Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 14:22 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಜನಾಂಗಗಳ ವ್ಯರ್ಥವಾದ ವಿಗ್ರಹಗಳೊಳಗೆ ಮಳೆಯನ್ನು ಸುರಿಸಬಲ್ಲವುಗಳುಂಟೇ? ಆಕಾಶವು ತಾನಾಗಿ ಹದಮಳೆಗಳನ್ನು ಕೊಟ್ಟೀತೇ? ನಮ್ಮ ದೇವರಾದ ಯೆಹೋವನೇ, ನೀನೇ ವೃಷ್ಟಿಪ್ರದನು; ನಾವು ನಿನ್ನನ್ನೇ ನಿರೀಕ್ಷಿಸುವೆವು. ನೀನು ಇವುಗಳನ್ನೆಲ್ಲಾ ನಡೆಸುವವನಾಗಿದ್ದೀಯಷ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ಅನ್ಯಜನಾಂಗಗಳ ಶೂನ್ಯದೇವತೆಗಳಲ್ಲಿ ಮಳೆಸುರಿಸಬಲ್ಲವರುಂಟೆ? ಆಕಾಶವು ತಾನಾಗಿ ಹದಮಳೆಯನ್ನು ಬರಮಾಡಬಲ್ಲುದೆ? ನಮ್ಮ ದೇವರಾದ ಸರ್ವೇಶ್ವರಾ, ವೃಷ್ಟಿದಾತರು ನೀವೇ ನಾವು ನಿರೀಕ್ಷಿಸುತ್ತಿರುವುದು ನಿಮ್ಮನ್ನೇ ಹೌದು, ಇವುಗಳನ್ನೆಲ್ಲ ನಡೆಸುವವರು ನೀವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಜನಾಂಗಗಳ ವ್ಯರ್ಥವಿಗ್ರಹಗಳೊಳಗೆ ಮಳೆಯನ್ನು ಸುರಿಸಬಲ್ಲವುಗಳುಂಟೇ? ಆಕಾಶವು ತಾನಾಗಿ ಹದಮಳೆಗಳನ್ನು ಕೊಟ್ಟೀತೇ? ನಮ್ಮ ದೇವರಾದ ಯೆಹೋವಾ, ನೀನೇ ವೃಷ್ಟಿಪ್ರದನು; ನಾವು ನಿನ್ನನ್ನೇ ನಿರೀಕ್ಷಿಸುವೆವು; ನೀನು ಇವುಗಳನ್ನೆಲ್ಲಾ ನಡಿಸುವವನಾಗಿದ್ದೀಯಷ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ಅನ್ಯರ ವಿಗ್ರಹಗಳಿಗೆ ಮಳೆ ಸುರಿಸುವ ಸಾಮರ್ಥ್ಯವಿಲ್ಲ. ಆಕಾಶಕ್ಕೆ ಮಳೆಯನ್ನು ಸುರಿಸುವ ಸಾಮರ್ಥ್ಯವಿಲ್ಲ. ನೀನೊಬ್ಬನೇ ನಮ್ಮ ಆಶಾಕೇಂದ್ರ. ನೀನೇ ಈ ಎಲ್ಲವುಗಳನ್ನು ಸೃಷ್ಟಿಸಿದವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಜನಾಂಗಗಳ ವ್ಯರ್ಥ ವಿಗ್ರಹಗಳೊಳಗೆ ಮಳೆಯನ್ನು ಸುರಿಸಬಲ್ಲವುಗಳುಂಟೇ? ಆಕಾಶವು ತಾನಾಗಿ ಹದ ಮಳೆಗಳನ್ನು ಕೊಟ್ಟೀತೇ? ಅಲ್ಲ, ನೀವೇ, ನಮ್ಮ ದೇವರಾದ ಯೆಹೋವ ದೇವರು, ನೀವೇ ವೃಷ್ಟಿದಾತರು, ನಾವು ನಿಮ್ಮನ್ನೇ ನಿರೀಕ್ಷಿಸುವೆವು, ನೀವು ಇವುಗಳನ್ನೆಲ್ಲಾ ನಡಿಸುವವರಾಗಿದ್ದೀರಷ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 14:22
39 ತಿಳಿವುಗಳ ಹೋಲಿಕೆ  

ಚೀಯೋನಿನ ಜನರೇ ಹರ್ಷಿಸಿರಿ, ನಿಮ್ಮ ದೇವರಾದ ಯೆಹೋವನಲ್ಲಿ ಉಲ್ಲಾಸಿಸಿರಿ. ಆತನು ತನ್ನ ನೀತಿಯಿಂದ ಮುಂಗಾರು ಮಳೆಯನ್ನು ನಿಮಗೆ ಕೊಡುವನು. ಮುಂಗಾರು, ಹಿಂಗಾರು ಮಳೆಗಳನ್ನು ಮೊದಲಿನಂತೆ ನಿಮಗಾಗಿ ಸುರಿಸುವನು.


“ಮುಂಗಾರು, ಹಿಂಗಾರು ಅಂತು ಸಕಾಲದ ಮಳೆಯನ್ನು ದಯಪಾಲಿಸಿ, ಸುಗ್ಗಿಯ ಕೆಲವು ವಾರಗಳನ್ನು ನಮಗಾಗಿ ಪ್ರತ್ಯೇಕಪಡಿಸುವ ನಮ್ಮ ದೇವರಾದ ಯೆಹೋವನಲ್ಲಿ ಭಯಭಕ್ತಿಯಿಡೋಣ” ಎಂದು ಮನದಲ್ಲಿ ಅಂದುಕೊಳ್ಳವುದಿಲ್ಲ.


ಆತನು ಭೂಮಿಯ ಕಟ್ಟಕಡೆಯಿಂದ ಮೋಡಗಳನ್ನು ಮೇಲೇರುವಂತೆ ಮಾಡುತ್ತಾನೆ; ಮಳೆಗೋಸ್ಕರ ಮಿಂಚನ್ನು ಹೊಳೆಯುವಂತೆ ಮಾಡುತ್ತಾನೆ; ತನ್ನ ಉಗ್ರಾಣದಿಂದ ಗಾಳಿಯನ್ನು ಬೀಸುವಂತೆ ಮಾಡುತ್ತಾನೆ.


ಆಗ ನೀವು ಹೊಲದಲ್ಲಿ ಬೀಜ ಬಿತ್ತುವುದಕ್ಕೆ ಆತನು ಬಿತ್ತನೆಯ ಮಳೆಯನ್ನು ದಯಪಾಲಿಸುವನು; ನೆಲದ ಬೆಳೆಯಿಂದ ಸಾರವಾದ ಆಹಾರವನ್ನು ಸಮೃದ್ಧಿಯಾಗಿ ಒದಗಿಸುವನು; ಆ ದಿನದಲ್ಲಿ ನಿಮ್ಮ ಮಂದೆಗಳು ದೊಡ್ಡ ದೊಡ್ಡ ಕಾವಲುಗಳಲ್ಲಿ ಮೇಯುವವು.


ಅವರು ದೇವರಲ್ಲದವುಗಳ ಮೂಲಕ ನನ್ನನ್ನು ರೇಗಿಸಿದ್ದರಿಂದ ನಾನು ಜನಾಂಗವಲ್ಲದವರ ಮೂಲಕ ಅವರಲ್ಲಿ ಕೋಪಹುಟ್ಟಿಸುವೆನು. ಅವರು ನಿಷ್ಪ್ರಯೋಜಕವಾದ ವಿಗ್ರಹಗಳ ಮೂಲಕ ನನ್ನನ್ನು ಸಿಟ್ಟಿಗೆಬ್ಬಿಸಿದ್ದರಿಂದ ನಾನು ಸದಾಚಾರವಿಲ್ಲದ ಜನರ ಮೂಲಕ ಅವರನ್ನು ಸಿಟ್ಟಿಗೆಬ್ಬಿಸುವೆನು.


ಆತನ ಗರ್ಜನೆಗೆ ಆಕಾಶದಿಂದ ನೀರು ಬೋರ್ಗರೆದು ಸುರಿಯುತ್ತದೆ; ಆತನು ಭೂಮಿಯ ಕಟ್ಟಕಡೆಯಿಂದ ಮೋಡಗಳನ್ನು ಮೇಲೇರುವಂತೆ ಮಾಡುತ್ತಾನೆ; ಮಳೆಗೋಸ್ಕರ ಮಿಂಚನ್ನು ಹೊಳೆಯಮಾಡುತ್ತಾನೆ; ತನ್ನ ಭಂಡಾರದಿಂದ ಗಾಳಿಯನ್ನು ಬೀಸುವಂತೆ ಮಾಡುತ್ತಾನೆ.


ಯೆಹೋವನೇ, ನನ್ನ ಬಲವೇ, ಬಲವಾದ ನನ್ನ ದುರ್ಗವೇ, ಇಕ್ಕಟ್ಟಿನ ದಿನದಲ್ಲಿ ನನ್ನ ಆಶ್ರಯವೇ, ಲೋಕದ ಕಟ್ಟಕಡೆಯಿಂದ ಜನಾಂಗಗಳು ನಿನ್ನ ಬಳಿಗೆ ಸೇರಿ, “ನಮ್ಮ ಪೂರ್ವಿಕರು ಶುದ್ಧ ಸುಳ್ಳನ್ನು, ಮಾಯವನ್ನು, ಪ್ರಯೋಜನವಿಲ್ಲದವುಗಳನ್ನು ಪಾರಂಪರ್ಯವಾಗಿ ಹೊಂದಿದ್ದಾರೆ” ಎಂದು ಅರಿಕೆ ಮಾಡುವರು.


ಅವು ವ್ಯರ್ಥ, ಹಾಸ್ಯಾಸ್ಪದವಾದ ಕೆಲಸ; ದಂಡನೆಯಾಗುವಾಗ ಅಳಿದುಹೋಗುವವು.


ಆಹಾ, ಅವರೆಲ್ಲಾ ವ್ಯರ್ಥವೇ, ಅವರ ಕಾರ್ಯಗಳು ವ್ಯರ್ಥವೇ, ಅವರ ಎರಕದ ಬೊಂಬೆಗಳು ಗಾಳಿ ಮತ್ತು ಶೂನ್ಯವೇ.


ನಾನು ಯೆಹೋವನನ್ನು ಎದುರುನೋಡುತ್ತೇನೆ; ನನ್ನ ಪ್ರಾಣವು ಆತನನ್ನು ಕಾದುಕೊಂಡಿದೆ; ಆತನ ನುಡಿಯನ್ನು ನಿರೀಕ್ಷಿಸಿಕೊಂಡಿದ್ದೇನೆ.


ನಿನ್ನನ್ನೇ ನಿರೀಕ್ಷಿಸಿಕೊಂಡಿದ್ದೇನೆ; ನಿರ್ದೋಷಭಕ್ತಿಯೂ ಮತ್ತು ಯಥಾರ್ಥತ್ವವೂ ನನ್ನನ್ನು ಕಾಯಲಿ.


ಇಸ್ರಾಯೇಲ್ ದೇವರಾದ ಯೆಹೋವನು ನಿನಗೆ, ‘ನಾನು ದೇಶಕ್ಕೆ ಮಳೆಯನ್ನು ಕಳುಹಿಸುವವರೆಗೆ ನಿನ್ನ ಮಡಿಕೆಯಲ್ಲಿರುವ ಹಿಟ್ಟು ತೀರುವುದಿಲ್ಲ ಮತ್ತು ಮೊಗೆಯಲ್ಲಿರುವ ಎಣ್ಣೆಯು ಮುಗಿದುಹೋಗುವುದಿಲ್ಲ’” ಎಂದು ಹೇಳುತ್ತಾನೆ.


ಗಿಲ್ಯಾದಿನ ತಿಷ್ಬೀಯ ಊರಿನವನಾದ ಎಲೀಯ ಎಂಬುವವನು ಅಹಾಬನಿಗೆ, “ನಾನು ಸನ್ನಿಧಿಸೇವೆ ಮಾಡುತ್ತಿರುವ ಇಸ್ರಾಯೇಲ್ ದೇವರಾದ ಯೆಹೋವನಾಣೆ,


ಯೆಹೋವನು ಆಕಾಶದಲ್ಲಿರುವ ತನ್ನ ಜಲನಿಧಿಯನ್ನು ತೆರೆದು ನಿಮ್ಮ ದೇಶದ ಮೇಲೆ ಬೆಳೆಗೆ ಬೇಕಾದ ಹಾಗೆ ಮಳೆಯನ್ನು ಸುರಿಸಿ, ನಿಮ್ಮ ಎಲ್ಲಾ ವ್ಯವಸಾಯವು ಫಲಭರಿತವಾಗುವಂತೆ ಸಾಫಲ್ಯತೆ ಉಂಟುಮಾಡುವನು. ನೀವು ಅನೇಕ ಜನಗಳಿಗೆ ಸಾಲಕೊಡುವಿರೇ ಹೊರತು ಸಾಲತೆಗೆದುಕೊಳ್ಳುವುದಿಲ್ಲ.


ನಾನಂತು ಯೆಹೋವನನ್ನು ಎದುರುನೋಡುವೆನು. ನನ್ನ ರಕ್ಷಕನಾದ ದೇವರನ್ನು ನಿರೀಕ್ಷಿಸಿಕೊಂಡಿರುವೆ. ನನ್ನ ದೇವರು ನನ್ನ ಕಡೆಗೆ ಕಿವಿಗೊಡುವನು.


“ಸುಗ್ಗಿಗೆ ಮೂರು ತಿಂಗಳು ಕಳೆಯಬೇಕಾದಾಗಲೂ, ನಿಮಗೆ ಮಳೆಯನ್ನು ತಡೆದೆನು. ಒಂದು ಪಟ್ಟಣದ ಮೇಲೆ ಮಳೆಯಾಗುವಂತೆಯೂ, ಇನ್ನೊಂದು ಪಟ್ಟಣದ ಮೇಲೆ ಮಳೆಯಾಗದಂತೆಯೂ ಮಾಡಿದೆನು. ಒಂದು ಭಾಗದ ಹೊಲದಲ್ಲಿ ಮಳೆಯಾಯಿತು. ಮಳೆಯಾಗದ ಹೊಲದ ಭಾಗವು ಬಾಡಿಹೋಯಿತು.


ಆತನ ಗರ್ಜನೆಗೆ ಆಕಾಶದಲ್ಲಿ ನೀರು ಭೋರ್ಗರೆಯುವಂತೆ; ಆತನು ಭೂಮಿಯ ಕಟ್ಟಕಡೆಯಿಂದ ಮೋಡಗಳನ್ನು ಏರಮಾಡುತ್ತಾನೆ. ಮಳೆಗೋಸ್ಕರ ಮಿಂಚನ್ನು ಹೊಳೆಯಮಾಡುತ್ತಾನೆ; ತನ್ನ ಭಂಡಾರದಿಂದ ಗಾಳಿಯನ್ನು ಬೀಸಮಾಡುತ್ತಾನೆ.


ಹೀಗಿರಲು ಯೆಹೋವನು ನಿಮಗೆ ಕೃಪೆತೋರಿಸಬೇಕೆಂದು ಕಾದಿರುವನು; ನಿಮ್ಮನ್ನು ಕರುಣಿಸಬೇಕೆಂದು ಉನ್ನತೋನ್ನತವಾಗಿ ಕಾಣಿಸಿಕೊಳ್ಳುವನು; ಯೆಹೋವನು ನ್ಯಾಯಸ್ವರೂಪನಾದ ದೇವರು; ಆತನಿಗಾಗಿ ಕಾದಿರುವವರೆಲ್ಲರೂ ಧನ್ಯರು.


ಆತನು ಆಕಾಶದಲ್ಲಿ ಮೋಡಗಳನ್ನು ಕವಿಸುತ್ತಾನೆ, ಭೂಮಿಗೋಸ್ಕರ ಮಳೆಯನ್ನು ಸಿದ್ಧಮಾಡುತ್ತಾನೆ, ಬೆಟ್ಟಗಳಲ್ಲಿ ಹುಲ್ಲನ್ನು ಬೆಳೆಸುತ್ತಾನೆ.


ಯೆಹೋವನನ್ನು ನಿರೀಕ್ಷಿಸಿಕೊಂಡಿರು, ದೃಢವಾಗಿರು; ನಿನ್ನ ಹೃದಯವು ಧೈರ್ಯದಿಂದಿರಲಿ; ಯೆಹೋವನನ್ನು ನಿರೀಕ್ಷಿಸಿಕೊಂಡೇ ಇರು.


ನಿಷ್ಕಾರಣ ದ್ರೋಹಿಗಳಿಗೆ ಅಪಮಾನವಾಗಬೇಕೇ ಹೊರತು, ನಿನ್ನನ್ನು ನಿರೀಕ್ಷಿಸಿದವರಿಗೆ ಎಂದಿಗೂ ಆಗಬಾರದು.


ಭೂಮಿಯ ಮೇಲೆ ಮಳೆಸುರಿಸಿ, ಹೊಲಗದ್ದೆಗಳಿಗೆ ನೀರನ್ನು ಒದಗಿಸುತ್ತಾನೆ.


ಅನೇಕ ದಿನಗಳಾದ ನಂತರ ಎಲೀಯನಿಗೆ ಯೆಹೋವನ ವಾಕ್ಯವುಂಟಾಯಿತು. ಬರಗಾಲದ ಮೂರನೆಯ ವರ್ಷದಲ್ಲಿ ಯೆಹೋವನು ಅವನಿಗೆ, “ನೀನು ಹೋಗಿ ಅಹಾಬನನ್ನು ಕಾಣು. ನಾನು ದೇಶಕ್ಕೆ ಮಳೆ ಕೊಡುತ್ತೇನೆ” ಎಂದನು.


ಪರಲೋಕದಲ್ಲಿರುವ ನೀನು ಆಲಿಸಿ, ನಿನ್ನ ಸೇವಕರೂ ಪ್ರಜೆಗಳೂ ಆದ ಇಸ್ರಾಯೇಲರ ಪಾಪಗಳನ್ನು ಕ್ಷಮಿಸಿ ಅವರು ನಡೆಯಬೇಕಾದ ಮಾರ್ಗವನ್ನು ತೋರಿಸಿ, ನಿನ್ನ ಪ್ರಜೆಗೆ ಸ್ವತ್ತಾಗಿ ಕೊಟ್ಟ ದೇಶಕ್ಕೆ ಮಳೆಯನ್ನು ಅನುಗ್ರಹಿಸು.


ಹೀಗೆ ಮಾಡಿದರೆ, ನೀವು ಪರಲೋಕದಲ್ಲಿರುವ ನಿಮ್ಮ ತಂದೆಗೆ ಮಕ್ಕಳಾಗುವಿರಿ. ಆತನು ಕೆಟ್ಟವರ ಮೇಲೆಯೂ ಒಳ್ಳೆಯವರ ಮೇಲೆಯೂ ತನ್ನ ಸೂರ್ಯನು ಉದಯಿಸುವಂತೆ ಮಾಡುತ್ತಾನೆ. ನೀತಿವಂತರ ಮೇಲೆಯೂ ಅನೀತಿವಂತರ ಮೇಲೆಯೂ ಮಳೆ ಸುರಿಸುತ್ತಾನೆ.


ಅವರು ಯೆಹೋವನನ್ನು ಅಲ್ಲಗಳೆದು, ‘ಆತನು ಏನು ಮಾಡುವನು? ನಮಗೆ ಕೇಡುಬಾರದು, ಖಡ್ಗವೂ, ಕ್ಷಾಮವೂ ನಮ್ಮ ಕಣ್ಣಿಗೆ ಬೀಳವು;


ಜನಾಂಗಗಳ ಕಟ್ಟಳೆಗಳು ಬರಿದೇ; ಅರಣ್ಯದ ಮರವನ್ನು ಕತ್ತರಿಸುವರು, ಬಡಗಿಯು ಅದನ್ನು ಕೈಯಿಂದ, ಉಳಿಯಿಂದ ರೂಪಿಸುವನು.


ಅವಳು ತನ್ನೊಂದಿಗೆ ವ್ಯಭಿಚಾರ ಮಾಡಿದವರನ್ನು ಅನುಸರಿಸಿ ಹೋದರೂ ಅವರು ಸಿಕ್ಕುವುದಿಲ್ಲ. ಆಗ ಅವಳು, “‘ನಾನು ಮದುವೆಯಾದ ಗಂಡನ ಬಳಿಗೆ ಹಿಂದಿರುಗಿ ಹೋಗುವೆನು, ಈಗಿನ ನನ್ನ ಸ್ಥಿತಿಗಿಂತ ಆಗಿನ ಸ್ಥಿತಿಯು ಎಷ್ಟೋ ಲೇಸು’ ಅಂದುಕೊಳ್ಳುವಳು.


ಮಳೆಗೆ ಕಟ್ಟಳೆಯನ್ನೂ, ಗರ್ಜಿಸುವ ಸಿಡಿಲಿಗೆ ದಾರಿಯನ್ನೂ ಏರ್ಪಡಿಸಿದಾಗಲೇ,


ಆತನು ತನ್ನ ಶಕ್ತಿಯಿಂದ ಭೂಮಿಯನ್ನು ನಿರ್ಮಿಸಿ, ತನ್ನ ಜ್ಞಾನದಿಂದ ಲೋಕವನ್ನು ಸ್ಥಾಪಿಸಿ, ತನ್ನ ವಿವೇಕದಿಂದ ಆಕಾಶಮಂಡಲವನ್ನು ಹರಡಿದ್ದಾನೆ.


ಅವರ ಶಸ್ತ್ರಾಸ್ತ್ರಗಳು ಅಶ್ಶೂರ ದೇಶವನ್ನು ಧ್ವಂಸಮಾಡುವುದು. ನಿಮ್ರೋದ್ ಸೀಮೆಯ ಪ್ರವೇಶಸ್ಥಾನಗಳು ಅವರ ಖಡ್ಗಕ್ಕೆ ತುತ್ತಾಗುವವು. ಅಶ್ಶೂರ್ಯರು ನಮ್ಮ ದೇಶದಲ್ಲಿ ನುಗ್ಗಿ, ನಮ್ಮ ಪ್ರಾಂತ್ಯವನ್ನು ತುಳಿದುಹಾಕುವಾಗ ಆ ಸಮಾಧಾನಪ್ರದನು ನಮ್ಮನ್ನು ಅವರ ಕೈಯೊಳಗಿಂದ ಉದ್ಧರಿಸುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು