯೆರೂಸಲೇಮಿನ ನಿವಾಸಿಗಳು, ಇವರೆಲ್ಲರ ಎಲುಬುಗಳನ್ನು ಸಮಾಧಿಗಳೊಳಗಿಂದ ತೆಗೆದುಬಿಡುವರು.


ಅನಂತರ ಅವರು ಅದನ್ನು ತಾವು ಪ್ರೀತಿಸಿ, ಸೇವಿಸಿ, ಹಿಂಬಾಲಿಸಿ, ಆಶ್ರಯಿಸಿ ಪೂಜಿಸಿದ ಸೂರ್ಯ, ಚಂದ್ರ ತಾರಾಗಣಗಳ ಎದುರಿಗೆ ಹರಡಿಬಿಡುವರು. ಅವುಗಳನ್ನು ಯಾರೂ ಕೂಡಿಸಿ ಹೂಣಿಡುವುದಿಲ್ಲ; ಅವು ಭೂಮಿಯ ಮೇಲೆ ಗೊಬ್ಬರವಾಗುವವು.


ಯೆಹೋವನು ಇಂತೆನ್ನುತ್ತಾನೆ, ‘ನಾನು ಅವರನ್ನು ಕಳುಹಿಸಲಿಲ್ಲ; ನನ್ನ ಹೆಸರೆತ್ತಿ ಸುಳ್ಳನ್ನು ಸಾರುತ್ತಾರೆ. ನೀವೂ, ನಿಮಗೆ ಪ್ರವಾದಿಸುವ ಪ್ರವಾದಿಗಳೂ ನನ್ನಿಂದ ಅಟ್ಟಲ್ಪಟ್ಟು ಅಳಿದುಹೋಗುವುದಕ್ಕೆ ಅವರ ದುರ್ಬೋಧನೆಯು ಆಸ್ಪದವಾಗುವುದು.’”


ತರುವಾಯ ಅವರು ದೇಶವನ್ನು ಶುದ್ಧಿ ಮಾಡುವುದಕ್ಕೆ ತಕ್ಕವರನ್ನು ಆರಿಸಿ, ದೇಶದಲ್ಲಿ ತಿರುಗುತ್ತಾ ನೆಲದ ಮೇಲೆ ಉಳಿದಿರುವವರನ್ನು ಸಮಾಧಿ ಮಾಡುವುದಕ್ಕೆ ಯಾವಾಗಲೂ ದೇಶವನ್ನು ಹಾದುಹೋಗುವ ಮನುಷ್ಯರನ್ನೇ ನೇಮಿಸುವರು ಮತ್ತು ಏಳು ತಿಂಗಳಾದ ಮೇಲೆ ಇವರು ಈ ಹುಡುಕುವ ಕೆಲಸದಲ್ಲಿ ತೊಡಗುವರು.


‘ನಿನ್ನ ಹೆಂಡತಿಯು ಈ ಪಟ್ಟಣದಲ್ಲಿ ಸೂಳೆಯಾಗುವಳು; ನಿನ್ನ ಗಂಡು ಮತ್ತು ಹೆಣ್ಣು ಮಕ್ಕಳು ಖಡ್ಗದಿಂದ ಹತರಾಗುವರು; ನಿನ್ನ ದೇಶವನ್ನು ಶತ್ರುಗಳು ನೂಲಿನಿಂದ ವಿಭಾಗಿಸಿಕೊಳ್ಳುವರು; ನೀನಂತೂ ಅಜ್ಞಾತವಾದ ದೇಶದಲ್ಲಿ ಸಾಯುವಿ, ಇಸ್ರಾಯೇಲರು ಸ್ವದೇಶದಿಂದ ಸೆರೆಯಾಗಿ ಒಯ್ಯಲ್ಪಡುವುದು ಖಂಡಿತ’” ಎಂಬುದಾಗಿ ಯೆಹೋವನು ಹೇಳಿದನು.


ಸ್ತ್ರೀಯರೇ, ಯೆಹೋವನ ನುಡಿಯನ್ನು ಕೇಳಿ ಆತನ ಬಾಯಿಂದ ಹೊರಟ ಮಾತಿಗೆ ಕಿವಿದೆರೆಯಿರಿ. ನಿಮ್ಮ ಹೆಣ್ಣುಮಕ್ಕಳಿಗೂ ಗೋಳಾಡುವುದನ್ನು ಕಲಿಸಿರಿ, ಪ್ರತಿಯೊಬ್ಬಳು ತನ್ನ ನೆರೆಯವಳಿಗೂ ಶೋಕಗೀತವನ್ನು ಅಭ್ಯಾಸ ಮಾಡಿಸಲಿ;


ಪಷ್ಹೂರನೇ, ನೀನೋ ನಿನ್ನ ಮನೆಯವರೆಲ್ಲರೊಡನೆ ಸೆರೆಗೆ ಹೋಗುವಿ. ನೀನೂ ಮತ್ತು ನಿನ್ನ ಮಿಥ್ಯಾ ಪ್ರವಾದನೆಯನ್ನು ಕೇಳಿದ ನಿನ್ನ ಸಕಲ ಸ್ನೇಹಿತರೂ ಬಾಬಿಲೋನಿಗೆ ಸೇರಿ ಅಲ್ಲೇ ಸತ್ತು ಮಣ್ಣಾಗುವಿರಿ” ಎಂದು ನುಡಿದಿದ್ದಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು