Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 14:20 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಯೆಹೋವನೇ, ನಮ್ಮ ದುಷ್ಟತನವನ್ನೂ ಒಪ್ಪಿಕೊಳ್ಳುತ್ತೇವೆ, ನಮ್ಮ ಪೂರ್ವಿಕರ ದುರಾಚಾರವನ್ನೂ ತಿಳಿದುಕೊಂಡಿದ್ದೇವೆ; ನಾವು ನಿನಗೇ ಪಾಪಮಾಡಿದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಹೇ ಸರ್ವೇಶ್ವರಾ, ಒಪ್ಪಿಕೊಂಡಿದ್ದೇವೆ ನಮ್ಮ ದುಷ್ಟತನವನ್ನು ನಮ್ಮ ಪೂರ್ವಜರು ಎಸಗಿದ ದುರಾಚಾರವನ್ನು ನಾವು ಮಾಡಿದ ಪಾಪ ನಿಮಗೆ ವಿರುದ್ಧವೆಂಬುದನ್ನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಯೆಹೋವನೇ, ನಮ್ಮ ದುಷ್ಟತನವನ್ನೂ ನಮ್ಮ ಪಿತೃಗಳ ದುರಾಚಾರವನ್ನೂ ತಿಳಿದುಕೊಂಡಿದ್ದೇವೆ; ನಿನಗೇ ಪಾಪಮಾಡಿದ್ದೇವಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಯೆಹೋವನೇ, ನಾವು ಬಹಳ ಕೆಟ್ಟ ಜನರೆಂಬುದು ನಮಗೆ ಗೊತ್ತು. ನಮ್ಮ ಪೂರ್ವಿಕರು ದುಷ್ಕೃತ್ಯಗಳನ್ನು ಮಾಡಿದರೆಂಬುದನ್ನು ನಾವು ಬಲ್ಲೆವು. ಹೌದು, ನಾವು ನಿನ್ನ ವಿರುದ್ಧ ಪಾಪಮಾಡಿದೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಯೆಹೋವ ದೇವರೇ, ನಮ್ಮ ದುಷ್ಟತನವನ್ನೂ, ನಮ್ಮ ಪಿತೃಗಳ ದುರಾಚಾರವನ್ನೂ ತಿಳಿದುಕೊಂಡಿದ್ದೇವೆ, ನಿಮಗೆ ವಿರುದ್ಧವಾಗಿ ಪಾಪಮಾಡಿದ್ದೇವಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 14:20
21 ತಿಳಿವುಗಳ ಹೋಲಿಕೆ  

ನಾವೇ ತಂದುಕೊಂಡ ಅವಮಾನದಲ್ಲಿ ಬಿದ್ದಿರೋಣ, ನಮ್ಮ ನಾಚಿಕೆಯು ನಮ್ಮನ್ನು ಮುಚ್ಚಿಬಿಡಲಿ. ನಾವು ಮತ್ತು ನಮ್ಮ ಪೂರ್ವಿಕರೂ ಬಾಲ್ಯದಿಂದ ಇಂದಿನವರೆಗೂ ನಮ್ಮ ದೇವರಾದ ಯೆಹೋವನಿಗೆ ಪಾಪಮಾಡುತ್ತಾ ಬಂದಿದ್ದೇವಷ್ಟೆ. ನಮ್ಮ ದೇವರಾದ ಯೆಹೋವನ ಮಾತನ್ನು ನಾವು ಕೇಳಲೇ ಇಲ್ಲ” ಎಂದು ಮೊರೆಯಿಡುತ್ತಾರೆ.


ಹೀಗಿರುವಲ್ಲಿ ಯೆಹೋವನ ಸನ್ನಿಧಿಯಲ್ಲಿ ನನ್ನ ದ್ರೋಹವನ್ನು ಒಪ್ಪಿಕೊಳ್ಳುವೆನು ಅಂದುಕೊಂಡು ನನ್ನ ಪಾಪವನ್ನು ಮರೆಮಾಡದೆ ನಿನಗೆ ನನ್ನ ದೋಷವನ್ನು ತಿಳಿಸಿದೆನು. ನೀನು ನನ್ನ ಪಾಪಗಳ ಅಪರಾಧವನ್ನು ಪರಿಹರಿಸಿಬಿಟ್ಟಿ. ಸೆಲಾ


ಇದೊಂದನ್ನು ಮಾಡು, ನೀನು ನೋಡಿದ ಕಡೆಯೆಲ್ಲಾ ತಿರುಗುತ್ತಾ, ಸೊಂಪಾಗಿ ಬೆಳೆದಿರುವ ಪ್ರತಿಯೊಂದು ಮರದ ಕೆಳಗೆ ಅನ್ಯರನ್ನು ಸೇರಿ, ನನ್ನ ಮಾತನ್ನು ಕೇಳದೆ, ನಿನ್ನ ದೇವರಾದ ಯೆಹೋವನೆಂಬ ನನಗೆ ದ್ರೋಹ ಮಾಡಿದ್ದಿ ಎಂಬುವುದನ್ನು ಒಪ್ಪಿಕೋ’ ಇದೇ ಯೆಹೋವನ ನುಡಿ.


ಅವನು ಮನುಷ್ಯರ ಮುಂದೆ ನಿಂತು, ‘ನಾನು ಪಾಪ ಮಾಡಿ ನ್ಯಾಯವನ್ನು ಕೆಡಿಸಿದ್ದರೂ, ಆತನು ಮುಯ್ಯಿತೀರಿಸಲಿಲ್ಲ.


ಇಸ್ರಾಯೇಲ್ ಸಂತಾನದವರು ಎಲ್ಲಾ ಅನ್ಯಕುಲದವರಿಂದ ತಮ್ಮನ್ನು ಬೇರ್ಪಡಿಸಿಕೊಂಡು, ಎದ್ದು ನಿಂತುಕೊಂಡು ತಮ್ಮ ಪಾಪಗಳನ್ನೂ, ತಮ್ಮ ಪೂರ್ವಿಕರ ಪಾಪಗಳನ್ನೂ ಆತನಿಗೆ ಅರಿಕೆಮಾಡಿದರು.


ಜನಗಣತಿ ಮಾಡಿಸಿದ ನಂತರ ದಾವೀದನಿಗೆ ಮನಸ್ಸಾಕ್ಷಿಯು ಚುಚ್ಚತೊಡಗಿತು. ಆದುದರಿಂದ ಅವನು ಯೆಹೋವನನ್ನು, “ಯೆಹೋವನೇ, ನಾನು ಬುದ್ಧಿಹೀನಕಾರ್ಯವನ್ನು ಮಾಡಿ ಪಾಪಿಯಾದೆನು. ದಯವಿಟ್ಟು ನಿನ್ನ ಸೇವಕನ ಅಪರಾಧವನ್ನು ಕ್ಷಮಿಸು” ಎಂದು ಪ್ರಾರ್ಥಿಸಿದನು.


ಆಗ ದಾವೀದನು ನಾತಾನನಿಗೆ, “ನಾನು ಯೆಹೋವನಿಗೆ ವಿರುದ್ಧವಾಗಿ ಪಾಪ ಮಾಡಿದ್ದೇನೆ” ಎಂದು ಹೇಳಿದನು. ನಾತಾನನು ಅವನಿಗೆ “ಯೆಹೋವನು ನಿನ್ನ ಪಾಪವನ್ನು ಕ್ಷಮಿಸಿದ್ದಾನೆ, ನೀನು ಸಾಯುವುದಿಲ್ಲ.


ಆ ಕಾಲದಲ್ಲಿ ಜನರು, “ಸುಮ್ಮನೆ ಕುಳಿತಿರುವುದೇಕೆ? ಕೂಡಿಕೊಳ್ಳಿರಿ, ಕೋಟೆಕೊತ್ತಲಗಳ ಪಟ್ಟಣಗಳಲ್ಲಿ ಸೇರಿ ಅಲ್ಲೇ ನಾಶವಾಗೋಣ. ನಾವು ನಮ್ಮ ದೇವರಾದ ಯೆಹೋವನಿಗೆ ಪಾಪಮಾಡಿದ್ದರಿಂದ ಆತನು ನಮ್ಮನ್ನು ನಾಶನಕ್ಕೆ ಗುರಿಮಾಡಿ ಕಹಿಯಾದ ನೀರನ್ನು ಕುಡಿಸಿದ್ದಾನಷ್ಟೆ.


ಯೆಹೋವನೇ, ನಮ್ಮ ಅಪರಾಧಗಳು ನಮಗೆ ವಿರುದ್ಧವಾಗಿ ಸಾಕ್ಷಿಕೊಟ್ಟರೂ, ನಿನ್ನ ಹೆಸರಿನ ನಿಮಿತ್ತ ಕಾರ್ಯವನ್ನು ಸಾಧಿಸು. ನಮ್ಮ ದ್ರೋಹಗಳು ಬಹಳ, ನಿನ್ನ ವಿರುದ್ಧವಾಗಿ ಪಾಪವನ್ನು ಮಾಡಿದ್ದೇವೆ.


ಯೆಹೋವನೇ, ಕಟಾಕ್ಷಿಸು; ನಾನು ಇಕ್ಕಟ್ಟಿಗೆ ಸಿಕ್ಕಿಕೊಂಡಿದ್ದೇನೆ, ನನ್ನ ಕರುಳು ಕುದಿಯುತ್ತಿದೆ. ನಾನು ಕೇವಲ ದ್ರೋಹಮಾಡಿದ್ದರಿಂದ ನನ್ನ ಹೃದಯವು ನನ್ನೊಳಗೆ ಕುಂದಿಹೋಗಿದೆ; ಮನೆಯ ಹೊರಗೆ ಸಂಹಾರ, ಒಳಗೆ ಪ್ರಾಣಸಂಕಟ.


“ನಾವು ಅವಿಧೇಯರಾಗಿ ದ್ರೋಹಮಾಡಿದ್ದೇವೆ; ನೀನು ಕ್ಷಮಿಸಲಿಲ್ಲ.


ನಮ್ಮ ಪೂರ್ವಿಕರು ಪಾಪಮಾಡಿ ಇಲ್ಲದೆ ಹೋದರು; ಅವರ ದೋಷಫಲವನ್ನು ನಾವು ಅನುಭವಿಸಬೇಕಾಯಿತು.


ಅವು ದೇಶದ ಹುಲ್ಲನ್ನೆಲ್ಲಾ ತಿಂದುಬಿಟ್ಟ ಮೇಲೆ ನಾನು, “ಕರ್ತನಾದ ಯೆಹೋವನೇ, ಲಾಲಿಸು, ನನ್ನನ್ನು ಕ್ಷಮಿಸು. ಯಾಕೋಬ ಜನಾಂಗವು ಹೇಗೆ ಉಳಿಯುವುದು? ಏಕೆಂದರೆ ಅದು ಚಿಕ್ಕದಾದ ಜನಾಂಗ” ಎಂದು ವಿಜ್ಞಾಪಿಸಿಕೊಂಡೆನು.


ಕರ್ತನೇ, ನಮ್ಮ ದೇವರೇ, ಭುಜಪರಾಕ್ರಮವನ್ನು ತೋರಿಸಿ ನಿನ್ನ ಜನರನ್ನು ಐಗುಪ್ತದೇಶದೊಳಗಿಂದ ಪಾರು ಮಾಡಿ ಇಂದಿನವರೆಗೂ ಪ್ರಸಿದ್ಧವಾಗಿರುವ ಹೆಸರನ್ನು ಪಡೆದುಕೊಂಡವನೇ, ಈಗ ಚಿತ್ತೈಸು. ನಾವು ಪಾಪಮಾಡಿ ಕೆಟ್ಟವರಾಗಿ ನಡೆದಿದ್ದೇವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು