Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 15:1 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಯೆಹೋವನು ನನಗೆ ಹೀಗೆ ಹೇಳಿದನು, “ಮೋಶೆಯು ಮತ್ತು ಸಮುವೇಲನು ನನಗೆ ವಿಜ್ಞಾಪಿಸಿದರೂ ನನ್ನ ಮನಸ್ಸು ಈ ಜನರ ಕಡೆಗೆ ತಿರುಗುವುದಿಲ್ಲ. ನನ್ನ ಕಣ್ಣೆದುರಿನಿಂದ ಇವರನ್ನು ನೂಕಿಬಿಡು, ತೊಲಗಿ ಹೋಗಲಿ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಸರ್ವೇಶ್ವರ ಸ್ವಾಮಿ ನನಗೆ ಹೀಗೆಂದರು : “ಮೋಶೆ ಮತ್ತು ಸಮುವೇಲನು ನನ್ನ ಮುಂದೆ ನಿಂತು ವಿಜ್ಞಾಪಿಸಿದರೂ ನಾನು ಈ ಜನರ ಬಗ್ಗೆ ನನ್ನ ಮನಸ್ಸನ್ನು ಬದಲಾಯಿಸೆನು. ಇವರನ್ನು ನನ್ನ ಸಮ್ಮುಖದಿಂದ ತಳ್ಳಿಬಿಡು; ತೊಲಗಿಹೋಗಲಿ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಯೆಹೋವನು ನನಗೆ ಹೀಗೆ ಹೇಳಿದನು - ಮೋಶೆಯೂ ಸಮುವೇಲನೂ ನನಗೆ ವಿಜ್ಞಾಪಿಸಿದರೂ ನನ್ನ ಮನಸ್ಸು ಈ ಜನರ ಕಡೆಗೆ ತಿರುಗದು; ನನ್ನ ಕಣ್ಣೆದುರಿನಿಂದ ಇವರನ್ನು ನೂಕಿಬಿಡು, ತೊಲಗಿಹೋಗಲಿ! ಅವರು - ನಾವು ಎಲ್ಲಿಗೆ ಹೋಗೋಣ ಎಂದು ಕೇಳಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಯೆಹೋವನು ನನಗೆ ಹೀಗೆ ಹೇಳಿದನು: “ಯೆರೆಮೀಯನೇ, ಯೆಹೂದದ ಜನರಿಗಾಗಿ ಪ್ರಾರ್ಥಿಸಿ, ಬೇಡಿಕೊಳ್ಳಲು ಮೋಶೆಯೂ ಸಮುವೇಲನೂ ಇದ್ದಿದ್ದರೂ ನಾನು ಈ ಜನರ ಬಗ್ಗೆ ಮರುಕಪಡುತ್ತಿರಲಿಲ್ಲ. ಯೆಹೂದದ ಜನರನ್ನು ನನ್ನಿಂದ ದೂರ ಕಳುಹಿಸು. ಅವರಿಗೆ ಹೋಗಲು ಹೇಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಆಗ ಯೆಹೋವ ದೇವರು ನನಗೆ ಹೇಳಿದ್ದೇನೆಂದರೆ: “ಮೋಶೆಯೂ ಸಮುಯೇಲನೂ ನನ್ನ ಮುಂದೆ ನಿಂತರೂ, ನನ್ನ ಮನಸ್ಸು ಈ ಜನರ ಮೇಲೆ ಇರುವುದಿಲ್ಲ. ಅವರನ್ನು ನನ್ನ ಸನ್ನಿಧಿಯಿಂದ ಕಳುಹಿಸಿಬಿಡು. ಅವರು ಹೋಗಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 15:1
32 ತಿಳಿವುಗಳ ಹೋಲಿಕೆ  

ನೋಹ, ದಾನಿಯೇಲ, ಯೋಬ ಎಂಬ ಮೂವರು ಪುರುಷರು ಆ ದೇಶದಲ್ಲಿದ್ದರೂ ತಮ್ಮ ಸದಾಚಾರದಿಂದ ಸ್ವಂತ ಪ್ರಾಣಗಳನ್ನು ಮಾತ್ರ ಉಳಿಸಿಕೊಳ್ಳುತ್ತಿದ್ದರು” ಇದು ಕರ್ತನಾದ ಯೆಹೋವನ ನುಡಿ.


ಮತ್ತು ಯೆಹೋವನು ನನಗೆ, “ಈ ಜನರ ಹಿತವನ್ನು ಬಯಸಿ ಇವರಿಗೋಸ್ಕರ ಪ್ರಾರ್ಥನೆ ಮಾಡಬೇಡ.


ಆದಕಾರಣ ಈ ಜನರಿಗೋಸ್ಕರ ಬೇಡಿಕೊಳ್ಳಬೇಡ, ಇವರಿಗಾಗಿ ಮೊರೆಯಿಡಬೇಡ, ಪ್ರಾರ್ಥಿಸಲೂ ಬೇಡ. ಅವರು ತಮ್ಮ ಕೇಡಿನ ನಿಮಿತ್ತ ನನಗೆ ಮೊರೆಯಿಡುವಾಗ ನಾನು ಕೇಳುವುದಿಲ್ಲ” ಎಂದು ಹೇಳಿದನು.


ಆದುದರಿಂದ ಆತನು ಅವರನ್ನು ಸಂಹರಿಸುವೆನು ಎನ್ನಲು, ಆತನು ಆರಿಸಿಕೊಂಡ ಮೋಶೆಯು ಮಧ್ಯಸ್ಥನಾಗಿ, ಅವರನ್ನು ಸಂಹರಿಸದಂತೆ ಆತನ ಕೋಪವನ್ನು ಶಾಂತಪಡಿಸಿದನು.


ಆತನ ಯಾಜಕರಲ್ಲಿ ಮೋಶೆ ಮತ್ತು ಆರೋನರೂ, ಆತನ ಹೆಸರಿನಲ್ಲಿ ಪ್ರಾರ್ಥಿಸುವವರೊಳಗೆ ಸಮುವೇಲನೂ ಪ್ರಾರ್ಥಿಸಿದಾಗೆಲ್ಲ, ಯೆಹೋವನು ಅವರಿಗೆ ಸದುತ್ತರವನ್ನು ದಯಪಾಲಿಸುತ್ತಿದ್ದನು.


ನಾನಾದರೋ ನಿಮಗೋಸ್ಕರವಾಗಿ ಯೆಹೋವನನ್ನು ಪ್ರಾರ್ಥಿಸುತ್ತಾ, ಆತನ ಉತ್ತಮ ನೀತಿಮಾರ್ಗವನ್ನು ನಿಮಗೆ ತೋರಿಸಿಕೊಡುವುದನ್ನು ಬಿಡುವುದೇ ಇಲ್ಲ; ಬಿಟ್ಟರೆ ಆತನ ದೃಷ್ಟಿಯಲ್ಲಿ ಪಾಪಿಯಾಗಿರುವೆನು.


ಯೆಹೋವನು ಇಸ್ರಾಯೇಲರ ಕುಲಗಳಲ್ಲಿ ಉಳಿದಿದ್ದವರನ್ನೂ ಅಲಕ್ಷ್ಯಮಾಡಿ, ತನ್ನ ಸನ್ನಿಧಿಯಿಂದ ತಳ್ಳಿಬಿಟ್ಟು, ಸೂರೆಮಾಡುವವರಿಗೆ ಒಪ್ಪಿಸಿ ಅವರನ್ನು ಬಾಧಿಸಿದನು.


ಆಗ ಸಮುವೇಲನು ಹಾಲುಕುಡಿಯುವ ಕುರಿಮರಿಯನ್ನು ತಂದು ಯೆಹೋವನಿಗೆ ಸರ್ವಾಂಗಹೋಮವಾಗಿ ಸಮರ್ಪಿಸಿ ಇಸ್ರಾಯೇಲ್ಯರಿಗೋಸ್ಕರ ಮೊರೆಯಿಡಲು ಆತನು ಸದುತ್ತರವನ್ನು ದಯಪಾಲಿಸಿದನು.


ಯೆಹೋವನು ಯೆರೂಸಲೇಮಿನವರ ಮೇಲೆಯೂ ಮತ್ತು ಬೇರೆ ಎಲ್ಲಾ ಯೆಹೂದ್ಯರ ಮೇಲೆಯೂ ಇದನ್ನೆಲ್ಲಾ ಬರಮಾಡಿ, ಕಡೆಯಲ್ಲಿ ಅವರನ್ನು ತನ್ನ ಸನ್ನಿಧಿಯಿಂದ ತಳ್ಳಿಬಿಡುವಷ್ಟು ರೋಷವುಳ್ಳವನಾದನು. ಚಿದ್ಕೀಯನು ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನಿಗೆ ವಿರುದ್ಧವಾಗಿ ತಿರುಗಿಬಿದ್ದನು.


ಖಂಡಿತವಾಗಿ ನಿಮ್ಮನ್ನೂ ನಾನು ನಿಮಗೆ ಮತ್ತು ನಿಮ್ಮ ಪೂರ್ವಿಕರಿಗೆ ದಯಪಾಲಿಸಿದ ಪಟ್ಟಣವನ್ನೂ ಹೊರೆಯೆಂದು ಎತ್ತಿ ನನ್ನೆದುರಿನಿಂದ ಎಸೆದುಬಿಡುವೆನು.


ಒಳ್ಳೆಯದನ್ನು ಮಾಡಿದ್ದಕ್ಕೆ ಕೇಡಿನ ಪ್ರತಿಫಲ ಅಗತ್ಯವೇ? ನನ್ನ ಪ್ರಾಣವನ್ನು ಹಿಡಿಯಬೇಕೆಂದು ಗುಂಡಿಯನ್ನು ತೋಡಿದ್ದಾರಲ್ಲಾ. ಅವರ ಮೇಲಣ ನಿನ್ನ ರೋಷವನ್ನು ತಪ್ಪಿಸಲು ನಾನು ನಿನ್ನ ಮುಂದೆ ನಿಂತುಕೊಂಡು ಅವರ ಹಿತಕ್ಕಾಗಿ ವಿಜ್ಞಾಪಿಸಿಕೊಂಡದ್ದನ್ನು ನೆನಪಿಗೆ ತಂದುಕೋ.


ಇದರಿಂದ ಯೆಹೋವನು, “ನೀನು ನನ್ನ ಕಡೆಗೆ ಹಿಂದಿರುಗಿದರೆ ನನ್ನ ಸಮ್ಮುಖದಲ್ಲಿ ನಿಲ್ಲುವಂತೆ ನಾನು ನಿನ್ನನ್ನು ತಿರುಗಿ ಸೇರಿಸಿಕೊಳ್ಳುವೆನು. ನೀನು ತುಚ್ಛವಾದದ್ದನ್ನು ನಿರಾಕರಿಸಿ, ಅಮೂಲ್ಯವಾದದ್ದನ್ನು ಪ್ರಕಾಶಪಡಿಸಿದರೆ ನೀನು ನನ್ನ ಬಾಯಂತಿರುವಿ. ಜನರು ನಿನ್ನ ಕಡೆಗೆ ತಿರುಗಿಕೊಳ್ಳುವರು, ನೀನು ಅವರ ಕಡೆಗೆ ತಿರುಗದಿರುವಿ.


ಜಾಣನಾದ ಸೇವಕನಿಗೆ ರಾಜನ ಕೃಪೆ, ಮಾನಗೇಡಿಗೆ ರಾಜನ ರೌದ್ರ.


ಯಾಕೆಂದರೆ ಕ್ರಿಸ್ತನು ನಿಜವಾದ ದೇವಾಲಯಕ್ಕೆ ಪ್ರತಿಬಿಂಬವಾಗಿ ಕೈಯಿಂದ ಕಟ್ಟಲ್ಪಟ್ಟ ಪವಿತ್ರ ಸ್ಥಳವನ್ನು ಪ್ರವೇಶಿಸದೆ, ದೇವರ ಸನ್ನಿಧಿಯಲ್ಲಿ ನಮಗೋಸ್ಕರ ಈಗ ಪ್ರತ್ಯಕ್ಷನಾಗಲು ಪರಲೋಕದೊಳಗೆ ಪ್ರವೇಶಿಸಿದನು.


ರೇಕಾಬನ ಮಗನಾದ ಯೋನಾದಾಬನ ಸಂತಾನದವರೊಳಗೆ ನನ್ನ ಸಮ್ಮುಖದಲ್ಲಿ ಸೇವೆಮಾಡತಕ್ಕವರು ತಲತಲಾಂತರಕ್ಕೂ ಇದ್ದೇ ಇರುವರು. ಇಸ್ರಾಯೇಲರ ದೇವರೂ, ಸೇನಾಧೀಶ್ವರನೂ ಆದ ಯೆಹೋವನು ಇದನ್ನು ನುಡಿದಿದ್ದಾನೆ’” ಎಂಬುದೇ.


ನನ್ನ ಹೃದಯವು ಇಸ್ರಾಯೇಲರ ಸೇನಾಧಿಪತಿಗಳಲ್ಲಿಯೂ, ಸ್ವಇಚ್ಛೆಯಿಂದ ಸೈನ್ಯದಲ್ಲಿ ಸೇರಿದ ಜನರಲ್ಲಿಯೂ ಸಂತೋಷಿಸುತ್ತದೆ; ಅವರಿಗೋಸ್ಕರ ಯೆಹೋವನನ್ನು ಕೊಂಡಾಡುತ್ತೇವೆ.


ಇತ್ತಲಾಗಿ ಅಬ್ರಹಾಮನು ಬೆಳಿಗ್ಗೆ ಎದ್ದು ತಾನು ಯೆಹೋವನ ಸನ್ನಿಧಿಯಲ್ಲಿ ನಿಂತಿದ್ದ ಸ್ಥಳಕ್ಕೆ ತಿರುಗಿ ಬಂದು ಸೊದೋಮ್ ಗೊಮೋರಗಳ ಕಡೆಗೂ


ಯೆಹೋಶುವನು ದೇವದೂತನ ಮುಂದೆ ಕೊಳೆಯಾದ ಬಟ್ಟೆಯನ್ನು ಧರಿಸಿ ನಿಂತಿರಲು,


ನಾನು ಆತನನ್ನು ಬೇಡಿಕೊಳ್ಳುತ್ತಾ, “ಕರ್ತನಾದ ಯೆಹೋವನೇ, ನೀನು ನಿನ್ನ ಮಹಿಮೆಯಿಂದ ರಕ್ಷಿಸಿ ನಿನ್ನ ಭುಜಬಲದಿಂದ ಐಗುಪ್ತ್ಯರಿಂದ ಬಿಡುಗಡೆಮಾಡಿದ ನಿನ್ನ ಸ್ವಕೀಯ ಜನರನ್ನು ನಾಶಮಾಡಬೇಡ.


ಸಮುವೇಲನನ್ನು, “ನಮಗೊಬ್ಬ ಅರಸನು ಬೇಕೆಂದು ನಾವು ಬೇಡಿಕೊಂಡದ್ದರಿಂದ ನಮ್ಮ ಪಾಪಗಳಿಗೆ ಮತ್ತೊಂದು ಪಾಪ ಸೇರಿಕೊಂಡಿತು; ಆದ್ದರಿಂದ ನಿನ್ನ ಸೇವಕರಾದ ನಾವು ಸಾಯದಂತೆ ನಿನ್ನ ದೇವರಾದ ಯೆಹೋವನನ್ನು ಬೇಡಿಕೋ” ಎಂದು ವಿಜ್ಞಾಪಿಸಲು


‘ಅಯ್ಯೋ, ಹಾಳಾದೆವು, ಭಂಗಪಟ್ಟೆವು; ನಾವು ನಮ್ಮ ದೇಶವನ್ನು ಬಿಟ್ಟೆವಲ್ಲಾ, ಶತ್ರುಗಳು ನಮ್ಮ ಮನೆಗಳನ್ನು ಕೆಡವಿದ್ದಾರಲ್ಲಾ’” ಎಂಬ ಪ್ರಲಾಪಧ್ವನಿಯು ಚೀಯೋನಿನೊಳಗಿಂದ ಕೇಳಿಸುತ್ತದೆ.


“ಇಗೋ, ನಾನು ಈ ಸಾರಿ ದೇಶನಿವಾಸಿಗಳನ್ನು ಎಸೆದೇ ಬಿಡುವೆನು, ಅವರಿಗೆ ಬುದ್ಧಿ ಬರಲೆಂದು ಅವರನ್ನು ಬಾಧಿಸುವೆನು” ಎಂದು ಯೆಹೋವನು ನುಡಿಯುತ್ತಾನೆ.


ಯೆಹೋವನು ನನಗೆ, “ಗೋಳಾಟದ ಮನೆಯಲ್ಲಿ ಸೇರಬೇಡ, ಪ್ರಲಾಪಿಸಲಿಕ್ಕೆ ಹೋಗಬೇಡ, ಅವರಿಗಾಗಿ ಎದೆ ಬಡಿದುಕೊಳ್ಳಲೂ ಬೇಡ. ನಾನು ದಯಪಾಲಿಸಿದ ಸಮಾಧಾನವನ್ನು, ಅಂದರೆ ನನ್ನ ಪ್ರೀತಿಯನ್ನೂ ಹಾಗು ಕೃಪೆಯನ್ನೂ ಈ ಜನರಿಂದ ತೆಗೆದುಬಿಟ್ಟಿದ್ದೇನಷ್ಟೆ.


ನೀವಾಗಲಿ ಅಥವಾ ನಿಮ್ಮ ಪೂರ್ವಿಕರಾಗಲಿ ನೋಡದ ದೇಶಕ್ಕೆ ನಿಮ್ಮನ್ನು ಈ ದೇಶದೊಳಗಿಂದ ಎಸೆದುಬಿಡುವೆನು; ಅಲ್ಲಿ ಹಗಲಿರುಳೂ ಅನ್ಯದೇವತೆಗಳನ್ನು ಸೇವಿಸುವಿರಿ; ನಾನು ನಿಮಗೆ ದಯೆತೋರಿಸುವುದಿಲ್ಲ’” ಎಂದು ಹೇಳಿದನು.


ಕೊನ್ಯನೆಂಬ ಈ ಮನುಷ್ಯನು ಬಿಸಾಡಿದ ಒಡಕು ಕುಡಿಕೆಯೋ? ಯಾರಿಗೂ ಇಷ್ಟವಿಲ್ಲದ ಮಣ್ಣಿನ ಮಡಿಕೆಯೋ? ಎಂಬಂತೆ, ಅವನೂ ಅವನ ಸಂತತಿಯವರೂ ಏಕೆ ಬಿಸಾಡಲ್ಪಟ್ಟಿದ್ದಾರೆ? ನೋಡದ ದೇಶಕ್ಕೆ ಏಕೆ ಎಸೆಯಲ್ಪಟ್ಟಿದ್ದಾರೆ?


“‘ನಾನು ದೇಶವನ್ನು ಹಾಳು ಮಾಡದಂತೆ ನನ್ನೆದುರಿಗೆ ದೇಶ ರಕ್ಷಣೆಗಾಗಿ ಪೌಳಿ ಗೋಡೆಯ ಬಿರುಕಿನಲ್ಲಿ ನಿಲ್ಲುವುದಕ್ಕೂ, ಗೋಡೆಯನ್ನು ಗಟ್ಟಿಮಾಡುವುದಕ್ಕೂ ತಕ್ಕವನನ್ನು ನಾನು ಹುಡುಕಲು ಯಾರೂ ಸಿಕ್ಕಲಿಲ್ಲ.


ಇವರು ಉಪವಾಸಮಾಡುವಾಗ ಇವರ ಮೊರೆಯನ್ನು ಕೇಳೆನು. ಹೋಮನೈವೇದ್ಯಗಳನ್ನು ಅರ್ಪಿಸಲು ಸ್ವೀಕರಿಸೆನು. ಖಡ್ಗ, ಕ್ಷಾಮ ಮತ್ತು ವ್ಯಾಧಿಗಳಿಂದ ಇವರನ್ನು ನಿರ್ಮೂಲಮಾಡುವೆನು” ಎಂದು ಹೇಳಿದನು.


ಅವರ ದುಷ್ಟತನವು ಗಿಲ್ಗಾಲಿನಲ್ಲಿ ತುಂಬಿದೆ; ಅಲ್ಲೇ ನನ್ನ ದ್ವೇಷಕ್ಕೆ ಗುರಿಯಾಗಿದ್ದಾರೆ; ಅವರ ದುಷ್ಕೃತ್ಯಗಳ ನಿಮಿತ್ತ ನಾನು ಅವರನ್ನು ನನ್ನ ನಿವಾಸದೊಳಗಿಂದ ಓಡಿಸಿಬಿಡುವೆನು; ಅವರನ್ನು ಇನ್ನು ಪ್ರೀತಿಸೆನು; ಅವರ ಅಧಿಕಾರಿಗಳೆಲ್ಲರೂ ದ್ರೋಹಿಗಳೇ ಸರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು