Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 14:3 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಅವರಲ್ಲಿನ ಶ್ರೀಮಂತರು ತಮ್ಮ ಕೈಕೆಳಗಿನವರನ್ನು ನೀರು ತರಲು ಕಳುಹಿಸುತ್ತಾರೆ. ಅವರು ಕೊಳಗಳಿಗೆ ಹೋದಾಗ ನೀರು ಕಾಣುವುದಿಲ್ಲ, ಬರೀ ಪಾತ್ರೆಗಳನ್ನು ತೆಗೆದುಕೊಂಡು ಹಿಂದಕ್ಕೆ ಬರುತ್ತಾರೆ. ಆಶೆಗೆಟ್ಟು ನಾಚಿಕೆಪಟ್ಟು ಮುಖವನ್ನು ಮುಚ್ಚಿಕೊಳ್ಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಅವರಲ್ಲಿನ ಶ್ರೀಮಂತರು ತಮ್ಮ ಊಳಿಗದವರನ್ನು ನೀರಿಗೆ ಕಳಿಸುತ್ತಾರೆ. ಅವರೋ ಕೊಳಗಳಲ್ಲಿ ನೀರು ಕಾಣದೆ ಬರೀ ಬಿಂದಿಗೆಗಳೊಂದಿಗೆ ಹಿಂದಿರುಗುತ್ತಾರೆ. ನಿರಾಶೆಗೊಂಡು, ನಾಚಿಕೆಪಟ್ಟು ಮೋರೆ ಮುಚ್ಚಿಕೊಳ್ಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಅವರಲ್ಲಿನ ಶ್ರೀಮಂತರು ತಮ್ಮ ಕೈಕೆಳಗಿನವರನ್ನು ನೀರಿಗೆ ಕಳುಹಿಸುತ್ತಾರೆ; ಅವರು ಕೊಳಗಳಿಗೆ ಹೋದಾಗ ನೀರು ಕಾಣುವದಿಲ್ಲ, ಬರೀ ಪಾತ್ರೆಗಳನ್ನು ತೆಗೆದುಕೊಂಡು ಹಿಂದಕ್ಕೆ ಬರುತ್ತಾರೆ; ಆಶೆಗೆಟ್ಟು ನಾಚಿಕೆಪಟ್ಟು ಮೋರೆ ಮುಚ್ಚಿಕೊಳ್ಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಜನನಾಯಕರು ನೀರು ತರುವದಕ್ಕಾಗಿ ತಮ್ಮ ಸೇವಕರನ್ನು ಕಳುಹಿಸುತ್ತಾರೆ. ಆ ಸೇವಕರು ನೀರಿರುವ ಸ್ಥಳಗಳಿಗೆ ಹೋಗುತ್ತಾರೆ. ಆದರೆ ಅಲ್ಲಿ ಅವರಿಗೆ ನೀರು ಸಿಕ್ಕುವದಿಲ್ಲ. ಸೇವಕರು ಕೇವಲ ಪಾತ್ರೆಗಳನ್ನು ತೆಗೆದುಕೊಂಡು ಹಿಂದಿರುಗಿ ಬರುತ್ತಾರೆ. ಅವರು ನಾಚಿಕೆಪಟ್ಟುಕೊಳ್ಳುತ್ತಾರೆ ಮತ್ತು ಪೇಚಾಡುತ್ತಾರೆ. ಅವರು ನಾಚಿಕೆಯಿಂದ ತಮ್ಮ ಮುಖಗಳನ್ನು ಮುಚ್ಚಿಕೊಳ್ಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಶ್ರೇಷ್ಠರು ತಮ್ಮ ಚಿಕ್ಕವರನ್ನು ನೀರಿಗೆ ಕಳುಹಿಸುತ್ತಾರೆ. ಇವರು ಬಾವಿಗಳಿಗೆ ಬರುತ್ತಾರೆ. ಆದರೆ ನೀರು ಸಿಕ್ಕಲ್ಲ. ಬರೀ ಪಾತ್ರೆಗಳುಳ್ಳವರಾಗಿ ತಿರುಗಿಕೊಳ್ಳುತ್ತಾರೆ. ಅವರು ನಾಚಿಕೆಪಟ್ಟು ದಿಗ್ಭ್ರಮೆಗೊಂಡವರಾಗಿ, ತಮ್ಮ ತಲೆಗಳನ್ನು ಮುಚ್ಚಿಕೊಳ್ಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 14:3
23 ತಿಳಿವುಗಳ ಹೋಲಿಕೆ  

ದಾವೀದನು ಮುಖವನ್ನು ಮರೆಮಾಚಿಕೊಂಡು ಅಳುತ್ತಾ, ಬರಿಗಾಲಿನಿಂದ ಎಣ್ಣೆಮರದ ಗುಡ್ಡವನ್ನೇರಿದನು. ಅವನ ಜೊತೆಯಲ್ಲಿದ್ದ ಜನರೂ ಮೋರೆಮುಚ್ಚಿಕೊಂಡು ಅಳುತ್ತಾ ಗುಡ್ಡವನ್ನು ಏರಿದರು.


ನನ್ನ ಪ್ರಾಣವನ್ನು ತೆಗೆಯುವುದಕ್ಕೆ ಸಮಯನೋಡುವವರು, ಆಶಾಭಂಗಪಟ್ಟು ಅವಮಾನಹೊಂದಲಿ; ನನ್ನ ಆಪತ್ತಿನಲ್ಲಿ ಸಂತೋಷಿಸುವವರು ಅಪಮಾನದಿಂದ ಹಿಂದಿರುಗಿ ಓಡಲಿ.


ಹಿಜ್ಕೀಯನ ಮಾತನ್ನು ಕೇಳಬೇಡಿರಿ. ಅಶ್ಶೂರದ ಅರಸನಾದ ನನ್ನ ಮಾತನ್ನು ಕೇಳಿರಿ, “ನನ್ನೊಡನೆ ಒಡಂಬಡಿಕೆ ಮಾಡಿಕೊಂಡು ನನ್ನ ಬಳಿಗೆ ಬಂದು ನನ್ನೊಡನೆ ಒಪ್ಪಂದ ಮಾಡಿಕೊಂಡು ನನ್ನ ಆಶ್ರಯಕ್ಕೆ ಬನ್ನಿ ಆಗ ನಿಮ್ಮಲ್ಲಿ ಪ್ರತಿಯೊಬ್ಬನೂ ತನ್ನ ತನ್ನ ಅಂಜೂರ ಮರ, ದ್ರಾಕ್ಷಾಲತೆ ಇವುಗಳ ಹಣ್ಣುಗಳನ್ನು ತಿಂದು ತನ್ನ ತನ್ನ ಬಾವಿಯ ನೀರನ್ನು ಕುಡಿಯುವನು.


ಎರಡು ಅಥವಾ ಮೂರು ಪಟ್ಟಣದವರು ನೀರು ಕುಡಿಯುವುದಕ್ಕೆ ಮತ್ತೊಂದು ಪಟ್ಟಣಕ್ಕೆ ಬಳಲುತ್ತಾ ಹೋಗುತ್ತಿದ್ದರು, ಬಾಯಾರಿಕೆ ತೀರಲಿಲ್ಲ. ಆದರೂ ನೀವು ನನ್ನ ಕಡೆಗೆ ಹಿಂದಿರುಗಲಿಲ್ಲ.” ಇದು ಯೆಹೋವನ ನುಡಿ.


“ನನ್ನ ಜನರು ಎರಡು ಅಪರಾಧಗಳನ್ನು ಮಾಡಿದ್ದಾರೆ; ಅವರು ಜೀವಜಲದ ಬುಗ್ಗೆಯಾದ ನನ್ನನ್ನು ಬಿಟ್ಟುಬಿಟ್ಟು ತಮಗೋಸ್ಕರ ತೊಟ್ಟಿಗಳನ್ನು ತೋಡಿಕೊಂಡಿದ್ದಾರೆ. ಅವರು ಬಿರುಕು ಬಿಟ್ಟ, ನೀರು ನಿಲ್ಲದ ತೊಟ್ಟಿಗಳನ್ನು ಕೊರೆದುಕೊಂಡಿದ್ದಾರೆ.


ಅಡವಿಯ ಮೃಗಗಳು ಸಹ ನಿನ್ನ ಕಡೆಗೆ ತಲೆಯೆತ್ತಿವೆ. ನೀರಿನ ಹೊಳೆಗಳು ಬತ್ತಿಹೋಗಿವೆ. ಕಾಡಿನ ಹುಲ್ಲುಗಾವಲನ್ನು ಬೆಂಕಿಯು ದಹಿಸಿಬಿಟ್ಟಿದೆ.


ಯೆಹೋವನಾದರೋ ಭಯಂಕರಶೂರನಾಗಿ ನನ್ನ ಸಂಗಡ ಇದ್ದಾನೆ. ಆದುದರಿಂದ ನನ್ನ ಹಿಂಸಕರು ಗೆಲ್ಲದೆ ಮುಗ್ಗರಿಸುವರು. ತಮ್ಮ ಇಷ್ಟಾರ್ಥವು ನೆರವೇರದ ಕಾರಣ ದೊಡ್ಡ ನಾಚಿಕೆಗೆ ಈಡಾಗುವರು, ಎಂದಿಗೂ ಮರೆಯದ ಶಾಶ್ವತ ಅವಮಾನಕ್ಕೆ ಒಳಗಾಗುವರು.


ದೇಶದಲ್ಲಿ ಮಳೆಯಿಲ್ಲದೆ ಭೂಮಿಯು ಬಿರುಕುಬಿಟ್ಟಿರುವುದರಿಂದ ರೈತರು ನಾಚಿಕೆಪಟ್ಟು ಮುಖವನ್ನು ಮುಚ್ಚಿಕೊಳ್ಳುತ್ತಾರೆ.


ಮಾನಭಂಗವೇ ನನ್ನ ವಿರೋಧಿಗಳಿಗೆ ವಸ್ತ್ರವಾಗಲಿ; ನಾಚಿಕೆಯೇ ಅವರ ಹೊದಿಕೆಯಾಗಲಿ.


ಅಲ್ಲಿಗೆ ಸೇರಿ ಆಶಾಭಂಗಪಟ್ಟರು, ನಂಬಿದಷ್ಟೂ ನಿರೀಕ್ಷೆಗೆಟ್ಟರು.


ಮೊರ್ದೆಕೈಯು ಹಿಂತಿರುಗಿ ಅರಮನೆಯ ಬಾಗಿಲಿಗೆ ಹೋದನು. ಹಾಮಾನನಾದರೋ ದುಃಖದಿಂದ ಮುಖವನ್ನು ಮುಚ್ಚಿಕೊಂಡು ಶೀಘ್ರವಾಗಿ ಮನೆಗೆ ಹೋಗಿ ತನ್ನ ಹೆಂಡತಿಯಾದ ಜೆರೆಷಳ ಮತ್ತು ಎಲ್ಲಾ ಆಪ್ತರ ಮುಂದೆ ತನಗೆ ಸಂಭವಿಸಿದ್ದನ್ನೆಲ್ಲಾ ತಿಳಿಸಿದನು.


ದೇಶದಲ್ಲಿ ಮಳೆಯಿಲ್ಲದ್ದರಿಂದ ಕೆಲವು ದಿನಗಳಾದನಂತರ ಹಳ್ಳವು ಬತ್ತಿಹೋಯಿತು.


ಅರಸನು ತನ್ನ ಮುಖವನ್ನು ಮುಚ್ಚಿಕೊಂಡು, “ನನ್ನ ಮಗನಾದ ಅಬ್ಷಾಲೋಮನೇ, ಅಬ್ಷಾಲೋಮನೇ, ನನ್ನ ಮಗನೇ, ನನ್ನ ಮಗನೇ!” ಎಂದು ಬಹಳವಾಗಿ ಗೋಳಾಡಿದನು.


ಅಲ್ಲಿಂದಲೂ ತಲೆಯ ಮೇಲೆ ಕೈಹೊತ್ತುಕೊಂಡು ಹೊರಡುವಿ; ಏಕೆಂದರೆ ನಿನ್ನ ಭರವಸೆಗಳನ್ನು ಯೆಹೋವನು ನಿರಾಕರಿಸಿದ್ದಾನೆ; ಅವುಗಳ ಮುಖಾಂತರ ನಿನ್ನ ಕಾರ್ಯವು ಕೈಗೂಡುವುದಿಲ್ಲ.


ಆದಕಾರಣ ಹದಮಳೆಗೆ ಅಡ್ಡಿಯಾಯಿತು, ಹಿಂಗಾರೂ ಆಗಲಿಲ್ಲ; ಆದರೂ ನೀನು ವ್ಯಭಿಚಾರಿಯಾಗಿ ನಾಚಿಕೆಗೆಟ್ಟಿದ್ದಿ.


ಏಕೆ ನನ್ನ ವ್ಯಥೆಯು ನಿರಂತರವಾಗಿದೆ? ನನ್ನ ಗಾಯವು ಗಡುಸಾಗಿ ಗುಣಹೊಂದದೆ ಇರುವುದು ಏಕೆ? ನೀನು ನನಗೆ ನೀರು ಬತ್ತುವ ಕಳ್ಳತೊರೆಯಂತಿರಬೇಕೋ?” ಎಂದು ಅರಿಕೆಮಾಡಿಕೊಂಡೆನು.


ಮೊಲೆಕೂಸಿನ ನಾಲಿಗೆಯು ದಾಹದಿಂದ ಸೇದಿಹೋಗಿದೆ. ಅನ್ನ ಬೇಕೆನ್ನುವ ಎಳೆಯ ಮಕ್ಕಳಿಗೆ ಅನ್ನಕೊಡುವವರು ಯಾರೂ ಇಲ್ಲ.


ಇಲ್ಲದಿದ್ದರೆ ನಾನು ಅವಳ ಬಟ್ಟೆಯನ್ನು ಕಿತ್ತು, ಅವಳನ್ನು ಹುಟ್ಟಿದಾಗ ಇದ್ದಂತೆ ಬೆತ್ತಲೆಯಾಗಿ ನಿಲ್ಲಿಸುವೆನು ಅವಳನ್ನು ಬೆಂಗಾಡಾಗಿಸಿ, ಮರುಭೂಮಿಯ ಸ್ಥಿತಿಗೆ ತಂದು, ನೀರಡಿಕೆಯಿಂದ ಸಾಯಿಸುವೆನು.


ಲೋಕದ ಸಮಸ್ತ ಕುಲಗಳಲ್ಲಿ ಯಾವ ಕುಲದವರು ಸೇನಾಧೀಶ್ವರನಾದ ಯೆಹೋವನೆಂಬ ರಾಜಾಧಿರಾಜನನ್ನು ಆರಾಧಿಸುವುದಕ್ಕೆ ಯೆರೂಸಲೇಮಿಗೆ ಬರುವುದಿಲ್ಲವೋ ಅವರಿಗೆ ಮಳೆಬರುವುದಿಲ್ಲ.


“ಸುಗ್ಗಿಗೆ ಮೂರು ತಿಂಗಳು ಕಳೆಯಬೇಕಾದಾಗಲೂ, ನಿಮಗೆ ಮಳೆಯನ್ನು ತಡೆದೆನು. ಒಂದು ಪಟ್ಟಣದ ಮೇಲೆ ಮಳೆಯಾಗುವಂತೆಯೂ, ಇನ್ನೊಂದು ಪಟ್ಟಣದ ಮೇಲೆ ಮಳೆಯಾಗದಂತೆಯೂ ಮಾಡಿದೆನು. ಒಂದು ಭಾಗದ ಹೊಲದಲ್ಲಿ ಮಳೆಯಾಯಿತು. ಮಳೆಯಾಗದ ಹೊಲದ ಭಾಗವು ಬಾಡಿಹೋಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು